Homeಅಂಕಣಗಳುಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

ಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

- Advertisement -
- Advertisement -

ಸರಕಾರದ ಸಾಧನೆಯ ಪಟ್ಟಿ ಮುಂದಿಟ್ಟು ಮತ ಕೇಳಿ ಎಂದು ಜೆ.ಪಿ ನಡ್ಡಾ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರಂತಲ್ಲಾ. ಆ ಕೂಡಲೇ ಬಿಜೆಪಿಯ ಉಗ್ರ ಕಾರ್ಯಕರ್ತರಿಗೆ ಕಾಣಿಸಿದ ಸಾಧನೆಗಳಾವುವೆಂದರೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೂಡಲೇ ಮುಸ್ಲಿಂ ಹುಡುಗಿಯರ ಹಿಜಾಬು ತೆಗೆಸಲು ಹೋರಾಡಿದ್ದು. ನಂತರ ಮುಸ್ಲಿಮರು ಜಾತ್ರೆ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡದಂತೆ ದಾಳಿ ಮಾಡಿ, ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ತುಳಿದು ನಾಶಮಾಡಿದ್ದು. ಅಲ್ಲದೆ ಮುಸಲ್ಮಾನರ ಅಂಗಡಿಯಲ್ಲಿ ಮಾಂಸ ತಂದು ತಿನ್ನಬೇಡಿರೆಂದು ಕಾಳಿಸ್ವಾಮಿ ಎಂಬುವವ ಕೋಳಿಸ್ಟಾಲ್ ಮಾಡಿದ್ದು. ಇನ್ನ ಗೋಳವಲಕರ ಅರ್ಥ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹಿಂದುಳಿದ ವರ್ಗದ ಹುಡುಗರ ಹಾಸ್ಟಲು ಫೀಜು ಬಂದ್ ಮಾಡಿದ್ದು. ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ದು. ಕಬ್ಬಿನ ಬೆಂಬಲ ಬೆಲೆ ನೀಡಲಾಗದ ರೈತರ ಕಡೆ ತಿರುಗಿ ನೋಡದೆ ಇದ್ದದ್ದು. ಬೆಂಗಳೂರಲ್ಲಿ ಗುಂಡಿ ಬಿದ್ದ ಗುಂಡಿಗೆ ಬಿದ್ದು ಹಲವು ಜನ ಪ್ರಾಣ ಕಳೆದುಕೊಂಡದ್ದು. ಗುಂಡಿ ಮುಚ್ಚುವ ಪರ್ಸೆಂಟೇಜಿಗಾಗಿ ಜಗಳವಾಡುತ್ತ ಕೂತಿದ್ದು. ಇನ್ನ ನಲವತ್ತು ಪರಸೆಂಟ್ ಗಲಾಟೆಯಲ್ಲಿ ಮಂತ್ರಿಗಿರಿ ಕಳೆದುಕೊಂಡ ಈಶ್ವರಪ್ಪನ ನೇತೃತ್ವದಲ್ಲಿ ಮುಸ್ಲಿಮರ ಕೇರಿಗೆ ನುಗ್ಗಿ ಎಸ್ಪಿ, ಡಿ.ಸಿ, ತಹಸೀಲ್ದಾರ, ಎಂ.