Homeಕರ್ನಾಟಕಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

ಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

- Advertisement -
- Advertisement -

ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿಯವರು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಗೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್‌ ಕುಮಾರ್‌ ಅವರ ನಿಲುವುಗಳನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿರುವ ಅಕ್ಕಯ್‌, “ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಸಂಬಂಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ಎಲ್‌ಜಿಬಿಟಿಕ್ಯೂಐ ಸಮುದಾಯದಲ್ಲಿ ನೀವು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಶೀಲ್, “ದೇಶದಲ್ಲಿ ಸಲಿಂಗ ವಿವಾಹಗಳ ಸಮಸ್ಯೆಯನ್ನು ನ್ಯಾಯಾಲಯಗಳು ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚೆಯ ಅಗತ್ಯವಿದೆ. ಇಬ್ಬರು ನ್ಯಾಯಾಧೀಶರು ಕುಳಿತು ಇಂತಹ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಎಡ-ಉದಾರವಾದಿ ಪ್ರಜಾಪ್ರಭುತ್ವ ಮಂದಿ ಮತ್ತು ಹೋರಾಟಗಾರರು  ಪ್ರಯತ್ನಿಸುತ್ತಿದ್ದಾರೆ. ಸಲಿಂಗ ವಿವಾಹವು ನಮ್ಮ ಸಂಸ್ಕೃತಿ ಮತ್ತು ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ. ಇದನ್ನು ವಿರೋಧಿಸಿ ಅಕ್ಕಯ್‌ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಅಕ್ಕಯ್‌ ಅವರ ಪ್ರತಿಕ್ರಿಯೆ ಏನು?

“ಸಲಿಂಗ ವಿವಾಹಕ್ಕೆ ಸಿಗಬೇಕಾದ ಕಾನೂನು ಮಾನ್ಯತೆಯ ವಿರುದ್ಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ‘ಲೆಸ್ಬಿಯನ್, ಗೇ, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್, ಜೋಗಪ್ಪ ಮಾರ್ಲಾಡಿ + ಆಂದೋಲನ’ದ ಭಾಗವಾಗಿರುವ ಟ್ರಾನ್ಸ್‌ಜೆಂಡರ್ ವ್ಯಕ್ತಿಯಾಗಿರುವ ನಾನು, ‘ಮದುವೆಯಾಗುವ ಹಕ್ಕು ಎಲ್ಲಾ ವ್ಯಕ್ತಿಗಳಿಗೆ ಅನ್ವಯಿಸಬೇಕು. ‘ಪುರುಷರು’ ಮತ್ತು ‘ಮಹಿಳೆಯರಿಗೆ’ ಸೀಮಿತವಾಗಿರಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ ಅಕ್ಕಯ್‌ ಪದ್ಮಶಾಲಿ.

ಮುಂದುವರಿದು, “ನೀವು ‘ಸಲಿಂಗ ವಿವಾಹ’ವನ್ನು ವಿರೋಧಿಸುತ್ತೀರಿ. ನಿಮ್ಮ ಅಭಿಪ್ರಾಯದಲ್ಲಿ ಮದುವೆ ಎಂಬುದು ‘ಶುದ್ಧ’ವಾಗಿರಬೇಕು, ಅಂದರೆ ಜೈವಿಕ ಪುರುಷ ಮತ್ತು ಜೈವಿಕ ಸ್ತ್ರೀಯವರು ಮಾತ್ರ ಮದುವೆಯಾಗಬೇಕು. ಎಲ್‌ಜಿಬಿಟಿಕ್ಯೂಐ ಆಂದೋಲನವು ಇದನ್ನು ಒಪ್ಪುವುದಿಲ್ಲ. ಲಿಂಗವು ಕಾಮನಬಿಲ್ಲಿನಂತೆ ವರ್ಣಮಯವಾದದ್ದು” ಎಂದು ವಿವರಿಸಿದ್ದಾರೆ.

