Homeಕರ್ನಾಟಕ2023ಅನ್ನು ಕರೆಯಲು ಕರ್ನಾಟಕದ ಜನತೆ ತೆಗೆದುಕೊಳ್ಳಬಹುದಾದ 23 ರಾಜಕೀಯ ಪ್ರತಿಜ್ಞೆಗಳು

2023ಅನ್ನು ಕರೆಯಲು ಕರ್ನಾಟಕದ ಜನತೆ ತೆಗೆದುಕೊಳ್ಳಬಹುದಾದ 23 ರಾಜಕೀಯ ಪ್ರತಿಜ್ಞೆಗಳು

- Advertisement -
- Advertisement -

ಕರ್ನಾಟಕದ ಮತ್ತು ಇಂಡಿಯಾದ ರಾಜಕೀಯ ಸನ್ನಿವೇಶ ಊಹಿಸಲಾರದಷ್ಟು ಕೀಳುಮಟ್ಟಕ್ಕೆ ಇಳಿದಿರುವ 2022ನ್ನು ಮುಗಿಸಿ ಅದು ಇನ್ನಷ್ಟು ಪ್ರಪಾತಕ್ಕೆ ಕುಸಿಯಬಹುದಾದ 2023ಕ್ಕೆ ಕಾಲಿಡುತ್ತಿದ್ದೇವೆ. ಅದು ಹಾಗಾಗಬಾರದು. ಸುಧಾರಿಸುವ ಸೂಚನೆಗಳು ದೊಡ್ಡಮಟ್ಟದಲ್ಲಿ ಕಾಣದೆ ಹೋದರೂ, ಮತದ್ವೇಷ ಆಧಾರಿತ ರಾಜಕೀಯ ಧ್ರುವೀಕರಣವನ್ನು ತಿರಸ್ಕರಿಸಿ ಓಟು ಮಾಡಿದ ಕೆಲವೇ ಕೆಲವು ರಾಜ್ಯಗಳು ಕೂಡ ಇದ್ದವು. ಈ ನಿಟ್ಟಿನಲ್ಲಿ 2023ಕ್ಕೆ ಚುನಾವಣೆಗೆ (ಮೇ) ಹೋಗಲಿರುವ ಕರ್ನಾಟಕಕ್ಕೆ ದೊಡ್ಡ ಪರೀಕ್ಷೆ ಎದುರಾಗುವುದಾದರೆ, ಅದು 2024ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಒಂದು ಮಟ್ಟದ ಪೂರ್ವಾಭ್ಯಾಸವೂ ಅಗಲಿದೆ. ದ್ವೇಷ ಹಂಚುವ ರಾಜಕೀಯ ಪಕ್ಷಗಳನ್ನು ಹದ್ದುಬಸ್ತಿನಲ್ಲಿಡುವ ಜವಾಬ್ದಾರಿ ಹಿಂದೆಂದಿಗಿಂತಲೂ ಈಗ ಕರ್ನಾಟಕದ ಜನತೆಯ ಮೇಲೆ ಹೆಚ್ಚಿದೆ. ಈ ನಿಟ್ಟಿನಲ್ಲಿ 23ಕ್ಕೆ ಈ 23 ರಾಜಕೀಯ ಪ್ರತಿಜ್ಞೆಗಳ ಕಡೆಗೆ ನಾವು ಪತ್ರಿಕೆಯ ಓದುಗರು, ಕರ್ನಾಟಕದ ಜನತೆ ಗಮನ ಹರಿಸಬಹುದೇ? ಕಾಲಿಡುತ್ತಿರುವ ಹೊಸ ವರ್ಷಕ್ಕೆ ಸಂಬಂಧಿಸಿದ ಸಂಖ್ಯೆಯ ಅನುಗುಣವಾಗಿ ಈ ಪ್ರತಿಜ್ಞೆಗಳನ್ನು 23ಕ್ಕೆ ಸೀಮಿತಗೊಳಿಸಿದ್ದರೂ ಓದುಗರು ಈ ಪಟ್ಟಿಯನ್ನು ಇನ್ನಷ್ಟು ಬೆಳೆಸುವುದು ಅತ್ಯಗತ್ಯ.

