Homeಮುಖಪುಟಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

- Advertisement -
- Advertisement -

ತೋಟಗಾರಿಕೆ ಸಚಿವ ಮುನಿರತ್ನರವರು 40% ಕಮಿಷನ್‍ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ಬಂಧನಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಸರ್ಕಾರ ನಡೆಸುತ್ತಿರುವ ಭಾರೀ ಭ್ರಷ್ಟಾಚಾರ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಸಮರ್ಪಕ ತನಿಖೆ ನಡೆಸುವುದು ಬಿಟ್ಟು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿರುವ 80 ವರ್ಷದ ಕೆಂಪಣ್ಣನವರನ್ನು ರಾತ್ರೋರಾತ್ರಿ ಬಂಧಿಸುವುದು ಎಷ್ಟು ಸರಿ? ಎಂದು ಹಲವರು ಖಂಡಿಸಿದ್ದಾರೆ.

ಕರ್ನಾಟಕದಲ್ಲಿ ಎಂತಹ  ನ್ಯಾಯ ವ್ಯವಸ್ಥೆಯಿದೆ? 40% ದಂಧೆಯನ್ನು ಬಯಲಿಗೆಳೆದ ವ್ಯಕ್ತಿಗೆ ಜೈಲು ಶಿಕ್ಷೆ. ಆದರೆ ಪಕ್ಷದ ಕಾರ್ಯಕರ್ತ ಸಂತೋಷ್‌ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಎಲ್ಲವೂ ಆಡಳಿತ ಪಕ್ಷದ ದುಷ್ಕೃತ್ಯಗಳನ್ನು ರಕ್ಷಿಸಲು ನಡೆಯುತ್ತಿದೆ ಎಂದು ಸಹನಾ ಎಂಬುವವರು ಕಿಡಿಕಾರಿದ್ದಾರೆ.

40% ಕಮಿಷನ್ ವಿಚಾರ ಬಹಿರಂಗಪಡೆಸಿದ ವ್ಯಕ್ತಿಯನ್ನು, 40% ಕಮಿಷನ್ ಪಡೆದ ಆರೋಪ ಹೊತ್ತ ವ್ಯಕ್ತಿಯಿಂದ ಬಂಧಿಸಲಾಗಿದೆ. ಕೆಂಪಣ್ಣನವರೆ, ಕಾನೂನಿನ ನ್ಯಾಯಾಲಯದಲ್ಲೂ, ಜನತಾ ನ್ಯಾಯಾಲಯದಲ್ಲೂ ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಕೆಂಪಣ್ಣನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

40% ಭ್ರಷ್ಟಾಚಾರ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನ.‌ ಅದೂ ಮುನಿರತ್ನ ವಿರುದ್ಧ ಆರೋಪದ ಬಗ್ಗೆ. ‌ಹಾಗೆ ಮಾಡಿದರೆ ಎಲ್ಲಾ ಬಿಜೆಪಿ ನಾಯಕರನ್ನು ಬಂಧಿಸಬೇಕು, ಮುನಿರತ್ನ ಬಿಜೆಪಿ ಸೇರುವುದಕ್ಕೆ ಮುನ್ನ ‌ಭ್ರಷ್ಟರೇ ಆಗಿದ್ದರು, ನಂತರ ಪಾವನರಾದರು.‌ ಹೀಗೆ ಜನಸಾಮಾನ್ಯರನ್ನು ಹೆದರಿಸುವ ಕ್ರಮವನ್ನು ಕಂಡಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಅಕ್ಕಿ ಟ್ವೀಟ್ ಮಾಡಿದ್ದಾರೆ.

 

ರಾಜ್ಯದ ಎಲ್ಲಾ ಕಾಮಗಾರಿಗಳಲ್ಲಿ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಂಪಣ್ಣವನರು ಆರೋಪ ಮಾಡಿದ್ದರು. ಆನಂತರ ಪ್ರಧಾನಿಯವರಿಗೂ ಪತ್ರ ಬರೆದಿದ್ದರು. ಆನಂತರ ಸಚಿವ ಮುನಿರತ್ನ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಹಾಗಾಗಿ ಸಚಿವ ಮುನಿರತ್ನ ಡಿ ಕೆಂಪಣ್ಣ ವಿರುದ್ಧ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ 19 ಮಂದಿಯ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ವಾರೆಂಟ್ ಜಾರಿ ಆಗಿದ್ದ ಹಿನ್ನೆಲೆಯಲ್ಲಿ ವೈಯಾಲಿಕಾವಲ್ ಪೊಲೀಸರು ಕೆಂಪಣ್ಣರ ಸಹಿತ ಕೃಷ್ಣಾ ರೆಡ್ಡಿ, ನಟರಾಜು ಹಾಗೂ ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದಾರೆ

ಚಿತ್ರ ನಿರ್ಮಾಪಕರೂ ಆಗಿರುವ ಸಚಿವ ಮುನಿರತ್ನ, ಅರ್ಜಿಯಲ್ಲಿ “ಶ್ರೀ ಕೃಷ್ಣದೇವರಾಯ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ನಡೆಸಿದ್ದೆ. ಪ್ರತಿವಾದಿಗಳಾದ ಕೆಂಪಣ್ಣ ಮತ್ತಿತರರು ಆರೋಪ ಮಾಡಿದ್ದರಿಂದ ಆ ಸಿನಿಮಾ ನಿರ್ಮಾಣ ನಡೆಯುವುದು ಅನುಮಾನವಾಗಿದೆ. ಗುತ್ತಿಗೆದಾರರ ಸಂಘದ ಆರೋಪದಿಂದ ಇತರೆ ರಾಜ್ಯಗಳಲ್ಲಿ ಸಿನಿಮಾ ಹಂಚಿಕೆಗೆ ಹಿಂಜರಿಯುತ್ತಿದ್ದಾರೆ. ಐತಿಹಾಸಿಕ ಸಿನಿಮಾ ನಿರ್ಮಾಣಕ್ಕೆ ಪೆಟ್ಟು ಬಿದ್ದಿದೆ. ಇದರಿಂದ ಸುಮಾರು 100 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಕಳೆದ ನಾಲ್ಕು ದಶಕಗಳಿಂದ ಗಳಿಸಿರುವ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ 50 ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಕೋರಿದ್ದರು.

ಇದನ್ನೂ ಓದಿ; 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...