Homeಅಂಕಣಗಳುಮಾತು ಮರೆತ ಭಾರತ-31; ಲಾಕ್‌ಡೌನ್ ಫೈಲ್ಸ್ : ಅಂಬೇಡ್ಕರ್ ಟಿ-ಶರ್ಟ್ ಜಾತಿ ಹೇಳಿತು

ಮಾತು ಮರೆತ ಭಾರತ-31; ಲಾಕ್‌ಡೌನ್ ಫೈಲ್ಸ್ : ಅಂಬೇಡ್ಕರ್ ಟಿ-ಶರ್ಟ್ ಜಾತಿ ಹೇಳಿತು

- Advertisement -
- Advertisement -

(ಭಾರತದ Dalit Human Rights Defenders Nertwork ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ಕೆಲವು ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್’ ಸಮಯದಲ್ಲಿ ನಡೆದ ದಲಿತರ ಮೇಲಿನ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರ ಮತ್ತು ಹಿಂದೂ ಮೇಲ್ಜಾತಿ ವ್ಯಕ್ತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತಿಸುವುದಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದು’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ಡಾ.ಬಿ.ಆರ್. ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅವರು ಭಾರತ ದೇಶಕ್ಕೆ ನೀಡಿದ ಸಂವಿಧಾನವೇ ಅದಕ್ಕೆ ಸಾಕ್ಷಿ. ಕಾರ್ಮಿಕ ಮಂತ್ರಿಗಳಾಗಿದ್ದಾಗ ಕೈಗೊಂಡ ಕಲ್ಯಾಣ ಕಾರ್ಯಗಳೇ ಅದಕ್ಕೆ ಸಾಕ್ಷಿ. ಹೀಗಿದ್ದರೂ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ, ಅಂಬೇಡ್ಕರ್‌ರನ್ನು ದಲಿತ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸಿ ನೋಡಲಾಗುತ್ತಿರುವ ವಿದ್ಯಮಾನ ಇನ್ನೂ ನಿಂತಿಲ್ಲ. ಸ್ವತಃ ಅಂಬೇಡ್ಕರ್‌ರೇ ಮೇಲ್ಜಾತಿ ಹಿಂದೂಗಳ ಇಂತಹ ನಡೆಗೆ ಬೇಸರಗೊಂಡಿದ್ದರು.

ದಕ್ಷಿಣ ಭಾರತದ ದ್ರಾವಿಡ ಚಳವಳಿಯ ಹಿರಿಮೆಯನ್ನು ಹೊತ್ತು ನಿಂತಿರುವ ತಮಿಳುನಾಡು ಸಹ ಇದಕ್ಕೆ ಅಪವಾದವಲ್ಲ. ಇಡೀ ದಕ್ಷಿಣ ಭಾರತದಲ್ಲಿಯೇ ಅತಿಹೆಚ್ಚು ದಲಿತರ ಮೇಲೆ ದೌರ್ಜನ್ಯ ನಡೆಯುವುದು ತಮಿಳುನಾಡಿನಲ್ಲಿ ಎಂದರೆ ಕೆಲವರಿಗೆ ಆಶ್ಚರ್ಯವೂ ಆಗಬಹುದು. ಆದರೆ, ಇಂದಿಗೂ ಅದೊಂದು ಜಾತಿಗ್ರಸ್ತರ ನಾಡಾಗಿಯೇ ಗುರುತಿಸಿಕೊಂಡಿದೆ. ಆಗಾಗ ಅಲ್ಲಲ್ಲಿ ಮೂಡುವ ಹೊಂಬೆಳಕು ರಾಜ್ಯದಲ್ಲಿ ಇಡಿಯಾಗಿ ಯಾವಾಗ ವ್ಯಾಪಿಸುತ್ತದೆಯೋ ತಿಳಿಯದಾಗಿದೆ.

ಇದಿಷ್ಟು ಹೇಳಲು ಕಾರಣವಿದೆ. ಲಾಕ್‌ಡೌನ್ ಸಮಯದಲ್ಲಿ ತಮಿಳುನಾಡಿನ ಚೆಂಗಮ್‌ನಲ್ಲಿ ನಡೆದ ಭೀಕರ ಕೃತ್ಯವೊಂದು ಇಡೀ ರಾಜ್ಯ ತಲೆತಗ್ಗಿಸುವಂತೆ ಮಾಡಿದೆ.

