Homeಅಂಕಣಗಳುಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

ಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

- Advertisement -
- Advertisement -

ಸರಕಾರದ ಸಾಧನೆಯ ಪಟ್ಟಿ ಮುಂದಿಟ್ಟು ಮತ ಕೇಳಿ ಎಂದು ಜೆ.ಪಿ ನಡ್ಡಾ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರಂತಲ್ಲಾ. ಆ ಕೂಡಲೇ ಬಿಜೆಪಿಯ ಉಗ್ರ ಕಾರ್ಯಕರ್ತರಿಗೆ ಕಾಣಿಸಿದ ಸಾಧನೆಗಳಾವುವೆಂದರೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೂಡಲೇ ಮುಸ್ಲಿಂ ಹುಡುಗಿಯರ ಹಿಜಾಬು ತೆಗೆಸಲು ಹೋರಾಡಿದ್ದು. ನಂತರ ಮುಸ್ಲಿಮರು ಜಾತ್ರೆ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡದಂತೆ ದಾಳಿ ಮಾಡಿ, ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ತುಳಿದು ನಾಶಮಾಡಿದ್ದು. ಅಲ್ಲದೆ ಮುಸಲ್ಮಾನರ ಅಂಗಡಿಯಲ್ಲಿ ಮಾಂಸ ತಂದು ತಿನ್ನಬೇಡಿರೆಂದು ಕಾಳಿಸ್ವಾಮಿ ಎಂಬುವವ ಕೋಳಿಸ್ಟಾಲ್ ಮಾಡಿದ್ದು. ಇನ್ನ ಗೋಳವಲಕರ ಅರ್ಥ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹಿಂದುಳಿದ ವರ್ಗದ ಹುಡುಗರ ಹಾಸ್ಟಲು ಫೀಜು ಬಂದ್ ಮಾಡಿದ್ದು. ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ದು. ಕಬ್ಬಿನ ಬೆಂಬಲ ಬೆಲೆ ನೀಡಲಾಗದ ರೈತರ ಕಡೆ ತಿರುಗಿ ನೋಡದೆ ಇದ್ದದ್ದು. ಬೆಂಗಳೂರಲ್ಲಿ ಗುಂಡಿ ಬಿದ್ದ ಗುಂಡಿಗೆ ಬಿದ್ದು ಹಲವು ಜನ ಪ್ರಾಣ ಕಳೆದುಕೊಂಡದ್ದು. ಗುಂಡಿ ಮುಚ್ಚುವ ಪರ್ಸೆಂಟೇಜಿಗಾಗಿ ಜಗಳವಾಡುತ್ತ ಕೂತಿದ್ದು. ಇನ್ನ ನಲವತ್ತು ಪರಸೆಂಟ್ ಗಲಾಟೆಯಲ್ಲಿ ಮಂತ್ರಿಗಿರಿ ಕಳೆದುಕೊಂಡ ಈಶ್ವರಪ್ಪನ ನೇತೃತ್ವದಲ್ಲಿ ಮುಸ್ಲಿಮರ ಕೇರಿಗೆ ನುಗ್ಗಿ ಎಸ್ಪಿ, ಡಿ.ಸಿ, ತಹಸೀಲ್ದಾರ, ಎಂ.