Homeಕರ್ನಾಟಕಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದನ್ನು ಖಂಡಿಸಿ ಸಮ್ಮೇಳನದ ಕವಿಗೋಷ್ಟಿಯಲ್ಲಿ ಭಾಗವಹಿಸುವುದಿಲ್ಲ ಎಂದು ಯುವ ಬರಹಗಾರ ಚಾಂದ್ ಪಾಷ ಘೋಷಿಸಿದ್ದಾರೆ.

ಮೂರನೇ ಕವಿಗೋಷ್ಟಿಯಲ್ಲಿ ಕವನ ವಾಚಿಸಲು ಚಾಂದ್ ಪಾಷ ಎನ್ ಎಸ್‌ರವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮೇಳನದ ರೀತಿ ನೀತಿ, ಸಮ್ಮೇಳನಾಧ್ಯಕ್ಷರ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು ಗೋಷ್ಠಿಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, “ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುವ ಪ್ರಜ್ಞೆ. ಅದೊಂದು ಜಾತಿ, ಧರ್ಮವನ್ನು ಪ್ರತಿನಿಧಿಸುವ ಮತ್ತು ಧರ್ಮದ ವಿಶೇಷಣವನ್ನು ಹೊತ್ತು ಮೆರೆಸುವ ಧಾರ್ಮಿಕ ಕೇಂದ್ರವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಸಂಪೂರ್ಣವಾಗಿ ಜಾತಿ ಮತ್ತು ಧರ್ಮ ಕೇಂದ್ರಿತ ಹಾಗೂ ಪುರುಷ ಪ್ರಧಾನತೆಯನ್ನೆ ಪ್ರತಿಪಾದಿಸುವ ಮನುಸಂಸ್ಕೃತಿಯನ್ನು ಚಲಾವಣೆಗೆ ತರಲು ಹಾತೊರೆಯುತ್ತಿರುವುದು ದುರಂತವೇ ಸರಿ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡು ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, “ಸರ್ವ ಜನಾಂಗದ ಶಾಂತಿಯ ತೋಟ”ಕ್ಕೆ ಬೆಂಕಿ ಹಚ್ಚಿದ ಹಾಗಿದೆ. ಹಾವೇರಿಯಂತಹ ಸಾಮರಸ್ಯ ಉಳ್ಳ ಸ್ಥಳದಲ್ಲಿ ನಡೆಯುವ ಸಮ್ಮೇಳನವು ದಲಿತ ಮತ್ತು ಮುಸ್ಲಿಂ ಸಮುದಾಯದ ಬರಹಗಾರನ್ನು ವ್ಯವಸ್ಥತವಾಗಿ ಹೊರಗಿಟ್ಟಿದ್ದು, ಉಡುಪಿ ಮಠದಿಂದ ಕನಕದಾಸನನ್ನು ಹೊರಗಿಟ್ಟ ಹಾಗೆಯೇ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡೆ ಇಲ್ಲ. ವಿಶ್ವಕ್ಕೆ ವಿಶ್ವಮಾನವತ್ವ ಸಂದೇಶ ಸಾರಿದೆ ಕುವೆಂಪು ನೆಲದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯವನ್ನು ಹಬ್ಬಿಸುತ್ತಿರುವುದು, ಸರ್ಕಾರಿ ಶಾಲೆಗಳ ಸ್ಥಿತಿ ಗತಿ…. ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಕೂಡ ಸಮ್ಮೇಳನದಲ್ಲಿ ಇದರ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ” ಎಂದಿದ್ದಾರೆ.

ಇಂಥ ದುರಿತ ಕಾಲದಲ್ಲಿ ಸಾಮರಸ್ಯವನ್ನು ಹಬ್ಬಿಸಬೇಕೆ ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. “ಹಿಂದಿ ಭಾರತದ ರಾಷ್ಟ್ರೀಯ ಭಾಷೆ” ಎಂದು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡರಂಗೇಗೌಡರು ಸಂದರ್ಶನದಲ್ಲಿ ಹೇಳಿದ ಮಾತಿದು. ಇಂಥ ಕನ್ನಡ ಭಾಷಾ ವಿರೋಧಿಯನ್ನು ಅಧ್ಯಕ್ಷ ಸ್ಥಾನದಲ್ಲಿರಿಸುವ ಸಮ್ಮೇಳನದಲ್ಲಿ ಆಹ್ವಾನಿತ ಕವಿಯಾಗಿರುವ ನಾನು ಖಂಡಿತವಾಗಿಯು ಕವಿತೆ ಓದಲಾರೆ, ಭಾಗವಹಿಸಿಲಾರೆ. ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕದ ಹಾಗೆಯೇ ಇದೆ. ಅಷ್ಟಕ್ಕೂ ಷರೀಫನನ್ನು ಹೊರಗಿಟ್ಟಿದ್ದನ್ನೆ ಗುರು ಗೋವಿಂದ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...