Homeಕರ್ನಾಟಕಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

- Advertisement -
- Advertisement -

“ನೂತನ ಪಿಂಚಣಿ ಯೋಜನೆ (ಎನ್‌ಪಿಸ್‌) ಕುರಿತು ಚುಕ್ಕಿ ಗುರುತಿನ ಪ್ರಶ್ನೆಯನ್ನು ಕೇಳಿದವರಿಗೆ ಸರ್ಕಾರ ಸಿದ್ಧ ಉತ್ತರವನ್ನು ಈವರೆಗೆ ನೀಡುತ್ತಾ ಬಂದಿದೆ. ಶಾಸಕ ರೇಣುಕಾಚಾರ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸುವ ಯೋಜನೆ ಇಲ್ಲ ಎಂದಿದ್ದಾರೆ. ಇದನ್ನು ಬದಿಗಿಟ್ಟು ಸದನದಲ್ಲಿ ಸರ್ಕಾರ ಚರ್ಚೆ ಮಾಡಬೇಕು” ಎಂದು ’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಒತ್ತಾಯಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಸಿದ್ಧ ಉತ್ತರವನ್ನು ಈಗ ನೀಡಿದ್ದಾರೆ. ಚರ್ಚೆ ಮಾಡುವುದಾಗಿಯೂ ಹೇಳಿದ್ದಾರೆ. ನಾವು ಅದಕ್ಕಾಗಿ ಕಾಯುತ್ತಿದ್ದೇವೆ. ಈ ಚರ್ಚೆ ಆದ ನಂತರ ಸದನದಲ್ಲಿ ಕೈಗೊಂಡ ನಿರ್ಧಾರದ ಆಧಾರದಲ್ಲಿ ನಮ್ಮ ಹೋರಾಟದ ನಿಲುವನ್ನು ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ.

“ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ” ಎಂಬ ಸರ್ಕಾರದ ನಿಲುವನ್ನು ಟೀಕಿಸಿದ ಅವರು, “ಆರ್ಥಿಕ ಹೊರೆಯಾಗುತ್ತದೆ ಎಂಬುದು ಸುಳ್ಳು. ಇಲ್ಲಿಯವರೆಗೆ ಎನ್‌ಪಿಎಸ್ ಜಾರಿಗೊಳಿಸದೆ ಒಪಿಎಸ್‌ ಅನ್ನೇ ಮುಂದುವರಿಸುತ್ತಿರುವ ಪಶ್ಚಿಮ ಬಂಗಾಳದ ಆರ್ಥಿಕ ಸ್ಥಿತಿ ಉತ್ತಮವಾಗಿರುವುದು ಹೇಗೆ? 2021- 22ರಲ್ಲಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಪ್ರಮಾಣ ಶೇ. 12.8ರಷ್ಟಿದೆ. ಕರ್ನಾಟಕದಲ್ಲಿ ಶೇ. 9.5ರಷ್ಟಿದೆ” ಎಂದು ವಿವರಿಸಿದರು.

“ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಾಂಡ್‌ ರಾಜ್ಯಗಳಂತೆ ಸರ್ಕಾರ ಚಿಂತನೆ ಮಾಡಬೇಕು. ಹಿಮಾಚಲ ಪ್ರದೇಶದಲ್ಲಿ ವೋಟ್ ಫಾರ್‌ ಒಪಿಎಸ್ ಅಭಿಯಾನ ಮಾಡಿದ್ದೆವು. ಸರ್ಕಾರ ಬದಲಾಗಲು ಕಾರಣವಾದೆವು. ಈಗ ಮೊದಲ ಕ್ಯಾಬಿನೇಟ್‌ನಲ್ಲಿಯೇ ಒಪಿಎಸ್ ಜಾರಿಗೊಳಿಸುವುದಾಗಿ ಸರ್ಕಾರ ಹೇಳಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ನೌಕರರ ಮತಗಳು ನಿರ್ಣಾಯಕವಾಗಲಿವೆ. ಒಂದು ಕ್ಷೇತ್ರದಲ್ಲಿ ಕನಿಷ್ಠ ಮೂರು ಸಾವಿರ ಮತಗಳು ಒಪಿಎಸ್‌ಗಾಗಿ ಬಿದ್ದರೆ, ಫಲಿತಾಂಶ ವ್ಯತಿರಿಕ್ತವಾಗಿರುತ್ತದೆ. ಈ ಎಚ್ಚರಿಕೆ ಆಡಳಿತರೂಢ ಪಕ್ಷಗಳಿಗೆ ಖಂಡಿತ ಇದೆ. ಹೀಗಾಗಿ ಸದನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಚರ್ಚೆ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಪ್ರಸ್ತುತ ಒಬ್ಬ ಮನುಷ್ಯನ ಜೀವಿತಾವಧಿ ಸರಾಸರಿ 72 ವರ್ಷಗಳು. 60 ವರ್ಷಕ್ಕೆ ನಾವು ನಿವೃತ್ತಿಯಾದರೆ 12 ವರ್ಷಗಳು ಮಾತ್ರ ಪಿಂಚಣಿಯನ್ನು ಸರ್ಕಾರ ಕೊಡಬೇಕಾಗುತ್ತದೆ. ಸರ್ಕಾರ ಮತ್ತು ಸಮಾಜಕ್ಕಾಗಿ ದುಡಿದ ವರ್ಗಕ್ಕೆ ಒಪಿಎಸ್‌ ನೀಡಲು ಸಾಧ್ಯವಿಲ್ಲವಾ? ಎಷ್ಟೋ ಮಂದಿ ನೌಕರರು ಈಗ 500, 1000 ಪಿಂಚಣಿ ಪಡೆಯುತ್ತಾ, ಇಳಿ ವಯಸ್ಸಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯುತ್ತಿದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚೆಗೆ ಗಂಗಾವತಿಗೆ ಹೋಗಿದ್ದೆ. ಅನ್ನದಾನಪ್ಪ ಎಂಬುವರ ನೋವಿನ ಕತೆ ಕೇಳಿ ಆತಂಕಗೊಂಡೆ. ಅವರು ಒಟ್ಟು 33 ವರ್ಷ ಸರ್ಕಾರಕ್ಕೆ ಸೇವೆ ಸಲ್ಲಿಸಿದ್ದಾರೆ. 2009ರಲ್ಲಿ ಪರ್ಮನೆಂಟ್ ಮಾಡಲಾಗುತ್ತದೆ. 13 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅವರಿಗೆ 548 ರೂಪಾಯಿ ಪಿಂಚಣಿ ನಿಗದಿಯಾಗುತ್ತದೆ. ಈ ಹಣದಲ್ಲಿ ಅವರು ಒಂದು ಗ್ಯಾಸ್ ಸಿಲಿಂಡರ್‌ ಕೂಡ ಖರೀದಿಸಲು ಸಾಧ್ಯವಿಲ್ಲ. ವಾರದ ಸಂತೆ ಖರ್ಚು, ಮನೆಯ ಬಾಡಿಗೆ ಕಟ್ಟಲು ಆಗುತ್ತದೆಯಾ? ಸರ್ಕಾರಿ ನೌಕರರು ಒತ್ತಡದ ಸೇವೆಯನ್ನು ಸಲ್ಲಿಸುತ್ತಾ ನಲವತ್ತು ವರ್ಷಕ್ಕೆ ಮಧುಮೇಹ, ರಕ್ತದೊತ್ತಡ ಮೊದಲಾದ ರೋಗಗಳಿಗೆ ತುತ್ತಾಗುತ್ತಾರೆ. ನಿವೃತ್ತಿಯಾದ ಬಳಿಕ ಕನಿಷ್ಠ ಮಾತ್ರೆಗಳನ್ನು ಖರೀದಿಸಲು ಸಾಧ್ಯವಾಗದ ಸ್ಥಿತಿಗೆ ಎನ್‌ಪಿಎಸ್ ತಂದಿಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

ಎನ್‌ಪಿಎಸ್‌ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ ಪ್ರತಿಕ್ರಿಯಿಸಿ, “ಸರ್ಕಾರಿ ನೌಕರರ ಸಮಸ್ಯೆಯ ಕುರಿತು ಚರ್ಚಿಸಬೇಕು ಎಂದು ನೂರಕ್ಕೂ ಹೆಚ್ಚು ಶಾಸಕರು ಆಗ್ರಹಿಸುತ್ತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಯವರು ನೀಡುವ ಮೌಖಿಕವಾದ ಉತ್ತರ ರೆಕಾರ್ಡ್ ಆಗುತ್ತದೆ. ಅವರ ಉತ್ತರದ ಬಳಿಕ ನಮ್ಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಒಂದು ಗಟ್ಟಿಯಾದ ಹೋರಾಟಕ್ಕೆ ನಾವು ಮುನ್ನುಡಿಯನ್ನು ಬರೆದಿದ್ದೇವೆ. ಹತ್ತುಗಳಿಂದ ಮಾಡುತ್ತಿರುವ ಅಹೋರಾತ್ರಿ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಎನ್‌ಪಿಎಸ್ ನೌಕರರ ಸಂಘದ ಸುಮಾರು 20 ಜನ ಮುಖಂಡರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ನಮ್ಮ ಸಂಧ್ಯಾಕಾಲದ ಬದುಕಿನ ಸವಾಲನ್ನು ತಿಳಿಸಿದ್ದೇವೆ. ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ಎನ್‌ಪಿಎಸ್ ರದ್ದತಿ ಮಾಡಲು ಹೋರಾಡುವುದಾಗಿ ತಾವು ನೀಡಿದ್ದ ಭರವಸೆಗೆ ಬದ್ಧರಾಗಿರಬೇಕೆಂದು ಕೋರಿದ್ದೇವೆ. ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದೇವೆ. ಅವರು ತಮ್ಮ ನಿಲುವನ್ನು ಬದಲಿಸಿಕೊಂಡು ನಮ್ಮ ಹೋರಾಟದ ಪರವಾಗಿ ಮಾತನಾಡಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...