Homeಅಂತರಾಷ್ಟ್ರೀಯನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆ: ಇಂದು ಪ್ರಮಾಣವಚನ

ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆ: ಇಂದು ಪ್ರಮಾಣವಚನ

- Advertisement -
- Advertisement -

ನೇಪಾಳದ ನೂತನ ಪ್ರಧಾನಿಯಾಗಿ ಸಿಪಿಎನ್-ಮಾವೋವಾದಿ ಕೇಂದ್ರದ ಅಧ್ಯಕ್ಷರಾದ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆಯಾಗಿದ್ದಾರೆ. ಇದು ಅವರ ಮೂರನೇ ಅವಧಿಗೆ ಪ್ರಧಾನಿಯಾಗಿ ನೇಮಕವಾಗುತ್ತಿದ್ದು, ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನೇಪಾಳದ ಅಧ್ಯಕ್ಷರಾದ ಬಿದ್ಯಾ ದೇವಿ ಭಂಡಾರಿಯವರು ಬಹುಮತ ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‌ನ ಸದಸ್ಯರು ಸರ್ಕಾರ ರಚನೆಗೆ ಮುಂದೆ ಬರುವಂತೆ ಸೂಚನೆ ನೀಡಿದ್ದರು. ಅದರಂತೆ ಪ್ರಂಚಂಡರವರು 169 ಸದಸ್ಯ ಬಲ ಇರುವುದಾಗಿ ಹಕ್ಕು ಮಂಡಿಸಿದ್ದರು. ಹಾಗಾಗಿ ಅವರನ್ನು ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಸಿಪಿಎನ್-ಯುಎಂಎಲ್ ಪಕ್ಷದ ಅಧ್ಯಕ್ಷ ಕೆ.ಪಿ ಶರ್ಮಾ ಓಲಿ, ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷ ರವಿ ಲಮಿಚ್ಚನೆ, ರಾಷ್ಟ್ರೀಯ ಪ್ರಜಾತಂತ್ರ ಪಕ್ಷದ ರಾಜೇಂದ್ರ ಲಿಂಗ್ಡೆನ್ ಸೇರಿದಂತೆ ಹಲವು ಪಕ್ಷೇತರರು ನೂತನ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ.

275 ಸದಸ್ಯಬಲದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‌ನಲ್ಲಿ 169 ಸದಸ್ಯರು ನೂತನ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಸಿಪಿಎನ್-ಯುಎಂಎಲ್ ಪಕ್ಷವು 78 ಸದಸ್ಯಬಲವನ್ನು ಹೊಂದಿದ್ದರೆ, ಸಿಪಿಎನ್-ಮಾವೋವಾದಿ ಕೇಂದ್ರದ 32 ಸದಸ್ಯರು, ರಾಷ್ಟ್ರೀಯ ಸ್ವತಂತ್ರ ಪಕ್ಷದ 20 ಸದಸ್ಯ ಬಲವನ್ನು ಹೊಂದಿದೆ. ಇತರ ಸಣ್ಣ ಪುಟ್ಟ ಪಕ್ಷಗಳು ನೂತನ ಸರ್ಕಾರದ ಭಾಗವಾಗಿದ್ದಾರೆ.

ನೇಪಾಳಿ ಕಾಂಗ್ರೆಸ್ ಪಕ್ಷವು 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿದ್ದರೂ ಸಹ ಅಧ್ಯಕ್ಷರು ನೀಡಿದ ಗಡುವಿನೊಳಗೆ ಇತರ ಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಈಗಿನ ನೂತನ ಸರ್ಕಾರದಲ್ಲಿ ಮೊದಲ ಎರಡೂವರೆ ವರ್ಷದ ಅವಧಿಗೆ ಸಿಪಿಎನ್-ಮಾವೋವಾದಿ ಕೇಂದ್ರದ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಧಾನಿಯಾದರೆ, ಉಳಿದ ಎರಡೂವರೆ ವರ್ಷಕ್ಕೆ ಸಿಪಿಎನ್-ಯುಎಂಎಲ್ ಪಕ್ಷದ ಅಧ್ಯಕ್ಷ ಕೆ.ಪಿ ಶರ್ಮಾ ಓಲಿಯವರು ಪ್ರಧಾನಿಯಾಗಲಿದ್ದಾರೆ ಎಂದು ಒಪ್ಪಂದ ಮಾಡಿಕೊಂಡಿದ್ದಾರೆ.

ಪುಷ್ಪ ಕಮಲ್ ದಹಾಲ್ ಪ್ರಚಂಡರು ಈ ಮೊದಲು 2008-09 ಮತ್ತು 2016-17 ಅವಧಿಯಲ್ಲಿ ಎರಡು ಬಾರಿ ನೇಪಾಳದ ಪ್ರಧಾನಿಯಾಗಿದ್ದರು. ಇದು ಅವರ ಮೂರನೇ ಅವಧಿಯಾಗಿದೆ.

ಇದನ್ನೂ ಓದಿ: ಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...