Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

“ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಕಸಾಪ ಅಧ್ಯಕ್ಷರು ಹೇಳಿಕೊಳ್ಳುತ್ತಾರೆ. ಶರೀಫರು ಯಾರು? ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?”

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕಡೆಗಣಿಸಲಾಗಿದ್ದು, ಪರ್ಯಾಯ ಸಮ್ಮೇಳನ ನಡೆಸುವ ಚಿಂತನೆಯನ್ನು ಕನ್ನಡದ ಜಾತ್ಯತೀಯ ಮನಸ್ಸುಗಳು ಮಾಡುತ್ತಿವೆ.

ಕನ್ನಡದ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲಾಗುವ ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಈ ಹಿಂದೆ ಯಾವತ್ತೂ ಈ ರೀತಿಯ ಪ್ರಮಾದವನ್ನು ಮಾಡಿರಲಿಲ್ಲ. ಮಹೇಶ ಜೋಷಿಯವರು ಅಧ್ಯಕ್ಷರಾದ ಮೇಲೆ ವಿವಾದಗಳ ಮೂಲಕ ಸದ್ದು ಮಾಡುತ್ತಿರುವ ಕಸಾಪ, “ಈಗ ಮುಸ್ಲಿಮರನ್ನು ಹೊರಗಿಡುವ ಮಟ್ಟಕ್ಕೆ ತಲುಪಿದೆ” ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

“ಆರ್‌ಎಸ್‌ಎಸ್ ಮನಸ್ಥಿತಿ ಇಲ್ಲಿ ಕೆಲಸ ಮಾಡಿದೆ. ಜಾತಿ ದ್ವೇಷ, ಧರ್ಮದ್ವೇಷ ಢಾಳಾಗಿ ಕಾಣುತ್ತಿದೆ” ಎಂಬ ಟೀಕೆಗೆ ಸಮ್ಮೇಳನ ಗುರಿಯಾಗಿದೆ.

ಕನ್ನಡ ಸಾಹಿತ್ಯ ಪರಿಷತ್‌ ಮಾಡಿರುವ ಎಡವಟ್ಟಿನ ಕುರಿತು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬು‌ಕ್‌ನಲ್ಲಿ ಪೋಸ್ಟ್ ಮಾಡಿದ್ದು, “ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಲೇಖಕರನ್ನು ಹೊರಗಿಟ್ಟಿರುವುದು ಆಕಸ್ಮಿಕ ಏನೂ ಅಲ್ಲ. ನೆಹರೂ ಅಂಥ ಲೇಖಕರನ್ನೇ ಹೊರಗಿಟ್ಟವರಿವರು. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ತನ್ನ ನಿಲುವನ್ನು ನೇರವಾಗಿಯೇ ಪ್ರಕಟಿಸಬೇಕು” ಎಂದು ಆಗ್ರಹಿಸಿದ್ದಾರೆ. ಜೊತೆಗೆ “ಕೆಲವರನ್ನು ಕರೆದಿದ್ದು ಅವರು ಬರುವುದಿಲ್ಲ ಎಂದೂ ಹೇಳಿರಬಹುದು” ಎಂಬ ಮಾತನ್ನೂ ಸೇರಿಸಿದ್ದಾರೆ.

“ಆಧುನಿಕ ಕನ್ನಡ ಸಾಹಿತ್ಯದಲ್ಲಿ ಶಿಶುನಾಳ ಷರೀಫರೇ ನಮಗೆ ಸಿಗುವ ಮೊದಲ ಮಹತ್ವದ ಕವಿ. ಆನಂತರ ಕೆ.ಎಸ್‌.ನಿಸಾರ್‌ ಅಹಮದ್‌, ಬೊಳುವಾರು ಮಹಮ್ಮದ್‌ ಕುಞಿ, ಸಾರಾ ಅಬೂಬಕರ್,‌ ಹಸನ್ ನಯೀಂ ಸುರಕೋಡ, ರಹಮತ್‌ ತರೀಕರೆ ಮೊದಲಾದವರು ಕನ್ನಡದ ಸುಪ್ರಸಿದ್ಧ ಲೇಖಕರು. ಬೊಳುವಾರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕಿತ್ತು. ಅವರಿಗೆ ಜ್ಞಾನಪೀಠ ಪ್ರಶಸ್ತಿಯೂ ಬರಬೇಕು. ದಾದಾಪೀರ್‌ ಜೈನ್ ಅವರಿಗೆ ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಸಬೀಹಾ ಭೂಮಿ ಗೌಡರು ಲೇಖಕಿಯಾಗಿ ಪ್ರಸಿದ್ಧರು” ಎಂದು ಕಸಾಪಕ್ಕೆ ನೆನಪಿಸಿದ್ದಾರೆ.