1. ಆರ್ಥಿಕ ಅಸಮಾನತೆಯನ್ನು ಸರಿಪಡಿಸುವಂತೆ ರಾಜಕೀಯ ಪಕ್ಷಗಳಿಗೆ ಒತ್ತಡ ಹೇರೋಣ; ಪರಿಹಾರ ಸೂಚಿಸುವ ಪ್ರಣಾಳಿಕೆ ಹೊಂದಿರುವ ಪಕ್ಷಕ್ಕೆ ಬೆಂಬಲಿಸೋಣ.

2. ದ್ವೇಷ ಹರಡುವ, ಜಾತಿ ಮತಗಳ ನಡುವೆ ಧ್ರುವೀಕರಣಕ್ಕೆ ಎಡೆಮಾಡಿಕೊಡುವ, ಕೂಡು ಸಂಸ್ಕೃತಿಗಳನ್ನು-ಸೌಹಾರ್ದತೆಯನ್ನು ಮಣ್ಣುಪಾಲಾಗಿಸಲು ಹೊರಟಿರುವ ತೀವ್ರವಾದಿ ರಾಜಕೀಯವನ್ನು ದೂರವಿಡೋಣ.

3. ತಮ್ಮ ಪ್ರತಿ ನಡೆಯಲ್ಲಿಯೂ ಸಂವಿಧಾನವನ್ನು ಅನುಸರಿಸಿ, ಸಂವಿಧಾನ ಬದ್ಧರಾಗಿರುವ ರಾಜಕೀಯ ಪಕ್ಷವನ್ನು ಬಲಪಡಿಸೋಣ.

4. ಹಿಂದಿನ ಚುನಾವಣೆಯಲ್ಲಿ ಗೆದ್ದು, ಅಧಿಕಾರ ಲಾಲಸೆಗೆ ಪಕ್ಷಾಂತರ ಮಾಡಿ ಜನರಿಗೆ ದ್ರೋಹಗೈದ ಎಲ್ಲರನ್ನು (ಅವರು ತಮ್ಮ ಮೂಲ ಪಕ್ಷಕ್ಕೆ ಮತ್ತೆ ಹಿಂದಿರುಗಿದ್ದರೂ ಕೂಡ) ಸೋಲಿಸುವ ಪಣ ತೊಡೋಣ.

5. ಪರಿಸರ ರಕ್ಷಣೆ, ಹವಾಮಾನ ವೈಪರೀತ್ಯಕ್ಕೆ ಪರಿಹಾರಗಳನ್ನು ಸೂಚಿಸುವ ಪಕ್ಷದ ಜೊತೆಗೆ ಹೆಜ್ಜೆ ಹಾಕೋಣ.

6. ಮೀಸಲಾತಿಯ ಬಗ್ಗೆ ಗೊಂದಲ ಎಬ್ಬಿಸುತ್ತಿರುವ ಈ ಪರ್ವದಲ್ಲಿ, ಸಂವಿಧಾನದ ಆಶಯವನ್ನು ಬುಡಮೇಲು ಮಾಡಲು ಜಾರಿ ಮಾಡಿರುವ 10% ಇಡಬ್ಲ್ಯುಎಸ್ ಮೀಸಲಾತಿಯನ್ನು ತೆಗೆದುಹಾಕುವ ಪ್ರಮಾಣ ಮಾಡುವ ರಾಜಕಾರಣಕ್ಕೆ ಸಹಕಾರ ನೀಡೋಣ. ಒಳಮೀಸಲಾತಿಯನ್ನು ಜಾರಿ ಮಾಡಿ, ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿಯ ಉಪಯೋಗ ದೊರೆಯುವಂತೆ ವ್ಯವಸ್ಥೆಯನ್ನು ಮರುರೂಪಿಸಲು ಆಗ್ರಹಿಸೋಣ. ಅಗತ್ಯ ಬಿದ್ದ ಕಡೆಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಇನ್ನಷ್ಟು ಹೆಚ್ಚಿಸುವಂತೆ ಆಗ್ರಹಿಸೋಣ.

7. ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲ ನಾಗರಿಕರಿಗೆ ಉದ್ಯೋಗ ದೊರಕಿಸುವ ನೀಲನಕ್ಷೆ ಹೊಂದಿರುವ ಹಾಗೂ ಖಾಸಗಿ ಉದ್ಯಮದಲ್ಲಿಯೂ ಮೀಸಲಾತಿಯನ್ನು ನೀಡಲು ಬದ್ಧರಾದ ಪಕ್ಷಗಳನ್ನು ಬೆಂಬಲಿಸೋಣ.

8. ದ್ವೇಷದ ರಾಜಕೀಯವನ್ನು ವಿರೋಧಿಸಿದ ಕಾರಣಕ್ಕೆ ಸುಳ್ಳುಸುಳ್ಳು ಕೇಸುಗಳನ್ನು ಜಡಿದು ಸಾವಿರಾರು ಜನರನ್ನು ಬಂಧಿಸಿರುವ ರಾಜಕೀಯ ಸಿದ್ಧಾಂತ ಮತ್ತು ಅಂತಹ ಪಕ್ಷವನ್ನು ವಿರೋಧಿಸೋಣ.

ಇದನ್ನೂ ಓದಿ: ರಾಜಕೀಯ ಕ್ರಾಂತಿಗೆ ಕಹಳೆ ನಾಂದಿ ಮೊಳಗಬೇಕಿರುವ ಸಂಧಿಕಾಲದಲ್ಲಿ..

9. ತಮ್ಮ ಜಾತಿಯ ಜನಸಂಖ್ಯೆ ಕಡಿಮೆಯಿದ್ದರೂ ದೇವರಾಜ ಅರಸ್, ಪಿ ಜಿ ಆರ್ ಸಿಂಧ್ಯಾ, ಆರ್ ಎಲ್ ಜಾಲಪ್ಪನಂಥವರು ವಿಧಾನಸಭಾ ಕ್ಷೇತ್ರಗಳಿಂದ ಆರಿಸಿ ಬರಲು ಸಾಧ್ಯವಾಗುತ್ತಿದ್ದ ವಾತಾವರಣವನ್ನು ಮತ್ತೆ ಸೃಷ್ಟಿಸಲು ಪ್ರಯತ್ನಿಸೋಣ. ಮೀಸಲು ಕ್ಷೇತ್ರಗಳಲ್ಲಿ ಮೀಸಲು ಸಮುದಾಯದ ಅಭ್ಯರ್ಥಿಗಳು ಸರ್ವಸ್ವತಂತ್ರರಾಗಿ ಗೆಲ್ಲಲು ಅವಕಾಶವಾಗುವಂತಹ ರಾಜಕಾರಣವನ್ನು ನಿರ್ಮಿಸೋಣ.

10. ಭ್ರಷ್ಟಾಚಾರ ಮಿತಿಮೀರಿರುವ ಸಂದರ್ಭದಲ್ಲಿ, 40% ಕಮಿಷನ್ ಸಾಮಾನ್ಯವಾಗುತ್ತಿರುವ ಕ್ರೂರ ವಾತಾವರಣದಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಯೋಜನೆಯನ್ನು ಮುಂದಿಡುವುದಕ್ಕೆ ಆಗ್ರಹಿಸೋಣ. ಮಾಡಿದ ಯೋಜನೆಯನ್ನು ಪರಿಪಾಲಿಸುವಂತೆ ನಿಗಾವಹಿಸೋಣ.