ಪಿ ನೇತೃತ್ವದಲ್ಲಿ ಅವರ ಜೀವನೋಪಾಯದ ಪದಾರ್ಥಗಳನ್ನು ಬೀದಿಗೆ ಎಸೆದು ಭಯೋತ್ಪಾದನೆ ಮಾಡಿದ್ದು. ಇವೆಲ್ಲಾ ಬಿಜೆಪಿಗಳ ಸಾಧನೆಯಾಗಿ ಇದನ್ನೇ ಹೇಳಿಕೊಂಡು ಮತ ಕೇಳಲು ತಯಾರಾದ ಅವರುಗಳ ತಲೆಗೆ ಒಳ್ಳೆಯ ಕೆಲಸಗಳೇ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಎಲ್ಲ ವಿಧಾನಸಭಾ ಸದಸ್ಯರಿಗೆ ಬೆಳಗಾವಿ ಅಧಿವೇಶನವೆಂದರೆ ವಿದ್ಯೆ ಕಲಿಯಲು ಇಷ್ಟವಿಲ್ಲದ ಹುಡುಗರು ಸ್ಕೂಲಿಗೆ ಹೋದ ರೀತಿಯಂತಲ್ಲಾ. ಏಕೆಂದರೆ ಅಧಿವೇಶನಗಳು ಅರ್ಥ ಕಳೆದುಕೊಂಡಿವೆ. ಅಲ್ಲಿ ಯಾರಾದರೂ ಎದ್ದುನಿಂತು ಮಾತನಾಡಿದರೆ ಕೇಳಿಸಿಕೊಳ್ಳಬೇಕಿನಿಸುವುದಿಲ್ಲ; ಗೈರುಹಾಜರಾದರೆ, ಗೋವಾಕ್ಕೆ ಹೋಗಬೇಕಿನಿಸುತ್ತದೆ. ಕೊಠಡಿಯಲ್ಲೇ ಇರಲು ಬೇಜಾರು. ಎಲ್ಲಾದರೂ ಹೋಗೋಣವೆಂದರೆ ತಾಜ್‌ವೆಸ್ಟ್ ಹೋಟಲಿನಂತವೂ ಇಲ್ಲ. ಹೀಗಾಗಿ ಬಿಜೆಪಿಗಳು ಸದನವನ್ನೇ ಗಬ್ಬೆಬ್ಬಿಸುವ ಪ್ಲಾನ್ ಮಾಡಿ ಸಾವರ್ಕರ್‌ನ ಫೋಟೋವನ್ನು ಮುಖ್ಯಮಂತ್ರಿಗೂ ಗೊತ್ತಿಲ್ಲದೆ ಅಳವಡಿಸುವ ಸಂಚು ರೂಪಿಸಿದರಂತಲ್ಲಾ. ಅಲ್ಲಿಗೆ ಇದು ಆರೆಸ್ಸೆಸ್ ಕಾರ್ಯಕ್ರಮದಂತೆ ಕಂಡು ಕಾಂಗೈಗಳು ಸಾವರ್ಕರ್‌ನ ಜೊತೆಗೆ ಅಥವ ಬದಲಿಗೆ ಇನ್ನಿತರ ಕನ್ನಡದ ಸಾಂಸ್ಕೃತಿಕ ನಾಯಕರ ಫೋಟೋನೂ ಮಡಗಿ ಎಂದು ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತರಂತಲ್ಲಾ. ಇದನ್ನ ಕಂಡ ಬಿಜೆಪಿಗಳು ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಕರಿನೀರ ಶಿಕ್ಷೆಗೆ ಗುರಿಯಾದವರು. ಗಾಂಧಿ ಕೊಂದವರೆಂದು ನೀವೇ ಆಪಾದಿಸುತ್ತಿದ್ದೀರಿ; ಗಾಂಧಿ ಕೊಲ್ಲಲು ಪಿಸ್ತೂಲು ಕೊಟ್ಟವರು ಸಾವರ್ಕರ್ ಎಂದು ಇತ್ತೀಚೆಗೆ ಗಾಂಧೀಜಿ ಮರಿಮಗ ಹೇಳಿದ್ದಾರೆ. ನಮ್ಮ ಪುರಾಣದಲ್ಲಿ ಕೊಂದವರು ಕೊಲ್ಲಿಸಿಕೊಂಡವರನ್ನು ನೆನೆಸುತ್ತ ಬಂದಿದ್ದೇವೆ. ಉದಾಹರಣೆ ಬೇಕಾದಷ್ಟಿವೆ. ರಾಮ-ರಾವಣ, ಕೃಷ್ಣ-ಕಂಸ, ನರಸಿಂಹ-ಹಿರಣ್ಯಕಶಿಪು ಹೀಗೆ. ಆದ್ದರಿಂದ ಗಾಂಧಿ ಫೋಟೋ ಸುವರ್ಣ ಸೌಧದಲ್ಲಿರುವುದಾದರೆ ಪಕ್ಕದಲ್ಲಿ ಸಾವರ್ಕರ್ ಫೋಟೋ ಇರುವುದು ಸತ್ಯ. ಓಂ ಶಾಂತಿ ಶಾಂತಿ ಶಾಂತಿ ಎಂದವಂತಲ್ಲಾ, ಥೂತ್ತೇರಿ.

