Homeಅಂಕಣಗಳುರಾಜಕೀಯ ಕ್ರಾಂತಿಗೆ ಕಹಳೆ ನಾಂದಿ ಮೊಳಗಬೇಕಿರುವ ಸಂಧಿಕಾಲದಲ್ಲಿ..

ರಾಜಕೀಯ ಕ್ರಾಂತಿಗೆ ಕಹಳೆ ನಾಂದಿ ಮೊಳಗಬೇಕಿರುವ ಸಂಧಿಕಾಲದಲ್ಲಿ..

- Advertisement -
- Advertisement -

ಡಿಸೆಂಬರ್ ಕೊನೆಯ ವಾರ ಹಲವು ಕಾರಣಗಳಿಗೆ ಇದ್ದಕ್ಕಿದ್ದಂತೆ ಸಂಭ್ರಮ-ಚರ್ಚೆ-ವಿವಾದಗಳ ಸಮಯವಾಗಿಬಿಡುತ್ತದೆ. ಕ್ರಿಸ್ಮಸ್ ಹಬ್ಬ-ಹೊಸ ವರ್ಷದ ಸಂಭ್ರಮಾಚರಣೆಗಳು, ದಾರ್ಶನಿಕ ಕುವೆಂಪು ಅವರ ಜನ್ಮದಿನದ ನೆನಪು ಹಾಗೂ ಸಾಮಾನ್ಯವಾಗಿ ಈ ಸಮಯದಲ್ಲಿ ನಡೆಯುವ ಚಳಿಗಾಲದ ವಿಧಾನಸಭಾ ಅಧಿವೇಶನದ ವಾದವಿವಾದಗಳು ಇಡೀ ವಾರವನ್ನು ಆಕ್ರಮಿಸಿಕೊಳ್ಳುತ್ತವೆ. ಹಲವು ವಿರೋಧಾಭಾಸಗಳ ಈ ವಾರ ಪ್ರತಿ ವರ್ಷದಂತೆ 2022ರ ವರ್ಷವೂ ಸದ್ದುಗದ್ದಲಗಳಿಗೆ ಕಾರಣವಾಗಿದೆ. ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಏಸುಕ್ರಿಸ್ತನ ಕರುಣೆ-ಪ್ರೀತಿಗಳ ಬಗ್ಗೆ ನೆನೆಯುವುದರ ಜೊತೆಗೆ, ಭಾರತದಲ್ಲಿ ಕ್ರಿಶ್ಚಿಯನ್ ಅಲ್ಪಸಂಖ್ಯಾತ ಧರ್ಮೀಯರನ್ನು ಮೂದಲಿಸುವ ಪರಿಪಾಠ ಬೆಳೆಯುತ್ತಲೇ ಇದೆ. ಮತಮೌಢ್ಯತೆಯನ್ನು ತೊರೆದು ವೈಚಾರಿಕತೆಯನ್ನು ಬೆಳೆಸಿಕೊಳ್ಳಿ ಎಂದು ಕರೆಕೊಟ್ಟ ಕುವೆಂಪು ಅವರನ್ನು ವಿರೋಧಿಸುತ್ತಲೇ ಬಂದ ಬಲಪಂಥೀಯ ಸಂಘ ಪರಿವಾರದವರು ಈಗ ಅವರನ್ನು ಅಪ್ರಾಪ್ರಿಯೇಟ್ ಮಾಡಲು ಮುಂದಾಗುತ್ತಿದ್ದಾರೆ; ಪಠ್ಯ ಪರಿಷ್ಕರಣೆ ಮೂಲಕ ಕರ್ನಾಟಕದ ಮಕ್ಕಳಿಗೆ ಕೋಮುವಿಷವುಣಿಸಲು ಶ್ರಮಿಸಿದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಕಡೆಯಿಂದ ಡಿಸೆಂಬರ್ 29ರಂದು ಉಪನ್ಯಾಸ ಕೊಡಿಸುವ ಕಾರ್ಯಕ್ರಮ ಆಯೋಜನೆಗೊಳ್ಳುತ್ತದೆ. (ಕುವೆಂಪು ವರ್ಣಾಶ್ರಮವನ್ನು ಒಪ್ಪಿದ್ದರು ಎಂಬ ಸುಳ್ಳನ್ನು ಆತ ನಿರ್ಭಿಡೆಯಿಂದ ನುಡಿಯುತ್ತಾರೆ!) ರಾಜ್ಯದ ಕುಂದುಕೊರತೆಗಳ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿರುವ ಅಧಿವೇಶನದಲ್ಲಿ ಕೋಮುದ್ವೇಷ ಹರಡುವ, ಅಲ್ಪಸಂಖ್ಯಾತರನ್ನು ಹಣಿಯುವಂತೆ ಮಾತನಾಡುವ ಭಾಷಣಗಳು ರಾರಾಜಿಸುತ್ತವೆ.

