Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

“ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಕಸಾಪ ಅಧ್ಯಕ್ಷರು ಹೇಳಿಕೊಳ್ಳುತ್ತಾರೆ. ಶರೀಫರು ಯಾರು? ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?”

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕಡೆಗಣಿಸಲಾಗಿದ್ದು, ಪರ್ಯಾಯ ಸಮ್ಮೇಳನ ನಡೆಸುವ ಚಿಂತನೆಯನ್ನು ಕನ್ನಡದ ಜಾತ್ಯತೀಯ ಮನಸ್ಸುಗಳು ಮಾಡುತ್ತಿವೆ.

ಕನ್ನಡದ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲಾಗುವ ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಈ ಹಿಂದೆ ಯಾವತ್ತೂ ಈ ರೀತಿಯ ಪ್ರಮಾದವನ್ನು ಮಾಡಿರಲಿಲ್ಲ. ಮಹೇಶ ಜೋಷಿಯವರು ಅಧ್ಯಕ್ಷರಾದ ಮೇಲೆ ವಿವಾದಗಳ ಮೂಲಕ ಸದ್ದು ಮಾಡುತ್ತಿರುವ ಕಸಾಪ, “ಈಗ ಮುಸ್ಲಿಮರನ್ನು ಹೊರಗಿಡುವ ಮಟ್ಟಕ್ಕೆ ತಲುಪಿದೆ” ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

“ಆರ್‌ಎಸ್‌ಎಸ್ ಮನಸ್ಥಿತಿ ಇಲ್ಲಿ ಕೆಲಸ ಮಾಡಿದೆ. ಜಾತಿ ದ್ವೇಷ, ಧರ್ಮದ್ವೇಷ ಢಾಳಾಗಿ ಕಾಣುತ್ತಿದೆ” ಎಂಬ ಟೀಕೆಗೆ ಸಮ್ಮೇಳನ ಗುರಿಯಾಗಿದೆ.

ಕನ್ನಡ ಸಾಹಿತ್ಯ ಪರಿಷತ್‌ ಮಾಡಿರುವ ಎಡವಟ್ಟಿನ ಕುರಿತು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬು‌ಕ್‌ನಲ್ಲಿ ಪೋಸ್ಟ್ ಮಾಡಿದ್ದು, “ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಲೇಖಕರನ್ನು ಹೊರಗಿಟ್ಟಿರುವುದು ಆಕಸ್ಮಿಕ ಏನೂ ಅಲ್ಲ. ನೆಹರೂ ಅಂಥ ಲೇಖಕರನ್ನೇ ಹೊರಗಿಟ್ಟವರಿವರು. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ತನ್ನ ನಿಲುವನ್ನು ನೇರವಾಗಿಯೇ ಪ್ರಕಟಿಸಬೇಕು” ಎಂದು ಆಗ್ರಹಿಸಿದ್ದಾರೆ. ಜೊತೆಗೆ “ಕೆಲವರನ್ನು ಕರೆದಿದ್ದು ಅವರು ಬರುವುದಿಲ್ಲ ಎಂದೂ ಹೇಳಿರಬಹುದು” ಎಂಬ ಮಾತನ್ನೂ ಸೇರಿಸಿದ್ದಾರೆ.

“ಆಧುನಿಕ ಕನ್ನಡ ಸಾಹಿತ್ಯದಲ್ಲಿ ಶಿಶುನಾಳ ಷರೀಫರೇ ನಮಗೆ ಸಿಗುವ ಮೊದಲ ಮಹತ್ವದ ಕವಿ. ಆನಂತರ ಕೆ.ಎಸ್‌.ನಿಸಾರ್‌ ಅಹಮದ್‌, ಬೊಳುವಾರು ಮಹಮ್ಮದ್‌ ಕುಞಿ, ಸಾರಾ ಅಬೂಬಕರ್,‌ ಹಸನ್ ನಯೀಂ ಸುರಕೋಡ, ರಹಮತ್‌ ತರೀಕರೆ ಮೊದಲಾದವರು ಕನ್ನಡದ ಸುಪ್ರಸಿದ್ಧ ಲೇಖಕರು. ಬೊಳುವಾರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕಿತ್ತು. ಅವರಿಗೆ ಜ್ಞಾನಪೀಠ ಪ್ರಶಸ್ತಿಯೂ ಬರಬೇಕು. ದಾದಾಪೀರ್‌ ಜೈನ್ ಅವರಿಗೆ ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಸಬೀಹಾ ಭೂಮಿ ಗೌಡರು ಲೇಖಕಿಯಾಗಿ ಪ್ರಸಿದ್ಧರು” ಎಂದು ಕಸಾಪಕ್ಕೆ ನೆನಪಿಸಿದ್ದಾರೆ.