“ನನ್ನ ವೈಯಕ್ತಿಕ ಉದಾಹರಣೆಯನ್ನೇ ಹೇಳುವುದಾದರೆ- ನಾನು ಗಂಡಾಗಿ ಹುಟ್ಟಿದ್ದೇನೆ, ಆದರೆ ನನ್ನ ಅಸ್ಮಿತೆ ಹೆಣ್ತನ ಎಂಬುದು ನನಗೆ ಯಾವಾಗಲೂ ತಿಳಿದಿತ್ತು. ಅರಿವಿನ ಹೆಚ್ಚಳ, ನನ್ನ ಸ್ವಂತ ಆತ್ಮವಿಶ್ವಾಸ ಮತ್ತು ಶಕ್ತಿಯೊಂದಿಗೆ ನಾನು ಈಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದಲ್ಲಿ ನಾನು ‘ಜೈವಿಕ ಮಹಿಳೆ’ ಅಲ್ಲ. ನಿಮ್ಮ ಪ್ರಕಾರ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಮಹಿಳೆಯರಲ್ಲದ ನಮ್ಮಂಥವರಿಗೆ ಮದುವೆಯನ್ನು ನಿರಾಕರಿಸುವುದು ಸಮಾನತೆಯ ತತ್ವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿನ ನಿರಾಕರಣೆಯಾಗಿರುತ್ತದೆ” ಎಂದು ಟೀಕಿಸಿದ್ದಾರೆ.

“ನನ್ನ ಹೊರತಾಗಿ ಜೈವಿಕವಾಗಿ ಹೆಣ್ಣಲ್ಲದ ಅಥವಾ ಜೈವಿಕವಾಗಿ ಪುರುಷನಲ್ಲದ ಇನ್ನೂ ಅನೇಕರಿದ್ದಾರೆ. ಈ ವರ್ಗಕ್ಕೆ ಮದುವೆಯನ್ನು ನಿರಾಕರಿಸಿದರೆ – ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆದೇಶದ ಉಲ್ಲಂಘನೆಯಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಇಲ್ಲ ಎಂದು ನೀವು ಭಾವಿಸುತ್ತಿರುವುದು ನನಗೆ ಆಶ್ಚರ್ಯವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಯಾವಾಗಲೂ ವಿಭಿನ್ನ ರೀತಿಯ ಪ್ರೀತಿ ಮತ್ತು ವಿಭಿನ್ನ ರೀತಿಯ ಮದುವೆಗೆ ಅವಕಾಶ ಕಲ್ಪಿಸಿವೆ. ನೀವು ಹೇಳುವಂತೆ ನಮ್ಮ ಶತಮಾನಗಳ ಹಳೆಯ ಸಂಪ್ರದಾಯಗಳು ಹೋಮೋಫೋಬಿಕ್ ಮತ್ತು ಟ್ರಾನ್ಸ್‌ಫೋಬಿಕ್ ಅಲ್ಲ. ಸಲಿಂಗಿಗಳು, ದ್ವಿಲಿಂಗಿಗಳು, ಇಂಟರ್‌ಸೆಕ್ಸ್, ಲೆಸ್ಬಿಯನ್‌ ಮತ್ತು ಟ್ರಾನ್ಸ್‌ಜೆಂಡರ್‌ಗಳು ಎಲ್ಲರನ್ನೂ ಒಳಗೊಂಡ ವೈವಿಧ್ಯಮಯ ಮನುಷ್ಯಕುಲವನ್ನು ಇದು ಹೊಂದಿದೆ” ಎಂದು ಹೇಳಿದ್ದಾರೆ.