1974ರಲ್ಲಿ ಕುವೆಂಪು ಅವರು ಮಾಡಿದ ’ವಿಚಾರ ಕ್ರಾಂತಿಗೆ ಆಹ್ವಾನ’ ಭಾಷಣಕ್ಕೆ ಬರಲಿರುವ ಹೊಸ ವರ್ಷಕ್ಕೆ 50 ವರ್ಷಗಳಾಗಲಿದೆ. ಕರ್ನಾಟಕದ ಪ್ರಜ್ಞಾವಂತರು ಅಗಾಗ್ಗೆ ರಿವಿಸಿಟ್ ಮಾಡಿಕೊಂಡು ಬಂದಿರುವ ಭಾಷಣವಿದು. ಭಾಷಣದಲ್ಲಿ ಒಂದು ಕಡೆಗೆ ಕುವೆಂಪು ಹೀಗೆ ಹೇಳುತ್ತಾರೆ: “ನಮ್ಮ ಪ್ರಜಾಸತ್ತೆ ಕಲುಷಿತವಾಗಲು ಹಣ ಒಂದೇ ಕಾರಣವೆಂದು ತಿಳಿಯುವುದು ತಪ್ಪಾಗುತ್ತದೆ. ಅದಕ್ಕಿಂತಲೂ ಮಹತ್ತಾದ ಮತ್ತು ಮೂಲಭೂತವಾದ ಮತ್ತೊಂದು ಕಾರಣವೂ ಇದೆ, ನಮ್ಮ ಪುಣ್ಯಭೂಮಿ ಭಾರತದಲ್ಲಿ! ಅದು ಒಂದು ಆಮೂರ್‍ತ ವಸ್ತು, ಅದು ಹಾಕಿಕೊಂಡಿರುವ ವೇಷದಿಂದ ತುಂಬ ಸಾಧು ಮತ್ತು ಪೂಜ್ಯ ಎಂಬಂತೆ ತೋರುತ್ತದೆ. ಅದು ಭಾವರೂಪಿಯಾದುದರಿಂದ ಅತಿ ಸೂಕ್ಷ್ಮವಾಗಿ ಹೃದಯಪ್ರವೇಶಮಾಡಿ ನಮ್ಮನ್ನು ಆಕ್ರಮಿಸುತ್ತದ. ಮತ್ತು ನಮ್ಮಲ್ಲಿ ನಿಜವಾಗಿಯೂ ಇರುವ ಒಂದು ಅನಿರ್ವಚನೀಯ-ಅತ್ಯಂತ ಅಂತರತಮ-ಸತ್ಯಸ್ಯ ಸತ್ಯವಾದ ಸನಾತನ ತತ್ತ್ವಕ್ಕೆ (ಅದನ್ನು ಆಧ್ಯಾತ್ಮ ಎಂದು ಹೆಸರಿಸುತ್ತೇವೆ.) ಅದು ತನ್ನ ಬಾಂಧವ್ಯವನ್ನು ಘೋಷಿಸುತ್ತಾ ಬಂದಿರುವುದರಿಂದಲೂ ಮತ್ತು ಅದನ್ನ ತಾನು ಪೋಷಿಸುತ್ತಿರುವುದಾಗಿ ಹೇಳುತ್ತಲೂ ಇರುವುದರಿಂದಲೂ ಅದರ ಪ್ರಚ್ಛನ್ನ ವಂಚನೆಯ ಮುಷ್ಟಿಯಿಂದ ತಪ್ಪಿಸಿಕೊಳ್ಳುವುದೂ ಕಷ್ಟಸಾಧ್ಯವಾಗಿದೆ. ಅದರ ಹೆಸರು ’ಮತ’! ಈ ಮತಭ್ರಾಂತಿಯಿಂದ ಲೋಕಕ್ಕೆ ಆಗಿರುವಷ್ಟು ಹಾನಿ ಮತ್ತಾವುದರಿಂದಲೂ ಆಗಿಲ್ಲ ಎಂದು ತೋರುತ್ತದೆ. ಇನ್ನು ಮುಂದೆಯಾದರೂ ನೀವು ಅಧ್ಯಾತ್ಮವನ್ನು