*****

ಹದಿನೈದು ಲಕ್ಷ ಮತದಾರರನ್ನು ಡಿಲೀಟ್ ಮಾಡಿಸಿದ ಆರೋಪ ಎದುರಿಸುತ್ತಿರುವ ಸರಕಾರ ಈ ಕೃತ್ಯ ವ್ಯಾಪಕವಾಗಿ ಪ್ರಚಾರವಾಗದಂತೆ ತಡೆಯಲು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬ್ಲಾಸ್ಟು ಮಾಡಿ ಎಂದು ಟಿವಿಯವರಿಗೆ ಸೂಚನೆ ಕೊಟ್ಟ ಕೂಡಲೇ ಮಾರಿಕೊಂಡ ಮಾಧ್ಯಮದವರು ಮತದಾರರು ಕಾಣೆಯಾಗಿರುವ ಪ್ರಕರಣವನ್ನೇ ಮರೆಯಾಗುವಂತೆ ಮಾಡಿದರು ಎಂದು ಡಿ.ಕೆ.ಶಿ ಆಪಾದನೆ ಮಾಡಿದರಂತಲ್ಲ. ಹಾಗಂದ ಕೂಡಲೇ ಅವರ ಮೇಲೆ ಇ.ಡಿ ದಾಳಿ ನಡೆಯಿತು. ಈಗ ಸರಕಾರದ ಸಂಪೂರ್ಣ ವೈಫಲ್ಯ ಮುಚ್ಚಲು ಸಾವರ್ಕರ್‌ನ ಮೊರೆ ಹೋಗಿರುವ ಸರಕಾರ ಆರೆಸ್ಸೆಸ್ ಸೂಚನೆಯಂತೆ ಆತನ ಭಾವಚಿತ್ರವನ್ನು ಸುವರ್ಣಸೌಧದದಲ್ಲಿ ಅಳವಡಿಸಲು ಸಂಚು ರೂಪಿಸಿದೆಯಂತಲ್ಲಾ. ಇದರಲ್ಲಿ ಅವರು ಗೆದ್ದರೆ ಮುಂದಿನ ಅಧಿವೇಶನಕ್ಕೆ ಸಾವರ್ಕರ್‌ನ ಪಕ್ಕಕ್ಕೆ ಗೋಳವಲಕರನ ಫೋಟೋ ಬರುತ್ತೆ ನಂತರ ಹೆಡಗೆವಾರನ ಚಿತ್ರ ತೂಗುಬೀಳುತ್ತೆ. ಆ ನಂತರ ರೈಲ್ವೆ ಭೋಗಿ ಮೇಲಿರುವ ದೀನದಯಾಳರ ಭಾವಚಿತ್ರ ವಿರಾಜಮಾನವಾಗುತ್ತೆ. ಹಾಲಿ ಸದಸ್ಯರೆಲ್ಲಾ ಅಸ್ತಂಗತರಾದ ಮೇಲೆ ಸುವರ್ಣಸೌಧದ ಗೋಡೆ ಮೇಲೆ ಎಡೂರಪ್ಪ, ಜೋಷಿ, ಸಿ.ಟಿ ರವಿ, ರೇಣುಕಾಚಾರ್ಯ, ಈಶ್ವರಪ್ಪ ಸರದಿಯೂ ಬರಬಹುದು. ಅಷ್ಟಕ್ಕೂ ಸಾವರ್ಕರ್ ಸುವರ್ಣ ಸಂಸ್ಕೃತಿ ಭವನ ಹೊಕ್ಕಿದ್ದು ಈಶ್ವರಪ್ಪರ ಸಾಧನೆಯಿಂದ. ಶಿವಮೊಗ್ಗದ ಮಾರ್ಕೆಟ್‌ನಲ್ಲಿ ನಿಲ್ಲಿಸಿದ್ದ ಸಾವರ್ಕರ್‌ನ ಫೋಟೋವನ್ನು ಯಾರೋ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಕಿತ್ತೆಸೆದ. ಅಷ್ಟು ಸಾಕಿತ್ತು ಮಂತ್ರಿಗಿರಿ ಕಳೆದುಕೊಂಡು ನಿರುದ್ಯೋಗಿಯಾಗಿದ್ದ ಈಶ್ವರಪ್ಪರಿಗೆ. ಕೂಡಲೇ ತರತರದ ಕಾರ್ಯಕ್ರಮಗಳನ್ನು ಮಾಡಿ ಸಾವರ್ಕರ್‌ನನ್ನು ಮೆರೆಸಿದರು. ಅಂತಹ ವ್ಯಕ್ತಿ ಈಗ ಸದನಕ್ಕೆ ಹೋಗದೆ ಜಾರಕಿಹೊಳಿ ಮನೆಯಲ್ಲಿ ಜಾಲಿಯಾಗಿ ಕಾಲ ಕಳೆದದ್ದು ಇತಿಹಾಸದ ವ್ಯಂಗ್ಯವಂತಲ್ಲಾ, ಥೂತ್ತೇರಿ.

