Homeಕರ್ನಾಟಕಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

“ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ,‌ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೀಸಲಾತಿ ಕುರಿತು ಆಗುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು” ಎಂದು ತಿಳಿಸಿದ್ದಾರೆ.

“ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದುಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ” ಎಂದಿದ್ದಾರೆ.

“ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ‌ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ

ರಾಜ್ಯದಲ್ಲಿ ಈಗ ಮೀಸಲಾತಿ ಹೋರಾಟ, ಆಗ್ರಹಗಳ ಪರ್ವ ಆರಂಭವಾಗಿದೆ. ಒಂದಲ್ಲ ಒಂದು ಸಮುದಾಯವು ಮೀಸಲಾತಿ ಸಂಬಂಧ ಹೋರಾಟಕ್ಕೆ ಮುಂದಾಗುತ್ತಿವೆ. ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ನಾಯಕ ಸಮುದಾಯ ಹೋರಾಟ ಮಾಡಿ ತಕ್ಕ ಮಟ್ಟಿನ ಯಶಸ್ಸು ಪಡೆದಿದೆ. ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್ ವರದಿ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ 7ಕ್ಕೂ ಹೆಚ್ಚಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ನ ತೀರ್ಪು ತಡೆಯಾಗಿರುವುದರಿಂದ ಸರ್ಕಾರ, ‘ಕಾಂತರಾಜ್ ಆಯೋಗದ ವರದಿ’ಯನ್ನು ಬಿಡುಗಡೆ ಮಾಡುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ. ಇದರ ನಡುವೆ ಮೀಸಲಾತಿ ಹೋರಾಟಗಳು ಬಿರುಸು ಪಡೆಯುತ್ತಿವೆ.

1990ರ ಅವಧಿಯಲ್ಲಿ ರಚನೆಯಾದ ಮಂಡಲ್‌ ಆಯೋಗದ ಮೂಲಕ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಒಟ್ಟು ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಮೀರದಂತೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿತು. ಹೀಗಾಗಿ ಶೇ.52ರಷ್ಟು ಮೀಸಲಾತಿಯ ಬದಲು ಕೇವಲ ಶೇ.27ರಷ್ಟು ಮೀಸಲಾತಿ ಪ್ರಾತಿನಿಧ್ಯ ಒಬಿಸಿಗಳಿಗೆ ದೊರಕಿತು.

2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲ್ಜಾತಿ ಬಡವರಿಗೆಂದು, ಎಂಟು ಲಕ್ಷ ರೂ. ಆದಾಯ ಮಿತಿಯನ್ನು ವಿಧಿಸಿ ಶೇ.10ರಷ್ಟು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಕೋಟಾವನ್ನು ನೀಡಿತು. ಮೇಲ್ಜಾತಿಗಳಿಗೆ ನೀಡಿರುವ ಅವೈಜ್ಞಾನಿಕ ಮೀಸಲಾತಿಯ ಫಲವೋ ಅಥವಾ ಸಮುದಾಯಗಳಲ್ಲಿ ಮೀಸಲಾತಿ ಕುರಿತು ಹುಟ್ಟಿರುವ ಆಸಕ್ತಿಯ ಕಾರಣವೋ- ಮೀಸಲಾತಿ ಹೋರಾಟಗಳು ಮುನ್ನೆಲೆಗೆ ಬಂದಿವೆ. ರಾಜ್ಯದಲ್ಲೂ ವಿವಿಧ ಸಮುದಾಯಗಳು ಹೋರಾಟಕ್ಕೆ ಧಮುಕಿವೆ. ಚುನಾವಣೆ ಹೊಸ್ತಿಲಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ತರಬೇಕೆಂದು ಮೂರು ದಶಕಗಳಿಂದ ನಡೆಯುತ್ತಿರುವ ಹೋರಾಟ ಈಗ ತೀವ್ರವಾಗಿದೆ. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಪ್ರಸ್ತುತ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಲಾಗಿದೆ.

ಒಕ್ಕಲಿಗ ಉಪಪಂಗಡಗಳನ್ನು ಒಳಗೊಂಡು ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು ಎಂದು ಒಕ್ಕಲಿಗ ಸಮುದಾಯ ಆಗ್ರಹಿಸುತ್ತಿದೆ. ಬೃಹತ್ ಹೋರಾಟದ ಎಚ್ಚರಿಕೆಯನ್ನೂ ನೀಡಿದೆ.

ಪರಿಶಿಷ್ಟ ಜಾತಿ ಪಟ್ಟಿಯೊಳಗೆ ಮಡಿವಾಳ ಸಮುದಾಯವನ್ನು ಸೇರಿಸಬೇಕು ಎಂಬ ಕೂಗು ಎದ್ದಿದೆ. ಸವಿತಾ ಸಮಾಜವೂ ಮೀಸಲಾತಿ ಹೋರಾಟದ ಎಚ್ಚರಿಕೆ ನೀಡಿದೆ. ತಮ್ಮ ಸಮುದಾಯಕ್ಕೆ ಪ್ರವರ್ಗ 1 ಮೀಸಲಾತಿ ನೀಡದಿದ್ದಲ್ಲಿ ರಾಜ್ಯಾದ್ಯಂತ ಕ್ಷೌರದಂಗಡಿ ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸವಿತಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ತಮ್ಮನ್ನು ಸೇರಿಸಬೇಕು ಎಂದು ಹಲವು ಸಮುದಾಯಗಳು ಆಗ್ರಹಿಸುತ್ತಿವೆ. ಪ್ರವರ್ಗ 2ಎನಲ್ಲಿ ಇರುವ ಕುರುಬ, ಉಪ್ಪಾರ, ಈಡಿಗ ಸಮುದಾಯಗಳು ತಮ್ಮನ್ನು ಎಸ್‌.ಟಿ. ಸೇರಿಸಬೇಕೆಂದು ಆಗ್ರಹಿಸುತ್ತಿವೆ. ಈ ಸಂಬಂಧ ಹೀಗಾಗಲೇ ಬೃಹತ್ ಹೋರಾಟಗಳೂ ನಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...