ಉಳಿಸಿಕೊಂಡು ಮತ ಮತ್ತು ಅದರಿಂದ ಜನ್ಯವಾದ ಮತಭ್ರಾಂತಿ ಮತ್ತು ಮತಮೌಢ್ಯಗಳನ್ನು ನಿರಾಕರಿಸದಿದ್ದರೆ ನಿಜವಾದ ಪ್ರಜಾಸತ್ತೆಯಾಗಲಿ ಸಮಾಜವಾದವಾಗಲಿ ಸಮಾನತಾಭಾವ ಸ್ಥಾಪನೆಯಾಗಲಿ ಎಂದೆಂದಿಗೂ ಸಾಧ್ಯವಾಗುವುದಿಲ್ಲ.” ಸ್ವಾತಂತ್ರ್ಯ ಬಂದು 25 ವರ್ಷಗಳ ನಂತರ ನೀಡಿದ ಭಾಷಣದ ಆತಂಕಗಳು 75ನೇ ವರ್ಷದ ಅಮೃತ ಮಹೋತ್ಸವದಲ್ಲಿಯೂ ಅಕ್ಷರಶಃ ಅನ್ವಯವಾಗುತ್ತಿರುವುದು ಈ ಸಮಾಜದ ದುರಂತವಲ್ಲದೆ ಮತ್ತೇನು?

ರೋಹಿತ್ ಚಕ್ರತೀರ್ಥ

ಸದ್ಯ ಜಾರಿಯಲ್ಲಿರುವ ಬೆಳಗಾವಿಯ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಪಕ್ಷದ ಶಾಸಕ ಸಿ.ಟಿ ರವಿಯವರು ಮಾತನಾಡಿದ ಮಾತುಗಳು, ಅದರ ಧಾಟಿ ಕೂಡ (ಇದು ಒಂದೇ ಒಂದು ಉದಾಹರಣೆಯಷ್ಟೇ) ಮತಭ್ರಾಂತಿಯ, ಮತದ್ವೇಷದ ಸಮಸ್ಯೆ ಜ್ವಲಂತವಾಗಿರುವುದನ್ನ, ಅದರ ಸ್ವರೂಪ ಮತ್ತು ಅದನ್ನು ದಾಟಿಸುತ್ತಿಸಿರುವ ಬಗೆ ಬದಲಾಗಿರುವುದನ್ನ ಸೂಚಿಸುತ್ತದೆ. ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಮುಂದಿಟ್ಟುಕೊಂಡು, ಒಂದು ಪಕ್ಷವನ್ನು ಹಾಗೂ ಪ್ರಕರಣದ ತನಿಖೆ ರಾಜಕೀಯ ದುರುದ್ದೇಶಗಳನ್ನು ಮೀರಿ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದು ಹೇಳಿದವರನ್ನು ಖಳನಾಯಕರಂತೆ ಚಿತ್ರಿಸಲು ಸಿ.