Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

“ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಕಸಾಪ ಅಧ್ಯಕ್ಷರು ಹೇಳಿಕೊಳ್ಳುತ್ತಾರೆ. ಶರೀಫರು ಯಾರು? ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?”

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕಡೆಗಣಿಸಲಾಗಿದ್ದು, ಪರ್ಯಾಯ ಸಮ್ಮೇಳನ ನಡೆಸುವ ಚಿಂತನೆಯನ್ನು ಕನ್ನಡದ ಜಾತ್ಯತೀಯ ಮನಸ್ಸುಗಳು ಮಾಡುತ್ತಿವೆ.

ಕನ್ನಡದ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲಾಗುವ ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಈ ಹಿಂದೆ ಯಾವತ್ತೂ ಈ ರೀತಿಯ ಪ್ರಮಾದವನ್ನು ಮಾಡಿರಲಿಲ್ಲ. ಮಹೇಶ ಜೋಷಿಯವರು ಅಧ್ಯಕ್ಷರಾದ ಮೇಲೆ ವಿವಾದಗಳ ಮೂಲಕ ಸದ್ದು ಮಾಡುತ್ತಿರುವ ಕಸಾಪ, “ಈಗ ಮುಸ್ಲಿಮರನ್ನು ಹೊರಗಿಡುವ ಮಟ್ಟಕ್ಕೆ ತಲುಪಿದೆ” ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

“ಆರ್‌ಎಸ್‌ಎಸ್ ಮನಸ್ಥಿತಿ ಇಲ್ಲಿ ಕೆಲಸ ಮಾಡಿದೆ. ಜಾತಿ ದ್ವೇಷ, ಧರ್ಮದ್ವೇಷ ಢಾಳಾಗಿ ಕಾಣುತ್ತಿದೆ” ಎಂಬ ಟೀಕೆಗೆ ಸಮ್ಮೇಳನ ಗುರಿಯಾಗಿದೆ.

ಕನ್ನಡ ಸಾಹಿತ್ಯ ಪರಿಷತ್‌ ಮಾಡಿರುವ ಎಡವಟ್ಟಿನ ಕುರಿತು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬು‌ಕ್‌ನಲ್ಲಿ ಪೋಸ್ಟ್ ಮಾಡಿದ್ದು, “ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಲೇಖಕರನ್ನು ಹೊರಗಿಟ್ಟಿರುವುದು ಆಕಸ್ಮಿಕ ಏನೂ ಅಲ್ಲ. ನೆಹರೂ ಅಂಥ ಲೇಖಕರನ್ನೇ ಹೊರಗಿಟ್ಟವರಿವರು. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ತನ್ನ ನಿಲುವನ್ನು ನೇರವಾಗಿಯೇ ಪ್ರಕಟಿಸಬೇಕು” ಎಂದು ಆಗ್ರಹಿಸಿದ್ದಾರೆ. ಜೊತೆಗೆ “ಕೆಲವರನ್ನು ಕರೆದಿದ್ದು ಅವರು ಬರುವುದಿಲ್ಲ ಎಂದೂ ಹೇಳಿರಬಹುದು” ಎಂಬ ಮಾತನ್ನೂ ಸೇರಿಸಿದ್ದಾರೆ.

“ಆಧುನಿಕ ಕನ್ನಡ ಸಾಹಿತ್ಯದಲ್ಲಿ ಶಿಶುನಾಳ ಷರೀಫರೇ ನಮಗೆ ಸಿಗುವ ಮೊದಲ ಮಹತ್ವದ ಕವಿ. ಆನಂತರ ಕೆ.ಎಸ್‌.ನಿಸಾರ್‌ ಅಹಮದ್‌, ಬೊಳುವಾರು ಮಹಮ್ಮದ್‌ ಕುಞಿ, ಸಾರಾ ಅಬೂಬಕರ್,‌ ಹಸನ್ ನಯೀಂ ಸುರಕೋಡ, ರಹಮತ್‌ ತರೀಕರೆ ಮೊದಲಾದವರು ಕನ್ನಡದ ಸುಪ್ರಸಿದ್ಧ ಲೇಖಕರು. ಬೊಳುವಾರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕಿತ್ತು. ಅವರಿಗೆ ಜ್ಞಾನಪೀಠ ಪ್ರಶಸ್ತಿಯೂ ಬರಬೇಕು. ದಾದಾಪೀರ್‌ ಜೈನ್ ಅವರಿಗೆ ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಸಬೀಹಾ ಭೂಮಿ ಗೌಡರು ಲೇಖಕಿಯಾಗಿ ಪ್ರಸಿದ್ಧರು” ಎಂದು ಕಸಾಪಕ್ಕೆ ನೆನಪಿಸಿದ್ದಾರೆ.