11. ನಮ್ಮ ರಾಜ್ಯದ ಸಂಪನ್ಮೂಲಗಳನ್ನು, ಪಾರಿಸರಿಕ ಅಪಾಯಗಳನ್ನು ಲೆಕ್ಕಿಸದೆ, ಗಣಿಗಾರಿಕೆ ಮಾಡಿ ಲೂಟಿ ಹೊಡೆಯುವ ವ್ಯಕ್ತಿಗಳನ್ನು ಯಾವುದೇ ಪಕ್ಷದಲ್ಲಿರಲಿ ಮುಲಾಜಿಲ್ಲದೇ ಸೋಲಿಸುವ ಪಣತೊಡೋಣ. ರಾಜ್ಯದ ಸಂಪನ್ಮೂಲಗಳು ಪರಿಸರ ಸಮತೋಲನದ ಹಿನ್ನೆಲೆಯಲ್ಲಿ ಇಡೀ ರಾಜ್ಯದ ಅಭ್ಯುದಯಕ್ಕೆ ಬಳಕೆಯಾಗುವಂತೆ ಕಾಯುವ ರಾಜಕಾರಣವನ್ನಷ್ಟೇ ಬೆಂಬಲಿಸೋಣ.

12. ಪಠ್ಯಪುಸ್ತಕ ಪರಿಷ್ಕರಣೆ ಮೂಲಕ ಕೋಮುವಾದವನ್ನು ಶಿಕ್ಷಣದಲ್ಲಿ ಹೇರುವ; ಎನ್‌ಇಪಿ ಎಂಬ ಯೋಜನೆಯ ಮೂಲಕ ಉಳ್ಳವರನ್ನು ಮಾತ್ರ ಬೆಂಬಲಿಸುವ ಶಿಕ್ಷಣ ವ್ಯವಸ್ಥೆಯನ್ನು ಜಾರಿ ಮಾಡುವ ಹುನ್ನಾರದಲ್ಲಿರುವ ರಾಜಕೀಯವನ್ನು ವಿರೋಧಿಸೋಣ; ಶಿಕ್ಷಣ ಸಾಮಾಜೀಕರಣವನ್ನು ಸಾಧಿಸುವಂತಾಗಿ, ಎಲ್ಲರಿಗೂ ಸುಲಭವಾಗಿ ಮತ್ತು ಸಮಾನವಾಗಿ ದಕ್ಕುವಂತೆ ಮಾಡುವ ವ್ಯವಸ್ಥೆಯನ್ನು ಬೆಂಬಲಿಸುವ ಪಕ್ಷವನ್ನು ಮುಂದಿನ ಚುನಾವಣೆಗಳಲ್ಲಿ ಸ್ವಾಗತಿಸೋಣ.

13. ತೀವ್ರ ಆರ್ಥಿಕ ಅಸಮಾನತೆಯ ಈ ಪರ್ವದಲ್ಲಿ, ಬಡವರ, ನಿರ್ಗತಿಕರ ಸಂಖ್ಯೆ ಹಿಂದೆಂದೂ ಇಲ್ಲದ ಮಟ್ಟದಲ್ಲಿ ಬೆಳೆಯುತ್ತಿದೆ. ಬಡವರ ಮತ್ತು ಮಧ್ಯಮ ವರ್ಗದ ಕಲ್ಯಾಣ ಯೋಜನೆಗಳಿಗೂ ಕಲ್ಲು ಹಾಕಲಾಗುತ್ತಿದೆ. ಓಲ್ಡ್ ಪೆನ್ಷನ್ ಸ್ಕೀಮ್, ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆ- ಇಂತಹ ಮಧ್ಯಮವರ್ಗದ, ಬಡವರ ಕಲ್ಯಾಣ ಯೋಜನೆಗಳಿಗೆ ಜನ ಬೀದಿಗೆ ಇಳಿಯುವಂತಾಗಿದೆ. ಇಂತಹ ಕಲ್ಯಾಣ ಯೋಜನೆಗಳ ಬಗ್ಗೆ ಬದ್ಧತೆ ತೋರುವ ಸರ್ಕಾರ ರಚಿಸುವವರಿಗೆ ನಮ್ಮ ಓಟು ಎನ್ನೋಣ.