ಗೌತಮಪ್ರಿಯನ್ 20 ವರ್ಷದ ಯುವಕ. ಊರು ತೊಕ್ಕವಾಡಿ. ಪರಯ್ಯ ಸಮುದಾಯಕ್ಕೆ ಸೇರಿದವನು. ಅಂಬೇಡ್ಕರರನ್ನು ಓದಿಕೊಳ್ಳಲು ಆರಂಭಿಸಿದ್ದ ಯುವಕ. ಈತನ ತಂದೆ ಆರುಮುಗಮ್ ಸರ್ಕಾರಿ ಶಿಕ್ಷಕರು. ಹಾಗಾಗಿ ತಮ್ಮ ಮಗನಿಗೆ ಅತ್ಯುತ್ತಮ ಶಿಕ್ಷಣ ಕೊಡಿಸುತ್ತಿದ್ದರು. ಜೊತೆಗೆ ಸ್ವಾಭಿಮಾನದ ಪಾಠವನ್ನೂ ಕಲಿಸಿದ್ದರು.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಮಾರ್ಚ್ 31, 2020ರಂದು ಅಪರಾಹ್ನ 4 ಗಂಟೆಯ ಸಮಯದಲ್ಲಿ ಗೌತಮಪ್ರಿಯನ್ ತನ್ನ ತಂಗಿಯನ್ನು ಅವರ ಚಿಕ್ಕಪ್ಪನ ಮನೆಯ ಬಳಿ ಮೋಟಾರ್ ಬೈಕಿನಲ್ಲಿ ಬಿಟ್ಟು ಹಿಂದಿರುಗುತ್ತಿದ್ದಾಗ ಅಚಾನಕ್ಕಾಗಿ ತನ್ನ ಕಾಲೇಜು ಸ್ನೇಹಿತೆ ರಮ್ಯಾಳನ್ನು ಕಂಡನು. ದಾರಿಯಲ್ಲಿಯೇ ಬೈಕ್ ನಿಲ್ಲಿಸಿ ರಮ್ಯಾಳೊಂದಿಗೆ ಮಾತಿಗಿಳಿದಿದ್ದಾನೆ. ಇಬ್ಬರೂ ಖುಷಿಯಿಂದ ಮಾತನಾಡಿಕೊಳ್ಳುತ್ತಿದ್ದಾಗ ಅದೆಲ್ಲಿಂದಲೋ ಬಂದ ದಢೂತಿ ವ್ಯಕ್ತಿಯೊಬ್ಬ ಗೌತಮಪ್ರಿಯನ್‌ನನ್ನು ಉದ್ದೇಶಿಸಿ ರಮ್ಯಾ ಜೊತೆ ಮಾತನಾಡುತ್ತಿರುವುದಕ್ಕೆ ಆಕ್ಷೇಪಿಸಿದ್ದಾನೆ. ಆ ವ್ಯಕ್ತಿಯ ಹೆಸರು ಈಶ್ವರನ್. ಈತ ಸ್ಥಳೀಯ ಪೊಲೀಸ್ ಸ್ಟೇಷನ್ನಿನಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಮೇಲಾಗಿ ಆತನು ರಮ್ಯಾಳ ಜಾತಿಗೇ ಸೇರಿದ ವ್ಯಕ್ತಿಯಾಗಿದ್ದ. ಈಶ್ವರನ್ ಪೊಲೀಸ್ ಶೈಲಿಯಲ್ಲಿ ಗೌತಮಪ್ರಿಯನ್‌ಅನ್ನು ವಿಚಾರಿಸಲು ಆರಂಭಿಸಿದ. ಇದೆಲ್ಲವೂ ಇರಿಸುಮುರುಸು ಉಂಟುಮಾಡಿತಾದರೂ ಸಹಿಸಿಕೊಂಡು ಎಲ್ಲದಕ್ಕೂ ಗೌತಮ್ ಉತ್ತರ ನೀಡಿದ್ದಾನೆ. ’ನಮ್ಮ ಜಾತಿಯ ಹುಡುಗಿಯನ್ನು ಮಾತನಾಡಿಸಲು ನೀನ್ಯಾರು?’ ಎಂಬ ಪ್ರಶ್ನೆ ತೂರಿಬಂದಾಗ ಗೌತಮಪ್ರಿಯನ್‌ಗೆ ಎಲ್ಲವೂ ಅರ್ಥವಾಗಿ ಹೋಗಿತ್ತು. ಶಾಂತನಾಗಿಯೇ ’ತಾನು ತೊಕ್ಕವಾಡಿಯ ಹುಡಗ’ ಎಂದು ಉತ್ತರಿಸಿದನು. ಇದನ್ನು ಕೇಳುತ್ತಲೇ ಕೆರಳಿದ ಈಶ್ವರನ್ ’ಲೇ ಪರಯ್ಯ ನಿನಗೆಷ್ಟೋ ಧೈರ್ಯ ನಮ್ಮ ಜಾತಿ ಹುಡುಗಿಯನ್ನು ಮಾತನಾಡಿಸೋಕೆ’ ಎಂದು ಅಸಲಿ ವಿಷಯಕ್ಕೆ ಬಂದಿದ್ದಾನೆ. ಇದೆಲ್ಲವನ್ನೂ ನಿರೀಕ್ಷಿಸಿದ್ದ ಗೌತಮಪ್ರಿಯನ್ ಈಶ್ವರನ್‌ನನ್ನು ಸಮಾಧಾನಪಡಿಸಲು ಮುಂದಾದಾಗ ಮೇಲೆರಗಿದ ಈಶ್ವರನ್ ಕಾಲಿನಿಂದ ಗೌತಮ್‌ನನ್ನು ಒದ್ದು ನೆಲಕ್ಕೆ ತಳ್ಳಿದನು. ಅಲ್ಲಿ ಸಾರ್ವಜನಿಕರು ಬಂದು ಜಮಾಯಿಸಿದರು. ಕೋಪಗೊಂಡಿದ್ದ ಈಶ್ವರನ್ ಎಂಬ ಪಿಶಾಚಿ ಅಲ್ಲಿಯೇ ಇದ್ದ ಕೇಬಲ್ ವೈರನ್ನು ಕೈಗೆತ್ತಿಕೊಂಡು ಗೌತಮನ ಮೇಲೆ ಹರಿಬಿಟ್ಟನು. ಸುತ್ತ ಸುಮಾರು 80 ಮಂದಿ ಇದ್ದರೂ ಎಲ್ಲರೂ ಕೈಕಟ್ಟಿ ಬಾಯ್ಮುಚ್ಚಿ ನಿಂತರು. ಅಲ್ಲಿಯೇ ನಿಂತಿದ್ದ 7ನೇ ತರಗತಿಯ ಹುಡುಗ ಮಾತ್ರ ತನ್ನ ಕೈಲಿದ್ದ ಮೊಬೈಲ್ ಫೋನಿನಿಂದ ಇದೆಲ್ಲವನ್ನೂ ರೆಕಾರ್ಡ್ ಮಾಡಿಕೊಳ್ಳುತ್ತಿದ್ದನು.