“ಒಂದಾದರೂ ಪುಸ್ತಕ ಪ್ರಕಟಿಸಿದ ಮುಸ್ಲಿಂ ಲೇಖಕರು ಬಹಳ ಜನ ಇದ್ದಾರೆ. ಬಹುಶಃ ಮುಂದಿನ 10 ವರ್ಷದಲ್ಲಿ ಕನ್ನಡದ ಲೇಖಕರೆಂದರೆ ಮುಸ್ಲಿಮರೇ ಆಗಿರುತ್ತಾರೆ. ಅವರಲ್ಲಿ ನನಗೆ ಕೂಡಲೇ ನೆನಪಿಗೆ ಬರುವವರೆಂದರೆ, ಆರಿಫ್‌ ರಾಜಾ, ಎ.ಕೆ.ಕುಕ್ಕಿಲ, ಬಿ.ಎಂ.ಬಷೀರ್, ಇಸ್ಮಾಯಿಲ್ , ಮಹಮ್ಮದ್‌ ಕುಳಾಯಿ, ಗಂಗಾವತಿ ಸಲೀಮಾ, ಅಬ್ಬುಸ್ಸಲಾಮ್ ಪುತ್ತಿಗೆ, ಇಬ್ರಾಹಿಂ ಸಯೀದ್ ಸಾಬ್, ಸಲಾಂ ಸಮ್ಮಿ, ಬಾನು ಮುಷ್ತಾಕ್, ಫಾತಿಮಾ ರಲಿಯಾ, ಕೆ.ಷರೀಫಾ, ಡಿ.ಬಿ.ರಜಿಯಾ, ಜಹಾನ್ ಆರಾ, ಎ.ಎಸ್.ಮಕಾನದಾರ , ಬಿ.ಪೀರ್ ಭಾಷಾ, ಅಜಮೀರ ನಂದಾಪುರ, ದಸ್ತಗೀರ್ ದಿನ್ನಿ, ಇಮಾಮ್ ಹಡಗಲಿ, ಮುಸ್ತಾಫಾ, ಡಾ.ಮಕ್ತೂಂಬಿ ಮುಲ್ಲಾ, ಶಿ ಜು ಪಾಶಾ, ಮೆಹಬೂಬ್ಬಿ ಶೇಖ್ , ಸಿರಾಜ್ ಬಿಸರಳ್ಳಿ, ನಜ್ಮಾ ನಜೀರ್ ಚಿಕ್ಕನೇರಳೆ, ಮುನವ್ವರ್ ಜೋಗಿಬೆಟ್ಟು, ಬಿ.ಎಂ.ಹನೀಫ್‌, ಮೆಹಬೂಬಭಾಷಾ ಮಕಾನದಾರ, ಬಾಬು ಮನಸೇ, ಹಕೀಂ ಪದಡ್ಕ, ಹಸನ್ಮುಖಿ ಬಡಗನ್ನೂರು, ಆಸೀಫಾ, ನೂರಜಾನ್, ಸಕೀನಾ ಬೇಗಂ, ಸುನೈಫ್ ವಿಟ್ಲ, ಇಮಾಮ್ ಹಡಗಲಿ, ಅಮೀರಸಾಬ ವಂಟಿ, ಉಮರ್ ದೇವರಮನಿ, ಅಮೀನ್ ಅತ್ತಾರ್, ಸಯ್ಯದ್ ಸಿಕಂದರ್ ಮೀರ್ ಅಲಿ, ಚಾಂದ್ ಕವಿಚಂದ್ರ, ಕಾ ಹು ಚಾನಪಾಶಾ, ಸೈಫ್ ಜಾನ್ಸೆ, ರಾಜೇಸಾಬ ಬಾಗವಾನ್, ಶರೀಫ್ ಹಸಮಕಲ್, ಆಶಿಖ್ ಮುಲ್ಕಿ , ಇಮಾಮ್ ಗೋಡೆಕಾರ, ಸಿಹಾನಾ ಎಂ ಬಿ ಮೊದಲಾದವರು” ಎಂದು ಪಟ್ಟಿ ಮಾಡಿದ್ದಾರೆ.

