Homeಕರ್ನಾಟಕಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

- Advertisement -
- Advertisement -

ಕುವೆಂಪುರವರನ್ನು ಅವಮಾನಿಸಿದ್ದ ರೋಹಿತ್ ಚಕ್ರತೀರ್ಥರವರು ತೀರ್ಥಹಳ್ಳಿಯಲ್ಲಿ ನಡೆದ ‘ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಪ್ರತಿಭಟನೆಗಳು ನಡೆದಿದ್ದವು. ವಿರೋಧದ ನಡುವೆಯೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಹಿತ್ ಚಕ್ರತೀರ್ಥರವರು ತಮ್ಮ ಉಪನ್ಯಾಸದಲ್ಲಿ “ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು” ಎಂದು ಉಲ್ಲೇಖಿಸಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

“ವೇದ, ಪುರಾಣಗಳನ್ನು ರಾಷ್ಟ್ರಕವಿ ಕುವೆಂಪು ವಿರೋಧಿಸಿರಲಿಲ್ಲ. ವರ್ಣಾಶ್ರಮ ಪದ್ಧತಿಯನ್ನು ಅವರು ಒಪ್ಪಿ ಬೆಂಬಲಿಸಿದ್ದರು. ವರ್ಣಾಶ್ರಮ ಪದ್ಧತಿ ಧಾರ್ಮಿಕತೆಗೆ ಪೂರಕವಾಗಿದೆ. ಸಂಸ್ಕಾರ, ಸಂಸ್ಕೃತಿಗಳನ್ನು ಒಳಗೊಳ್ಳದ ಕುಟುಂಬಗಳು ಸುಡುಗಾಡಿಗಿಂತಲೂ ಕೀಳು ಎಂದು ಕುವೆಂಪು ಪ್ರತಿಪಾದಿಸಿದ್ದರು” ಎಂಬ ಚಕ್ರತೀರ್ಥರ ಭಾಷಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಲೇಖಕ ಮತ್ತು ವ್ಯಂಗ್ಯ ಚಿತ್ರಕಾರ ಪಂಜು ಗಂಗೊಳ್ಳಿಯವರು ರೋಹಿತ್ ಚಕ್ರತೀರ್ಥರ ಭಾಷಣವನ್ನು ಖಂಡಿಸಿ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸುಳ್ಳುಬುರುಕನೊಬ್ಬ ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು ಎಂದು ಹೇಳಿದ್ದನಂತೆ. ಆ ಕಾರ್ಯಕ್ರಮದಲ್ಲಿದ್ದ ಯಾರಾದರೂ ಅದನ್ನು ಅಲ್ಲಿಯೇ ವಿರೋಧಿಸಿದ್ದರೇ ಇಲ್ಲವೋ ತಿಳಿಯದು. ಆದರೆ, ವರ್ಣಾಶ್ರಮ ಪದ್ಧತಿ ಬಗ್ಗೆ ಕುವೆಂಪುರವರ ಅಭಿಪ್ರಾಯವನ್ನು ಕೆ.ಪಿ.ನಟರಾಜ್ ರವರು ಇಲ್ಲಿ ಹಂಚಿಕೊಂಡಿದ್ದಾರೆ. “ವಿಶ್ವ ಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆ ಸಂಪಾದಿಸಿ, “ಮನುಷ್ಯಜಾತಿ ತಾನೊಂದೆ ವಲಂ” ಎಂಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು. ವರ್ಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ-ಕ್ಷತ್ರಿಯ, ವೈಶ್ಯ-ಶೂದ್ರ, ಅಂತ್ಯಜ, ಷಿಯಾ-ಸುನ್ನಿ, ಕ್ಯಾಥೊಲಿಕ್- ಪ್ರಾಟೆಸ್ಟಂಟ್, ಸಿಕ್-ನಿರಂಕಾರಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು” ಎಂದು ಕುವೆಂಪು ಹೇಳಿದ್ದರು ಎಂದು ಬರೆದಿದ್ದಾರೆ.

