Homeಅಂತರಾಷ್ಟ್ರೀಯಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವೆಂದು ಕಾಣುತ್ತಿದೆ. ಇದರಿಂದ ಜಗತ್ತಿನ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಈ ಕುರಿತು ಮೋದಿ ಸರ್ಕಾರ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವಾಗುತ್ತಿದೆ. ಮೊದಲು ಈ ಸಿರಪ್ ಸೇವನೆಯಿಂದ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೀಡಾಗಿದ್ದರು ಮತ್ತು ಈಗ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ. ಮೋದಿ ಸರ್ಕಾರವು ಭಾರತವನ್ನು ಜಗತ್ತಿಗೆ ಔಷಧಾಲಯ ಎಂದು ಹೆಮ್ಮೆಪಡುವುದನ್ನು ನಿಲ್ಲಿಸಬೇಕು ಮತ್ತು ಈ ತಯಾರಕ ಕಂಪನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವರ್ಷದ ಸೆಪ್ಟಂಬರ್ 29 ರಂದು ಕೆಮ್ಮಿನ ಸಿರಪ್ ಸೇವಿಸಿದ ಗ್ಯಾಂಬಿಯಾದ 66 ಮಕ್ಕಳು ಸಾವನಪ್ಪಿದ್ದರು. ಈ ಕುರಿತು ಡಬ್ಲುಎಚ್‌ಓ ಭಾರತ ಸರ್ಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು. ಹಾಗಾಗಿ ಹರಿಯಾಣ ಮೂಲಕ 4 ಔಷಧ ಕಂಪನಿಗಳ ಮೇಲೆ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.

ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯು ಕೆಮ್ಮಿನ ಸಿರಪ್ ಅನ್ನು ತಯಾರಿಸಿತ್ತು. ಅದನ್ನು ಸೇವಿಸಿದ ಗ್ಯಾಂಬಿಯಾದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು. ಈ ಸಿರಪ್‌ಗಳನ್ನು ಗ್ಯಾಂಬಿಯಾ ದೇಶಕ್ಕೆ ಮಾತ್ರ ರಫ್ತು ಮಾಡಲಾಗಿದೆಯೆ ಅಥವಾ ಇತರ ದೇಶಗಳಿಗೂ ಕಳುಹಿಸಲಾಗಿದೆಯೇ ಎಂಬುದರ ಕುರಿತು ಕಂಪನಿ ಇನ್ನು ಮಾಹಿತಿ ನೀಡಿಲ್ಲ. ಈ ಕುರಿತು ಎಚ್ಚರಿಕೆ ವಹಿಸುವಂತೆ ಇತರ ದೇಶಗಳಿಗೆ ಡಬ್ಲುಎಚ್‌ಓ ತಿಳಿಸಿತ್ತು. ಆದರೆ ಅದಾದ ಎರಡು ತಿಂಗಳ ನಂತರ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಸುದ್ದಿಗಾರರೊಂದಿಗೆ ಮಾತನಾಡಿ, “ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಔಷಧಿಗಳಾಗಿವೆ” ಎಂದು ಹೇಳಿದ್ದರು. ಈ ನಾಲ್ಕೂ ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಸ್ಟೈಕೋಲ್ ಮತ್ತು ಎಥಿಲೀನ್ ಗೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ. ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಇದುವರೆಗೂ ಡಬ್ಲುಎಚ್‌ಓ ಗ್ಯಾರಂಟಿ ನೀಡಿಲ್ಲ” ಎಂದು ಆರೋಪಿಸಿದ್ದರು.

ಇದನ್ನೂ ಓದಿ; ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...