ಮತ್ತೊಂದು ಪೋಸ್ಟ್ ಮಾಡಿರುವ ಅವರು, “ಪರ್ಯಾಯ ಸಮ್ಮೇಳನ ಇವತ್ತಿನ ತುರ್ತು. ದಾವಣಗೆರೆ ಅಥವಾ ಬೆಂಗಳೂರು ಅನುಕೂಲ. ಕೋಲಾರ, ಮೈಸೂರು, ಶಿವಮೊಗ್ಗವೂ ಆದೀತು. ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವ, ಪ್ರೊ.ಬರಗೂರು ರಾಮಚಂದ್ರಪ್ಪ ಬರಬೇಕು. ಪ್ರೊ.ರಾಜೇಂದ್ರ ಚೆನ್ನಿ, ಅರುಣ್‌ ಜೋಳದಕೂಡ್ಲಿಗಿ, ಬಿ.ಎಂ.ಹನೀಫ್‌ ಮೊದಲಾದವರು ಬರುತ್ತಾರೆ. ಅವರವರದೇ ಖರ್ಚು. ಸಭಾಂಗಣ, ಮಧ್ಯಾಹ್ನ ಊಟ, ಧ್ವನಿವರ್ಧಕ, ಚಹಾ ಇತ್ಯಾದಿಗಳಿಗೆ ಕ್ರೌಡ್‌ ಫಂಡಿಂಗ್‌ ಮಾಡೋಣ. ನಾನು ನನ್ನ ಖರ್ಚಲ್ಲಿ ಬರುತ್ತೇನೆ. ಸತ್ಯನಾರಾಯಣ ಪೂಜೆಗೆ ಸುದ್ದಿ ಕೇಳಿಯೇ ಹೋಗಬೇಕಂತೆ. ಇದೂ ಹಾಗೆಯೇ ಆಗಲಿ. ಸಮ್ಮೇಳನದಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ. ಯಾವುದೂ ಯಃಕಶ್ಚಿತವೂ ಅಲ್ಲ. ಯಾರಾದರೂ ಸಮರ್ಥ ನಾಯಕತ್ವ ಕೊಡಿ” ಎಂದು ಕೋರಿದ್ದಾರೆ.

ಬಿಳಿಮಲೆಯವರ ಪೋಸ್ಟ್‌ಗೆ ಹತ್ತಾರು ಲೇಖಕರು ಪ್ರತಿಕ್ರಿಯೆ ನೀಡಿದ್ದು, ಪರ್ಯಾಯ ಸಮ್ಮೇಳನಕ್ಕೆ ಬೆಂಬಲ ನೀಡುತ್ತಿದ್ದಾರೆ.

