Homeಕರ್ನಾಟಕಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

ಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

- Advertisement -
- Advertisement -

ದಶಕಗಳ ಕಾಲ ಸಾಮಾಜಿಕ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜನಪರ ಚಳವಳಿಗಳ ಸಂಗಾತಿ, ಯುವ ಹೋರಾಟಗಾರ ತ್ರಿಮೂರ್ತಿ ಮಂಡ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಶಕ್ತಿ, ಸಂವಿಧಾನ ಉಳಿವಿಗಾಗಿ ಕರ್ನಾಟಕ, ಜನಚಿಂತನಾ ಕೇಂದ್ರ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಅವರು, ಇತ್ತೀಚಿಗಿನ ದಲಿತರ ಸಾಂಸ್ಕೃತಿಕ ಪ್ರತಿರೋಧ, ಒಳಮೀಸಲಾತಿ ಹೋರಾಟದಲ್ಲಿಯೂ ಭಾಗಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹೋರಾಟದ ಪ್ರಚಾರದ ಕೆಲಸದಲ್ಲಿ ನಿರತರಾಗಿದ್ದರು.

ಮೂಲತಃ ಕುಂಬಳಗೋಡು ಬಳಿಯ ದೇವಗೆರೆಯವರಾದ ತ್ರಿಮೂರ್ತಿಯವರು 2010-11 ರಲ್ಲಿ ಚಳವಳಿಗೆ ತೆರೆದುಕೊಂಡಿದ್ದರು. ಆನಂತರ ಭೂಮಿ- ವಸತಿ ಹೋರಾಟ, ಕೋಮು ಸೌಹಾರ್ದ ಚಳವಳಿ, ದಲಿತ ಚಳವಳಿ ಮತ್ತು ಮಹಿಳಾ ಚಳವಳಿಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ತೊಡಗಿಸಿಕೊಂಡಿದ್ದರು. ಯಾವುದೇ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದರು, ಪರಿಶ್ರಮ ಹಾಕಿ ಕೆಲಸ ಮಾಡುತ್ತಿದ್ದರು ಎಂಬ ಹೆಗ್ಗಳಿಕೆ ಅವದ್ದಾಗಿತ್ತು.

ವಯಕ್ತಿಕ ಕಾರಣಗಳಿಂದ ಬೇಸತ್ತು ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜನಪರ ಚಳವಳಿಗಳ ಪರವಾಗಿ ತುಡಿಯುತ್ತಿದ್ದ ಅವರ ಅಕಾಲಿಕ ನಿಧನಕ್ಕೆ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಪರ ಚಳವಳಿಗಳ ಸಂಗಾತಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಹೋರಾಟದ ಸ್ಥಳದಲ್ಲಿ ಇಂದು ತ್ರಿಮೂರ್ತಿ ನೆನಪಿನ ಶ್ರದ್ಧಾಂಜಲಿ ಸಭೆ ನಡೆಸಿದೆ.