“ಒಂದಾದರೂ ಪುಸ್ತಕ ಪ್ರಕಟಿಸಿದ ಮುಸ್ಲಿಂ ಲೇಖಕರು ಬಹಳ ಜನ ಇದ್ದಾರೆ. ಬಹುಶಃ ಮುಂದಿನ 10 ವರ್ಷದಲ್ಲಿ ಕನ್ನಡದ ಲೇಖಕರೆಂದರೆ ಮುಸ್ಲಿಮರೇ ಆಗಿರುತ್ತಾರೆ. ಅವರಲ್ಲಿ ನನಗೆ ಕೂಡಲೇ ನೆನಪಿಗೆ ಬರುವವರೆಂದರೆ, ಆರಿಫ್‌ ರಾಜಾ, ಎ.ಕೆ.ಕುಕ್ಕಿಲ, ಬಿ.ಎಂ.ಬಷೀರ್, ಇಸ್ಮಾಯಿಲ್ , ಮಹಮ್ಮದ್‌ ಕುಳಾಯಿ, ಗಂಗಾವತಿ ಸಲೀಮಾ, ಅಬ್ಬುಸ್ಸಲಾಮ್ ಪುತ್ತಿಗೆ, ಇಬ್ರಾಹಿಂ ಸಯೀದ್ ಸಾಬ್, ಸಲಾಂ ಸಮ್ಮಿ, ಬಾನು ಮುಷ್ತಾಕ್, ಫಾತಿಮಾ ರಲಿಯಾ, ಕೆ.ಷರೀಫಾ, ಡಿ.ಬಿ.ರಜಿಯಾ, ಜಹಾನ್ ಆರಾ, ಎ.ಎಸ್.ಮಕಾನದಾರ , ಬಿ.ಪೀರ್ ಭಾಷಾ, ಅಜಮೀರ ನಂದಾಪುರ, ದಸ್ತಗೀರ್ ದಿನ್ನಿ, ಇಮಾಮ್ ಹಡಗಲಿ, ಮುಸ್ತಾಫಾ, ಡಾ.ಮಕ್ತೂಂಬಿ ಮುಲ್ಲಾ, ಶಿ ಜು ಪಾಶಾ, ಮೆಹಬೂಬ್ಬಿ ಶೇಖ್ , ಸಿರಾಜ್ ಬಿಸರಳ್ಳಿ, ನಜ್ಮಾ ನಜೀರ್ ಚಿಕ್ಕನೇರಳೆ, ಮುನವ್ವರ್ ಜೋಗಿಬೆಟ್ಟು, ಬಿ.ಎಂ.ಹನೀಫ್‌, ಮೆಹಬೂಬಭಾಷಾ ಮಕಾನದಾರ, ಬಾಬು ಮನಸೇ, ಹಕೀಂ ಪದಡ್ಕ, ಹಸನ್ಮುಖಿ ಬಡಗನ್ನೂರು, ಆಸೀಫಾ, ನೂರಜಾನ್, ಸಕೀನಾ ಬೇಗಂ, ಸುನೈಫ್ ವಿಟ್ಲ, ಇಮಾಮ್ ಹಡಗಲಿ, ಅಮೀರಸಾಬ ವಂಟಿ, ಉಮರ್ ದೇವರಮನಿ, ಅಮೀನ್ ಅತ್ತಾರ್, ಸಯ್ಯದ್ ಸಿಕಂದರ್ ಮೀರ್ ಅಲಿ, ಚಾಂದ್ ಕವಿಚಂದ್ರ, ಕಾ ಹು ಚಾನಪಾಶಾ, ಸೈಫ್ ಜಾನ್ಸೆ, ರಾಜೇಸಾಬ ಬಾಗವಾನ್, ಶರೀಫ್ ಹಸಮಕಲ್, ಆಶಿಖ್ ಮುಲ್ಕಿ , ಇಮಾಮ್ ಗೋಡೆಕಾರ, ಸಿಹಾನಾ ಎಂ ಬಿ ಮೊದಲಾದವರು” ಎಂದು ಪಟ್ಟಿ ಮಾಡಿದ್ದಾರೆ.