ಹಿರಿಯ ಪತ್ರಕರ್ತರು ಹಾಗೂ ಲೇಖಕರಾದ ಬಿ.ಎಂ.ಹನೀಫ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಹಾವೇರಿಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸುಮಾರು 80 ಮಂದಿ ಸಾಧಕರಿಗೆ ಸನ್ಮಾನ ಆಗುತ್ತಿದೆ. ಪ್ರತಿಸಲವು ಸನ್ಮಾನ ಮಾಡುವಾಗ ರಾಜ್ಯದ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಈ ವೇದಿಕೆಯಲ್ಲಿ ಗೌರವಿಸಲಾಗುತ್ತಿತ್ತು. ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಸಾಧಕರು ಇವರಿಗೆ ಸಿಗಲಿಲ್ಲವೆಂದರೆ ಇವರು ಸ್ಪಷ್ಟವಾಗಿ ಕಮ್ಯುನಲ್‌ ಆಗಿದ್ದಾರೆ ಎಂದರ್ಥ. ಅಪ್ರಜ್ಞಾಪೂರ್ವಕವಾಗಿ ಮುಸ್ಲಿಮರ ಹೆಸರು ಬಿಟ್ಟು ಹೋಗಿರಲು ಸಾಧ್ಯವಿಲ್ಲ. ಶಿಕ್ಷಣ, ಸಹಕಾರಿ ಕ್ಷೇತ್ರ, ಪತ್ರಿಕೋದ್ಯಮ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆಗೈದ ಮುಸ್ಲಿಮರಿದ್ದಾರೆ” ಎಂದು ವಿವರಿಸಿದರು.

“ಕಾವ್ಯಕ್ಷೇತ್ರದಲ್ಲಿ ಬಹುಮುಖ್ಯವಾಗಿ ಹೆಸರು ಮಾಡಿದವರನ್ನು ಪ್ರಧಾನ ಕವಿಗೋಷ್ಠಿಯಲ್ಲಿ ಗುರುತಿಸಲಾಗುತ್ತದೆ. 25 ಮಂದಿ ಕವಿಗಳಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಬೇರೆ ಕವಿಗೋಷ್ಠಿಗಳಲ್ಲಿ ಹೆಸರಿಗೆ ನಾಲ್ಕು ಮುಸ್ಲಿಮರನ್ನು ಹಾಕಿಕೊಂಡಿದ್ದಾರೆ. ಹಾಗೆ ಆಯ್ಕೆಯಾದವರು ಅನರ್ಹರೇನಲ್ಲ. ಇತ್ತೀಚೆಗೆ ಬರೆಯುತ್ತಿರುವ ಪ್ರತಿಭಾವಂತರೇ ಆಗಿದ್ದಾರೆ. ಆದರೆ ಪ್ರಧಾನ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಗೆ ಯಾವ ಮುಸ್ಲಿಮರೂ ಸಿಗಲಿಲ್ಲವೇ? ಪ್ರಧಾನ ವೇದಿಕೆಯಲ್ಲಿ ನಡೆಯುವ 9 ವಿಚಾರಗೋಷ್ಠಿಗಳಲ್ಲಿ ಸುಮಾರು 34 ಮಂದಿ ಮಾತನಾಡುತ್ತಾರೆ. ಇದರಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ” ಎಂದು ವಿಷಾದಿಸಿದರು.

“ಮುಸ್ಲಿಂ ಎಂದು ಹೇಳಿದ ತಕ್ಷಣ- ತಮ್ಮ ಜಾತಿಯವರ ಬಗ್ಗೆ ಇವರು ಹೇಳುತ್ತಿದ್ದಾನೆಂದು ಕೆಲವರು ಆರೋಪಿಸಬಹುದು. ಆದರೆ ಕನ್ನಡ ಸಾಹಿತ್ಯ ಪರಿಷತ್ ಎಂದಿಗೂ ಕಮ್ಯುನಲ್ ಆಗಿ ವರ್ತಿಸಿಲ್ಲ. ಈ ರೀತಿಯ ತಾರತಮ್ಯ ಎಂದೂ ಆಗಿರಲಿಲ್ಲ. ದಲಿತರು, ಮಹಿಳೆಯರು, ಮುಸ್ಲಿಮರು- ಹೀಗೆ ಎಲ್ಲರಿಗೂ ಪ್ರಾತಿನಿಧ್ಯವನ್ನು ನೀಡಲಾಗುತ್ತಿತ್ತು” ಎಂದು ಸ್ಮರಿಸಿದರು.