ಮುಂದುವರೆದು, ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು.
ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
ಮತ ಗುಂಪು ಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒಂದು ಮತಕ್ಕೆ ಸೇರದೆ, ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪು ಕಟ್ಟಿ ಜಗಳ ಹಚ್ಚುವಂತಾಗಬಾರದು. ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂದಿದ್ದಾರೆ.

ನಾನು ಹಿಂದೂ ಅಲ್ಲ – ಕುವೆಂಪು

“ಹಾಗೆ ನೋಡಿದರೆ ನಾನು ಹಿಂದೂ ಅಂತ ಹೇಳಿಕೊಳ್ಳೋದೆ ಇಲ್ಲ. ನಾನು ಹಿಂದೂ ಅಲ್ಲ. ಹಿಂದೂ ಅಂದರೆ ಗಂಗಾ-ಗಾಯತ್ರೀ-ಗೋವು ಇವು ಪವಿತ್ರ ಅಂತ ಭಾವಿಸೋದು. ಗಂಗಾ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಕೂಡ ಪವಿತ್ರ ಅಲ್ಲವೇ? ಗಾಯತ್ರಿ ಒಂದು ಪ್ರಾರ್ಥನೆ ಆದರೆ ನಾನು ಹಾಡೋ ಪದ್ಯಾನೂ ಗಾಯತ್ರೀನೇಃ ಇನ್ನು ಗೋವು, ಕಡಿಬಾರದು ಅನ್ನೋದಾದ್ರೆ ಅದೊಂದೇ ಪ್ರಾಣೀನಾ? ಬೇರೆ ಪ್ರಾಣಿಗಳೇನು ಪಾಪ ಮಾಡಿದ್ದಾವೆ? ಅವೂ ಅಷ್ಟೇ ಮುಖ್ಯ. ಪೂಜೆ, ಪುನಸ್ಕಾರ, ವಿಧಿ ಇಂಥವುಗಳನ್ನು ಮಾಡೋರು ಹಿಂದುಗಳಾದರೆ, ಇದಾವುದನ್ನೂ ನಾನೂ ಮಾಡೋದಿಲ್ಲ. ನೀವು ಹೇಳುವ ಹಿಂದುವಿನ ಯಾವ ಲಕ್ಷಣಗಳೂ ನನ್ನಲ್ಲಿಲ್ಲ” ಎಂಬ ಕುವೆಂಪುರವರ ಬರಹ ಇದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗುತ್ತಿದೆ.

ಧರಣಿಯ ಅಮರರ ಧನದಿ ಸಲಹಿದ
ಕರಿತುರಗ ಮೊದಲಾದ ದಳವು
ಉಬ್ಬರದಿ ಹೆಚ್ಚಿಹುದು ಅರಿನೃಪಾಲರ ಯುದ್ಧಪರಿಯಂತ
ಜರಿದು ನಸಿವುದು, ವಾಹಿನಿಗೆ ಮಲೆತ
ಉರಿಮಳಲ ಕಟ್ಟೆಯವೋಲ್ ಆದನರಿದ
ಅರಸುಗಳು ವರ್ಣೋತ್ತಮಠ ದೆಸೆಗೆ ಅಂಜಬೇಕೆಂದ

