Homeಮುಖಪುಟಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಹೆಚ್ಚಿನ ಕೋವಿಡ್ ಸೋಂಕು ಹೊಂದಿರುವ ದೇಶಗಳ ವಿಮಾನಯಾನ ನಿಷೇಧ ಸೇರಿದಂತೆ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಧಿಸಲು ಭಾರತ ಇನ್ನೂ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ಹೇಳಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

“ಯಾವುದೇ ರೀತಿಯ ಕಠಿಣ ಕ್ರಮಗಳನ್ನು ವಿಧಿಸುವಂತೆ ದೇಶದ ಪರಿಸ್ಥಿತಿ ಇಲ್ಲ” ಎಂದು ಸ್ಪಷ್ಟಪಡಿಸಿರುವ ಅವರು, “ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಜನರು ಹೆಚ್ಚು ಜಾಗೃತರಾಗಿದ್ದಾರೆ. ತಮ್ಮದೇ ಆದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದು ಸಂಪೂರ್ಣವಾಗಿ ಅಗತ್ಯವಿಲ್ಲದಿದ್ದಾಗ ಭಯವನ್ನು ಉಂಟುಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದಿದ್ದಾರೆ.

ನೆರೆಯ ಚೀನಾ ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಾಗ ಕೇಂದ್ರ ಸಚಿವರ ಹೇಳಿಕೆ ಹೊರಬಿದ್ದಿದೆ.

ದೇಶದ ಎಲ್ಲಾ ಪ್ರಮುಖ ಆಸ್ಪತ್ರೆಗಳಲ್ಲಿ ಅಗತ್ಯ ಸಿಬ್ಬಂದಿ, ಆಮ್ಲಜನಕ ಪೂರೈಕೆ, ಹಾಸಿಗೆ ಲಭ್ಯತೆ, ವೆಂಟಿಲೇಟರ್‌ಗಳ ಪ್ರಮಾಣ ಮತ್ತು ಔಷಧಿಗಳ ಸಾಮರ್ಥ್ಯಗಳನ್ನು ಪರೀಕ್ಷಿಸಲು ಆರೋಗ್ಯ ಸಚಿವಾಲಯವು ಮಂಗಳವಾರ ಡ್ರಿಲ್ ನಡೆಸಲಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

“ಇದು ಯುದ್ಧದ ತಯಾರಿಯಂತೆ. ಅದಕ್ಕಾಗಿ ನಾವು ಚೆನ್ನಾಗಿ ಸಿದ್ಧರಾಗಿರಬೇಕು” ಎಂದಿದ್ದಾರೆ ಮಾಂಡವಿಯಾ. “ಪೂರ್ವ ಸಿದ್ಧತೆಯನ್ನು ಪರೀಕ್ಷಿಸಲು ಡ್ರಿಲ್ ಹಮ್ಮಿಕೊಂಡಿರುವುದು ಪರಿಣಾಮಕಾರಿ ಮಾರ್ಗವಾಗಿದೆ. ಗಮನಿಸಬೇಕಾದ ಅಂಶವೆಂದರೆ ಭಯಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ: ವಿವಿಧ ಸಮುದಾಯಗಳ ಬೇಡಿಕೆಗಳೇನು?

‌ಇದರ ನಡುವೆ ಕೋವಿಡ್ -19ರ ಅಲೆಯನ್ನು ತಡೆಗಟ್ಟಲು ‘ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್’ ವಿಧಾನದ ಮೇಲೆ ಕೇಂದ್ರೀಕರಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆರೋಗ್ಯ ಸಚಿವಾಲಯ ತಿಳಿಸಿದೆ ಎಂದು ‘ಎಎನ್‌ಐ’ ವರದಿ ಮಾಡಿದೆ.

ಜೀನೋಮ್ ಸೀಕ್ವೆನ್ಸಿಂಗ್‌ (ಒಂದು ನಿರ್ದಿಷ್ಟ ಜೀವಿ ಅಥವಾ ಜೀವಕೋಶದ ಪ್ರಕಾರದ ಸಂಪೂರ್ಣ ಆನುವಂಶಿಕ ರಚನೆಯನ್ನು ನಿರ್ಧರಿಸಲು ಬಳಸಲಾಗುವ ಪ್ರಯೋಗಾಲಯ ವಿಧಾನ) ಪರೀಕ್ಷೆಗಾಗಿ ಪಾಸಿಟಿವ್‌ ಬಂದ ಮಾದರಿಗಳನ್ನು ಕಳುಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೋರಿದೆ. ಇದರಿಂದಾಗಿ ಹೊಸ ರೂಪಾಂತರ ತಳಿಗಳನ್ನು ಸಮಯಕ್ಕೆ ಸರಿಯಾಗಿ ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

“ಮುಂಬರುವ ಹಬ್ಬಗಳಲ್ಲಿ ಮುಂಜಾಗ್ರತೆ ವಹಿಸಬೇಕು. ಕಾರ್ಯಕ್ರಮ ಆಯೋಜಕರು, ವ್ಯಾಪಾರಿ ವರ್ಗ, ಮಾರುಕಟ್ಟೆ ಸಂಘಗಳು- ಜನಸಂದಣಿಯನ್ನು ತಪ್ಪಿಸಲು ಕ್ರಮ ಜರುಗಿಸಬೇಕು. ವಿಶೇಷವಾಗಿ ಒಳಾಂಗಣ ವ್ಯವಸ್ಥೆಯಲ್ಲಿ ಮಾಸ್ಕ್‌ಗಳನ್ನು ಧರಿಸುವುದು ಅತ್ಯಗತ್ಯ” ಎಂದು ಸಚಿವಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...