Homeಮುಖಪುಟಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

ಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

- Advertisement -
- Advertisement -

ಗುಜರಾತ್ ಪೊಲೀಸರು ಗುರುವಾರ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಮೂರನೇ ಬಾರಿಗೆ ಬಂಧಿಸಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದೇ ತಿಂಗಳಲ್ಲಿ ಸಾಕೇತ್‌ ಮೂರನೇ ಸಲ ಬಂಧನಕ್ಕೆ ಒಳಗಾಗಿದ್ದಾರೆ.

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗೋಖಲೆ ಅವರನ್ನು ಗುರುವಾರ ತಡರಾತ್ರಿ ದೆಹಲಿಯಲ್ಲಿ ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಖಲೆ ಮತ್ತು ಅಪರಾಧ ವಿಭಾಗದ ಅಧಿಕಾರಿಗಳು ಶುಕ್ರವಾರ ಸಂಜೆ ಅಹಮದಾಬಾದ್ ತಲುಪುವ ನಿರೀಕ್ಷೆಯಿದೆ.

“ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಮ್ಮ ತಂಡವು ನವದೆಹಲಿ ಜಿಲ್ಲೆಗೆ ಬರುತ್ತಿದೆ ಮತ್ತು ದಾಳಿ ನಡೆಸಲಿದೆ ಎಂದು ಗುಜರಾತ್ ಪೊಲೀಸರು ನಮಗೆ ತಿಳಿಸಿದ್ದಾರೆ” ಎಂದು ಅಪರಿಚಿತ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ನಂತರ ಅವರು ಗೋಖಲೆ ಅವರನ್ನು ಬಂಧಿಸಿದ್ದಾರೆ. ಗೋಖಲೆ ಬಂಧನದ ಬಗ್ಗೆ ನಮಗೆ ತಿಳಿದಿರಲಿಲ್ಲ. ದಾಳಿಯ ಸ್ಥಳ ಮತ್ತು ಬಂದ ತಂಡದ ಬಗ್ಗೆ ಮಾತ್ರ ನಮಗೆ ತಿಳಿಸಲಾಗಿದೆ” ಎಂದಿದ್ದಾರೆ ಅಧಿಕಾರಿ.

ತೃಣಮೂಲ ಕಾಂಗ್ರೆಸ್ ಮೂಲಗಳು ‘ಸ್ಕ್ರಾಲ್‌.ಇನ್‌’ಗೆ ಪ್ರತಿಕ್ರಿಯಿಸಿದ್ದು, “ಗೋಖಲೆ ಅವರನ್ನು ದೆಹಲಿಯ ಬಂಗಾ ಭವನದಲ್ಲಿ ಅರೆಸ್ಟ್ ಮಾಡಲಾಗಿದೆ. ಸೈಬರ್‌ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ” ಎಂದಿವೆ. ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರಿಂದ ಗೋಖಲೆಯವರ ಬಂಧನವಾಗಿದೆ ಎಂದು ಟಿಎಂಸಿ ಆರೋಪಿಸಿದೆ.

“ಮೋರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರು. ಆ ವೇಳೆ 30 ಕೋಟಿ ರೂಪಾಯಿ ಖರ್ಚಾಗಿದೆ” ಎಂದು ಪ್ರತಿಪಾದಿಸಿದ ಸುದ್ದಿ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಗೋಖಲೆ ಹಂಚಿಕೊಂಡ ಬಳಿಕ ಪ್ರಕರಣ ದಾಖಲಾಗಿತ್ತು. ಗೋಖಲೆ ಅವರು ನಾಲ್ಕು ದಿನಗಳಲ್ಲಿ ಎರಡು ಬಾರಿ ಬಂಧಿಸಲ್ಪಟ್ಟಿದ್ದರು. ಆದರೆ, ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ ಈ ಮಾಹಿತಿಯು ಸುಳ್ಳು ಎಂದು ಪ್ರತಿಕ್ರಿಯಿಸಿತ್ತು.

ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಗೋಖಲೆಯವರನ್ನು ಮೊದಲು ಡಿಸೆಂಬರ್ 5 ರಂದು ಜೈಪುರದಲ್ಲಿ ಗುಜರಾತ್ ಪೊಲೀಸರು, ರಾಜಸ್ಥಾನ ಪೊಲೀಸರಿಗೆ ತಿಳಿಯದಂತೆ ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಲಾಯಿತು. ಡಿಸೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯಲು ಮೋದಿಯವರ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಡಿಸೆಂಬರ್ 8ರಂದು ಅಹಮದಾಬಾದ್ ನ್ಯಾಯಾಲಯವು ಸಾಕೇತ್‌ ಅವರಿಗೆ ಜಾಮೀನು ನೀಡಿತು, ಆದರೆ ಮೊರ್ಬಿ ಜಿಲ್ಲೆಯಲ್ಲಿ ದಾಖಲಾದ ಮತ್ತೊಂದು ಪ್ರಕರಣದಲ್ಲಿ ಅವರನ್ನು ಶೀಘ್ರದಲ್ಲೇ ಮರು ಬಂಧಿಸಲಾಯಿತು. ಗೋಖಲೆಯವರು ಮೋದಿಯವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವುದನ್ನು ಹೊರತುಪಡಿಸಿ “ಚುನಾವಣೆಗಳ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಮೋರ್ಬಿ ಪೊಲೀಸರು ದೂರಿದ್ದರು.

ಡಿಸೆಂಬರ್ 9 ರಂದು ಗೋಖಲೆ ಎರಡನೇ ಪ್ರಕರಣದಲ್ಲೂ ಜಾಮೀನು ಪಡೆಯುವಲ್ಲಿ ಯಶಸ್ವಿಯಾದರು. ಗುರುವಾರ ಅವರನ್ನು ಮೂರನೇ ಬಾರಿಗೆ ಬಂಧಿಸಲ್ಪಡುವ ಕೆಲವು ಗಂಟೆಗಳ ಮೊದಲು, ಗೋಖಲೆಯವರು ಗುಜರಾತ್ ಪೊಲೀಸರ ಕುರಿತು ಟ್ವೀಟ್ ಮಾಡಿದ್ದರು. “ಮೊದಲ ಪ್ರಕರಣದಲ್ಲಿ ನನ್ನನ್ನು ಗುಜರಾತ್ ಪೊಲೀಸರು ಬಂಧಿಸಿದ್ದರ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕಾನೂನುಬಾಹಿರ ಬಂಧನದ ಪ್ರಕರಣವನ್ನು ದಾಖಲಿಸಿದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದರು.

“3 ವಾರಗಳ ಹಿಂದೆ ನನ್ನ ಬಂಧನಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗುಜರಾತ್ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಘೋಷಿಸಲು ಸಂತೋಷವಾಗಿದೆ. ಜೈಪುರದಿಂದ ಅಹಮದಾಬಾದ್‌ಗೆ ಟ್ರಾನ್ಸಿಟ್ ರಿಮಾಂಡ್ ಇಲ್ಲದೆ (ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ) ನನ್ನನ್ನು ಅಕ್ರಮವಾಗಿ ಬಂಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ” ಎಂದು ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...