Homeಕರ್ನಾಟಕಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

“ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ,‌ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೀಸಲಾತಿ ಕುರಿತು ಆಗುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು” ಎಂದು ತಿಳಿಸಿದ್ದಾರೆ.

“ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದುಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ” ಎಂದಿದ್ದಾರೆ.

“ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ‌ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ

ರಾಜ್ಯದಲ್ಲಿ ಈಗ ಮೀಸಲಾತಿ ಹೋರಾಟ, ಆಗ್ರಹಗಳ ಪರ್ವ ಆರಂಭವಾಗಿದೆ. ಒಂದಲ್ಲ ಒಂದು ಸಮುದಾಯವು ಮೀಸಲಾತಿ ಸಂಬಂಧ ಹೋರಾಟಕ್ಕೆ ಮುಂದಾಗುತ್ತಿವೆ. ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ನಾಯಕ ಸಮುದಾಯ ಹೋರಾಟ ಮಾಡಿ ತಕ್ಕ ಮಟ್ಟಿನ ಯಶಸ್ಸು ಪಡೆದಿದೆ. ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್ ವರದಿ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ 7ಕ್ಕೂ ಹೆಚ್ಚಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ನ ತೀರ್ಪು ತಡೆಯಾಗಿರುವುದರಿಂದ ಸರ್ಕಾರ, ‘ಕಾಂತರಾಜ್ ಆಯೋಗದ ವರದಿ’ಯನ್ನು ಬಿಡುಗಡೆ ಮಾಡುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ. ಇದರ ನಡುವೆ ಮೀಸಲಾತಿ ಹೋರಾಟಗಳು ಬಿರುಸು ಪಡೆಯುತ್ತಿವೆ.

1990ರ ಅವಧಿಯಲ್ಲಿ ರಚನೆಯಾದ ಮಂಡಲ್‌ ಆಯೋಗದ ಮೂಲಕ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಒಟ್ಟು ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಮೀರದಂತೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿತು. ಹೀಗಾಗಿ ಶೇ.52ರಷ್ಟು ಮೀಸಲಾತಿಯ ಬದಲು ಕೇವಲ ಶೇ.27ರಷ್ಟು ಮೀಸಲಾತಿ ಪ್ರಾತಿನಿಧ್ಯ ಒಬಿಸಿಗಳಿಗೆ ದೊರಕಿತು.

2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲ್ಜಾತಿ ಬಡವರಿಗೆಂದು, ಎಂಟು ಲಕ್ಷ ರೂ. ಆದಾಯ ಮಿತಿಯನ್ನು ವಿಧಿಸಿ ಶೇ.10ರಷ್ಟು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಕೋಟಾವನ್ನು ನೀಡಿತು. ಮೇಲ್ಜಾತಿಗಳಿಗೆ ನೀಡಿರುವ ಅವೈಜ್ಞಾನಿಕ ಮೀಸಲಾತಿಯ ಫಲವೋ ಅಥವಾ ಸಮುದಾಯಗಳಲ್ಲಿ ಮೀಸಲಾತಿ ಕುರಿತು ಹುಟ್ಟಿರುವ ಆಸಕ್ತಿಯ ಕಾರಣವೋ- ಮೀಸಲಾತಿ ಹೋರಾಟಗಳು ಮುನ್ನೆಲೆಗೆ ಬಂದಿವೆ. ರಾಜ್ಯದಲ್ಲೂ ವಿವಿಧ ಸಮುದಾಯಗಳು ಹೋರಾಟಕ್ಕೆ ಧಮುಕಿವೆ. ಚುನಾವಣೆ ಹೊಸ್ತಿಲಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ತರಬೇಕೆಂದು ಮೂರು ದಶಕಗಳಿಂದ ನಡೆಯುತ್ತಿರುವ ಹೋರಾಟ ಈಗ ತೀವ್ರವಾಗಿದೆ. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಪ್ರಸ್ತುತ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಲಾಗಿದೆ.

ಒಕ್ಕಲಿಗ ಉಪಪಂಗಡಗಳನ್ನು ಒಳಗೊಂಡು ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು ಎಂದು ಒಕ್ಕಲಿಗ ಸಮುದಾಯ ಆಗ್ರಹಿಸುತ್ತಿದೆ. ಬೃಹತ್ ಹೋರಾಟದ ಎಚ್ಚರಿಕೆಯನ್ನೂ ನೀಡಿದೆ.

ಪರಿಶಿಷ್ಟ ಜಾತಿ ಪಟ್ಟಿಯೊಳಗೆ ಮಡಿವಾಳ ಸಮುದಾಯವನ್ನು ಸೇರಿಸಬೇಕು ಎಂಬ ಕೂಗು ಎದ್ದಿದೆ. ಸವಿತಾ ಸಮಾಜವೂ ಮೀಸಲಾತಿ ಹೋರಾಟದ ಎಚ್ಚರಿಕೆ ನೀಡಿದೆ. ತಮ್ಮ ಸಮುದಾಯಕ್ಕೆ ಪ್ರವರ್ಗ 1 ಮೀಸಲಾತಿ ನೀಡದಿದ್ದಲ್ಲಿ ರಾಜ್ಯಾದ್ಯಂತ ಕ್ಷೌರದಂಗಡಿ ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸವಿತಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ತಮ್ಮನ್ನು ಸೇರಿಸಬೇಕು ಎಂದು ಹಲವು ಸಮುದಾಯಗಳು ಆಗ್ರಹಿಸುತ್ತಿವೆ. ಪ್ರವರ್ಗ 2ಎನಲ್ಲಿ ಇರುವ ಕುರುಬ, ಉಪ್ಪಾರ, ಈಡಿಗ ಸಮುದಾಯಗಳು ತಮ್ಮನ್ನು ಎಸ್‌.ಟಿ. ಸೇರಿಸಬೇಕೆಂದು ಆಗ್ರಹಿಸುತ್ತಿವೆ. ಈ ಸಂಬಂಧ ಹೀಗಾಗಲೇ ಬೃಹತ್ ಹೋರಾಟಗಳೂ ನಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...