*****

ನಮ್ಮ ಹಿರಿಯ ಚೇತನಗಳಾದ ಶ್ರೀನಿವಾಸ್ ಪ್ರಸಾದ್ ಮತ್ತು ವಿಶ್ವನಾಥ್ ಹರಿಯ ಮುರಿಯ ಜಗಳಕ್ಕೆ ಬಿದ್ದಿದ್ದಾರಲ್ಲಾ. ಹಳ್ಳಿಯ ಕಡೆ ಒಂದು ಗಾದೆಯಿದೆ. ’ತಿರಿಯಲು ಬಂದು ಕೇರಿಯಲ್ಲಿ ಜಗಳಕ್ಕೆ ಬಿದ್ದರು’ ಅಂತ. ಪ್ರಸಾದ್ ಮತ್ತು ವಿಶ್ವನಾಥ್ ತಿರಿಯಲು ಬಂದಿದ್ದು ಬಿಜೆಪಿ ಕೇರಿಯಲ್ಲಿ. ಅದವರ ಕೇರಿಯಲ್ಲ. ಅವರು ಬಂದಿದ್ದು ಕಾಂಗ್ರೆಸ್ ಕೇರಿಯಿಂದ. ಅವರಿಬ್ಬರೂ ಬಿಜೆಪಿಗೆ ಬಂದಿದ್ದು ಒಂದೇ ಕಾರಣದಿಂದ. ಪ್ರಸಾದ್ ಸಿದ್ದರಾಮಯ್ಯಗೆ ತಾಕೀತು ಮಾಡಿ ರೆವಿನ್ಯೂ ಮಂತ್ರಿಯಾದ ಕೂಡಲೇ ವೀಕ್ ಆದರು. ವಿಶ್ವನಾಥ್ ತಮ್ಮನ್ನು ಮಂತ್ರಿ ಮಾಡಲಿಲ್ಲ ಎಂದು ಸೋನಿಯಾಗಾಂಧಿಗೆ ’ಸಿದ್ದು ಭ್ರಷ್ಟ, ಬದಲಾಯಿಸಿ’ ಎಂದು ದೂರು ಬರೆಯುತ್ತ ಕುಳಿತರು. ಈ ಇಬ್ಬರ ಚಟುವಟಿಕೆಯನ್ನು ನೋಡಿದ ಸಿದ್ದು ಇಬ್ಬರೂ ಕಾಂಗ್ರೆಸ್ ಬಿಟ್ಟುಹೋಗುವಂತೆ ಮಾಡಿದರು. ಸಮಾನ ಸಂತ್ರಸ್ತರಾದ ಇಬ್ಬರಿಗೂ ಬಿಜೆಪಿ ಅನ್ಯಾಯ ಮಾಡಲಿಲ್ಲ. ಒಬ್ಬರನ್ನು ಸಂಸದರನ್ನಾಗಿಸಿತು, ಮತ್ತೊಬ್ಬರನ್ನು ಎಮ್ಮೆಲ್ಸಿ ಮಾಡಿತು. ರಾಜಕಾರಣದ ಅಂಚಿಗೆ ಸರಿದಿರುವ ಶ್ರೀನಿವಾಸ ಪ್ರಸಾದ್ ನಿವೃತ್ತಿ ಅಂಚಿನಲ್ಲಿದ್ದರೆ, ವಿಶ್ವನಾಥ್ ಕಾಂಗ್ರೆಸ್ ಕೇರಿಗೆ ಬಂದು ಇನ್ನೊಂದು ಚಾನ್ಸಿಗೆ ಅಡಿಪಾಯ ಹಾಕುತ್ತಿದ್ದಾರೆ. ಪ್ರಸಾದ್, ವಿಶ್ವನಾಥರನ್ನ ಮೂದಲಿಸಿ ಅಲೆಮಾರಿ ಎಂದುಬಿಟ್ಟಿದ್ದಾರಲ್ಲಾ. ಸಾಮಾನ್ಯವಾಗಿ ಪಕ್ಷದಿಂದ ಪಕ್ಷಕ್ಕೆ ಅಲೆಯುವ ಒಬ್ಬ ಅಲೆಮಾರಿಯನ್ನು ಕಂಡ ಇನ್ನೊಬ್ಬ ಅಲೆಮಾರಿಗೆ ಆಗುವುದಿಲ್ಲವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...