Homeಮುಖಪುಟದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

ದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

- Advertisement -
- Advertisement -

ದಮನಿತರ ಕತೆಯುಳ್ಳ ಕನ್ನಡದ ‘ಪಾಲಾರ್‌’ ಸಿನಿಮಾ ಟ್ರೇಲರ್‌‌ ಬಿಡುಗಡೆಯ ವೇಳೆ ವಿವಾದಗಳಿಗೆ ಗುರಿಯಾಗಿತ್ತು. ಜಾತಿಯ ವಿಷಯವನ್ನು ಢಾಳಾಗಿ ತೋರಿಸಿರುವ ಕಾರಣ ಹಲವು ಆಡಿಯೊ ಕಂಪನಿಗಳು ಟ್ರೇಲರ್‌ ಬಿಡುಗಡೆಗೆ ಒಪ್ಪಿಕೊಂಡಿಲ್ಲ ಎಂದು ಆರೋಪಿಸಿದ್ದ ಚಿತ್ರತಂಡ ತಮ್ಮದೇ ಯೂಟ್ಯೂಬ್‌ ಚಾನೆಲ್‌ ಮೂಲಕ ಬಿಡುಗಡೆ ಮಾಡಿತ್ತು. ತಮಿಳಿನ ಖ್ಯಾತ ನಿರ್ದೇಶಕ, ನಿರ್ಮಾಪಕ ಪ.ರಂಜಿತ್‌ ‘ಪಾಲಾರ್‌’ ಸಿನಿಮಾದ ಟ್ರೇಲರ್‌‌ ಹಂಚಿಕೊಂಡಿದ್ದರು. ಈಗ ಅಂತಿಮವಾಗಿ ಸಿನಿಮಾ ಸೆನ್ಸಾರ್‌ ಆಗಿದ್ದು ‘ಯು/ಎ’ ಸರ್ಟಿಫಿಕೇಟ್ ಪಡೆದು ಬಿಡುಗಡೆಗೆ ಸಿದ್ಧವಾಗಿದೆ.

“ಜೀವಾ ನವೀನ್ ನಿರ್ದೇಶನದ, ನಟಿ ವೈ.ಜಿ.ಉಮಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು ಮುಂದಿನ ತಿಂಗಳು ತೆರೆಕಾಣಲಿದೆ” ಎಂದು ಚಿತ್ರತಂಡ ತಿಳಿಸಿದೆ.

“ಶೋಷಿತ ವರ್ಗಗಳ, ದಲಿತರ ನೈಜ ಘಟನೆಗಳನ್ನು ಆಧರಿಸಿ ತೆಗೆದ ಸಿನೆಮಾ ಇದಾಗಿದೆ. ತಮಿಳು, ತೆಲುಗು ಭಾಷೆಗಳಿಗೆ ಸೀಮಿತವಾಗಿದ್ದ ನೆಲದ ಕಥೆಯನ್ನು ಕನ್ನಡದಲ್ಲೂ ಹೇಳಲು ಹೊರಟಿರುವ ಸಿನೆಮಾ ಪಾಲಾರ್” ಎಂದು ‘ಪಾಲಾರ್‌’ ತಂಡ ಮಾಹಿತಿ ನೀಡಿದೆ.

“ಕೋಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ ಸೊಗಡಿನ ಕನ್ನಡ ಭಾಷೆಯನ್ನು ಬಳಸಿದ ಕನ್ನಡದ ಮೊದಲ ಸಿನಿಮಾ ಇದಾಗಿದೆ. ಆಂಧ್ರಪ್ರದೇಶ, ಕರ್ನಾಟಕ ಗಡಿಭಾಗಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಅನ್ಯಾಯ ಅನುಭವಿಸುತ್ತಿರುವ ದಲಿತರ ಕಥೆಯನ್ನು ತೆರೆಗೆ ತರಲಾಗಿದೆ” ಎಂದಿದೆ.

“ಮಹಿಳೆ ತನ್ನ ಜೀವನದಲ್ಲಿ ಹೋರಾಟದ ಮೂಲಕ ಜಯವನ್ನು ಸಾಧಿಸಬಹುದು ಎಂದು ಇಲ್ಲಿ ತೋರಿಸಲಾಗಿದೆ. ಮರ್ಯಾದೆ ಹತ್ಯೆ, ಬಡವರ ಭೂಮಿ ಶ್ರೀಮಂತರ ಪಾಲಾಗುವುದು, ಜಮೀನ್ದಾರಿಗಳ ದೌರ್ಜನ್ಯ ಇತ್ಯಾದಿ ಪ್ರಮುಖ ಸಂಗತಿಗಳನ್ನು ಕತೆಯಲ್ಲಿ ತರಲಾಗಿದೆ” ಎಂದು ಹೇಳಿದೆ.

“ಸೆನ್ಸಾರ್ ಮುಗಿಸಿದ ಪಾಲಾರ್ ಸಿನೆಮಾಗೆ CBFC ಬೋರ್ಡ್ U/A (ಯು/ಎ) ಸರ್ಟಿಫಿಕೇಟ್ ನೀಡಿದೆ. ದಕ್ಷಿಣ ಭಾರತದ ಖ್ಯಾತ ನಟ ನಟಿಯರ, ಸಮಾಜದ ಮುಖಂಡರ, ಜನಸಾಮಾನ್ಯರ ಬೆಂಬಲ ಸಿಕ್ಕಿದೆ. ಈಗಾಗಲೇ ಪಾಲಾರ್ ಸಿನೆಮಾದ ಟ್ರೇಲರ್‌ ನೋಡಿ ಭರವಸೆ ವ್ಯಕ್ತಪಡಿಸಿದ್ದಾರೆ. ಪಾಲಾರ್ ಸಿನೆಮಾ ಗೆದ್ದರೆ ನಮ್ಮ ದೀನ ದಲಿತರ, ಬಡವರ, ನೆಲದ ಕಥೆಗಳು ಇನ್ನೂ ಹೆಚ್ಚಾಗಿ ಮೂಡಿ ಬರುತ್ತವೆ. ಇಲ್ಲವಾದಲ್ಲಿ ಇಂತಹ ಪ್ರಯತ್ನ ಯಾರೂ ಮಾಡುವುದಿಲ್ಲ. ಹೀಗಾಗಿ ನಮ್ಮ ಸಿನಿಮಾವನ್ನು ಕನ್ನಡಿಗರು ಗೆಲ್ಲಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್‌’ ಟೈಟಲ್‌ ವಿಶೇಷತೆ ಏನು?

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...