ಟಿ. ರವಿ ಪ್ರಯತ್ನಿಸಿದರು. ಸದ್ಯ ಆರೋಪಿಗಳಾಗಿರುವವರ ಬಗ್ಗೆ ಯಾವುದೇ ರೀತಿಯ ಸಹಾನುಭೂತಿಯನ್ನು ಯಾರೂ ತೋರಬಾರದೆಂದು ಫರ್ಮಾನು ಹೊರಡಿಸಿದರು. (ತನಿಖೆಯಾಗಿ ದೇಶದ ಕಾನೂನು ಪರಿಪಾಲನೆಯಾಗಬೇಕಿರುವುದು ನಿಜ, ಆದರೆ ಅಲ್ಪಸಂಖ್ಯಾತ ಸಮುದಾಯದ ಎಷ್ಟೋ ವ್ಯಕ್ತಿಗಳು ಭಯೋತ್ಪಾದನೆ ಪ್ರಕರಣಗಳಲ್ಲಿ ಸಿಲುಕಿ ನಂತರ ನಿರಪರಾಧಿಗಳು ಎಂದು ಸಾಬೀತಾಗಿರುವ ನೂರಾರು ಉದಾಹರಣೆಗಳಿವೆ.) ಸಿ.ಟಿ. ರವಿ ಅವರು ಹೇಳಿದ ಮಾತುಗಳು ರಾಜಕೀಯ ದುರುದ್ದೇಶದಿಂದ ಕೂಡಿವೆ ಎಂದು ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರತಿಕ್ರಿಯಿಸಿದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ’ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ ಪಕ್ಷ ನಮ್ಮದು. ಅವರಿಗೂ ಭಯೋತ್ಪಾದಕರಿಗೂ ವ್ಯತ್ಯಾಸ ಏನೆನ್ನುವುದು ತಿಳಿದಿದೆ. ಖಾದರ್ ಮತ್ತು ಶಾರೀಕ್ (ಕುಕ್ಕರ್ ಬ್ಲಾಸ್ಟ್ ಆರೋಪಿ) ನಡುವೆ ವ್ಯತ್ಯಾಸ ಕಂಡುಹಿಡಿಯುವುದು ಗೊತ್ತಿದೆ’ ಎಂಬ ಧಾಟಿಯಲ್ಲಿ, ಮುಸಲ್ಮಾನ ಸಮುದಾಯದವರ ಬಗ್ಗೆ ಏನೋ ಚಾರಿಟಿ ರೀತಿಯ ಮಾತನಾಡಿದ್ದಾರೆ. ಈ ಧಾಟಿಯನ್ನು ಅಧಿವೇಶನದಲ್ಲಿ ಖಂಡಿಸಿದ ಬಗ್ಗೆ ಏನೂ ತಿಳಿದುಬರಲಿಲ್ಲ. ಸಿ.ಟಿ. ರವಿಯವರ ’ಧರ್ಮ-ಕರ್ಮ’ ಇಲ್ಲಿ ಅಗತ್ಯವಿಲ್ಲ, ಸಂವಿಧಾನ ಎಲ್ಲಾ ಪ್ರಜೆಗಳಿಗೂ ಸಮಾನ ಹಕ್ಕುಗಳನ್ನು ನೀಡಿದೆಯೆಂದು ಗಟ್ಟಿ ದನಿಯಲ್ಲಿ ವಿರೋಧ ಪಕ್ಷದವರೂ ಕೌಂಟರ್ ಮಾಡದೆ ಹೋದರು! ಇದೇ ಸಮಯದಲ್ಲಿ (ಭಾನುವಾರ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರಾದೇಶಿಕ ವಾರ್ಷಿಕ ಸಮಾವೇಶದಲ್ಲಿ) ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಆರೋಪಿ ಮತ್ತು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಅವರು ಕೋಮುಪ್ರಚೋದನೆಯ ಭಾಷಣ ಮಾಡುತ್ತಿದ್ದರು: “ಅವರು ಭಜರಂಗದಳ ಕಾರ್ಯಕರ್ತ ಹರ್ಷ, ಇತರ ಹಿಂದೂ ವೀರರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಚಾಕುವಿನಿಂದ ಇರಿದಿದ್ದಾರೆ. ಹಾಗಾಗಿ ನಾವು (ಹಿಂದೂಗಳು) ನಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ತರಕಾರಿಗಳನ್ನು ಕತ್ತರಿಸಲು ಬಳಸುವ ಚಾಕುಗಳನ್ನು ಕನಿಷ್ಠ ಚೂಪು ಮಾಡಿಕೊಂಡು ಇಟ್ಟುಕೊಳ್ಳಿ. ಯಾವಾಗ ಉಪಯೋಗಕ್ಕೆ ಬರುತ್ತವೆ ಹೇಳಲಾಗುವುದಿಲ್ಲ. ಸಮಯ ಬಂದಾಗ ವೈರಿಗಳ ತಲೆ ತೆಗೆಯಿರಿ” ಎಂದಿದ್ದಾರೆ. ಹೀಗೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ರಾಜಕೀಯ ಪಟುಗಳು ಮತಭ್ರಾಂತಿಯಿಂದ ದೇಶದ ಜನತೆಯ ನಡುವೆ ಕಂದಕಗಳನ್ನು ನಿರ್ಮಿಸುವ ಮಾತುಗಳನ್ನಾಡುತ್ತಿದ್ದಾರೆ. ಇದನ್ನು ಮೆಟ್ಟಿನಿಲ್ಲಬೇಕಾದ ವಿವೇಕ ಮುನ್ನಲೆಗೆ ಬರದಂತಹ ವಾತಾವರಣ ನಿರ್ಮಾಣವಾಗಿದ್ದು, ವರ್ಷದಿಂದ ವರ್ಷಕ್ಕೆ ಅಸಹನೀಯತೆ ಬೆಳೆಯುತ್ತಿದೆ. ಇಂತಹ ಅಸಹನೀಯ ಪರಿಸ್ಥಿತಿಯಲ್ಲಿ ಕರ್ನಾಟಕ 2023ಕ್ಕೆ ಮತ್ತೊಂದು ಚುನಾವಣೆಗೆ ಸಜ್ಜಾಗುತ್ತಿದೆ. ಈ ಕೋಮುವಿಷಮತೆಯನ್ನು ಮೆಟ್ಟಿನಿಲ್ಲುವ ಬಗ್ಗೆ ವಿರೋಧ ಪಕ್ಷಗಳಲ್ಲಿಯೂ ಸ್ಪಷ್ಟತೆಯ-ಒಗ್ಗಟ್ಟಿನ ಕೊರತೆ ಎದ್ದುಕಾಣುತ್ತಿದೆ. ಇದು ಅಧಿವೇಶನದ ಚರ್ಚೆಗಳಲ್ಲೂ ಪ್ರತಿಧ್ವನಿಸುತ್ತಿದೆ!