“ಬೆಂಗಳೂರಿನಲ್ಲಿ ಪೌರ ಕಾರ್ಮಿಕರ ಹೋರಾಟ ಹುರಿಗೊಳ್ಳುತ್ತಿದ್ದಾಗ ಬೆಳಂಬೆಳಗ್ಗೆ ಶ್ರಮಿಕರ ವಸತಿ ಮತ್ತು ಕೆಲಸದ ಪ್ರದೇಶಗಳಲ್ಲಿ ಅಲೆದೆಲೆದು ಸಂಘಟನೆ ಬಲಪಡಿಸಲು ಶ್ರಮಿಸಿದವರು. ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಚಟುವಟಿಕೆಗಳು ಸಕ್ರಿಯವಾಗಿದ್ದಾಗ ಅದರ ದಕ್ಷ ಸಂಘಟಕರಾಗಿ ದುಡಿದವರು. ಮಂಗಳೂರಿನ ಸಹಬಾಳ್ವೆ ಸಾಗರ ಸಮಾವೇಶ ಸಂಘಟಿಸುವುದರಲ್ಲಿ ಮುಖ್ಯ ಜವಬ್ದಾರಿ ನಿರ್ವಹಿಸಿದವರು. ಸಂವಿಧಾನ ಉಳಿವಿಗಾಗಿ ಕರ್ನಾಟಕ ಅಭಿಯಾನ ಶುರುವಾದಾಗ ಅದರ ಸೋಷಿಯಲ್ ಮೀಡಿಯಾ ಕೆಲಸವನ್ನು ಮೈಮೇಲೆ ಹೊತ್ತು ಮಾಡಿದವರು. ಪೆಡೆಸ್ಟ್ರಿಯನ್ ಪಿಚ್ಚರ್ಸಸ್ ನ ಕಾರ್ಯಚಟುವಟಿಕೆಗಳಲ್ಲಿ, ಲಗೋರಿ ಗುಂಪಿನ ಚಾಲನೆಯಲ್ಲಿ ಮನಸ್ಸಿಟ್ಟು ಕೆಲಸ ಮಾಡಿದವರು. ವೈಚಾರಿಕ ಅರಿವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ವೈಚಾರಿಕ ಗ್ರಹಿಕೆಯನ್ನು ಬೆಳೆಸಬೇಕು ಎಂಬ ಉತ್ಕಟ ಬಯಕೆಯೊಂದಿಗೆ ಜನ ಚಿಂತನಾ ಕೇಂದ್ರದ ಕೇಂದ್ರ ತಂಡದ ಭಾಗವಾಗಿ ಅನೇಕ ಜವಬ್ದಾರಿಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡವರು, ಮಾತ್ರವಲ್ಲದೆ ಕರ್ನಾಟಕದ ಸಮಸ್ತ ಚಳವಳಿಗಳೂ ತನ್ನವೆಂದು ತೊಡಗಿಸಿಕೊಂಡವರು…. ಇಂತಹ ದಿಟ್ಟ ಸಂಗಾತಿಯ ಅಗಲಿಕೆ ಸಂಘಟನೆಗೆ ಮತ್ತು ಹೋರಾಟದ ವಲಯಕ್ಕೆ ಅಘಾತ ನೀಡಿದೆ” ಎಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸಂತಾಪ ವ್ಯಕ್ತಪಡಿಸಿದೆ.