“ಒಂದಾದರೂ ಪುಸ್ತಕ ಪ್ರಕಟಿಸಿದ ಮುಸ್ಲಿಂ ಲೇಖಕರು ಬಹಳ ಜನ ಇದ್ದಾರೆ. ಬಹುಶಃ ಮುಂದಿನ 10 ವರ್ಷದಲ್ಲಿ ಕನ್ನಡದ ಲೇಖಕರೆಂದರೆ ಮುಸ್ಲಿಮರೇ ಆಗಿರುತ್ತಾರೆ. ಅವರಲ್ಲಿ ನನಗೆ ಕೂಡಲೇ ನೆನಪಿಗೆ ಬರುವವರೆಂದರೆ, ಆರಿಫ್‌ ರಾಜಾ, ಎ.ಕೆ.ಕುಕ್ಕಿಲ, ಬಿ.ಎಂ.ಬಷೀರ್, ಇಸ್ಮಾಯಿಲ್ , ಮಹಮ್ಮದ್‌ ಕುಳಾಯಿ, ಗಂಗಾವತಿ ಸಲೀಮಾ, ಅಬ್ಬುಸ್ಸಲಾಮ್ ಪುತ್ತಿಗೆ, ಇಬ್ರಾಹಿಂ ಸಯೀದ್ ಸಾಬ್, ಸಲಾಂ ಸಮ್ಮಿ, ಬಾನು ಮುಷ್ತಾಕ್, ಫಾತಿಮಾ ರಲಿಯಾ, ಕೆ.ಷರೀಫಾ, ಡಿ.ಬಿ.ರಜಿಯಾ, ಜಹಾನ್ ಆರಾ, ಎ.ಎಸ್.ಮಕಾನದಾರ , ಬಿ.ಪೀರ್ ಭಾಷಾ, ಅಜಮೀರ ನಂದಾಪುರ, ದಸ್ತಗೀರ್ ದಿನ್ನಿ, ಇಮಾಮ್ ಹಡಗಲಿ, ಮುಸ್ತಾಫಾ, ಡಾ.ಮಕ್ತೂಂಬಿ ಮುಲ್ಲಾ, ಶಿ ಜು ಪಾಶಾ, ಮೆಹಬೂಬ್ಬಿ ಶೇಖ್ , ಸಿರಾಜ್ ಬಿಸರಳ್ಳಿ, ನಜ್ಮಾ ನಜೀರ್ ಚಿಕ್ಕನೇರಳೆ, ಮುನವ್ವರ್ ಜೋಗಿಬೆಟ್ಟು, ಬಿ.ಎಂ.ಹನೀಫ್‌, ಮೆಹಬೂಬಭಾಷಾ ಮಕಾನದಾರ, ಬಾಬು ಮನಸೇ, ಹಕೀಂ ಪದಡ್ಕ, ಹಸನ್ಮುಖಿ ಬಡಗನ್ನೂರು, ಆಸೀಫಾ, ನೂರಜಾನ್, ಸಕೀನಾ ಬೇಗಂ, ಸುನೈಫ್ ವಿಟ್ಲ, ಇಮಾಮ್ ಹಡಗಲಿ, ಅಮೀರಸಾಬ ವಂಟಿ, ಉಮರ್ ದೇವರಮನಿ, ಅಮೀನ್ ಅತ್ತಾರ್, ಸಯ್ಯದ್ ಸಿಕಂದರ್ ಮೀರ್ ಅಲಿ, ಚಾಂದ್ ಕವಿಚಂದ್ರ, ಕಾ ಹು ಚಾನಪಾಶಾ, ಸೈಫ್ ಜಾನ್ಸೆ, ರಾಜೇಸಾಬ ಬಾಗವಾನ್, ಶರೀಫ್ ಹಸಮಕಲ್, ಆಶಿಖ್ ಮುಲ್ಕಿ , ಇಮಾಮ್ ಗೋಡೆಕಾರ, ಸಿಹಾನಾ ಎಂ ಬಿ ಮೊದಲಾದವರು” ಎಂದು ಪಟ್ಟಿ ಮಾಡಿದ್ದಾರೆ.

