Homeಕರ್ನಾಟಕಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದನ್ನು ಖಂಡಿಸಿ ಸಮ್ಮೇಳನದ ಕವಿಗೋಷ್ಟಿಯಲ್ಲಿ ಭಾಗವಹಿಸುವುದಿಲ್ಲ ಎಂದು ಯುವ ಬರಹಗಾರ ಚಾಂದ್ ಪಾಷ ಘೋಷಿಸಿದ್ದಾರೆ.

ಮೂರನೇ ಕವಿಗೋಷ್ಟಿಯಲ್ಲಿ ಕವನ ವಾಚಿಸಲು ಚಾಂದ್ ಪಾಷ ಎನ್ ಎಸ್‌ರವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮೇಳನದ ರೀತಿ ನೀತಿ, ಸಮ್ಮೇಳನಾಧ್ಯಕ್ಷರ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು ಗೋಷ್ಠಿಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, “ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುವ ಪ್ರಜ್ಞೆ. ಅದೊಂದು ಜಾತಿ, ಧರ್ಮವನ್ನು ಪ್ರತಿನಿಧಿಸುವ ಮತ್ತು ಧರ್ಮದ ವಿಶೇಷಣವನ್ನು ಹೊತ್ತು ಮೆರೆಸುವ ಧಾರ್ಮಿಕ ಕೇಂದ್ರವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಸಂಪೂರ್ಣವಾಗಿ ಜಾತಿ ಮತ್ತು ಧರ್ಮ ಕೇಂದ್ರಿತ ಹಾಗೂ ಪುರುಷ ಪ್ರಧಾನತೆಯನ್ನೆ ಪ್ರತಿಪಾದಿಸುವ ಮನುಸಂಸ್ಕೃತಿಯನ್ನು ಚಲಾವಣೆಗೆ ತರಲು ಹಾತೊರೆಯುತ್ತಿರುವುದು ದುರಂತವೇ ಸರಿ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡು ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, “ಸರ್ವ ಜನಾಂಗದ ಶಾಂತಿಯ ತೋಟ”ಕ್ಕೆ ಬೆಂಕಿ ಹಚ್ಚಿದ ಹಾಗಿದೆ. ಹಾವೇರಿಯಂತಹ ಸಾಮರಸ್ಯ ಉಳ್ಳ ಸ್ಥಳದಲ್ಲಿ ನಡೆಯುವ ಸಮ್ಮೇಳನವು ದಲಿತ ಮತ್ತು ಮುಸ್ಲಿಂ ಸಮುದಾಯದ ಬರಹಗಾರನ್ನು ವ್ಯವಸ್ಥತವಾಗಿ ಹೊರಗಿಟ್ಟಿದ್ದು, ಉಡುಪಿ ಮಠದಿಂದ ಕನಕದಾಸನನ್ನು ಹೊರಗಿಟ್ಟ ಹಾಗೆಯೇ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡೆ ಇಲ್ಲ. ವಿಶ್ವಕ್ಕೆ ವಿಶ್ವಮಾನವತ್ವ ಸಂದೇಶ ಸಾರಿದೆ ಕುವೆಂಪು ನೆಲದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯವನ್ನು ಹಬ್ಬಿಸುತ್ತಿರುವುದು, ಸರ್ಕಾರಿ ಶಾಲೆಗಳ ಸ್ಥಿತಿ ಗತಿ…. ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಕೂಡ ಸಮ್ಮೇಳನದಲ್ಲಿ ಇದರ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ” ಎಂದಿದ್ದಾರೆ.

ಇಂಥ ದುರಿತ ಕಾಲದಲ್ಲಿ ಸಾಮರಸ್ಯವನ್ನು ಹಬ್ಬಿಸಬೇಕೆ ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. “ಹಿಂದಿ ಭಾರತದ ರಾಷ್ಟ್ರೀಯ ಭಾಷೆ” ಎಂದು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡರಂಗೇಗೌಡರು ಸಂದರ್ಶನದಲ್ಲಿ ಹೇಳಿದ ಮಾತಿದು. ಇಂಥ ಕನ್ನಡ ಭಾಷಾ ವಿರೋಧಿಯನ್ನು ಅಧ್ಯಕ್ಷ ಸ್ಥಾನದಲ್ಲಿರಿಸುವ ಸಮ್ಮೇಳನದಲ್ಲಿ ಆಹ್ವಾನಿತ ಕವಿಯಾಗಿರುವ ನಾನು ಖಂಡಿತವಾಗಿಯು ಕವಿತೆ ಓದಲಾರೆ, ಭಾಗವಹಿಸಿಲಾರೆ. ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕದ ಹಾಗೆಯೇ ಇದೆ. ಅಷ್ಟಕ್ಕೂ ಷರೀಫನನ್ನು ಹೊರಗಿಟ್ಟಿದ್ದನ್ನೆ ಗುರು ಗೋವಿಂದ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...