Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

ಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

- Advertisement -
- Advertisement -

ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಬರಹಗಾರರನ್ನು ಹೊರಗಿಟ್ಟು ಕನ್ನಡತನವನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಮಹೇಶ ಜೋಶಿ ಮರೆತ್ತಿದ್ದಾರೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಸಾಪ ಅಧ್ಯಕ್ಷರು, “ನಾನು ಗುರು ಗೋವಿಂದಭಟ್ಟರ ಮರಿಮೊಮ್ಮಗ, ನನಗಿಂತ ಜಾತ್ಯತೀತ ವ್ಯಕ್ತಿ ಬೇಕಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಗುರು ಗೋವಿಂದ ಭಟ್ಟರಿಗೂ ಮಹೇಶ ಜೋಶಿಯವರಿಗೂ ಯಾವುದೇ ಸಂಬಂಧವಿಲ್ಲ ಎಂದು ‘ಈ ದಿನ.ಕಾಂ’ ವಿಶೇಷ ವರದಿ ಮಾಡಿದೆ.

ಪತ್ರಕರ್ತ ನವೀನ್ ಸೂರಿಂಜೆಯವರು ಬರೆದಿರುವ ವರದಿಯಲ್ಲಿ, “ಮಹೇಶ ಜೋಶಿಯವರು ಸುಳ್ಳನ್ನು ಹೇಳುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ. ಕಳಸದ ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರ ಗುರು-ಶಿಷ್ಯ ಸಂಬಂಧ ನಾಡಿನ ಅಸ್ಮಿತೆಗೆ ಬಹುದೊಡ್ಡ ಉದಾಹರಣೆ. ಆದರೆ ಗೋವಿಂದ ಭಟ್ಟರ ವಂಶಸ್ಥರೆಂದು ಮಹೇಶ ಜೋಶಿಯವರು ಹೇಳಿಕೊಂಡು ತಮ್ಮ ಕೋಮುವಾದಿ ಕಾರ್ಯಾಚರಣೆಯನ್ನು ಮರೆಮಾಚಲು ಯತ್ನಿಸುತ್ತಿರುವ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ‘ಈ ದಿನ’ ವರದಿ ವಿಶೇಷ ಬೆಳಕು ಚೆಲ್ಲಿದೆ.

ಶಿಥಿಲಾವಾಸ್ಥೆಯಲ್ಲಿದ್ದ ಗುರುಗೋವಿಂದ ಭಟ್ಟರ ಗರ್ಭಗುಡಿ ಕಟ್ಟಿಸಿದ ಕಾಳಪ್ಪ ಕೊಟ್ರಪ್ಪ ಪ್ಯಾಟಿ ಅವರ ಪುತ್ರ ಹಾಗೂ ಗುರುಗೋವಿಂದ ಭಟ್ಟರ ಗುಡಿ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖಪ್ಪ ಕಾಳಪ್ಪ ಪ್ಯಾಟಿಯವರು ಪ್ರತಿಕ್ರಿಯಿಸಿದ್ದು, “ಗುರು ಗೋವಿಂದ ಭಟ್ಟರ ವಂಶಾವಳಿಗೂ, ಮಹೇಶ್ ಜೋಷಿಯವರ ವಂಶಾವಳಿಗೂ ಸಂಬಂಧವಿಲ್ಲ. ಅವೆರಡೂ ಬೇರೆ ಬೇರೆ ವಂಶಾವಳಿಗಳು. ಗುರು ಗೋವಿಂದ ಭಟ್ಟರ ಬಗ್ಗೆ ನಮ್ಮ ಹಿರಿಯರಲ್ಲಿ ಗೊಂದಲಗಳಿವೆ. ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇದ್ದರೇ ಎಂಬ ಪ್ರಶ್ನೆಗಳಿತ್ತು. ಆದರೆ ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇರಲಿಲ್ಲ. ಅವರ ಸಂಬಂಧಿಕರು ಯಾರೂ ಕೂಡಾ ಇಲ್ಲ” ಎಂದಿದ್ದಾರೆ.

“ಮಹೇಶ ಜೋಶಿ ಮತ್ತು ಗುರು ಗೋವಿಂದ ಭಟ್ಟರು ಇಬ್ಬರೂ ಬ್ರಾಹ್ಮಣರೇ ಎಂಬುದನ್ನು ಹೊರತುಪಡಿಸಿದರೆ ಇವರಿಬ್ಬರಿಗೂ ಇನ್ನಾವುದೇ ಸಂಬಂಧವೂ ಇಲ್ಲ. ಅವರು ಭಟ್ಟರು, ಇವರು ಜೋಷಿ. ಭಟ್ಟರೇ ಬೇರೆ, ಜೋಷಿಯವರೇ ಬೇರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮಹೇಶ್ ಜೋಷಿಯವರು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂಬುದಕ್ಕೆ ದಾಖಲೆ ಕೊಡಬೇಕು. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ ಎಂದೇ ನಾವು ತೀರ್ಮಾನಿಸಿರುವಾಗ ಈ ದೇವಸ್ಥಾನಕ್ಕೆ ಬಂದು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂದು ಹೇಳುವವರು ದಾಖಲೆ ನೀಡಬೇಕಾಗುತ್ತದೆ” ಎಂದು ಒತ್ತಾಯಿಸಿದ್ದಾರೆ.