ಮತ್ತೊಂದು ಪೋಸ್ಟ್ ಮಾಡಿರುವ ಅವರು, “ಪರ್ಯಾಯ ಸಮ್ಮೇಳನ ಇವತ್ತಿನ ತುರ್ತು. ದಾವಣಗೆರೆ ಅಥವಾ ಬೆಂಗಳೂರು ಅನುಕೂಲ. ಕೋಲಾರ, ಮೈಸೂರು, ಶಿವಮೊಗ್ಗವೂ ಆದೀತು. ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವ, ಪ್ರೊ.ಬರಗೂರು ರಾಮಚಂದ್ರಪ್ಪ ಬರಬೇಕು. ಪ್ರೊ.ರಾಜೇಂದ್ರ ಚೆನ್ನಿ, ಅರುಣ್‌ ಜೋಳದಕೂಡ್ಲಿಗಿ, ಬಿ.ಎಂ.ಹನೀಫ್‌ ಮೊದಲಾದವರು ಬರುತ್ತಾರೆ. ಅವರವರದೇ ಖರ್ಚು. ಸಭಾಂಗಣ, ಮಧ್ಯಾಹ್ನ ಊಟ, ಧ್ವನಿವರ್ಧಕ, ಚಹಾ ಇತ್ಯಾದಿಗಳಿಗೆ ಕ್ರೌಡ್‌ ಫಂಡಿಂಗ್‌ ಮಾಡೋಣ. ನಾನು ನನ್ನ ಖರ್ಚಲ್ಲಿ ಬರುತ್ತೇನೆ. ಸತ್ಯನಾರಾಯಣ ಪೂಜೆಗೆ ಸುದ್ದಿ ಕೇಳಿಯೇ ಹೋಗಬೇಕಂತೆ. ಇದೂ ಹಾಗೆಯೇ ಆಗಲಿ. ಸಮ್ಮೇಳನದಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ. ಯಾವುದೂ ಯಃಕಶ್ಚಿತವೂ ಅಲ್ಲ. ಯಾರಾದರೂ ಸಮರ್ಥ ನಾಯಕತ್ವ ಕೊಡಿ” ಎಂದು ಕೋರಿದ್ದಾರೆ.

ಬಿಳಿಮಲೆಯವರ ಪೋಸ್ಟ್‌ಗೆ ಹತ್ತಾರು ಲೇಖಕರು ಪ್ರತಿಕ್ರಿಯೆ ನೀಡಿದ್ದು, ಪರ್ಯಾಯ ಸಮ್ಮೇಳನಕ್ಕೆ ಬೆಂಬಲ ನೀಡುತ್ತಿದ್ದಾರೆ.