ಪಿ ನೇತೃತ್ವದಲ್ಲಿ ಅವರ ಜೀವನೋಪಾಯದ ಪದಾರ್ಥಗಳನ್ನು ಬೀದಿಗೆ ಎಸೆದು ಭಯೋತ್ಪಾದನೆ ಮಾಡಿದ್ದು. ಇವೆಲ್ಲಾ ಬಿಜೆಪಿಗಳ ಸಾಧನೆಯಾಗಿ ಇದನ್ನೇ ಹೇಳಿಕೊಂಡು ಮತ ಕೇಳಲು ತಯಾರಾದ ಅವರುಗಳ ತಲೆಗೆ ಒಳ್ಳೆಯ ಕೆಲಸಗಳೇ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಎಲ್ಲ ವಿಧಾನಸಭಾ ಸದಸ್ಯರಿಗೆ ಬೆಳಗಾವಿ ಅಧಿವೇಶನವೆಂದರೆ ವಿದ್ಯೆ ಕಲಿಯಲು ಇಷ್ಟವಿಲ್ಲದ ಹುಡುಗರು ಸ್ಕೂಲಿಗೆ ಹೋದ ರೀತಿಯಂತಲ್ಲಾ. ಏಕೆಂದರೆ ಅಧಿವೇಶನಗಳು ಅರ್ಥ ಕಳೆದುಕೊಂಡಿವೆ. ಅಲ್ಲಿ ಯಾರಾದರೂ ಎದ್ದುನಿಂತು ಮಾತನಾಡಿದರೆ ಕೇಳಿಸಿಕೊಳ್ಳಬೇಕಿನಿಸುವುದಿಲ್ಲ; ಗೈರುಹಾಜರಾದರೆ, ಗೋವಾಕ್ಕೆ ಹೋಗಬೇಕಿನಿಸುತ್ತದೆ. ಕೊಠಡಿಯಲ್ಲೇ ಇರಲು ಬೇಜಾರು. ಎಲ್ಲಾದರೂ ಹೋಗೋಣವೆಂದರೆ ತಾಜ್‌ವೆಸ್ಟ್ ಹೋಟಲಿನಂತವೂ ಇಲ್ಲ. ಹೀಗಾಗಿ ಬಿಜೆಪಿಗಳು ಸದನವನ್ನೇ ಗಬ್ಬೆಬ್ಬಿಸುವ ಪ್ಲಾನ್ ಮಾಡಿ ಸಾವರ್ಕರ್‌ನ ಫೋಟೋವನ್ನು ಮುಖ್ಯಮಂತ್ರಿಗೂ ಗೊತ್ತಿಲ್ಲದೆ ಅಳವಡಿಸುವ ಸಂಚು ರೂಪಿಸಿದರಂತಲ್ಲಾ. ಅಲ್ಲಿಗೆ ಇದು ಆರೆಸ್ಸೆಸ್ ಕಾರ್ಯಕ್ರಮದಂತೆ ಕಂಡು ಕಾಂಗೈಗಳು ಸಾವರ್ಕರ್‌ನ ಜೊತೆಗೆ ಅಥವ ಬದಲಿಗೆ ಇನ್ನಿತರ ಕನ್ನಡದ ಸಾಂಸ್ಕೃತಿಕ ನಾಯಕರ ಫೋಟೋನೂ ಮಡಗಿ ಎಂದು ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತರಂತಲ್ಲಾ. ಇದನ್ನ ಕಂಡ ಬಿಜೆಪಿಗಳು ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಕರಿನೀರ ಶಿಕ್ಷೆಗೆ ಗುರಿಯಾದವರು. ಗಾಂಧಿ ಕೊಂದವರೆಂದು ನೀವೇ ಆಪಾದಿಸುತ್ತಿದ್ದೀರಿ; ಗಾಂಧಿ ಕೊಲ್ಲಲು ಪಿಸ್ತೂಲು ಕೊಟ್ಟವರು ಸಾವರ್ಕರ್ ಎಂದು ಇತ್ತೀಚೆಗೆ ಗಾಂಧೀಜಿ ಮರಿಮಗ ಹೇಳಿದ್ದಾರೆ. ನಮ್ಮ ಪುರಾಣದಲ್ಲಿ ಕೊಂದವರು ಕೊಲ್ಲಿಸಿಕೊಂಡವರನ್ನು ನೆನೆಸುತ್ತ ಬಂದಿದ್ದೇವೆ. ಉದಾಹರಣೆ ಬೇಕಾದಷ್ಟಿವೆ. ರಾಮ-ರಾವಣ, ಕೃಷ್ಣ-ಕಂಸ, ನರಸಿಂಹ-ಹಿರಣ್ಯಕಶಿಪು ಹೀಗೆ. ಆದ್ದರಿಂದ ಗಾಂಧಿ ಫೋಟೋ ಸುವರ್ಣ ಸೌಧದಲ್ಲಿರುವುದಾದರೆ ಪಕ್ಕದಲ್ಲಿ ಸಾವರ್ಕರ್ ಫೋಟೋ ಇರುವುದು ಸತ್ಯ. ಓಂ ಶಾಂತಿ ಶಾಂತಿ ಶಾಂತಿ ಎಂದವಂತಲ್ಲಾ, ಥೂತ್ತೇರಿ.