“ಗುರು ಗೋವಿಂದ ಭಟ್ಟರ ದೇವಸ್ಥಾನದಲ್ಲಿ ಈ ಹಿಂದೆ ಅವರ ವಂಶಸ್ಥರು ಪೂಜಾದಿಗಳನ್ನು ಮಾಡುತ್ತಿದ್ದರು. ಅವರ ವಂಶಸ್ಥರು ನಶಿಸಿ ಹೋದ್ದರಿಂದ ನಾವುಗಳು ಜೋಷಿ ಮನೆತನದವರನ್ನು ಕರೆದುಕೊಂಡು ಬಂದು ಅರ್ಚನೆ ಮಾಡುತ್ತಿದ್ದೇವೆ. ಈ ದೇವಸ್ಥಾನದ ಅರ್ಚಕರ ವಂಶಕ್ಕೂ ಮಹೇಶ್ ಜೋಷಿಗೂ ಸಂಬಂಧವಿದ್ದರೂ ಇರಬಹುದು. ಗುರುಗೋವಿಂದ ಭಟ್ಟರ ವಂಶಕ್ಕೂ ಮಹೇಶ್ ಜೋಷಿ ವಂಶಕ್ಕೂ ಸಂಬಂಧವಿಲ್ಲ” ಎಂದಿದ್ದಾರೆ.

ಗುರುಗೋವಿಂದ ಭಟ್ಟರ ಊರಾಗಿರುವ ಕಳಸ ಗ್ರಾಮದ ಹಿರಿಯ ಮುಖಂಡರೂ, ಗುರುಗೋವಿಂದ ಭಟ್ಟರ ದೇವಸ್ಥಾನ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮಾತನಾಡುತ್ತಾ, “ಜೋಷಿಗೂ ಭಟ್ಟರಿಗೂ ಬ್ರಾಹ್ಮಣರು ಎಂಬುದನ್ನು ಹೊರತುಪಡಿಸಿದರೆ ಬೇರೆ ಸಂಬಂಧ ಇಲ್ಲ. ಗುರು ಗೋವಿಂದ ಭಟ್ಟರ ಮನೆತನದವರು ಯಾರೂ ಇಲ್ಲ. ಮಹೇಶ್ ಜೋಷಿ ಗುರು ಗೋವಿಂದ ಭಟ್ಟರ ಮನೆತನದವರಲ್ಲ. ಜೋಷಿ ಮನೆತನದವರು ಈ ದೇವಸ್ಥಾನದ ಪೂಜೆ ಮಾತ್ರ ಮಾಡುತ್ತಾರೆ. ಜೋಷಿ ಮನೆತನಕ್ಕೂ ನಮ್ಮ ಗುರುಗೋವಿಂದ ಭಟ್ಟ ದೇವಸ್ಥಾನಕ್ಕಾಗಲೀ, ಮನೆತನಕ್ಕಾಗಲೀ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ವರದಿಗೆ ಸಂಬಂಧಿಸಿದಂತೆ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತು. ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಸಮ್ಮೇಳನದಿಂದ ಹೊರಗಿಟ್ಟಿರುವ ವಿವಾದ ಶುರುವಾದಾಗಿನಿಂದ ನಾಲ್ಕಾರು ಸಲ ಜೋಶಿಯವರಿಗೆ ಕರೆ ಮಾಡಲಾಗಿದ್ದು, ಈವರೆಗೆ ಒಂದಕ್ಕೂ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೆಂಡಾಲ್ ದೋಸಿಗೆ, ಗೋವಿಂದ ಬಟ್ಟರ ಲಿಂಕೂ ಸಿಗಲಿಲ್ಲವಾ? ಮನುವಾದಿಗಳು ಸುಮ್ಮನಾಗುವುದಿಲ್ಲ. ಬೇರೆ ಯಾವುದಾದರೂ ದಾರಿ ಹುಡುಕುತ್ತಾರೆ. ಸದ್ಯಕ್ಕೆ ಗೋವಿಂದ ಬಟ್ಟರು ಇವನಿಂದ ಬಚಾವಾದರಲ್ಲ. ಅದು ಕನ್ನಡಿಗರಿಗೆ ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...