ಮತ್ತೊಂದು ಪೋಸ್ಟ್ ಮಾಡಿರುವ ಅವರು, “ಪರ್ಯಾಯ ಸಮ್ಮೇಳನ ಇವತ್ತಿನ ತುರ್ತು. ದಾವಣಗೆರೆ ಅಥವಾ ಬೆಂಗಳೂರು ಅನುಕೂಲ. ಕೋಲಾರ, ಮೈಸೂರು, ಶಿವಮೊಗ್ಗವೂ ಆದೀತು. ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವ, ಪ್ರೊ.ಬರಗೂರು ರಾಮಚಂದ್ರಪ್ಪ ಬರಬೇಕು. ಪ್ರೊ.ರಾಜೇಂದ್ರ ಚೆನ್ನಿ, ಅರುಣ್‌ ಜೋಳದಕೂಡ್ಲಿಗಿ, ಬಿ.ಎಂ.ಹನೀಫ್‌ ಮೊದಲಾದವರು ಬರುತ್ತಾರೆ. ಅವರವರದೇ ಖರ್ಚು. ಸಭಾಂಗಣ, ಮಧ್ಯಾಹ್ನ ಊಟ, ಧ್ವನಿವರ್ಧಕ, ಚಹಾ ಇತ್ಯಾದಿಗಳಿಗೆ ಕ್ರೌಡ್‌ ಫಂಡಿಂಗ್‌ ಮಾಡೋಣ. ನಾನು ನನ್ನ ಖರ್ಚಲ್ಲಿ ಬರುತ್ತೇನೆ. ಸತ್ಯನಾರಾಯಣ ಪೂಜೆಗೆ ಸುದ್ದಿ ಕೇಳಿಯೇ ಹೋಗಬೇಕಂತೆ. ಇದೂ ಹಾಗೆಯೇ ಆಗಲಿ. ಸಮ್ಮೇಳನದಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ. ಯಾವುದೂ ಯಃಕಶ್ಚಿತವೂ ಅಲ್ಲ. ಯಾರಾದರೂ ಸಮರ್ಥ ನಾಯಕತ್ವ ಕೊಡಿ” ಎಂದು ಕೋರಿದ್ದಾರೆ.

ಬಿಳಿಮಲೆಯವರ ಪೋಸ್ಟ್‌ಗೆ ಹತ್ತಾರು ಲೇಖಕರು ಪ್ರತಿಕ್ರಿಯೆ ನೀಡಿದ್ದು, ಪರ್ಯಾಯ ಸಮ್ಮೇಳನಕ್ಕೆ ಬೆಂಬಲ ನೀಡುತ್ತಿದ್ದಾರೆ.