ಹಿರಿಯ ಪತ್ರಕರ್ತರು ಹಾಗೂ ಲೇಖಕರಾದ ಬಿ.ಎಂ.ಹನೀಫ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಹಾವೇರಿಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸುಮಾರು 80 ಮಂದಿ ಸಾಧಕರಿಗೆ ಸನ್ಮಾನ ಆಗುತ್ತಿದೆ. ಪ್ರತಿಸಲವು ಸನ್ಮಾನ ಮಾಡುವಾಗ ರಾಜ್ಯದ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಈ ವೇದಿಕೆಯಲ್ಲಿ ಗೌರವಿಸಲಾಗುತ್ತಿತ್ತು. ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಸಾಧಕರು ಇವರಿಗೆ ಸಿಗಲಿಲ್ಲವೆಂದರೆ ಇವರು ಸ್ಪಷ್ಟವಾಗಿ ಕಮ್ಯುನಲ್‌ ಆಗಿದ್ದಾರೆ ಎಂದರ್ಥ. ಅಪ್ರಜ್ಞಾಪೂರ್ವಕವಾಗಿ ಮುಸ್ಲಿಮರ ಹೆಸರು ಬಿಟ್ಟು ಹೋಗಿರಲು ಸಾಧ್ಯವಿಲ್ಲ. ಶಿಕ್ಷಣ, ಸಹಕಾರಿ ಕ್ಷೇತ್ರ, ಪತ್ರಿಕೋದ್ಯಮ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆಗೈದ ಮುಸ್ಲಿಮರಿದ್ದಾರೆ” ಎಂದು ವಿವರಿಸಿದರು.

“ಕಾವ್ಯಕ್ಷೇತ್ರದಲ್ಲಿ ಬಹುಮುಖ್ಯವಾಗಿ ಹೆಸರು ಮಾಡಿದವರನ್ನು ಪ್ರಧಾನ ಕವಿಗೋಷ್ಠಿಯಲ್ಲಿ ಗುರುತಿಸಲಾಗುತ್ತದೆ. 25 ಮಂದಿ ಕವಿಗಳಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಬೇರೆ ಕವಿಗೋಷ್ಠಿಗಳಲ್ಲಿ ಹೆಸರಿಗೆ ನಾಲ್ಕು ಮುಸ್ಲಿಮರನ್ನು ಹಾಕಿಕೊಂಡಿದ್ದಾರೆ. ಹಾಗೆ ಆಯ್ಕೆಯಾದವರು ಅನರ್ಹರೇನಲ್ಲ. ಇತ್ತೀಚೆಗೆ ಬರೆಯುತ್ತಿರುವ ಪ್ರತಿಭಾವಂತರೇ ಆಗಿದ್ದಾರೆ. ಆದರೆ ಪ್ರಧಾನ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಗೆ ಯಾವ ಮುಸ್ಲಿಮರೂ ಸಿಗಲಿಲ್ಲವೇ? ಪ್ರಧಾನ ವೇದಿಕೆಯಲ್ಲಿ ನಡೆಯುವ 9 ವಿಚಾರಗೋಷ್ಠಿಗಳಲ್ಲಿ ಸುಮಾರು 34 ಮಂದಿ ಮಾತನಾಡುತ್ತಾರೆ. ಇದರಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ” ಎಂದು ವಿಷಾದಿಸಿದರು.

“ಮುಸ್ಲಿಂ ಎಂದು ಹೇಳಿದ ತಕ್ಷಣ- ತಮ್ಮ ಜಾತಿಯವರ ಬಗ್ಗೆ ಇವರು ಹೇಳುತ್ತಿದ್ದಾನೆಂದು ಕೆಲವರು ಆರೋಪಿಸಬಹುದು. ಆದರೆ ಕನ್ನಡ ಸಾಹಿತ್ಯ ಪರಿಷತ್ ಎಂದಿಗೂ ಕಮ್ಯುನಲ್ ಆಗಿ ವರ್ತಿಸಿಲ್ಲ. ಈ ರೀತಿಯ ತಾರತಮ್ಯ ಎಂದೂ ಆಗಿರಲಿಲ್ಲ. ದಲಿತರು, ಮಹಿಳೆಯರು, ಮುಸ್ಲಿಮರು- ಹೀಗೆ ಎಲ್ಲರಿಗೂ ಪ್ರಾತಿನಿಧ್ಯವನ್ನು ನೀಡಲಾಗುತ್ತಿತ್ತು” ಎಂದು ಸ್ಮರಿಸಿದರು.

