Homeಕರ್ನಾಟಕಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?: ಮೂಢನಂಬಿಕೆ ವಿರುದ್ಧ ನಟ ಕಿಶೋರ್‌ ಜಾಗೃತಿ

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?: ಮೂಢನಂಬಿಕೆ ವಿರುದ್ಧ ನಟ ಕಿಶೋರ್‌ ಜಾಗೃತಿ

- Advertisement -
- Advertisement -

“ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?” ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ನಟ ಕಿಶೋರ್‌, “ನಂಬಿಕೆ ಇರಲಿ ಮೂಢನಂಬಿಕೆ ಬೇಡ” ಜಾಗೃತಿ ಮೂಡಿಸಿದ್ದಾರೆ.

“ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳಿವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ” ಎಂದು ಅವರು ತಮ್ಮ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ” ಎಂದಿದ್ದಾರೆ.

“ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ.‘ ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ” ಎಂದು ತಿಳಿಸಿದ್ದಾರೆ.

ಕಾಂತಾರ ಸಿನಿಮಾ ಬಳಿಕ ಹಲವು ಚರ್ಚೆ

‘ಕಾಂತಾರ’ ಸಿನಿಮಾ ಬಿಡುಗಡೆಯಾಗಿ ಸದ್ದು ಮಾಡಿದ ಬೆನ್ನಲ್ಲೇ ಹಲವಾರು ಚರ್ಚೆಗಳು ಮುನ್ನೆಲೆಗೆ ಬಂದಿವೆ. ಕರಾವಳಿ ಭಾಗದಲ್ಲಿನ ದೈವಾರಾಧನೆಯ ಕುರಿತು ಬೆಳಕು ಚೆಲ್ಲಿದ್ದ ಕಾಂತಾರ, “ದೈವವನ್ನು ಚಿತ್ರಿಸಿರುವ ರೀತಿ”ಯ ಕಾರಣ ಹಲವು ವಿಶ್ಲೇಷಣೆಗಳಿಗೆ ಒಳಪಟ್ಟಿತ್ತು.

ಈ ಹಿಂದೆ ನಟ ಚೇತನ್‌, “ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದರು.

“ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ” ಎಂದು ತಿಳಿಸಿದ್ದರು.

ದೈವವನ್ನು ವೈಚಾರಿಕವಾಗಿಸದೆ ಮೌಢ್ಯವಾಗಿಸಿದ ಹೆಗ್ಗಳಿಕೆ ‘ಕಾಂತಾರ’ ಸಿನಿಮಾಕ್ಕೆ ಸಲ್ಲುತ್ತದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

‘ಕಾಂತಾರ- ಒಂದು ದಂತಕಥೆ’ ಎಂದು ರಿಷಬ್ ಹೇಳಿದ್ದಾರೆ. ಆದರೆ ಇದನ್ನು ಸಾಮಾನ್ಯ ಜನಸಮೂಹ ದಂತಕಥೆಯಾಗಿಯೋ, ಕಾಲ್ಪನಿಕವಾಗಿಯೋ ಗ್ರಹಿಸುವುದಕ್ಕಿಂತ ವಾಸ್ತವವೆಂಬಂತೆ ನಂಬಿಬಿಡುವ ಹಾಗೂ ಹಿಂದುತ್ವವಾದಿಗಳು ತಮ್ಮ ರಾಜಕಾರಣಕ್ಕೆ ಬಳಸಿಕೊಳ್ಳುವ ಅಪಾಯವಿರುತ್ತದೆ. ಸಂಸ್ಕೃತಿಯ ನೆಪದಲ್ಲಿ ದೃಶ್ಯ ಮಾಧ್ಯಮವೊಂದು ಮೌಢ್ಯವನ್ನು ರಾರಾಜಿಸುವುದು ಆತಂಕದ ಸಂಗತಿ. ಸಾಂಸ್ಕೃತಿಕ ಪರಿಕರಗಳನ್ನು ದೃಶ್ಯಮಾಧ್ಯಮಕ್ಕೆ ಒಳಪಡಿಸಿದಾಗ ಕಲಾತ್ಮಕತೆ ಹೆಚ್ಚುತ್ತದೆ ಎಂಬುದು ನೂರಕ್ಕೆ ನೂರರಷ್ಟು ನಿಜ. ಆದರೆ ಆ ಸಾಂಸ್ಕೃತಿಕ ಕಲಾತ್ಮಕತೆ ಮೌಢ್ಯದ ರೂಪವಾಗಿರಬಾರದು‌. ಅದು ರೂಪಕವಾಗಿ ಹೊಮ್ಮಬೇಕು. ಆಗ ಮಾತ್ರ ವಿಶಿಷ್ಟ ಅನುಭೂತಿಯನ್ನು ಕಲಾ ಮಾಧ್ಯಮವೊಂದು ನೀಡಬಲ್ಲದು‌ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...