Homeಮುಖಪುಟಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

ಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದ ಕೇರಳ ಮೂಲಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. ಎರಡು ವರ್ಷಗಳಿಂದ ಯುಎಪಿಎ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಲುಕಿ ಲಕ್ನೋ ಜೈಲಿನಲ್ಲಿದ್ದ ಅವರು ಬಿಡುಗೆಯಾಗಲಿದ್ದಾರೆ.

2022ರ ಸೆಪ್ಟಂಬರ್‌ನಲ್ಲಿ ಯುಎಪಿಎ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣವು ಇನ್ನೂ ವಿಚಾರಣೆಗೆ ಬಾಕಿ ಇರುವ ಕಾರಣ ಅವರು ಲಕ್ನೋ ಜೈಲಿನಲ್ಲಿದ್ದರು. ಈಗ ಅಲಹಾಬಾದ್ ಹೈಕೋರ್ಟ್ ಆ ಪ್ರಕರಣದಲ್ಲಿಯೂ ಜಾಮೀನು ನೀಡಿದೆ.

ಸಿದ್ದಿಕ್ ಕಪ್ಪನ್ ಮತ್ತು ಇತರರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ವಿಭಾಗವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ನ ಸದಸ್ಯರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರು ಭಯೋತ್ಪಾದಕ ಕೃತ್ಯಗಳು ಅಥವಾ ಅಕ್ರಮ ಹಣಕಾಸು ವಹಿವಾಟು ನಡೆಸಿಲ್ಲ. ಬದಲಾಗಿ ಪತ್ರಿಕೋದ್ಯಮದ ಕೆಲಸಕ್ಕಾಗಿ ಮಾತ್ರ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದರು ಆರೋಪಿಗಳ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

“ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿತ್ತು.

2020ರ ಅಕ್ಟೋಬರ್ 5 ರಂದು ಸಿದ್ದಿಕ್‌ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಇದನ್ನೂ ಓದಿ; ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...