“ಹಿರಿಯರ ಸ್ಮರಣೆ ಗೋಷ್ಠಿಗೆ ನಿಸಾರ್‌ ಅಹಮ್ಮದ್ ಅವರ ಹೆಸರು ನೆನಪಾಗಲಿಲ್ಲವಾ? ಕರ್ನಾಟಕ ಪ್ರಾದೇಶಿಕ ವೈವಿಧ್ಯತೆ ಎಂಬ ಗೋಷ್ಠಿ ಇದೆ. ಪ್ರಾದೇಶಿಕ ವೈವಿಧ್ಯತೆ ಎಂದು ತುಳು, ಕೊಂಕಣಿ, ಕೊಡವ, ಅರೆಭಾಷೆಗಳನ್ನು ಗುರುತಿಸಲಾಗಿದೆ. ಆದರೆ ಬ್ಯಾರಿ ಭಾಷೆಯನ್ನು ಏಕೆ ಬಿಟ್ಟಿದ್ದೀರಿ? ರಾಜ್ಯದಲ್ಲಿ ಹದಿನಾಲ್ಕು ಲಕ್ಷ ಮುಸ್ಲಿಮರು ಬ್ಯಾರಿ ಭಾಷೆ ಮಾತನಾಡುತ್ತಾರೆ. ಕರ್ನಾಟಕ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿದೆ. ಕನ್ನಡ ಸಾಹಿತ್ಯ ಕೃಷಿ ಮಾಡಿರುವ ಮುಸ್ಲಿಂ ಲೇಖಕರನ್ನು ಪಟ್ಟಿ ಮಾಡಿದರೆ ಶೇ. 60ರಷ್ಟು ಲೇಖಕರು ಬ್ಯಾರಿ ಮಾತೃಭಾಷೆಯ ಕನ್ನಡಿಗ ಲೇಖಕರೇ ಇದ್ದಾರೆ. ಇದ್ಯಾವುದನ್ನೂ ಗಮನಿಸದೆ ಸುಮ್ಮನೆ ಬಿಟ್ಟಿದ್ದೀರಿ ಎಂದರೆ ನೀವು ಕನ್ನಡ ಸಾಹಿತ್ಯದ ಬಗ್ಗೆ ಕುರುಡಾಗಿದ್ದೀರಿ ಎಂದರ್ಥ. ನಿಮ್ಮ ಮನಸ್ಸಿನಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ, ಜಾತಿ ದ್ವೇಷ, ಧರ್ಮ ದ್ವೇಷವನ್ನು ನಿಮ್ಮೊಳಗೆ ತುಂಬಿಕೊಂಡಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಸಾಪ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಇಂದು ಉಳಿಯಲಿಲ್ಲ. ಕಸಾಪ ಅಧ್ಯಕ್ಷರಿಗೆ ಇದು ತಿಳಿಯಲಿಲ್ಲವಾ? ಕಸಾಪ ಅಧ್ಯಕ್ಷರು ಕನ್ನಡದ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುತ್ತಾರೆ. ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಹೇಳಿಕೊಳ್ಳುತ್ತಾರೆ. ಶಿಶುನಾಳ ಶರೀಫರ ಪದ ಹಾಡಿಕೊಂಡು ತಿರುತ್ತಾರೆ. ಶರೀಫರು ಯಾರು? ಗುರು ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?” ಎಂದು ಕೇಳಿದರು.

“ಮುಸ್ಲಿಮರಷ್ಟೇ ಅಲ್ಲ. ದಲಿತರು ಎಷ್ಟು ಮಂದಿ ಇದ್ದಾರೆ? ಮಹಿಳೆಯರಿಗೆ ಎಷ್ಟು ಸ್ಥಾನಮಾನ ನೀಡಿದ್ದೀರಿ? ಸ್ವಾಗತ, ವಂದನಾರ್ಪಣೆ, ನಿರೂಪಣೆ ಮಾಡೋದಷ್ಟೇ ಮಹಿಳೆಯರ ಕೆಲಸವಾ?” ಎಂದು ಪ್ರಶ್ನಿಸಿದರು.

ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ಮೂರ್ನಾಲ್ಕು ಬಾರಿ ಕರೆ ಮಾಡಲಾಯಿತು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...