14. ಎರಡು ವರ್ಷಗಳ ಕೆಳಗಷ್ಟೆ ದೆಹಲಿಯಲ್ಲಿ ನಡೆದ ಐತಿಹಾಸಿಕ ರೈತ ಹೋರಾಟಕ್ಕೆ ಮಣಿದು ಸರ್ಕಾರ ಹಿಮ್ಮೆಟ್ಟಿತ್ತಾದರೂ, ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳು ನೆನೆಗುದಿಗೆ ಬಿದ್ದಿವೆ. ರೈತ ವಿರೋಧಿ ರಾಜಕಾರಣಿಗಳಿಗೆ ಅವರ ಮನೆಯ ದಾರಿ ತೋರಿಸೋಣ.

15. ಜಿಎಸ್‌ಟಿ ಎಂಬ ಪರೋಕ್ಷ ತೆರಿಗೆ ಜನರ ಜೀವ ಹಿಂಡುತ್ತಿದೆ. ಸಾಮಾನ್ಯ ಜನರನ್ನು ಮತ್ತಷ್ಟು ಬಡವರನ್ನಾಗಿಸುತ್ತಿದೆ. ಆದರೆ ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಜಿಎಸ್‌ಟಿ ವ್ಯವಸ್ಥೆಯನ್ನು ಜನಸಾಮಾನ್ಯರಿಗೆ ಹೊರೆಯಾಗದಂತೆ ಮರುರಚಿಸಿ, ಅತಿ ಶ್ರೀಮಂತರಿಗೆ ಹೆಚ್ಚಿನ ತೆರಿಗೆ ಹಾಕುವ ಬದ್ಧತೆ ತೋರುವ ಪಕ್ಷಕ್ಕೆ ನಮ್ಮ ಮತ ಎನ್ನೋಣ.

16. ಹಿಂದಿ ಹೇರಿಕೆಯನ್ನು ಮೆಟ್ಟಿ ನಿಲ್ಲುವ ಬದ್ಧತೆಯಿರುವ, ಕರ್ನಾಟಕದ ಅಲ್ಪಸಂಖ್ಯಾತ ಭಾಷೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಯುಳ್ಳ ರಾಜಕಾರಣ ನಮ್ಮ ಭವಿಷ್ಯವಾಗಲಿ.

17. ನಗರಗಳು ಪರಿಸರ ನಾಶ, ವಾಯು ಮಾಲಿನ್ಯಗಳಿಂದ ನರಳುತ್ತಿವೆ. ರಿಯಲ್ ಎಸ್ಟೇಟ್ ದಂಧೆಗಳಿಂದ ನಗರಗಳನ್ನು ಮುಕ್ತಗೊಳಿಸಿ ಸಹನೀಯಗೊಳಿಸುವ ರಾಜಕಾರಣ ಮುನ್ನಲೆಗೆ ಬರಲಿ.

18. ಇಂದು ಕೃತಕ ಬುದ್ಧಿಮತ್ತೆ ಎಲ್ಲಾರಂಗದಲ್ಲೂ ಪ್ರವೇಶ ಮಾಡಿ ಖಾಸಗಿತನಕ್ಕೆ ಧಕ್ಕೆ ತರುತ್ತಿದೆ. ನಾಗರಿಕರ ಕಣ್ಗಾವಲು ತೀವ್ರವಾಗುತ್ತಿದೆ. ಸಾಮಾಜಿಕ ಡಿಜಿಟಲ್ ಮಾಧ್ಯಮಗಳು ಮಿತಿಮೀರಿ ಬೆಳೆಯುತ್ತಿವೆ. ಇವುಗಳಿಗೆ ಕಡಿವಾಣ ಹಾಕಿ ಜನಪರವಾಗಿ ಯೋಜನೆ ರೂಪಿಸುವವರನ್ನು ಬೆಂಬಲಿಸೋಣ.