“ಹಿರಿಯರ ಸ್ಮರಣೆ ಗೋಷ್ಠಿಗೆ ನಿಸಾರ್‌ ಅಹಮ್ಮದ್ ಅವರ ಹೆಸರು ನೆನಪಾಗಲಿಲ್ಲವಾ? ಕರ್ನಾಟಕ ಪ್ರಾದೇಶಿಕ ವೈವಿಧ್ಯತೆ ಎಂಬ ಗೋಷ್ಠಿ ಇದೆ. ಪ್ರಾದೇಶಿಕ ವೈವಿಧ್ಯತೆ ಎಂದು ತುಳು, ಕೊಂಕಣಿ, ಕೊಡವ, ಅರೆಭಾಷೆಗಳನ್ನು ಗುರುತಿಸಲಾಗಿದೆ. ಆದರೆ ಬ್ಯಾರಿ ಭಾಷೆಯನ್ನು ಏಕೆ ಬಿಟ್ಟಿದ್ದೀರಿ? ರಾಜ್ಯದಲ್ಲಿ ಹದಿನಾಲ್ಕು ಲಕ್ಷ ಮುಸ್ಲಿಮರು ಬ್ಯಾರಿ ಭಾಷೆ ಮಾತನಾಡುತ್ತಾರೆ. ಕರ್ನಾಟಕ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿದೆ. ಕನ್ನಡ ಸಾಹಿತ್ಯ ಕೃಷಿ ಮಾಡಿರುವ ಮುಸ್ಲಿಂ ಲೇಖಕರನ್ನು ಪಟ್ಟಿ ಮಾಡಿದರೆ ಶೇ. 60ರಷ್ಟು ಲೇಖಕರು ಬ್ಯಾರಿ ಮಾತೃಭಾಷೆಯ ಕನ್ನಡಿಗ ಲೇಖಕರೇ ಇದ್ದಾರೆ. ಇದ್ಯಾವುದನ್ನೂ ಗಮನಿಸದೆ ಸುಮ್ಮನೆ ಬಿಟ್ಟಿದ್ದೀರಿ ಎಂದರೆ ನೀವು ಕನ್ನಡ ಸಾಹಿತ್ಯದ ಬಗ್ಗೆ ಕುರುಡಾಗಿದ್ದೀರಿ ಎಂದರ್ಥ. ನಿಮ್ಮ ಮನಸ್ಸಿನಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ, ಜಾತಿ ದ್ವೇಷ, ಧರ್ಮ ದ್ವೇಷವನ್ನು ನಿಮ್ಮೊಳಗೆ ತುಂಬಿಕೊಂಡಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಸಾಪ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಇಂದು ಉಳಿಯಲಿಲ್ಲ. ಕಸಾಪ ಅಧ್ಯಕ್ಷರಿಗೆ ಇದು ತಿಳಿಯಲಿಲ್ಲವಾ? ಕಸಾಪ ಅಧ್ಯಕ್ಷರು ಕನ್ನಡದ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುತ್ತಾರೆ. ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಹೇಳಿಕೊಳ್ಳುತ್ತಾರೆ. ಶಿಶುನಾಳ ಶರೀಫರ ಪದ ಹಾಡಿಕೊಂಡು ತಿರುತ್ತಾರೆ. ಶರೀಫರು ಯಾರು? ಗುರು ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?” ಎಂದು ಕೇಳಿದರು.

“ಮುಸ್ಲಿಮರಷ್ಟೇ ಅಲ್ಲ. ದಲಿತರು ಎಷ್ಟು ಮಂದಿ ಇದ್ದಾರೆ? ಮಹಿಳೆಯರಿಗೆ ಎಷ್ಟು ಸ್ಥಾನಮಾನ ನೀಡಿದ್ದೀರಿ? ಸ್ವಾಗತ, ವಂದನಾರ್ಪಣೆ, ನಿರೂಪಣೆ ಮಾಡೋದಷ್ಟೇ ಮಹಿಳೆಯರ ಕೆಲಸವಾ?” ಎಂದು ಪ್ರಶ್ನಿಸಿದರು.

ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ಮೂರ್ನಾಲ್ಕು ಬಾರಿ ಕರೆ ಮಾಡಲಾಯಿತು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...