Homeಮುಖಪುಟಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

ಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

- Advertisement -
- Advertisement -

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿದವರನ್ನು ಗುಪ್ತಚರ ದಳದ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಲ್ಲಾ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ರಾಹುಲ್ ಗಾಂಧಿಯವರಿಗೆ ಸಲ್ಲಿಸಿರುವ ಜ್ಞಾಪಕ ಪತ್ರಗಳ ಪ್ರತಿಗಳನ್ನು ಕೋರುತ್ತಿದ್ದಾರೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಟ್ವೀಟ್ ಮಾಡಿದ್ದಾರೆ.

“ಯಾತ್ರೆಯ ವಿಚಾರದಲ್ಲಿ ರಹಸ್ಯವಾಗಿ ಏನೂ ಇಲ್ಲ. ಆದರೆ ಇದು ಸ್ಪಷ್ಟವಾಗಿ ಜಿ2 (ನರೇಂದ್ರ ಮೋದಿ ಮತ್ತು ಅಮಿತ್ ಶಾ) ಗಲಾಟೆಯಾಗಿದೆ” ಎಂದು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ದ್ವೇಷದ ರಾಜಕಾರಣವನ್ನು ಎದುರಿಸುವ ಗುರಿಯನ್ನು ಇಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ಡಿಸೆಂಬರ್ 24 ರಂದು ರಾಷ್ಟ್ರದ ರಾಜಧಾನಿಯನ್ನು ಪ್ರವೇಶಿಸಿತ್ತು.

ಕಾಂಗ್ರೆಸ್ ಸಂವಹನ ವಿಭಾಗದ ಕಾರ್ಯದರ್ಶಿ ವೈಭವ್ ವಾಲಿಯಾ ಟ್ವೀಟ್ ಮಾಡಿದ್ದು, “ಡಿಸೆಂಬರ್ 23 ರಂದು ಬೆಳಿಗ್ಗೆ ಕೆಲವು ಅನಧಿಕೃತ ವ್ಯಕ್ತಿಗಳು ನಮ್ಮ ಕಂಟೇನರ್‌ಗೆ ಪ್ರವೇಶಿಸಿದರು. ಹೊರಬರುವಾಗ ನಮಗೆ ಸಿಕ್ಕಿಬಿದ್ದರು. ಭಾರತ್ ಜೋಡೋ ಯಾತ್ರಿಗಳ ಪರವಾಗಿ ನಾನು ಸೊಹ್ನಾ ಸಿಟಿ ಪಿಎಸ್‌ಗೆ ದೂರು ನೀಡಿದ್ದೇನೆ. ಪ್ರತಿಯನ್ನು ಲಗತ್ತಿಸಲಾಗಿದೆ. ಅನೌಪಚಾರಿಕವಾಗಿ ತಿಳಿದ ಮಾಹಿತಿಯ ಪ್ರಕಾರ ಅವರು ರಾಜ್ಯದ ಗುಪ್ತಚರ ಇಲಾಖೆಯವರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 20ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ನೆರೆಯ ಚೀನಾದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆಳವಣಿಗೆಗಳ ಬೆನ್ನಲ್ಲಿ ರಾಹುಲ್ ಗಾಂಧಿಯವರಿಗೆ ಪತ್ರವನ್ನು ಬರೆದಿದ್ದರು.

ಕೋವಿಡ್ -19 ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಮೆರವಣಿಗೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್‌‌ಗೆ ಪತ್ರ ಬರೆದ ಕೆಲವು ದಿನಗಳ ನಂತರ ಕಾಂಗ್ರೆಸ್‌ನ ಇತ್ತೀಚಿನ ಆರೋಪಗಳು ಹೊರಬಿದ್ದಿವೆ.

ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರವು ನೆಪ ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಾಹುಲ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಹರಿಯಾಣದ ನುಹ್‌ನಲ್ಲಿ ಮಾತನಾಡಿದ್ದ ರಾಹುಲ್‌, “ಈ ಯಾತ್ರೆ ಕಾಶ್ಮೀರದವರೆಗೂ ಸಂಚರಿಸಲಿದೆ. ಈಗ ಬಿಜೆಪಿಯವರು ಹೊಸ ಐಡಿಯಾವನ್ನು ಮಾಡಿದ್ದಾರೆ. ಕೋವಿಡ್ ಬರುತ್ತಿದೆ, ಹಾಗಾಗಿ ಯಾತ್ರೆ ನಿಲ್ಲಿಸಿ ಎಂದು ನನಗೆ ಪತ್ರ ಬರೆದಿದ್ದಾರೆ. ನೋಡಿ, ಈಗ ಯಾತ್ರೆ ನಿಲ್ಲಿಸಲು ಸಬೂಬು ಹೇಳಲಾಗುತ್ತಿದೆ. ಮಾಸ್ಕ್ ಧರಿಸಿ, ಯಾತ್ರೆ ನಿಲ್ಲಿಸಿ… ಇವೆಲ್ಲ ನೆಪಗಳಷ್ಟೆ. ಅವರು ಈ ದೇಶದ ಶಕ್ತಿ ಮತ್ತು ಸತ್ಯದ ಬಗ್ಗೆ ಹೆದರುತ್ತಾರೆ” ಎಂದಿದ್ದರು.

ಜೈರಾಂ ರಮೇಶ್ ಟ್ವೀಟ್ ಮಾಡಿ, “Omicron ಸಬ್-ವೇರಿಯಂಟ್ BF.7 ಉಲ್ಬಣದ 4 ಪ್ರಕರಣಗಳು ಗುಜರಾತ್ ಮತ್ತು ಒಡಿಶಾದಲ್ಲಿ ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ವರದಿಯಾಗಿದೆ. ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಮತ್ತು ಇಂದು ಪ್ರಧಾನಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. #BharatJodoYatra ಮರುದಿನ ದೆಹಲಿ ಪ್ರವೇಶಿಸಲಿದೆ. ಕ್ರೊನಾಲಜಿ ಅರ್ಥ ಮಾಡಿಕೊಳ್ಳಿ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...