Homeಕರ್ನಾಟಕನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪವನ್ನು ಜೆಡಿಎಸ್ ಕಟುವಾಗಿ ಟೀಕಿಸಿದೆ. ರೀಟ್ವೀಟ್ ಮಾಡುವ ಮೂಲಕ ಎಚ್‌.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್‌ನ ಅಮುಲ್‌ನೊಂದಿಗೆ ಕೆಎಂಎಫ್‌ (ನಂದಿನಿ) ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.

“ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ)ಯನ್ನು ಗುಜರಾತಿನ ಅಮುಲ್‌ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್‌ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ” ಎಂದಿದ್ದಾರೆ.

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್‌‌ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಎಚ್‌.ಡಿ. ರೇವಣ್ಣ ರೀಟ್ವೀಟ್‌

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪ ಖಂಡಿಸಿ ಜೆಡಿಎಸ್‌ ಟ್ವಿಟರ್‌ ಖಾತೆಯಲ್ಲಿ ಮಾಡಲಾದ ಟ್ವೀಟ್‌ಗಳನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ರೀಟ್ವೀಟ್ ಮಾಡಿದ್ದಾರೆ.

“ಕನ್ನಡಿಗರು ಕಟ್ಟಿಬೆಳೆಸಿದ ಸಂಸ್ಥೆಗಳ ಮೇಲೆ ಯಾಕಿಷ್ಟು ಅಸೂಯೆ ಅಮಿತ್ ಶಷಾ ಅವರೇ? ರಾಜ್ಯದಲ್ಲಿರುವ ನಿಮ್ಮದೇ ಸರ್ಕಾರ ಕಮಿಷನ್ ದಂದೆ, ಹಗರಣಗಳು ಹಾಗೂ ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ದೋಚುತ್ತಿದ್ದರೆ, ನೀವು ವೀಲಿನದ ಹೆಸರಲ್ಲಿ ಕನ್ನಡಿಗರು ಕಟ್ಟಿಬೆಳೆಸಿದ ಲಾಭದಾಯಕ ಸಂಸ್ಥೆಗಳನ್ನೇ ದೋಚಲು ಮುಂದಾಗಿದ್ದಿರಾ? ನಿಮ್ಮದು ಡಬಲ್ ಇಂಜಿನ್ ಸರ್ಕಾರವಲ್ಲ ಕನ್ನಡಿಗರ ಪಾಲಿಗೆ ದೋಚುವ ಸರ್ಕಾರ. ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ” ಎಂದು ಜೆಡಿಎಸ್ ತಿಳಿಸಿದೆ.

“ಕೆಎಂಎಫ್ ಗೆ ನಿಮ್ಮ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಡುಗೆಯಾದರೂ ಏನು? ಕರ್ನಾಟಕದ ಲಕ್ಷಾಂತರ ರೈತರು ಕಟ್ಟಿಬೆಳೆಸಿದ ಸಂಸ್ಥೆ ಇದು, ಇಂದು ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬುತ್ತಿರುವ ಸಂಸ್ಥೆಯನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಗಲುಗನಸನ್ನು ಮೊದಲು ಬಿಟ್ಟುಬಿಡಿ” ಎಂದಿದೆ.

“ಪಂಚರತ್ನ ರಥಯಾತ್ರೆಯ ಯಶಸ್ಸು ನಿಮ್ಮ ಕಣ್ಣಿಗೂ ಬಿದ್ದಿರಬಹುದು, ಇಲ್ಲವೇ ಯಾರಾದರೂ ಭಟ್ಟಂಗಿಗಳು ನಿಮ್ಮ ಕಿವಿ ಊದಿರಬಹುದು. ಅದಕ್ಕೆ ಮಂಡ್ಯಕ್ಕೆ ಬಂದು ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದೀರಿ. ನೀವು ಮಂಡ್ಯದಲ್ಲಿ ಮುಗ್ಗರಿಸುತ್ತಿರಿ. ಅಮಿತ್ ಶಾ ಅವರೇ ಅತಿಯಾದ ಅಮಿತೋತ್ಸಾಹ ಒಳ್ಳೆಯದಲ್ಲ” ಎಂದು ಕುಟುಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...