Homeಕರ್ನಾಟಕಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

- Advertisement -
- Advertisement -

“ನೂತನ ಪಿಂಚಣಿ ಯೋಜನೆ (ಎನ್‌ಪಿಸ್‌) ಕುರಿತು ಚುಕ್ಕಿ ಗುರುತಿನ ಪ್ರಶ್ನೆಯನ್ನು ಕೇಳಿದವರಿಗೆ ಸರ್ಕಾರ ಸಿದ್ಧ ಉತ್ತರವನ್ನು ಈವರೆಗೆ ನೀಡುತ್ತಾ ಬಂದಿದೆ. ಶಾಸಕ ರೇಣುಕಾಚಾರ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸುವ ಯೋಜನೆ ಇಲ್ಲ ಎಂದಿದ್ದಾರೆ. ಇದನ್ನು ಬದಿಗಿಟ್ಟು ಸದನದಲ್ಲಿ ಸರ್ಕಾರ ಚರ್ಚೆ ಮಾಡಬೇಕು” ಎಂದು ’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಒತ್ತಾಯಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಸಿದ್ಧ ಉತ್ತರವನ್ನು ಈಗ ನೀಡಿದ್ದಾರೆ. ಚರ್ಚೆ ಮಾಡುವುದಾಗಿಯೂ ಹೇಳಿದ್ದಾರೆ. ನಾವು ಅದಕ್ಕಾಗಿ ಕಾಯುತ್ತಿದ್ದೇವೆ. ಈ ಚರ್ಚೆ ಆದ ನಂತರ ಸದನದಲ್ಲಿ ಕೈಗೊಂಡ ನಿರ್ಧಾರದ ಆಧಾರದಲ್ಲಿ ನಮ್ಮ ಹೋರಾಟದ ನಿಲುವನ್ನು ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ.

“ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ” ಎಂಬ ಸರ್ಕಾರದ ನಿಲುವನ್ನು ಟೀಕಿಸಿದ ಅವರು, “ಆರ್ಥಿಕ ಹೊರೆಯಾಗುತ್ತದೆ ಎಂಬುದು ಸುಳ್ಳು. ಇಲ್ಲಿಯವರೆಗೆ ಎನ್‌ಪಿಎಸ್ ಜಾರಿಗೊಳಿಸದೆ ಒಪಿಎಸ್‌ ಅನ್ನೇ ಮುಂದುವರಿಸುತ್ತಿರುವ ಪಶ್ಚಿಮ ಬಂಗಾಳದ ಆರ್ಥಿಕ ಸ್ಥಿತಿ ಉತ್ತಮವಾಗಿರುವುದು ಹೇಗೆ? 2021- 22ರಲ್ಲಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಪ್ರಮಾಣ ಶೇ. 12.8ರಷ್ಟಿದೆ. ಕರ್ನಾಟಕದಲ್ಲಿ ಶೇ. 9.5ರಷ್ಟಿದೆ” ಎಂದು ವಿವರಿಸಿದರು.

“ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಾಂಡ್‌ ರಾಜ್ಯಗಳಂತೆ ಸರ್ಕಾರ ಚಿಂತನೆ ಮಾಡಬೇಕು. ಹಿಮಾಚಲ ಪ್ರದೇಶದಲ್ಲಿ ವೋಟ್ ಫಾರ್‌ ಒಪಿಎಸ್ ಅಭಿಯಾನ ಮಾಡಿದ್ದೆವು. ಸರ್ಕಾರ ಬದಲಾಗಲು ಕಾರಣವಾದೆವು. ಈಗ ಮೊದಲ ಕ್ಯಾಬಿನೇಟ್‌ನಲ್ಲಿಯೇ ಒಪಿಎಸ್ ಜಾರಿಗೊಳಿಸುವುದಾಗಿ ಸರ್ಕಾರ ಹೇಳಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ನೌಕರರ ಮತಗಳು ನಿರ್ಣಾಯಕವಾಗಲಿವೆ. ಒಂದು ಕ್ಷೇತ್ರದಲ್ಲಿ ಕನಿಷ್ಠ ಮೂರು ಸಾವಿರ ಮತಗಳು ಒಪಿಎಸ್‌ಗಾಗಿ ಬಿದ್ದರೆ, ಫಲಿತಾಂಶ ವ್ಯತಿರಿಕ್ತವಾಗಿರುತ್ತದೆ. ಈ ಎಚ್ಚರಿಕೆ ಆಡಳಿತರೂಢ ಪಕ್ಷಗಳಿಗೆ ಖಂಡಿತ ಇದೆ. ಹೀಗಾಗಿ ಸದನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಚರ್ಚೆ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಪ್ರಸ್ತುತ ಒಬ್ಬ ಮನುಷ್ಯನ ಜೀವಿತಾವಧಿ ಸರಾಸರಿ 72 ವರ್ಷಗಳು. 60 ವರ್ಷಕ್ಕೆ ನಾವು ನಿವೃತ್ತಿಯಾದರೆ 12 ವರ್ಷಗಳು ಮಾತ್ರ ಪಿಂಚಣಿಯನ್ನು ಸರ್ಕಾರ ಕೊಡಬೇಕಾಗುತ್ತದೆ. ಸರ್ಕಾರ ಮತ್ತು ಸಮಾಜಕ್ಕಾಗಿ ದುಡಿದ ವರ್ಗಕ್ಕೆ ಒಪಿಎಸ್‌ ನೀಡಲು ಸಾಧ್ಯವಿಲ್ಲವಾ? ಎಷ್ಟೋ ಮಂದಿ ನೌಕರರು ಈಗ 500, 1000 ಪಿಂಚಣಿ ಪಡೆಯುತ್ತಾ, ಇಳಿ ವಯಸ್ಸಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯುತ್ತಿದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚೆಗೆ ಗಂಗಾವತಿಗೆ ಹೋಗಿದ್ದೆ. ಅನ್ನದಾನಪ್ಪ ಎಂಬುವರ ನೋವಿನ ಕತೆ ಕೇಳಿ ಆತಂಕಗೊಂಡೆ. ಅವರು ಒಟ್ಟು 33 ವರ್ಷ ಸರ್ಕಾರಕ್ಕೆ ಸೇವೆ ಸಲ್ಲಿಸಿದ್ದಾರೆ. 2009ರಲ್ಲಿ ಪರ್ಮನೆಂಟ್ ಮಾಡಲಾಗುತ್ತದೆ. 13 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅವರಿಗೆ 548 ರೂಪಾಯಿ ಪಿಂಚಣಿ ನಿಗದಿಯಾಗುತ್ತದೆ. ಈ ಹಣದಲ್ಲಿ ಅವರು ಒಂದು ಗ್ಯಾಸ್ ಸಿಲಿಂಡರ್‌ ಕೂಡ ಖರೀದಿಸಲು ಸಾಧ್ಯವಿಲ್ಲ. ವಾರದ ಸಂತೆ ಖರ್ಚು, ಮನೆಯ ಬಾಡಿಗೆ ಕಟ್ಟಲು ಆಗುತ್ತದೆಯಾ? ಸರ್ಕಾರಿ ನೌಕರರು ಒತ್ತಡದ ಸೇವೆಯನ್ನು ಸಲ್ಲಿಸುತ್ತಾ ನಲವತ್ತು ವರ್ಷಕ್ಕೆ ಮಧುಮೇಹ, ರಕ್ತದೊತ್ತಡ ಮೊದಲಾದ ರೋಗಗಳಿಗೆ ತುತ್ತಾಗುತ್ತಾರೆ. ನಿವೃತ್ತಿಯಾದ ಬಳಿಕ ಕನಿಷ್ಠ ಮಾತ್ರೆಗಳನ್ನು ಖರೀದಿಸಲು ಸಾಧ್ಯವಾಗದ ಸ್ಥಿತಿಗೆ ಎನ್‌ಪಿಎಸ್ ತಂದಿಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

ಎನ್‌ಪಿಎಸ್‌ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ ಪ್ರತಿಕ್ರಿಯಿಸಿ, “ಸರ್ಕಾರಿ ನೌಕರರ ಸಮಸ್ಯೆಯ ಕುರಿತು ಚರ್ಚಿಸಬೇಕು ಎಂದು ನೂರಕ್ಕೂ ಹೆಚ್ಚು ಶಾಸಕರು ಆಗ್ರಹಿಸುತ್ತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಯವರು ನೀಡುವ ಮೌಖಿಕವಾದ ಉತ್ತರ ರೆಕಾರ್ಡ್ ಆಗುತ್ತದೆ. ಅವರ ಉತ್ತರದ ಬಳಿಕ ನಮ್ಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಒಂದು ಗಟ್ಟಿಯಾದ ಹೋರಾಟಕ್ಕೆ ನಾವು ಮುನ್ನುಡಿಯನ್ನು ಬರೆದಿದ್ದೇವೆ. ಹತ್ತುಗಳಿಂದ ಮಾಡುತ್ತಿರುವ ಅಹೋರಾತ್ರಿ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಎನ್‌ಪಿಎಸ್ ನೌಕರರ ಸಂಘದ ಸುಮಾರು 20 ಜನ ಮುಖಂಡರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ನಮ್ಮ ಸಂಧ್ಯಾಕಾಲದ ಬದುಕಿನ ಸವಾಲನ್ನು ತಿಳಿಸಿದ್ದೇವೆ. ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ಎನ್‌ಪಿಎಸ್ ರದ್ದತಿ ಮಾಡಲು ಹೋರಾಡುವುದಾಗಿ ತಾವು ನೀಡಿದ್ದ ಭರವಸೆಗೆ ಬದ್ಧರಾಗಿರಬೇಕೆಂದು ಕೋರಿದ್ದೇವೆ. ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದೇವೆ. ಅವರು ತಮ್ಮ ನಿಲುವನ್ನು ಬದಲಿಸಿಕೊಂಡು ನಮ್ಮ ಹೋರಾಟದ ಪರವಾಗಿ ಮಾತನಾಡಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...