ಗೌತಮ್ ಈಶ್ವರನ್‌ನನ್ನು ಕೈಮುಗಿದು ಅಂಗಲಾಚಿದರೂ ಬಿಡಲಿಲ್ಲ. ಈಶ್ವರನ್ ಒಳಗಿದ್ದ ಜಾತಿ ಭೂತ ಎದ್ದೆದ್ದು ಕುಣಿಯುತ್ತಿತ್ತು. ಅವನೊಳಗಿನ ಮೇಲ್ಜಾತಿ ಹೇಸಿಗೆ ಹೊರಬಂದು ಹರಿಯುತ್ತಿತ್ತು. ಇಲ್ಲಿ ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವಿದೆ. ಬಹಳ ದೂರದಿಂದಲೇ ಗೌತಮಪ್ರಿಯನ್‌ನನ್ನು ದಲಿತ ಎಂದು ಈಶ್ವರನ್ ಗುರುತಿಸಿದ್ದನು. ಅದನ್ನು ಖಚಿತಪಡಿಸಿಕೊಂಡೇ ಬಂದಿದ್ದನು. ಹಾಗೆ ಖಚಿತಪಡಿಸಿಕೊಳ್ಳಲು ಕಾರಣ ಅಂದು ಗೌತಮಪ್ರಿಯನ್ ಅಂಬೇಡ್ಕರರ ಭಾವಚಿತ್ರವಿದ್ದ ಟಿ-ಶರ್ಟ್ ಹಾಕಿದ್ದು! ಗೌತಮಪ್ರಿಯನ್‌ನನ್ನು ಥಳಿಸುವಾಗ ಅಂಬೇಡ್ಕರರ ಮೇಲಿರುವ ಕೋಪವೂ ಮಿಶ್ರಣಗೊಂಡಿತ್ತು.