*****

ಹದಿನೈದು ಲಕ್ಷ ಮತದಾರರನ್ನು ಡಿಲೀಟ್ ಮಾಡಿಸಿದ ಆರೋಪ ಎದುರಿಸುತ್ತಿರುವ ಸರಕಾರ ಈ ಕೃತ್ಯ ವ್ಯಾಪಕವಾಗಿ ಪ್ರಚಾರವಾಗದಂತೆ ತಡೆಯಲು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬ್ಲಾಸ್ಟು ಮಾಡಿ ಎಂದು ಟಿವಿಯವರಿಗೆ ಸೂಚನೆ ಕೊಟ್ಟ ಕೂಡಲೇ ಮಾರಿಕೊಂಡ ಮಾಧ್ಯಮದವರು ಮತದಾರರು ಕಾಣೆಯಾಗಿರುವ ಪ್ರಕರಣವನ್ನೇ ಮರೆಯಾಗುವಂತೆ ಮಾಡಿದರು ಎಂದು ಡಿ.ಕೆ.ಶಿ ಆಪಾದನೆ ಮಾಡಿದರಂತಲ್ಲ. ಹಾಗಂದ ಕೂಡಲೇ ಅವರ ಮೇಲೆ ಇ.ಡಿ ದಾಳಿ ನಡೆಯಿತು. ಈಗ ಸರಕಾರದ ಸಂಪೂರ್ಣ ವೈಫಲ್ಯ ಮುಚ್ಚಲು ಸಾವರ್ಕರ್‌ನ ಮೊರೆ ಹೋಗಿರುವ ಸರಕಾರ ಆರೆಸ್ಸೆಸ್ ಸೂಚನೆಯಂತೆ ಆತನ ಭಾವಚಿತ್ರವನ್ನು ಸುವರ್ಣಸೌಧದದಲ್ಲಿ ಅಳವಡಿಸಲು ಸಂಚು ರೂಪಿಸಿದೆಯಂತಲ್ಲಾ. ಇದರಲ್ಲಿ ಅವರು ಗೆದ್ದರೆ ಮುಂದಿನ ಅಧಿವೇಶನಕ್ಕೆ ಸಾವರ್ಕರ್‌ನ ಪಕ್ಕಕ್ಕೆ ಗೋಳವಲಕರನ ಫೋಟೋ ಬರುತ್ತೆ ನಂತರ ಹೆಡಗೆವಾರನ ಚಿತ್ರ ತೂಗುಬೀಳುತ್ತೆ. ಆ ನಂತರ ರೈಲ್ವೆ ಭೋಗಿ ಮೇಲಿರುವ ದೀನದಯಾಳರ ಭಾವಚಿತ್ರ ವಿರಾಜಮಾನವಾಗುತ್ತೆ. ಹಾಲಿ ಸದಸ್ಯರೆಲ್ಲಾ ಅಸ್ತಂಗತರಾದ ಮೇಲೆ ಸುವರ್ಣಸೌಧದ ಗೋಡೆ ಮೇಲೆ ಎಡೂರಪ್ಪ, ಜೋಷಿ, ಸಿ.ಟಿ ರವಿ, ರೇಣುಕಾಚಾರ್ಯ, ಈಶ್ವರಪ್ಪ ಸರದಿಯೂ ಬರಬಹುದು. ಅಷ್ಟಕ್ಕೂ ಸಾವರ್ಕರ್ ಸುವರ್ಣ ಸಂಸ್ಕೃತಿ ಭವನ ಹೊಕ್ಕಿದ್ದು ಈಶ್ವರಪ್ಪರ ಸಾಧನೆಯಿಂದ. ಶಿವಮೊಗ್ಗದ ಮಾರ್ಕೆಟ್‌ನಲ್ಲಿ ನಿಲ್ಲಿಸಿದ್ದ ಸಾವರ್ಕರ್‌ನ ಫೋಟೋವನ್ನು ಯಾರೋ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಕಿತ್ತೆಸೆದ. ಅಷ್ಟು ಸಾಕಿತ್ತು ಮಂತ್ರಿಗಿರಿ ಕಳೆದುಕೊಂಡು ನಿರುದ್ಯೋಗಿಯಾಗಿದ್ದ ಈಶ್ವರಪ್ಪರಿಗೆ. ಕೂಡಲೇ ತರತರದ ಕಾರ್ಯಕ್ರಮಗಳನ್ನು ಮಾಡಿ ಸಾವರ್ಕರ್‌ನನ್ನು ಮೆರೆಸಿದರು. ಅಂತಹ ವ್ಯಕ್ತಿ ಈಗ ಸದನಕ್ಕೆ ಹೋಗದೆ ಜಾರಕಿಹೊಳಿ ಮನೆಯಲ್ಲಿ ಜಾಲಿಯಾಗಿ ಕಾಲ ಕಳೆದದ್ದು ಇತಿಹಾಸದ ವ್ಯಂಗ್ಯವಂತಲ್ಲಾ, ಥೂತ್ತೇರಿ.