ಹಿರಿಯ ಪತ್ರಕರ್ತರು ಹಾಗೂ ಲೇಖಕರಾದ ಬಿ.ಎಂ.ಹನೀಫ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಹಾವೇರಿಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸುಮಾರು 80 ಮಂದಿ ಸಾಧಕರಿಗೆ ಸನ್ಮಾನ ಆಗುತ್ತಿದೆ. ಪ್ರತಿಸಲವು ಸನ್ಮಾನ ಮಾಡುವಾಗ ರಾಜ್ಯದ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಈ ವೇದಿಕೆಯಲ್ಲಿ ಗೌರವಿಸಲಾಗುತ್ತಿತ್ತು. ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಸಾಧಕರು ಇವರಿಗೆ ಸಿಗಲಿಲ್ಲವೆಂದರೆ ಇವರು ಸ್ಪಷ್ಟವಾಗಿ ಕಮ್ಯುನಲ್‌ ಆಗಿದ್ದಾರೆ ಎಂದರ್ಥ. ಅಪ್ರಜ್ಞಾಪೂರ್ವಕವಾಗಿ ಮುಸ್ಲಿಮರ ಹೆಸರು ಬಿಟ್ಟು ಹೋಗಿರಲು ಸಾಧ್ಯವಿಲ್ಲ. ಶಿಕ್ಷಣ, ಸಹಕಾರಿ ಕ್ಷೇತ್ರ, ಪತ್ರಿಕೋದ್ಯಮ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆಗೈದ ಮುಸ್ಲಿಮರಿದ್ದಾರೆ” ಎಂದು ವಿವರಿಸಿದರು.

“ಕಾವ್ಯಕ್ಷೇತ್ರದಲ್ಲಿ ಬಹುಮುಖ್ಯವಾಗಿ ಹೆಸರು ಮಾಡಿದವರನ್ನು ಪ್ರಧಾನ ಕವಿಗೋಷ್ಠಿಯಲ್ಲಿ ಗುರುತಿಸಲಾಗುತ್ತದೆ. 25 ಮಂದಿ ಕವಿಗಳಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಬೇರೆ ಕವಿಗೋಷ್ಠಿಗಳಲ್ಲಿ ಹೆಸರಿಗೆ ನಾಲ್ಕು ಮುಸ್ಲಿಮರನ್ನು ಹಾಕಿಕೊಂಡಿದ್ದಾರೆ. ಹಾಗೆ ಆಯ್ಕೆಯಾದವರು ಅನರ್ಹರೇನಲ್ಲ. ಇತ್ತೀಚೆಗೆ ಬರೆಯುತ್ತಿರುವ ಪ್ರತಿಭಾವಂತರೇ ಆಗಿದ್ದಾರೆ. ಆದರೆ ಪ್ರಧಾನ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಗೆ ಯಾವ ಮುಸ್ಲಿಮರೂ ಸಿಗಲಿಲ್ಲವೇ? ಪ್ರಧಾನ ವೇದಿಕೆಯಲ್ಲಿ ನಡೆಯುವ 9 ವಿಚಾರಗೋಷ್ಠಿಗಳಲ್ಲಿ ಸುಮಾರು 34 ಮಂದಿ ಮಾತನಾಡುತ್ತಾರೆ. ಇದರಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ” ಎಂದು ವಿಷಾದಿಸಿದರು.

“ಮುಸ್ಲಿಂ ಎಂದು ಹೇಳಿದ ತಕ್ಷಣ- ತಮ್ಮ ಜಾತಿಯವರ ಬಗ್ಗೆ ಇವರು ಹೇಳುತ್ತಿದ್ದಾನೆಂದು ಕೆಲವರು ಆರೋಪಿಸಬಹುದು. ಆದರೆ ಕನ್ನಡ ಸಾಹಿತ್ಯ ಪರಿಷತ್ ಎಂದಿಗೂ ಕಮ್ಯುನಲ್ ಆಗಿ ವರ್ತಿಸಿಲ್ಲ. ಈ ರೀತಿಯ ತಾರತಮ್ಯ ಎಂದೂ ಆಗಿರಲಿಲ್ಲ. ದಲಿತರು, ಮಹಿಳೆಯರು, ಮುಸ್ಲಿಮರು- ಹೀಗೆ ಎಲ್ಲರಿಗೂ ಪ್ರಾತಿನಿಧ್ಯವನ್ನು ನೀಡಲಾಗುತ್ತಿತ್ತು” ಎಂದು ಸ್ಮರಿಸಿದರು.

