Homeಕರ್ನಾಟಕಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

- Advertisement -
- Advertisement -

ಕುವೆಂಪುರವರನ್ನು ಅವಮಾನಿಸಿದ್ದ ರೋಹಿತ್ ಚಕ್ರತೀರ್ಥರವರು ತೀರ್ಥಹಳ್ಳಿಯಲ್ಲಿ ನಡೆದ ‘ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಪ್ರತಿಭಟನೆಗಳು ನಡೆದಿದ್ದವು. ವಿರೋಧದ ನಡುವೆಯೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಹಿತ್ ಚಕ್ರತೀರ್ಥರವರು ತಮ್ಮ ಉಪನ್ಯಾಸದಲ್ಲಿ “ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು” ಎಂದು ಉಲ್ಲೇಖಿಸಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

“ವೇದ, ಪುರಾಣಗಳನ್ನು ರಾಷ್ಟ್ರಕವಿ ಕುವೆಂಪು ವಿರೋಧಿಸಿರಲಿಲ್ಲ. ವರ್ಣಾಶ್ರಮ ಪದ್ಧತಿಯನ್ನು ಅವರು ಒಪ್ಪಿ ಬೆಂಬಲಿಸಿದ್ದರು. ವರ್ಣಾಶ್ರಮ ಪದ್ಧತಿ ಧಾರ್ಮಿಕತೆಗೆ ಪೂರಕವಾಗಿದೆ. ಸಂಸ್ಕಾರ, ಸಂಸ್ಕೃತಿಗಳನ್ನು ಒಳಗೊಳ್ಳದ ಕುಟುಂಬಗಳು ಸುಡುಗಾಡಿಗಿಂತಲೂ ಕೀಳು ಎಂದು ಕುವೆಂಪು ಪ್ರತಿಪಾದಿಸಿದ್ದರು” ಎಂಬ ಚಕ್ರತೀರ್ಥರ ಭಾಷಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಲೇಖಕ ಮತ್ತು ವ್ಯಂಗ್ಯ ಚಿತ್ರಕಾರ ಪಂಜು ಗಂಗೊಳ್ಳಿಯವರು ರೋಹಿತ್ ಚಕ್ರತೀರ್ಥರ ಭಾಷಣವನ್ನು ಖಂಡಿಸಿ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸುಳ್ಳುಬುರುಕನೊಬ್ಬ ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು ಎಂದು ಹೇಳಿದ್ದನಂತೆ. ಆ ಕಾರ್ಯಕ್ರಮದಲ್ಲಿದ್ದ ಯಾರಾದರೂ ಅದನ್ನು ಅಲ್ಲಿಯೇ ವಿರೋಧಿಸಿದ್ದರೇ ಇಲ್ಲವೋ ತಿಳಿಯದು. ಆದರೆ, ವರ್ಣಾಶ್ರಮ ಪದ್ಧತಿ ಬಗ್ಗೆ ಕುವೆಂಪುರವರ ಅಭಿಪ್ರಾಯವನ್ನು ಕೆ.ಪಿ.ನಟರಾಜ್ ರವರು ಇಲ್ಲಿ ಹಂಚಿಕೊಂಡಿದ್ದಾರೆ. “ವಿಶ್ವ ಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆ ಸಂಪಾದಿಸಿ, “ಮನುಷ್ಯಜಾತಿ ತಾನೊಂದೆ ವಲಂ” ಎಂಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು. ವರ್ಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ-ಕ್ಷತ್ರಿಯ, ವೈಶ್ಯ-ಶೂದ್ರ, ಅಂತ್ಯಜ, ಷಿಯಾ-ಸುನ್ನಿ, ಕ್ಯಾಥೊಲಿಕ್- ಪ್ರಾಟೆಸ್ಟಂಟ್, ಸಿಕ್-ನಿರಂಕಾರಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು” ಎಂದು ಕುವೆಂಪು ಹೇಳಿದ್ದರು ಎಂದು ಬರೆದಿದ್ದಾರೆ.