*****

ನಮ್ಮ ಹಿರಿಯ ಚೇತನಗಳಾದ ಶ್ರೀನಿವಾಸ್ ಪ್ರಸಾದ್ ಮತ್ತು ವಿಶ್ವನಾಥ್ ಹರಿಯ ಮುರಿಯ ಜಗಳಕ್ಕೆ ಬಿದ್ದಿದ್ದಾರಲ್ಲಾ. ಹಳ್ಳಿಯ ಕಡೆ ಒಂದು ಗಾದೆಯಿದೆ. ’ತಿರಿಯಲು ಬಂದು ಕೇರಿಯಲ್ಲಿ ಜಗಳಕ್ಕೆ ಬಿದ್ದರು’ ಅಂತ. ಪ್ರಸಾದ್ ಮತ್ತು ವಿಶ್ವನಾಥ್ ತಿರಿಯಲು ಬಂದಿದ್ದು ಬಿಜೆಪಿ ಕೇರಿಯಲ್ಲಿ. ಅದವರ ಕೇರಿಯಲ್ಲ. ಅವರು ಬಂದಿದ್ದು ಕಾಂಗ್ರೆಸ್ ಕೇರಿಯಿಂದ. ಅವರಿಬ್ಬರೂ ಬಿಜೆಪಿಗೆ ಬಂದಿದ್ದು ಒಂದೇ ಕಾರಣದಿಂದ. ಪ್ರಸಾದ್ ಸಿದ್ದರಾಮಯ್ಯಗೆ ತಾಕೀತು ಮಾಡಿ ರೆವಿನ್ಯೂ ಮಂತ್ರಿಯಾದ ಕೂಡಲೇ ವೀಕ್ ಆದರು. ವಿಶ್ವನಾಥ್ ತಮ್ಮನ್ನು ಮಂತ್ರಿ ಮಾಡಲಿಲ್ಲ ಎಂದು ಸೋನಿಯಾಗಾಂಧಿಗೆ ’ಸಿದ್ದು ಭ್ರಷ್ಟ, ಬದಲಾಯಿಸಿ’ ಎಂದು ದೂರು ಬರೆಯುತ್ತ ಕುಳಿತರು. ಈ ಇಬ್ಬರ ಚಟುವಟಿಕೆಯನ್ನು ನೋಡಿದ ಸಿದ್ದು ಇಬ್ಬರೂ ಕಾಂಗ್ರೆಸ್ ಬಿಟ್ಟುಹೋಗುವಂತೆ ಮಾಡಿದರು. ಸಮಾನ ಸಂತ್ರಸ್ತರಾದ ಇಬ್ಬರಿಗೂ ಬಿಜೆಪಿ ಅನ್ಯಾಯ ಮಾಡಲಿಲ್ಲ. ಒಬ್ಬರನ್ನು ಸಂಸದರನ್ನಾಗಿಸಿತು, ಮತ್ತೊಬ್ಬರನ್ನು ಎಮ್ಮೆಲ್ಸಿ ಮಾಡಿತು. ರಾಜಕಾರಣದ ಅಂಚಿಗೆ ಸರಿದಿರುವ ಶ್ರೀನಿವಾಸ ಪ್ರಸಾದ್ ನಿವೃತ್ತಿ ಅಂಚಿನಲ್ಲಿದ್ದರೆ, ವಿಶ್ವನಾಥ್ ಕಾಂಗ್ರೆಸ್ ಕೇರಿಗೆ ಬಂದು ಇನ್ನೊಂದು ಚಾನ್ಸಿಗೆ ಅಡಿಪಾಯ ಹಾಕುತ್ತಿದ್ದಾರೆ. ಪ್ರಸಾದ್, ವಿಶ್ವನಾಥರನ್ನ ಮೂದಲಿಸಿ ಅಲೆಮಾರಿ ಎಂದುಬಿಟ್ಟಿದ್ದಾರಲ್ಲಾ. ಸಾಮಾನ್ಯವಾಗಿ ಪಕ್ಷದಿಂದ ಪಕ್ಷಕ್ಕೆ ಅಲೆಯುವ ಒಬ್ಬ ಅಲೆಮಾರಿಯನ್ನು ಕಂಡ ಇನ್ನೊಬ್ಬ ಅಲೆಮಾರಿಗೆ ಆಗುವುದಿಲ್ಲವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...