Homeಕರ್ನಾಟಕಅಮುಲ್‌ ಜೊತೆ ಕೆಎಂಎಫ್‌ ವಿಲೀನ ಮಾಡುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ

ಅಮುಲ್‌ ಜೊತೆ ಕೆಎಂಎಫ್‌ ವಿಲೀನ ಮಾಡುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ

- Advertisement -
- Advertisement -

ಅಮುಲ್- ಕೆಎಂಎಫ್‌ (ನಂದಿನಿ) ವಿಲೀನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, “ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಂದಿನಿಯನ್ನು ಅಮುಲ್‌ ಜೊತೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು” ಎಂದು ಮನವಿ ಮಾಡಿದ್ದಾರೆ.

“ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ” ಎಂದು ತಿಳಿಸಿದ್ದಾರೆ.

“ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅಮತ್‌ ಶಾ ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ” ಎಂದು ಹೇಳಿದ್ದಾರೆ.

“ಗುಜರಾತ್‌ನ ಅಮುಲ್ ಜೊತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಅಮಿತ್‌ ಶಾ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ.

“ಅಮುಲ್‌ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ” ಎಂದು ಸಹಕಾರಿ ಕ್ಷೇತ್ರದ ಚಿಂತಕರು, ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್ ತಿಳಿಸಿದ್ದಾರೆ.

“ಅಮುಲ್‌ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್‌ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್‌ಗಿಂತ ದೊಡ್ಡದಾದ ಅಮುಲ್‌ ಜೊತೆ ಸೇರಿಕೊಂಡರೆ, ಅಮುಲ್‌ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಅಮಿತ್ ಶಾ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದು, ““ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...