Homeಕರ್ನಾಟಕಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು...

ಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು ಸ್ಥಗಿತ

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಸಂಪಾದಕೀಯ ಪ್ರಕಟಿಸಿದ್ದ ಮೈಸೂರಿನ ಸ್ಟಾರ್ ಆಫ್ ಮೈಸೂರು ಇಂಗ್ಲಿಷ್ ದಿನಪತ್ರಿಕೆ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಖಂಡನೆ ವ್ಯಕ್ತಪಡಿಸಿದೆ. ಆ ಪತ್ರಿಕೆಗೆ ಸತತ ಮೂರು ತಿಂಗಳ ಕಾಲ ಯಾವುದೇ ಸರ್ಕಾರಿ ಜಾಹೀರಾತುಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರ್ 2020ರ ಎಪ್ರಿಲ್ 6 ರಂದು ದ್ವೇಷಪೂರಿತ ಸಂಪಾದಕೀಯ ಪ್ರಕಟಿಸಿತ್ತು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಅಂದಿನ ಸಂಪಾದಕೀಯ ಹೇಳಿತ್ತು. ಆಗ ಕೆ.ಬಿ.ಗಣಪತಿಯವರು ಮುಖ್ಯ ಸಂಪಾದಕರಾಗಿದ್ದರು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿತ್ತು.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ಎಂದು ಉಲ್ಲೇಖಿಸಿ ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು.

ಆಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿತ್ತು. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿತ್ತು. ಆದರೆ 400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು. ಅದರ ಆಧಾರದಲ್ಲಿ ಪಿಸಿಐ ವಿಚಾರಣಾ ಸಮಿತಿ ನೇಮಿಸಿತ್ತು. ತನಿಖೆಯ ನಂತರ ವಿಚಾರಣಾ ಸಮಿತಿಯು “ಪತ್ರಿಕೆಯು ಸಮಾಜದಲ್ಲಿ ಶಾಂತಿ ಕದಡುವಂತಹ ಅಥವಾ ಸಂವಿಧಾನದ ಉದ್ದೇಶಗಳ ಉಲ್ಲಂಘನೆ ಆಗುವಂತಹ ಯಾವುದೇ ರೀತಿಯ ಪ್ರಚೋದನಾಕಾರಿ ಬರವಣಿಗೆಗಳು ಪ್ರಕಟಗೊಳ್ಳದಿರುವುದನ್ನು ಖಾತ್ರಿಪಡಿಸುವಂತೆ” ಸೂಚಿಸಿದೆ.

ಮುಂದುವರಿದು ಪತ್ರಿಕೋದ್ಯಮವು ಇಂತಹ ವಿಭವಿಸುವ ವಿಚಾರಗಳಲ್ಲಿ ತೊಡಗಿಕೊಳ್ಳಬಾರದು. ಎಲ್ಲಾ ಸಮುದಾಯದವರಲ್ಲಿ ಭ್ರಾತೃತ್ವದ ಸಂದೇಶವನ್ನು ಹರಡಬೇಕೆಂದು, ಭಾರತದ ಒಗ್ಗಟ್ಟಿನಲ್ಲಿ ವೈವಿಧ್ಯತೆಯನ್ನು ಪ್ರದರ್ಶಿಸುವಂತೆಯೂ ಹಾಗೂ ಕೋಮುವಾದವನ್ನು ಉತ್ತೇಜಿಸುವ ಯಾವುದೇ ರೀತಿಯ ಬರವಣಿಗೆಗಳನ್ನು ಪ್ರಕಟಿಸದಂತೆಯೂ ಸೂಚಿಸಿದೆ.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನವು ಪಿಸಿಐ ಆದೇಶವನ್ನು ಸ್ವಾಗತಿಸಿದ್ದು, ಇತರೆ ಮಾಧ್ಯಮಗಳಿಗೂ ಸಹ ಇದೊಂದು ಪಾಠವಾಗಬೇಕೆಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...