Homeಕರ್ನಾಟಕಅಮುಲ್‌ ಜೊತೆ ಕೆಎಂಎಫ್‌ ವಿಲೀನ ಮಾಡುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ

ಅಮುಲ್‌ ಜೊತೆ ಕೆಎಂಎಫ್‌ ವಿಲೀನ ಮಾಡುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ

- Advertisement -
- Advertisement -

ಅಮುಲ್- ಕೆಎಂಎಫ್‌ (ನಂದಿನಿ) ವಿಲೀನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, “ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಂದಿನಿಯನ್ನು ಅಮುಲ್‌ ಜೊತೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು” ಎಂದು ಮನವಿ ಮಾಡಿದ್ದಾರೆ.

“ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ” ಎಂದು ತಿಳಿಸಿದ್ದಾರೆ.

“ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅಮತ್‌ ಶಾ ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ” ಎಂದು ಹೇಳಿದ್ದಾರೆ.

“ಗುಜರಾತ್‌ನ ಅಮುಲ್ ಜೊತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಅಮಿತ್‌ ಶಾ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ.

“ಅಮುಲ್‌ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ” ಎಂದು ಸಹಕಾರಿ ಕ್ಷೇತ್ರದ ಚಿಂತಕರು, ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್ ತಿಳಿಸಿದ್ದಾರೆ.

“ಅಮುಲ್‌ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್‌ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್‌ಗಿಂತ ದೊಡ್ಡದಾದ ಅಮುಲ್‌ ಜೊತೆ ಸೇರಿಕೊಂಡರೆ, ಅಮುಲ್‌ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಅಮಿತ್ ಶಾ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದು, ““ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...