Homeಮುಖಪುಟಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

ಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

- Advertisement -
- Advertisement -

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿದವರನ್ನು ಗುಪ್ತಚರ ದಳದ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಲ್ಲಾ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ರಾಹುಲ್ ಗಾಂಧಿಯವರಿಗೆ ಸಲ್ಲಿಸಿರುವ ಜ್ಞಾಪಕ ಪತ್ರಗಳ ಪ್ರತಿಗಳನ್ನು ಕೋರುತ್ತಿದ್ದಾರೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಟ್ವೀಟ್ ಮಾಡಿದ್ದಾರೆ.

“ಯಾತ್ರೆಯ ವಿಚಾರದಲ್ಲಿ ರಹಸ್ಯವಾಗಿ ಏನೂ ಇಲ್ಲ. ಆದರೆ ಇದು ಸ್ಪಷ್ಟವಾಗಿ ಜಿ2 (ನರೇಂದ್ರ ಮೋದಿ ಮತ್ತು ಅಮಿತ್ ಶಾ) ಗಲಾಟೆಯಾಗಿದೆ” ಎಂದು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ದ್ವೇಷದ ರಾಜಕಾರಣವನ್ನು ಎದುರಿಸುವ ಗುರಿಯನ್ನು ಇಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ಡಿಸೆಂಬರ್ 24 ರಂದು ರಾಷ್ಟ್ರದ ರಾಜಧಾನಿಯನ್ನು ಪ್ರವೇಶಿಸಿತ್ತು.

ಕಾಂಗ್ರೆಸ್ ಸಂವಹನ ವಿಭಾಗದ ಕಾರ್ಯದರ್ಶಿ ವೈಭವ್ ವಾಲಿಯಾ ಟ್ವೀಟ್ ಮಾಡಿದ್ದು, “ಡಿಸೆಂಬರ್ 23 ರಂದು ಬೆಳಿಗ್ಗೆ ಕೆಲವು ಅನಧಿಕೃತ ವ್ಯಕ್ತಿಗಳು ನಮ್ಮ ಕಂಟೇನರ್‌ಗೆ ಪ್ರವೇಶಿಸಿದರು. ಹೊರಬರುವಾಗ ನಮಗೆ ಸಿಕ್ಕಿಬಿದ್ದರು. ಭಾರತ್ ಜೋಡೋ ಯಾತ್ರಿಗಳ ಪರವಾಗಿ ನಾನು ಸೊಹ್ನಾ ಸಿಟಿ ಪಿಎಸ್‌ಗೆ ದೂರು ನೀಡಿದ್ದೇನೆ. ಪ್ರತಿಯನ್ನು ಲಗತ್ತಿಸಲಾಗಿದೆ. ಅನೌಪಚಾರಿಕವಾಗಿ ತಿಳಿದ ಮಾಹಿತಿಯ ಪ್ರಕಾರ ಅವರು ರಾಜ್ಯದ ಗುಪ್ತಚರ ಇಲಾಖೆಯವರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 20ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ನೆರೆಯ ಚೀನಾದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆಳವಣಿಗೆಗಳ ಬೆನ್ನಲ್ಲಿ ರಾಹುಲ್ ಗಾಂಧಿಯವರಿಗೆ ಪತ್ರವನ್ನು ಬರೆದಿದ್ದರು.

ಕೋವಿಡ್ -19 ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಮೆರವಣಿಗೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್‌‌ಗೆ ಪತ್ರ ಬರೆದ ಕೆಲವು ದಿನಗಳ ನಂತರ ಕಾಂಗ್ರೆಸ್‌ನ ಇತ್ತೀಚಿನ ಆರೋಪಗಳು ಹೊರಬಿದ್ದಿವೆ.

ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರವು ನೆಪ ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಾಹುಲ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಹರಿಯಾಣದ ನುಹ್‌ನಲ್ಲಿ ಮಾತನಾಡಿದ್ದ ರಾಹುಲ್‌, “ಈ ಯಾತ್ರೆ ಕಾಶ್ಮೀರದವರೆಗೂ ಸಂಚರಿಸಲಿದೆ. ಈಗ ಬಿಜೆಪಿಯವರು ಹೊಸ ಐಡಿಯಾವನ್ನು ಮಾಡಿದ್ದಾರೆ. ಕೋವಿಡ್ ಬರುತ್ತಿದೆ, ಹಾಗಾಗಿ ಯಾತ್ರೆ ನಿಲ್ಲಿಸಿ ಎಂದು ನನಗೆ ಪತ್ರ ಬರೆದಿದ್ದಾರೆ. ನೋಡಿ, ಈಗ ಯಾತ್ರೆ ನಿಲ್ಲಿಸಲು ಸಬೂಬು ಹೇಳಲಾಗುತ್ತಿದೆ. ಮಾಸ್ಕ್ ಧರಿಸಿ, ಯಾತ್ರೆ ನಿಲ್ಲಿಸಿ… ಇವೆಲ್ಲ ನೆಪಗಳಷ್ಟೆ. ಅವರು ಈ ದೇಶದ ಶಕ್ತಿ ಮತ್ತು ಸತ್ಯದ ಬಗ್ಗೆ ಹೆದರುತ್ತಾರೆ” ಎಂದಿದ್ದರು.

ಜೈರಾಂ ರಮೇಶ್ ಟ್ವೀಟ್ ಮಾಡಿ, “Omicron ಸಬ್-ವೇರಿಯಂಟ್ BF.7 ಉಲ್ಬಣದ 4 ಪ್ರಕರಣಗಳು ಗುಜರಾತ್ ಮತ್ತು ಒಡಿಶಾದಲ್ಲಿ ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ವರದಿಯಾಗಿದೆ. ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಮತ್ತು ಇಂದು ಪ್ರಧಾನಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. #BharatJodoYatra ಮರುದಿನ ದೆಹಲಿ ಪ್ರವೇಶಿಸಲಿದೆ. ಕ್ರೊನಾಲಜಿ ಅರ್ಥ ಮಾಡಿಕೊಳ್ಳಿ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...