ಮುಂದುವರೆದು, ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು.
ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
ಮತ ಗುಂಪು ಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒಂದು ಮತಕ್ಕೆ ಸೇರದೆ, ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪು ಕಟ್ಟಿ ಜಗಳ ಹಚ್ಚುವಂತಾಗಬಾರದು. ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂದಿದ್ದಾರೆ.

ನಾನು ಹಿಂದೂ ಅಲ್ಲ – ಕುವೆಂಪು

“ಹಾಗೆ ನೋಡಿದರೆ ನಾನು ಹಿಂದೂ ಅಂತ ಹೇಳಿಕೊಳ್ಳೋದೆ ಇಲ್ಲ. ನಾನು ಹಿಂದೂ ಅಲ್ಲ. ಹಿಂದೂ ಅಂದರೆ ಗಂಗಾ-ಗಾಯತ್ರೀ-ಗೋವು ಇವು ಪವಿತ್ರ ಅಂತ ಭಾವಿಸೋದು. ಗಂಗಾ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಕೂಡ ಪವಿತ್ರ ಅಲ್ಲವೇ? ಗಾಯತ್ರಿ ಒಂದು ಪ್ರಾರ್ಥನೆ ಆದರೆ ನಾನು ಹಾಡೋ ಪದ್ಯಾನೂ ಗಾಯತ್ರೀನೇಃ ಇನ್ನು ಗೋವು, ಕಡಿಬಾರದು ಅನ್ನೋದಾದ್ರೆ ಅದೊಂದೇ ಪ್ರಾಣೀನಾ? ಬೇರೆ ಪ್ರಾಣಿಗಳೇನು ಪಾಪ ಮಾಡಿದ್ದಾವೆ? ಅವೂ ಅಷ್ಟೇ ಮುಖ್ಯ. ಪೂಜೆ, ಪುನಸ್ಕಾರ, ವಿಧಿ ಇಂಥವುಗಳನ್ನು ಮಾಡೋರು ಹಿಂದುಗಳಾದರೆ, ಇದಾವುದನ್ನೂ ನಾನೂ ಮಾಡೋದಿಲ್ಲ. ನೀವು ಹೇಳುವ ಹಿಂದುವಿನ ಯಾವ ಲಕ್ಷಣಗಳೂ ನನ್ನಲ್ಲಿಲ್ಲ” ಎಂಬ ಕುವೆಂಪುರವರ ಬರಹ ಇದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗುತ್ತಿದೆ.

ಧರಣಿಯ ಅಮರರ ಧನದಿ ಸಲಹಿದ
ಕರಿತುರಗ ಮೊದಲಾದ ದಳವು
ಉಬ್ಬರದಿ ಹೆಚ್ಚಿಹುದು ಅರಿನೃಪಾಲರ ಯುದ್ಧಪರಿಯಂತ
ಜರಿದು ನಸಿವುದು, ವಾಹಿನಿಗೆ ಮಲೆತ
ಉರಿಮಳಲ ಕಟ್ಟೆಯವೋಲ್ ಆದನರಿದ
ಅರಸುಗಳು ವರ್ಣೋತ್ತಮಠ ದೆಸೆಗೆ ಅಂಜಬೇಕೆಂದ