ಇದರ ಅರ್ಥ ಅರಸನಾದವನು ಯಾವಾಗಲೂ ವರ್ಣೋತ್ತಮರಿಗೆ ಹೆದರಿಕೊಂಡಿರಬೇಕು ಎಂಬುದು. ಒಂದು ವೇಳೆ ಅವನೇನಾದರೂ ಅವರ ವಿರೋಧ ಮಾಡಿಕೊಂಡರೆ ಪ್ರವಾಹಕ್ಕೆ ಕೊಚ್ಚಿ ಹೋಗುವ ಮಳಲ ಕಟ್ಟೆಯಂತೆ ಅವರ ಸ್ಥಿತಿ. ನಾನು ಸುಮ್ಮನೆ ಅಲ್ಲಿ ಇಲ್ಲಿ ಒಂದೆರಡು ಉದಾಹರಣೆಗಳನ್ನು ಹೇಳಿದ್ದೇನೆ ಅಷ್ಟೆ. ಆದರೆ ಇಂಥದ್ದು ನಮ್ಮಲ್ಲಿ ರಾಶಿರಾಶಿಯಾಗಿದೆ. ಕೆಲವು ದಿನಗಳ ಹಿಂದೆ ಶ್ರೀ ಬಸವಲಿಂಗಪ್ಪನವರು ‘ಬೂಸ’ ಎಂದು ಹೇಳಿದರಲ್ಲ; ಇದೆಲ್ಲಾ ಆ ಬೂಸಾಕ್ಕೆ ಸೇರುತ್ತದೆ. ಯಾರೋ ಒಬ್ಬರು ಕೇಳಿದರು, ಕುಮಾರವ್ಯಾಸ ಭಾರತಕ್ಕೆ ನೀವೂ ಒಬ್ಬರು ಸಂಪಾದಕರು, ಇದನ್ನೆಲ್ಲಾ ಸೇರಿಸಿಬಿಟ್ಟಿದ್ದೀರಲ್ಲಾ ಎಂದು, ನಮ್ಮ ದೃಷ್ಟಿ academic ಎಂದು ಹೇಳುತ್ತಾರಲ್ಲ ಆ ತರಹದ್ದು. ನಾಳೆ ನೀವು ಯಾರಾದರೂ ಇದನ್ನು ಪಠ್ಯಪುಸ್ತಕವಾಗಿ ಮಾಡಬೇಕಾದರೆ ಇದನ್ನೆಲ್ಲಾ ತೆಗೆದುಬಿಟ್ಟು ನಿಜವಾದ ಕಾವ್ಯದ ಅಂಶ ಏನಿದೆಯೊ ಅದನ್ನು ಮಾತ್ರ ಉಳಿಸಬೇಕಾಗುತ್ತದೆ – ಹೀಗೆ ಹೇಳಿದವರು ಕುವೆಂಪು.. ಎಂದು ಪ್ರಸನ್ನ ಲಕ್ಷ್ಮೀಪುರರವರು ಪೋಸ್ಟ್ ಮಾಡಿದ್ದಾರೆ.

ಕುವೆಂಪುವನ್ನು ಅವಮಾನಿಸುವ ಅತ್ಯುತ್ತಮ ಉಪಾಯವೆಂದರೆ ಕುವೆಂಪು ನಿಂದಕನಿಂದ, ಕುವೆಂಪು ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಇಲ್ಲದವನಿಂದ, ಕುವೆಂಪು ಚಿಂತನೆಯನ್ನು ಅಪಹಾಸ್ಯ ಮಾಡುವವನಿಂದ (ವಿರೋಧ, ಟೀಕೆ, ವಿಮರ್ಶೆಯಲ್ಲ; ವಿರೋಧ, ಟೀಕೆ, ವಿಮರ್ಶೆ ಯಾರೂ ಮಾಡಬಹುದು. ಅದು ತಪ್ಪಲ್ಲ. ಯಾರೂ ವಿಮರ್ಶಾತೀತರಲ್ಲ) ಕುವೆಂಪು ಬಗ್ಗೆ ಭಾಷಣ ಮಾಡಿಸುವುದು.
ಇಂತಹ ಒಂದು ಕಾರ್ಯಕ್ರಮ ಕುವೆಂಪು ಊರಿನಲ್ಲಿಯೇ ನಡೆಯಬೇಕೇ !!? ತೀರ್ಥಹಳ್ಳಿ ಯಾಕೆ ಹೀಗಾಯಿತು?!! ಎಂದು ಚಿಂತಹ ಶ್ರೀನಿವಾಸ ಕಾರ್ಕಳರವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...