“ಹಿರಿಯರ ಸ್ಮರಣೆ ಗೋಷ್ಠಿಗೆ ನಿಸಾರ್‌ ಅಹಮ್ಮದ್ ಅವರ ಹೆಸರು ನೆನಪಾಗಲಿಲ್ಲವಾ? ಕರ್ನಾಟಕ ಪ್ರಾದೇಶಿಕ ವೈವಿಧ್ಯತೆ ಎಂಬ ಗೋಷ್ಠಿ ಇದೆ. ಪ್ರಾದೇಶಿಕ ವೈವಿಧ್ಯತೆ ಎಂದು ತುಳು, ಕೊಂಕಣಿ, ಕೊಡವ, ಅರೆಭಾಷೆಗಳನ್ನು ಗುರುತಿಸಲಾಗಿದೆ. ಆದರೆ ಬ್ಯಾರಿ ಭಾಷೆಯನ್ನು ಏಕೆ ಬಿಟ್ಟಿದ್ದೀರಿ? ರಾಜ್ಯದಲ್ಲಿ ಹದಿನಾಲ್ಕು ಲಕ್ಷ ಮುಸ್ಲಿಮರು ಬ್ಯಾರಿ ಭಾಷೆ ಮಾತನಾಡುತ್ತಾರೆ. ಕರ್ನಾಟಕ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿದೆ. ಕನ್ನಡ ಸಾಹಿತ್ಯ ಕೃಷಿ ಮಾಡಿರುವ ಮುಸ್ಲಿಂ ಲೇಖಕರನ್ನು ಪಟ್ಟಿ ಮಾಡಿದರೆ ಶೇ. 60ರಷ್ಟು ಲೇಖಕರು ಬ್ಯಾರಿ ಮಾತೃಭಾಷೆಯ ಕನ್ನಡಿಗ ಲೇಖಕರೇ ಇದ್ದಾರೆ. ಇದ್ಯಾವುದನ್ನೂ ಗಮನಿಸದೆ ಸುಮ್ಮನೆ ಬಿಟ್ಟಿದ್ದೀರಿ ಎಂದರೆ ನೀವು ಕನ್ನಡ ಸಾಹಿತ್ಯದ ಬಗ್ಗೆ ಕುರುಡಾಗಿದ್ದೀರಿ ಎಂದರ್ಥ. ನಿಮ್ಮ ಮನಸ್ಸಿನಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ, ಜಾತಿ ದ್ವೇಷ, ಧರ್ಮ ದ್ವೇಷವನ್ನು ನಿಮ್ಮೊಳಗೆ ತುಂಬಿಕೊಂಡಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಸಾಪ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಇಂದು ಉಳಿಯಲಿಲ್ಲ. ಕಸಾಪ ಅಧ್ಯಕ್ಷರಿಗೆ ಇದು ತಿಳಿಯಲಿಲ್ಲವಾ? ಕಸಾಪ ಅಧ್ಯಕ್ಷರು ಕನ್ನಡದ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುತ್ತಾರೆ. ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಹೇಳಿಕೊಳ್ಳುತ್ತಾರೆ. ಶಿಶುನಾಳ ಶರೀಫರ ಪದ ಹಾಡಿಕೊಂಡು ತಿರುತ್ತಾರೆ. ಶರೀಫರು ಯಾರು? ಗುರು ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?” ಎಂದು ಕೇಳಿದರು.

“ಮುಸ್ಲಿಮರಷ್ಟೇ ಅಲ್ಲ. ದಲಿತರು ಎಷ್ಟು ಮಂದಿ ಇದ್ದಾರೆ? ಮಹಿಳೆಯರಿಗೆ ಎಷ್ಟು ಸ್ಥಾನಮಾನ ನೀಡಿದ್ದೀರಿ? ಸ್ವಾಗತ, ವಂದನಾರ್ಪಣೆ, ನಿರೂಪಣೆ ಮಾಡೋದಷ್ಟೇ ಮಹಿಳೆಯರ ಕೆಲಸವಾ?” ಎಂದು ಪ್ರಶ್ನಿಸಿದರು.

ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ಮೂರ್ನಾಲ್ಕು ಬಾರಿ ಕರೆ ಮಾಡಲಾಯಿತು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...