“…ಸುಪ್ರೀಂ ಕೋರ್ಟ್ ವಿಶೇಷ ವಿವಾಹ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಗಣಿಸುತ್ತಿರುವುದರಿಂದ ನಿಮ್ಮ ಭಯವು ಅನಗತ್ಯವೆಂದು ತೋರುತ್ತದೆ. ಈ ತಾಂತ್ರಿಕ ಸ್ಪಷ್ಟೀಕರಣವು ನಿಮ್ಮ ಕಳವಳವನ್ನು ನಿವಾರಿಸುತ್ತದೆ. ನಿಮ್ಮ ಭಾಷಣದಲ್ಲಿ ನೀವು ನ್ಯಾಯಾಲಯಕ್ಕೆ ‘ರಾಷ್ಟ್ರದ ಸಂಸ್ಕೃತಿ ಮತ್ತು ಚಿಂತನೆಗಳಿಗೆ ವಿರುದ್ಧವಾದ ತೀರ್ಪು ನೀಡಬೇಡಿ’ ಎಂದು ಸಲಹೆ ನೀಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ನ್ಯಾಯಾಲಯಗಳು ‘ಸಾಂಸ್ಕೃತಿಕ ತತ್ವ’ಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧರಿಸುತ್ತವೆ. ನ್ಯಾಯಾಧೀಶರು ಅನ್ವಯಿಸಲು ಬದ್ಧರಾಗಿರುವ ನೈತಿಕತೆಯು ಜನಪ್ರಿಯ ನೈತಿಕತೆಯಲ್ಲ- ಅದು ಸಾಂವಿಧಾನಿಕ ನೈತಿಕತೆಯಾಗಿದೆ” ಎಂದು ತಿಳಿಸಿದ್ದಾರೆ.

“ಸಾಂವಿಧಾನಿಕ ನೈತಿಕತೆಯು ಸ್ವಾಭಾವಿಕ ಭಾವನೆಯಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್‌ ಅವರು ಹೇಳಿದ್ದನ್ನು ನಿಮಗೆ ನೆನಪಿಸಲು ಬಯಸುತ್ತೇನೆ… ನಮ್ಮ ಜನರು ಇನ್ನೂ ಕಲಿಯಬೇಕಾಗಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು… ಸಾಂವಿಧಾನಿಕ ನೈತಿಕತೆಯನ್ನು ರಕ್ಷಿಸುವುದು ನ್ಯಾಯಾಲಯಗಳ ಜವಾಬ್ದಾರಿಯಾಗಿದೆ. ಸಂವಿಧಾನದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ನಿರ್ಧರಿಸುತ್ತದೆ ಹೊರತು ಸಾಂಸ್ಕೃತಿಕ ನೀತಿಯಿಂದಲ್ಲ. ಭಾರತದ LGBTQI ನಾಗರಿಕರ ಸಮಾನತೆ ಮತ್ತು ಘನತೆಯ ಹಕ್ಕನ್ನು ಕೋರ್ಟ್ ರಕ್ಷಿಸುತ್ತದೆ ಎಂ‌ಬ ವಿಶ್ವಾಸ ನನಗಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

“‘ಎಡ/ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ನೀವು ಭಾವಿಸುವುದು ತಪ್ಪಾಗಿದೆ. ನಾನು ಟ್ರಾನ್ಸ್‌ಜೆಂಡರ್‌ ಸಮುದಾಯದ ಭಾಗವಾಗಿದ್ದೇನೆ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ.‍ ಎಲ್ಲರೂ ಮದುವೆಯಾಗಬಹುದು ಎಂಬ ಹಕ್ಕಿಗಾಗಿ ನಾನು ಹೋರಾಡುತ್ತಿದ್ದೇನೆ. ಆ ಮೂಲಕ ನಾನು ಎಲ್ಲ ವ್ಯಕ್ತಿಗಳಿಗೂ ಸಮಾನತೆ ಮತ್ತು ಘನತೆಯ ಹಕ್ಕಿಗಾಗಿ ಹೋರಾಡುತ್ತಿದ್ದೇನೆ. ಎಲ್ಲರೂ ಮದುವೆಯಾಗಬಹುದೆಂಬುದು ಈ ನೆಲದ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿದೆ. ನೀವು ನಿಮ್ಮ ಮಾತುಗಳ ಮೂಲಕ ಎಲ್‌ಜಿಬಿಟಿಕ್ಯೂಐ ಸಮುದಾಯಕ್ಕೆ ನೋವುಂಟು ಮಾಡಿದ್ದೀರಿ. ಹೀಗಾಗಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...