“ಸಾಮಾಜಿಕ ಮತ್ತು ಚಳವಳಿಯ ಕಾರಣಗಳಷ್ಟೇ ಅಲ್ಲದೇ ಕೌಟುಂಬಿಕ ಕಾರಣಗಳಿಗೂ ಬಂದೊದಗುತ್ತಿದ್ದ ತ್ರಿಮೂರ್ತಿಯ ದಿಢೀರ್ ಅಗಲಿಕೆ ನಮ್ಮ ಮನೆಯವರಿಗೆಲ್ಲಾ ಆಘಾತದ ಮತ್ತು ನೋವಿನ ಸಂಗತಿಯೇ. ಹೆಚ್ಚು ಹೇಳಲು ತೋಚುತ್ತಲೂ ಇಲ್ಲ, ಕಷ್ಟವಾಗುತ್ತಲೂ ಇದೆ. ಆದರೆ ನಾವ್ಯಾರೂ ಯಾಕೆ ತ್ರಿಮೂರ್ತಿಗೆ ನೆನಪಿಗೆ ಬರಲೇ ಇಲ್ಲ. ನಮ್ಮ ಸಂಬಂಧಗಳ ಆಪ್ತತೆಯನ್ನು ಮತ್ತು ಆತ್ಮೀಯತೆಯನ್ನು ಅನುಮಾನಿಸುವಷ್ಟು ’ನಾನು’ ಅಪ್ರಮಾಣಿಕವಾಗಿ ಅವನಿಗೆ ಕಂಡೆನೇ ಎಂಬುದಂತೂ ಪದೇ ಪದೇ ಅನ್ನಿಸುತ್ತಿದೆ. ನಾನು ಇನ್ನೆಷ್ಟು ಮುಕ್ತವಾಗಿ ಕಾಣಿಸಿಕೊಳ್ಳಬೇಕಿತ್ತೋ?” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಎಲ್ಲರಿಗೂ ಆಪ್ತ ಸಮಾಲೋಚನೆಯ ಅಗತ್ಯವಿದೆ. ಅದನ್ನು ಕಡೆಗಣಿಸಬೇಡಿ. ಮನಸ್ಸು ಸೂಕ್ಷ್ಮ ಮತ್ತು ಭಾವುಕ. ಅದಕ್ಕೆ ಪದೇ ಪದೇ ಸಮಾಲೋಚನೆಯ ಮೂಲಕ ಅದರ ಬಲವನ್ನು ಹೆಚ್ಚಿಸಬೇಕಾಗುತ್ತದೆ.
ನೊಂದವರ ಮತ್ತು ಶೋಷಿತರ ಪರ ಹೋರಾಡುತ್ತಿದ್ದ, ಸಾಮಾಜಿಕ ನ್ಯಾಯವನ್ನೊದಗಿಸಲು ಹೆಣಗಾಡುತ್ತಾ ಅನ್ಯಾಯವಾಗಿ ಸಾವನ್ನು ತಂದುಕೊಂಡ ತ್ರಿಮೂರ್ತಿಗೆ ವಿದಾಯದ ವಂದನೆ ಸಲ್ಲಿಸಲು ನನ್ನಿಂದಂತೂ ಆಗುವುದಿಲ್ಲ. ಒಂದು ಹೋರಾಟದ ಜೀವದ ಕತೆ ಹೀಗೆ ಮುಗಿಯಕೂಡದಿತ್ತು ಎಂದು ಯೋಗೇಶ್ ಮಾಸ್ಟರ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸುಮಾರು ವರ್ಷಗಳಿಂದ ಜನ ಚಳವಳಿಯಲ್ಲಿ ತೊಡಗಿಸಿಕೊಂಡ ಕರ್ನಾಟಕ ಜನಶಕ್ತಿಯ ಹೋರಾಟದ ಒಡನಾಡಿ, ಗೆಳೆಯ ತ್ರಿಮೂರ್ತಿ ಅವರು ಅಕಾಲಿಕವಾಗಿ ನಮ್ಮನ್ನಗಲಿರುವುದು ಅತೀವ ನೋವು ತಂದಿದೆ. ಜನಪರ ಕಾಳಜಿಯೊಂದಿಗೆ ಹಲವಾರು ಚಳವಳಿಗಳಲ್ಲಿ ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಹಲವರ ಮನಸ್ಸಲ್ಲಿ ಮನೆಮಾಡಿದ್ದರು. ಸೂಕ್ಷ್ಮ-ಸೌಜನ್ಯದ, ಸಹೃದಯಿ ಗೆಳೆಯರೊಬ್ಬರ ಅಗಲಿಕೆ ನಂಬಲಸಾಧ್ಯವಾಗಿದೆ. 2014ರ ಸಂದರ್ಭದಲ್ಲಿ ತಿಂಥಿಣಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನದಲ್ಲಿ ಒಟ್ಟಿಗೆ ಕೆಲಸ ಮಾಡಿದ ಸಂದರ್ಭದಲ್ಲಿನ ಸ್ಮರಣೀಯ ಕ್ಷಣಗಳನ್ನು ಇಂದಿಗೂ ಮರೆಯಲಾಗದು. ಗೆಳೆಯ ನಮ್ಮೊಂದಿಗೆ ಭೌತಿಕವಾಗಿ ಇಲ್ಲದಿದ್ದರೂ, ಮಾನಸಿಕವಾಗಿ ಜೊತೆಗಿರುತ್ತಾರೆ. ಬದ್ಧತೆ, ಸಮರ್ಪಣಾ ಮನೋಭಾವ, ಜನಪರ ಕಾಳಜಿಯ ಮೂಲಕ ನಮ್ಮಲ್ಲಿ ತ್ರಿಮೂರ್ತಿಯವರು ಎಚ್ಚರ ಪ್ರಜ್ಞೆಯಾಗಿರುತ್ತಾರೆ” ಎಂದು ಹೋರಾಟಗಾರ ನಾಗರಾಜ ಪೂಜಾರ್ ಬರೆದಿದ್ದಾರೆ.

ತ್ರಿಮೂರ್ತಿಯವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ದೇವಗೆರೆಗೆ ತರುತ್ತಿದ್ದು ಸಂಜೆ 4 ಗಂಟೆ ಹೊತ್ತಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.


ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...