ಇದನ್ನೂ ಓದಿ: ಸ್ಪೃಶ್ಯ-ಅಸ್ಪೃಶ್ಯ: ಒಳಮೀಸಲಾತಿಯ ಒಳಗುದಿ

19. ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಬದ್ಧತೆಯಿರುವ, ಎಲ್ಲಾ ಲಿಂಗತ್ವದ ಹಕ್ಕುಗಳನ್ನು ಮಾನ್ಯ ಮಾಡಿ ಗೌರವಿಸುವ ರಾಜಕಾರಣ ನಮ್ಮದಾಗಲಿ.

20. ಕೊರೊನಾದಂತಹ ಸಾಂಕ್ರಾಮಿಕಗಳು ಇನ್ನುಮುಂದೆ ಸಾಮಾನ್ಯವಾಗಲಿವೆ ಎನ್ನುತ್ತವೆ ಹಲವು ಅಧ್ಯಯನಗಳು. ಈ ನಿಟ್ಟಿನಲ್ಲಿ ಆರೋಗ್ಯ ವ್ಯವಸ್ಥೆ ದೇಶದ ಎಲ್ಲ ನಾಗರಿಕರಿಗೂ ಸುಲಭವಾಗಿ, ಉಚಿತವಾಗಿ ಮತ್ತು ಸಮಾನವಾಗಿ ದಕ್ಕಲು ವ್ಯವಸ್ಥೆ ರೂಪಿಸುವಂತೆ ಎಲ್ಲಾ ಪಕ್ಷಗಳಿಗೂ ಒತ್ತಡ ಹೇರೋಣ.

21. ದ್ವೇಷ ಹರಡುವ ರಾಜಕಾರಣವನ್ನು ಬೆಂಬಲಿಸುವ ಕಲೆಗಳ (ಉದಾ: ರಾಮಸೇತು, ಕಾಂತಾರ, ಕಾಶ್ಮೀರ್ ಫೈಲ್ಸ್ ಸಿನೆಮಾಗಳು) ಬಗ್ಗೆ ಎಚ್ಚರಿಕೆಯಿಂದಿದ್ದು ಅವುಗಳ ಅಪಾಯವನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡೋಣ. ಅವುಗಳ ಬದಲಿಗೆ ಮಾನವೀಯಗೊಳಿಸುವ ಸಾಹಿತ್ಯ, ಸಿನಿಮಾ, ಸಂಗೀತವನ್ನಷ್ಟೇ ಬೆಂಬಲಿಸೋಣ.

22. ಅಧಿಕಾರ ಕೇಂದ್ರಗಳನ್ನು ಪ್ರಶ್ನಿಸಿ ಜನಸಾಮಾನ್ಯರ ಬೆನ್ನಿಗೆ ನಿಲ್ಲುವ ಜನಪರ ಮಾಧ್ಯಮಗಳನ್ನಷ್ಟೇ ಬೆಂಬಲಿಸೋಣ. ಮಾರಿಕೊಂಡ ಮಾಧ್ಯಮಗಳಿಗೆ ಧಿಕ್ಕಾರ ಎನ್ನೋಣ.

23. ಒಟ್ಟಾರೆಯಾಗಿ, ಸಮಸ್ತ ನಾಗರಿಕರ, ಇಡೀಯ ಸಮಾಜದ ಸ್ವಸ್ಥತೆಗೆ ತುಡಿಯುವ ಸಮಗ್ರ ರಾಜಕಾರಣಕ್ಕೆ ನಮ್ಮ ಬೆಂಬಲ ಎನ್ನೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...