ಇದನ್ನೂ ಓದಿ: ಮಾತು ಮರೆತ ಭಾರತ-28; ಲಾಕ್‌ಡೌನ್ ಫೈಲ್ಸ್ : ದಲಿತರ ಪಾಲಿನ ಕಗ್ಗತ್ತಲ ದೀಪಾವಳಿ

ಈ ಪ್ರಕರಣದಲ್ಲಿ ಎದ್ದು ಕಾಣುವ ಅಂಶವೆಂದರೆ, ಒಬ್ಬ ಪೊಲೀಸ್ ಪೇದೆಗೇ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತ ಜಾತಿಯವರಾಗಿ ಕಂಡರೆ ಇನ್ನೂ ಸಾಮಾನ್ಯ ಜನರಿಗೆ ಹೇಗೆ ಕಾಣಬೇಕು? ಒಬ್ಬ ದಲಿತ ಯುವಕ ಮೇಲ್ಜಾತಿ ಯುವತಿಯ ಜೊತೆಗೆ ಮಾತನಾಡಲೂ ಸಹ ಸಾಧ್ಯವಿಲ್ಲವೇ? ಇಂತಹ ತಲೆಕೆಟ್ಟ ಪೊಲೀಸ್‌ಗಳು ಈ ದೇಶಕ್ಕೆ ಅಗತ್ಯವಿದ್ದಾರೆಯೇ? ನಮ್ಮ ಮತ ಬ್ಯಾಂಕ್ ರಾಜಕೀಯ ವ್ಯವಸ್ಥೆ ಇಂತಹ ಪೊಲೀಸ್ ಪೇದೆಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆಯೇ? ಉತ್ತರ ಅಸ್ಪಷ್ಟ. ಆದರೆ ಒಂದಂತೂ ಸ್ಪಷ್ಟ; ದಲಿತರು ಈ ಮೇಲ್ಜಾತಿ ಜಾತಿವಾದಿ ಮೃಗಗಳಿಗೆ ಅಷ್ಟು ಸುಲಭವಾಗಿ ಅರ್ಥವಾಗಲಾರರು. ಅವರಂತೆಯೇ ದಲಿತರೂ ಸಹ ಹಿಂಸಾವಾದವನ್ನು ಒಪ್ಪಿಕೊಂಡರೆ ಗಲ್ಲಿಗಲ್ಲಿಗಳಲ್ಲಿ ರಕ್ತದೋಕುಳಿ ಹರಿಯುತ್ತದೆ ಎಂಬ ಸತ್ಯವನ್ನು ಆದಷ್ಟು ಬೇಗ ಅವರು ಅರಿತುಕೊಳ್ಳಬೇಕು. ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನ ಮಾರ್ಗವನ್ನೇ ದಲಿತರು ಇಂದಿಗೂ ಅನುಸರಿಸುವುದನ್ನು ಅಸಹಾಯಕತೆಯೆಂದು ತಿಳಿದುಕೊಳ್ಳುವುದನ್ನು ಬಿಡಬೇಕಿದೆ.

ಈಶ್ವರನ್ ಈಗ ಜೈಲಿನಲ್ಲಿದ್ದಾನೆ. ಪದೇಪದೇ ಜಾಮೀನಿಗಾಗಿ ಅರ್ಜಿ ಸಲ್ಲಿಸುತ್ತಿದ್ದಾನೆ. ಆದರೆ ನ್ಯಾಯಾಲಯ ಜಾಮೀನು ನೀಡಿಲ್ಲ. ಗೌತಮಪ್ರಿಯನ್ ತನಗಾದ ಅಘಾತವನ್ನು ಮರೆಯುವ ಸ್ಥಿತಿಗೆ ಇನ್ನೂ ತಲುಪಿಲ್ಲ. ಆತ ಮರೆಯುವಂತಹ ಬೆಳವಣಿಗೆಯೂ ಸಹ ಭಾರತದಲ್ಲೇನು ನಡೆಯುವುದಿಲ್ಲ. ಬೇಕಾದರೆ ಅದನ್ನು ನೆನಪಿಸುವ ಲಕ್ಷಾಂತರ ಘಟನೆಗಳು ನ್ಯೂಸ್ ಪೇಪರ್‌ನ ಮುಖಪುಟದಲ್ಲಿ ರಾರಾಜಿಸುತ್ತವೆ. ಕಳೆದ ತಿಂಗಳು ಕೋಲಾರದಲ್ಲಿ ಬೈಕ್‌ನಲ್ಲಿ ಒವರ್ ಟೇಕ್ ಮಾಡಿದ್ದಕ್ಕಾಗಿ ದಲಿತ ಯುವಕನನ್ನು ಮೇಲ್ಜಾತಿ ಪಿಶಾಚಿಗಳು ಥಳಿಸಿದ್ದರು. ಆ ನೋವಿಗೆ ಯುವಕ ಆತ್ಮಹತ್ಯೆ ಮಾಡಿಕೊಂಡುಬಿಟ್ಟ. ಆ ಯುವಕನಿಗೆ ಹೇಡಿತನದ ಪಾಠ ಮಾಡಿದ ನಮ್ಮಂತವರಿಗೆಲ್ಲ ಧಿಕ್ಕಾರವಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...