Homeಮುಖಪುಟನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

ನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ..

- Advertisement -
- Advertisement -

₹ 1,000 ಮತ್ತು ₹ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲು ಸಾಧ್ಯವಿಲ್ಲ. ಹಾಗಾಗಿ ನೋಟು ಅಮಾನ್ಯೀಕರಣದ ಕುರಿತ ಸರ್ಕಾರದ ಅಧಿಸೂಚನೆಯು ಕಾನೂನುಬಾಹಿರ ಎಂದು ನ್ಯಾಯಮೂರ್ತಿ ಜಸ್ಟಿಸ್ ಬಿ.ವಿ.ನಾಗರತ್ನರವರು ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಭಿನ್ನಮತದ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ 4:1ರ ಬಹುಮತದ ಆಧಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಎತ್ತಿಹಿಡಿದಿದೆ. 4 ಜನ ನ್ಯಾಯಾಧೀಶರು ಕೇಂದ್ರ ನಿಲುವನ್ನು ಒಪ್ಪಿದರೆ ಒಬ್ಬರು ನ್ಯಾಯಾಧೀಶರು ಅರ್ಜಿದಾರರ ಪರ ತೀರ್ಪು ನೀಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಸೆಕ್ಷನ್ 26 ರ ಪ್ರಕಾರ ಆರ್‌ಬಿಐನ ಕೇಂದ್ರೀಯ ಮಂಡಳಿಯು ಸ್ವತಂತ್ರವಾಗಿ ನೋಟು ಅಮಾನ್ಯೀಕರಣವನ್ನು ಶಿಫಾರಸು ಮಾಡಿರಬೇಕು ಮತ್ತು ಅದು ಸರ್ಕಾರದ ಸಲಹೆಯ ಮೂಲಕ ಮಾಡಬಾರದಿತ್ತು. ಆರ್‌ಬಿಐ ಸ್ವತಂತ್ರ ಮನಸಿನಿಂದ ನೋಟು ನಿಷೇಧದ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಜಸ್ಟಿಸ್ ನಾಗರತ್ನರವರು ಒತ್ತಿ ಹೇಳಿದ್ದಾರೆ.

“ಆರ್‌ಬಿಐ ಸಲ್ಲಿಸಿದ ದಾಖಲೆಗಳನ್ನು ನೋಡಿದಾಗ, “ಕೇಂದ್ರ ಸರ್ಕಾರವು ಬಯಸಿದಂತೆ”, ಶಿಫಾರಸು ಪಡೆಯಲಾಗಿದೆ, “ಸರಕಾರವು 500 ಮತ್ತು 1000 ನೋಟುಗಳ ಕಾನೂನುಬದ್ಧ ಟೆಂಡರ್ ಅನ್ನು ಹಿಂಪಡೆಯಲು ಶಿಫಾರಸು ಮಾಡಿದೆ” ಎಂಬ ಪದಗಳು ಮತ್ತು ಪದಗುಚ್ಛಗಳ ಬಳಕೆಯನ್ನು ನಾನು ಗಮನಿಸಿದ್ದೇನೆ. ಇವೆಲ್ಲವೂ ಸ್ವಯಂ ವಿವರಣಾತ್ಮಕವಾಗಿವೆ. ಆರ್‌ಬಿಐ ಸ್ವಂತ ಮನಸ್ಸಿನಿಂದ ಯಾವುದೇ ಸ್ವತಂತ್ರ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಇಂತಹ ಗಂಭೀರ ತೀರ್ಮಾನ ತೆಗೆದುಕೊಳ್ಳುವಾಗ ಅದರ ಕುರಿತು ಆಲೋಚಿಸಲು ಸಹ ಆರ್‌ಬಿಐಗೆ ಸಮಯವಿರಲಿಲ್ಲ. 500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ” ಎಂದು ಅವರು ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

“ನನ್ನ ಅಭಿಪ್ರಾಯದಲ್ಲಿ 2016 ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ಅಮಾನ್ಯೀಕರಣವು ಕಾನೂನಿಗೆ ವಿರುದ್ಧವಾದ ಅಧಿಕಾರ ಚಲಾಯಿಸಿ ಜಾರಿಗೊಳಿಸಿರುವುದರಿಂದ ಅದು ಕಾನೂನುಬಾಹಿರ” ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯೀಕರಣವು ಸದುದ್ದೇಶದಿಂದ ಕೂಡಿತ್ತು ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಉತ್ತಮ ಉದ್ದೇಶದ ಪ್ರಶ್ನೆಯಲ್ಲ. ಇದು ಕಪ್ಪು ಹಣ, ಭಯೋತ್ಪಾದಕ ನಿಧಿಯಂತಹ ದುಷ್ಟಶಕ್ತಿಗಳನ್ನು ಗುರಿಯಾಗಿಸಿದೆ. ಆರ್‌ಬಿಐ ಕಾಯಿದೆಯ ಪ್ರಕಾರ ನೋಟು ಅಮಾನ್ಯೀಕರಣದ ಶಿಫಾರಸು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಂಡಳಿಯಿಂದ ಪ್ರಸ್ತಾಪವಾಗಬೇಕು. ಆದರೆ ಈ ಪ್ರಕರಣದಲ್ಲಿ ಕೇಂದ್ರವು ನವೆಂಬರ್ 7 ರಂದು ಆರ್‌ಬಿಐಗೆ ಪತ್ರ ಬರೆದು ಅಂತಹ ಶಿಫಾರಸಿಗೆ ಸಲಹೆ ನೀಡಿದೆ. ಹಾಗಾಗಿ ಈ ಕ್ರಮವು ಕಾನೂನುಬಾಹಿರವಾಗಿ ಜಾರಿಯಾಗಿದೆ ಎಂದಿದ್ದಾರೆ.

ನಮ್ಮ ದೇಶದ ಸಂಸತ್ತು ನಮ್ಮ ಇಡೀ ಭಾರತವನ್ನು ಪ್ರತಿನಿಧಿಸುತ್ತದೆ. ಪ್ರಜಾಪ್ರಭುತ್ವದ ಕೇಂದ್ರವಾಗಿರುವ ಸಂಸತ್ತು ಇಂತಹ ನಿರ್ಣಾಯಕ ಪ್ರಾಮುಖ್ಯತೆಯ ವಿಷಯದಲ್ಲಿ ದೂರವಿರಲು ಸಾಧ್ಯವಿಲ್ಲ ಎಂದು ಜಸ್ಟೀಸ್ ನಾಗರತ್ನರವರು ಅಭಿಪ್ರಾಯಪಟ್ಟಿದ್ದಾರೆ.

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: 2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...