Homeಮುಖಪುಟಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

ಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

- Advertisement -
- Advertisement -

ಪ್ರದೀಪ್ ಎಂಬ ಉದ್ಯಮಿಯೊಬ್ಬರು ಹಣಕಾಸಿನ ವಂಚನೆಯಾಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸರು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR ದಾಖಲಿಸಿದ್ದಾರೆ.

ಮೃತ ಪ್ರದೀಪ್ ಪತ್ನಿ ನೀಡಿದ ದೂರಿನ ಅನ್ವಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಅರವಿಂದ ಲಿಂಬಾವಳಿ ಸೇರಿದಂತೆ ಡೆತ್‌ನೋಟ್‌ನಲ್ಲಿ ಹೆಸರಿದ್ದ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರೆಸಾರ್ಟ್ ನಿರ್ಮಾಣಕ್ಕೆ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ, ಇವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ 6 ಜನರ ಹೆಸರು ಬರೆದಿಟ್ಟು ಉದ್ಯಮಿಯೊಬ್ಬರು ಕಗ್ಗಲಿಪುರ ಬಳಿಯ ನೆಟ್ಟಿಗೆರೆ ಗ್ರಾಮದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೈಸೂರು ನಿವಾಸಿ ಪ್ರದೀಪ್ (47) ಎಂಬ ಉದ್ಯಮಿಯೊಬ್ಬರು ಜನವರಿ 1 ರ ಭಾನುವಾರದಂದು ಕಾರಿನಲ್ಲಿ ಕುಳಿತು ತಮ್ಮ ತಲೆಗೆ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾರೆ. ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ಎಂಬವರ ಹೆಸರಿನ ಜೊತೆಗೆ ಅವರ ಮೊಬೈಲ್ ಸಂಖ್ಯೆಯನ್ನು ಸಹ ನಮೂದಿಸಲಾಗಿದೆ.

“ಈ ಕೆಳಕಂಡ ವ್ಯಕ್ತಿಗಳ ಕಾರಣದಿಂದಾಗಿ ನಾನು ಈ ಅತಿಯಾದ ನಿರ್ಧಾರಕ್ಕೆ ಬರುತ್ತಿದ್ದೇನೆ. ನನ್ನ ಸಾವಿನ ನಂತರ ಈ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ನನ್ನ ಸಾವಿಗೆ ನ್ಯಾಯ ದೊರಕಿಸಿಕೊಡಿ. ಕೊನೆಯದಾಗಿ ನನ್ನ ಕುಟುಂಬದ ವ್ಯಕ್ತಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಐವರು ಸ್ನೇಹಿತರ ಜೊತೆ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ಪ್ರದೀಪ್ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಹಣವನ್ನು ವಾಪಸ್ ಮಾಡದೆ ಆ ಸ್ನೇಹಿತರು ಮೋಸ ಮಾಡಿದ್ದರು ಎಂದು ಪ್ರದೀಪ್ ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಮಧ್ಯಸ್ಥಿಕೆ ವಹಿಸಿದ್ದ ಬೆಂಗಳೂರಿನ ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರು ಸಹ ನನಗೆ ಮೋಸ ಮಾಡಿದ್ದಾರೆ. ಅವರಿಗೆ ಅರವಿಂದ್ ಲಿಂಬಾವಳಿ ಸಹಕರಿಸಿದ್ದಾರೆ ಎಂದು ಪ್ರದೀಪ್ ದೂರಿದ್ದಾರೆ.

ಮಧ್ಯಸ್ಥಿಕೆ ವಹಿಸಿದ್ದ ಲಿಂಬಾವಳಿಯವರು ಕೆಲವು ತಿಂಗಳು ಕಾಲವಕಾಶ ಪಡೆದು ಪ್ರತಿ ತಿಂಗಳು 10 ಲಕ್ಷ ರೂ ನೀಡಲು ಸೂಚಿಸಿದ್ದರು. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಸಾಲ ತೀರಿಸಲು ಮನೆ ಮಾರಿದ್ದೆ. ಮತ್ತೆ ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ ಸ್ನೇಹಿತರು ಕೇವಲ ಒಂದು ತಿಂಗಳು ಮಾತ್ರ ಪಾವತಿಸಿ, ಬಳಿಕ ಹಣ ನೀಡದೇ ಮತ್ತೆ ಮೋಸ ಮಾಡಿದ್ದಾರೆ. ಅರವಿಂದ ನಿಂಬಾವಳಿಯವರು ಅವರ ಪರ ವಹಿಸಿದ್ದಾರೆ ಎಂದು ಡೆತ್​ನೋಟ್​ನಲ್ಲಿ ಆರೋಪಿಸಲಾಗಿದೆ.

ಉದ್ಯಮಿಯ ಆತ್ಮಹತ್ಯೆ ವಿಷಯ ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. “ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ ಮಾಡಲಾಯಿತು. ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ ಮಾಡಲಾಗಿದೆ. ಈಗ ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ ಮಾಡಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ. ಅವರು CCM (“ಕ್ರಿಮಿನಲ್ಸ್ ಕೇರ್‌ಟೇಕರ್ ಮಿನಿಸ್ಟರ್”) ಆಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...