ಇದರ ಅರ್ಥ ಅರಸನಾದವನು ಯಾವಾಗಲೂ ವರ್ಣೋತ್ತಮರಿಗೆ ಹೆದರಿಕೊಂಡಿರಬೇಕು ಎಂಬುದು. ಒಂದು ವೇಳೆ ಅವನೇನಾದರೂ ಅವರ ವಿರೋಧ ಮಾಡಿಕೊಂಡರೆ ಪ್ರವಾಹಕ್ಕೆ ಕೊಚ್ಚಿ ಹೋಗುವ ಮಳಲ ಕಟ್ಟೆಯಂತೆ ಅವರ ಸ್ಥಿತಿ. ನಾನು ಸುಮ್ಮನೆ ಅಲ್ಲಿ ಇಲ್ಲಿ ಒಂದೆರಡು ಉದಾಹರಣೆಗಳನ್ನು ಹೇಳಿದ್ದೇನೆ ಅಷ್ಟೆ. ಆದರೆ ಇಂಥದ್ದು ನಮ್ಮಲ್ಲಿ ರಾಶಿರಾಶಿಯಾಗಿದೆ. ಕೆಲವು ದಿನಗಳ ಹಿಂದೆ ಶ್ರೀ ಬಸವಲಿಂಗಪ್ಪನವರು ‘ಬೂಸ’ ಎಂದು ಹೇಳಿದರಲ್ಲ; ಇದೆಲ್ಲಾ ಆ ಬೂಸಾಕ್ಕೆ ಸೇರುತ್ತದೆ. ಯಾರೋ ಒಬ್ಬರು ಕೇಳಿದರು, ಕುಮಾರವ್ಯಾಸ ಭಾರತಕ್ಕೆ ನೀವೂ ಒಬ್ಬರು ಸಂಪಾದಕರು, ಇದನ್ನೆಲ್ಲಾ ಸೇರಿಸಿಬಿಟ್ಟಿದ್ದೀರಲ್ಲಾ ಎಂದು, ನಮ್ಮ ದೃಷ್ಟಿ academic ಎಂದು ಹೇಳುತ್ತಾರಲ್ಲ ಆ ತರಹದ್ದು. ನಾಳೆ ನೀವು ಯಾರಾದರೂ ಇದನ್ನು ಪಠ್ಯಪುಸ್ತಕವಾಗಿ ಮಾಡಬೇಕಾದರೆ ಇದನ್ನೆಲ್ಲಾ ತೆಗೆದುಬಿಟ್ಟು ನಿಜವಾದ ಕಾವ್ಯದ ಅಂಶ ಏನಿದೆಯೊ ಅದನ್ನು ಮಾತ್ರ ಉಳಿಸಬೇಕಾಗುತ್ತದೆ – ಹೀಗೆ ಹೇಳಿದವರು ಕುವೆಂಪು.. ಎಂದು ಪ್ರಸನ್ನ ಲಕ್ಷ್ಮೀಪುರರವರು ಪೋಸ್ಟ್ ಮಾಡಿದ್ದಾರೆ.

ಕುವೆಂಪುವನ್ನು ಅವಮಾನಿಸುವ ಅತ್ಯುತ್ತಮ ಉಪಾಯವೆಂದರೆ ಕುವೆಂಪು ನಿಂದಕನಿಂದ, ಕುವೆಂಪು ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಇಲ್ಲದವನಿಂದ, ಕುವೆಂಪು ಚಿಂತನೆಯನ್ನು ಅಪಹಾಸ್ಯ ಮಾಡುವವನಿಂದ (ವಿರೋಧ, ಟೀಕೆ, ವಿಮರ್ಶೆಯಲ್ಲ; ವಿರೋಧ, ಟೀಕೆ, ವಿಮರ್ಶೆ ಯಾರೂ ಮಾಡಬಹುದು. ಅದು ತಪ್ಪಲ್ಲ. ಯಾರೂ ವಿಮರ್ಶಾತೀತರಲ್ಲ) ಕುವೆಂಪು ಬಗ್ಗೆ ಭಾಷಣ ಮಾಡಿಸುವುದು.
ಇಂತಹ ಒಂದು ಕಾರ್ಯಕ್ರಮ ಕುವೆಂಪು ಊರಿನಲ್ಲಿಯೇ ನಡೆಯಬೇಕೇ !!? ತೀರ್ಥಹಳ್ಳಿ ಯಾಕೆ ಹೀಗಾಯಿತು?!! ಎಂದು ಚಿಂತಹ ಶ್ರೀನಿವಾಸ ಕಾರ್ಕಳರವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...