Homeಮುಖಪುಟಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನಕ್ಕೆ ಖಂಡನೆ

- Advertisement -
- Advertisement -

ತೋಟಗಾರಿಕೆ ಸಚಿವ ಮುನಿರತ್ನರವರು 40% ಕಮಿಷನ್‍ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ಬಂಧನಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಸರ್ಕಾರ ನಡೆಸುತ್ತಿರುವ ಭಾರೀ ಭ್ರಷ್ಟಾಚಾರ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಸಮರ್ಪಕ ತನಿಖೆ ನಡೆಸುವುದು ಬಿಟ್ಟು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿರುವ 80 ವರ್ಷದ ಕೆಂಪಣ್ಣನವರನ್ನು ರಾತ್ರೋರಾತ್ರಿ ಬಂಧಿಸುವುದು ಎಷ್ಟು ಸರಿ? ಎಂದು ಹಲವರು ಖಂಡಿಸಿದ್ದಾರೆ.

ಕರ್ನಾಟಕದಲ್ಲಿ ಎಂತಹ  ನ್ಯಾಯ ವ್ಯವಸ್ಥೆಯಿದೆ? 40% ದಂಧೆಯನ್ನು ಬಯಲಿಗೆಳೆದ ವ್ಯಕ್ತಿಗೆ ಜೈಲು ಶಿಕ್ಷೆ. ಆದರೆ ಪಕ್ಷದ ಕಾರ್ಯಕರ್ತ ಸಂತೋಷ್‌ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಎಲ್ಲವೂ ಆಡಳಿತ ಪಕ್ಷದ ದುಷ್ಕೃತ್ಯಗಳನ್ನು ರಕ್ಷಿಸಲು ನಡೆಯುತ್ತಿದೆ ಎಂದು ಸಹನಾ ಎಂಬುವವರು ಕಿಡಿಕಾರಿದ್ದಾರೆ.

40% ಕಮಿಷನ್ ವಿಚಾರ ಬಹಿರಂಗಪಡೆಸಿದ ವ್ಯಕ್ತಿಯನ್ನು, 40% ಕಮಿಷನ್ ಪಡೆದ ಆರೋಪ ಹೊತ್ತ ವ್ಯಕ್ತಿಯಿಂದ ಬಂಧಿಸಲಾಗಿದೆ. ಕೆಂಪಣ್ಣನವರೆ, ಕಾನೂನಿನ ನ್ಯಾಯಾಲಯದಲ್ಲೂ, ಜನತಾ ನ್ಯಾಯಾಲಯದಲ್ಲೂ ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಕೆಂಪಣ್ಣನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

40% ಭ್ರಷ್ಟಾಚಾರ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನ.‌ ಅದೂ ಮುನಿರತ್ನ ವಿರುದ್ಧ ಆರೋಪದ ಬಗ್ಗೆ. ‌ಹಾಗೆ ಮಾಡಿದರೆ ಎಲ್ಲಾ ಬಿಜೆಪಿ ನಾಯಕರನ್ನು ಬಂಧಿಸಬೇಕು, ಮುನಿರತ್ನ ಬಿಜೆಪಿ ಸೇರುವುದಕ್ಕೆ ಮುನ್ನ ‌ಭ್ರಷ್ಟರೇ ಆಗಿದ್ದರು, ನಂತರ ಪಾವನರಾದರು.‌ ಹೀಗೆ ಜನಸಾಮಾನ್ಯರನ್ನು ಹೆದರಿಸುವ ಕ್ರಮವನ್ನು ಕಂಡಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಅಕ್ಕಿ ಟ್ವೀಟ್ ಮಾಡಿದ್ದಾರೆ.

 

ರಾಜ್ಯದ ಎಲ್ಲಾ ಕಾಮಗಾರಿಗಳಲ್ಲಿ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಂಪಣ್ಣವನರು ಆರೋಪ ಮಾಡಿದ್ದರು. ಆನಂತರ ಪ್ರಧಾನಿಯವರಿಗೂ ಪತ್ರ ಬರೆದಿದ್ದರು. ಆನಂತರ ಸಚಿವ ಮುನಿರತ್ನ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಹಾಗಾಗಿ ಸಚಿವ ಮುನಿರತ್ನ ಡಿ ಕೆಂಪಣ್ಣ ವಿರುದ್ಧ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ 19 ಮಂದಿಯ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ವಾರೆಂಟ್ ಜಾರಿ ಆಗಿದ್ದ ಹಿನ್ನೆಲೆಯಲ್ಲಿ ವೈಯಾಲಿಕಾವಲ್ ಪೊಲೀಸರು ಕೆಂಪಣ್ಣರ ಸಹಿತ ಕೃಷ್ಣಾ ರೆಡ್ಡಿ, ನಟರಾಜು ಹಾಗೂ ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದಾರೆ

ಚಿತ್ರ ನಿರ್ಮಾಪಕರೂ ಆಗಿರುವ ಸಚಿವ ಮುನಿರತ್ನ, ಅರ್ಜಿಯಲ್ಲಿ “ಶ್ರೀ ಕೃಷ್ಣದೇವರಾಯ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ನಡೆಸಿದ್ದೆ. ಪ್ರತಿವಾದಿಗಳಾದ ಕೆಂಪಣ್ಣ ಮತ್ತಿತರರು ಆರೋಪ ಮಾಡಿದ್ದರಿಂದ ಆ ಸಿನಿಮಾ ನಿರ್ಮಾಣ ನಡೆಯುವುದು ಅನುಮಾನವಾಗಿದೆ. ಗುತ್ತಿಗೆದಾರರ ಸಂಘದ ಆರೋಪದಿಂದ ಇತರೆ ರಾಜ್ಯಗಳಲ್ಲಿ ಸಿನಿಮಾ ಹಂಚಿಕೆಗೆ ಹಿಂಜರಿಯುತ್ತಿದ್ದಾರೆ. ಐತಿಹಾಸಿಕ ಸಿನಿಮಾ ನಿರ್ಮಾಣಕ್ಕೆ ಪೆಟ್ಟು ಬಿದ್ದಿದೆ. ಇದರಿಂದ ಸುಮಾರು 100 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಕಳೆದ ನಾಲ್ಕು ದಶಕಗಳಿಂದ ಗಳಿಸಿರುವ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ 50 ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಕೋರಿದ್ದರು.

ಇದನ್ನೂ ಓದಿ; 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...