ಕುವೆಂಪು

ಇನ್ನು ಈ ಕೋಮು ವಿಷಮತೆ ಸಿನಿಮಾ, ಸಾಹಿತ್ಯ ಮತ್ತಿತರ ಕಲಾವಲಯಗಳನ್ನೂ ಬಿಟ್ಟಿಲ್ಲ. 2023ರ ಜನವರಿ ಮೊದಲ ವಾರದಲ್ಲಿ ಹಾವೇರಿಯಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ಸಂಘ ಪರಿವಾರದ ಕರಿನೆರಳು ಕಾಣಿಸಿಕೊಳ್ಳುತ್ತಿದೆ. ಮುಸಲ್ಮಾನ ಲೇಖಕ-ಲೇಖಕಿಯರನ್ನು ಕಡೆಗಣಿಸಿ, ಅವರ ಪ್ರತಿನಿಧಿತ್ವವನ್ನು ನಾಮಕಾವಸ್ಥೆಯೆಂಬಂತೆ ಸೇರಿಸಿ ಸಮ್ಮೇಳನ ನಡೆಸುತ್ತಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿವೆ. ’ನಿಮ್ಮೊಡನಿದ್ದೂ ನಿಮ್ಮಂತಾಗದೆ’ ಎಂಬ ನಿಸಾರ ಅಹಮದ್ ಅವರ ಕವಿವಾಣಿಯಂತೆ, ಮುಸಲ್ಮಾನರನ್ನು ಅನ್ಯಗೊಳಿಸುವ, ಎರಡನೇ ದರ್ಜೆಯ ನಾಗರಿಕರನ್ನಾಗಿಸುವ ಪ್ರಭುತ್ವದ ಹುನ್ನಾರಗಳನ್ನು ಪ್ರಶ್ನಿಸುವ ವೇದಿಕೆ ಸಾಹಿತ್ಯ ಸಮ್ಮೇಳನವಾಗಬೇಕಿತ್ತು. ಆದರೆ ಪ್ರಭುತ್ವವನ್ನು ತನ್ನ ಅಪರಾಧಗಳಲ್ಲಿ ಹುರಿದುಂಬಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಮುನ್ನಡೆಸುವ ಈ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಬಹುತ್ವದ ಮೌಲ್ಯಗಳು ನಶಿಸುತ್ತಿರುವ ಆಕಂಕಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ.

ಪ್ರತಿ ವರ್ಷ ಹಲವು ಚಾರಿತ್ರಿಕ ಘಟ್ಟದ ನೆನಪುಗಳನ್ನು ಮೆಲುಕು ಹಾಕುವಂತೆ ಈ ವರ್ಷವೂ ಕುವೆಂಪು ಜನ್ಮ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಬಿಗಡಾಯಿಸಿದ ಪರಿಸ್ಥಿತಿಯಲ್ಲಿ ಕುವೆಂಪುರಂತಹ ದಾರ್ಶನಿಕರು ಅಂದು ತೋರಿಸಿದ ದಾರಿಯ ಬಗ್ಗೆ ನಾವು ನಾಗರಿಕರು ಇನ್ನಷ್ಟು ಗಂಭೀರವಾಗುವುದು ಹೆಚ್ಚು ಉಚಿತ. ಆ ನೆಲೆಯಲ್ಲಿ ನಾಡಿನ ವಿವೇಕವನ್ನು ಉಳಿಸುವ ಕೈಂಕರ್ಯಕ್ಕೆ ನಾಗರಿಕರೇ ಮುಂದಾಗಬೇಕಿದೆ. ಚುನಾವಣೆಗಳಿಂದ ಕೋಮು ಧ್ರುವೀಕರಣ, ಸ್ವಜಾತಿ ಬೆಂಬಲ ಮುಂತಾದ ಸೋಂಕುಗಳನ್ನು ನಿವಾರಿಸಿ 23ರ ವಿಧಾನಸಭಾ ಚುನಾವಣೆ ಹಾಗೂ 24ರ ಲೋಕಸಭಾ ಚುನಾವಣೆಗಳಲ್ಲಿ ಸ್ವಚ್ಛತೆಯ ಕೆಲಸಕ್ಕೆ ಮುಂದಾಗಬೇಕಿದೆ. ಕುವೆಂಪು ಅವರ ಮತ್ತೊಂದು ಭಾಷಣ ’ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ’ಯಲ್ಲಿ ಕರೆಕೊಟ್ಟಂತೆಯೇ ಇಂದಿನ ಅಗತ್ಯಕ್ಕನುಗುಣವಾಗಿ ಮತ್ತು ಆತಂಕಗಳನ್ನು ಮೆಟ್ಟಿ ನಿಲ್ಲಲು ರಾಜಕೀಯ ಕ್ರಾಂತಿಗೆ ಕಹಳೆ ನಾಂದಿ ಮೊಳಗಬೇಕಿದೆ.


ಇದನ್ನೂ ಓದಿ: ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...