Homeಕರ್ನಾಟಕಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

- Advertisement -
- Advertisement -

ಶತಮಾನದ ಸಂತ ಎಂಬ ಗೌರವಕ್ಕೆ ಪಾತ್ರರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು.

ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ವಿಜಯಪುರದ ಜ್ಞಾನಯೋಗಾಶ್ರಮದತ್ತ ಜನರು ಸಾಗರೋಪಾದಿಯಲ್ಲಿ ಧಾವಿಸುತ್ತಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಸ್ವಾಮೀಜಿಯವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸ್ವಾಮೀಜಿಯವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸೂಚಿಸಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24ರಂದು ಜನಿಸಿದ್ದ ಸ್ವಾಮೀಜಿಯವರ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ 4ನೇ ತರಗತಿವರೆಗೆ ಓದಿದ ನಂತರ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಆಶ್ರಯಪಡೆದರು.

ತಾವು ಪ್ರವಚನ ಮಾಡುವ ಸ್ಥಳಗಳಿಗೆ ಮಲ್ಲಿಕಾರ್ಜುನಾ ಸ್ವಾಮೀಜಿಯವರು, ಸಿದ್ದೇಶ್ವರರನ್ನು ಕರೆದುಕೊಂಡು ಹೋಗುತ್ತಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಸ್ವಾಮೀಜಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಪಡೆದರು.

ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಅಪಾರ ಪಾಂಡಿತ್ಯವಿತ್ತು. ಅತ್ಯಂತ ಸರಳವಾಗಿ ಬದುಕುತ್ತಾ, ಅಧ್ಯಾತ್ಮವನ್ನು ಬೋಧಿಸಿದರು.

ಜನತೆಗೆ ಜ್ಞಾನದಾಸೋಹ ನೀಡುವ ಮೂಲಕ ಜ್ಞಾನಯೋಗಾಶ್ರಮ, ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕೊಲ್ಹಾಪುರದಲ್ಲಿ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಯವರು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ದಾಂತ ಶಿಖಾಮಣಿ’ ಎಂಬ ಪುಸ್ತಕವನ್ನು ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಸ್ವಾಮೀಜಿಯವರು ವಚನಕಾರರ ಅಧ್ಯಾತ್ಮವನ್ನು ಜನರಿಗೆ ಸರಳವಾಗಿ ಬಿಡಿಸಿ ಹೇಳಿದರು. ಬದುಕಿನ ಮಾರ್ಗವನ್ನು ತೋರಿದರು. ‘ಪತಂಜಲಿಯ ಯೋಗಶಾಸ್ತ್ರ’ವನ್ನು ಸಂಪಾದಿಸಿದರು.

ಗಣ್ಯರ ಸಂತಾಪ

ಸ್ವಾಮೀಜಿಯವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದು, “ದೇಶ ಕಂಡ ಶ್ರೇಷ್ಟ ಸಂತರು,ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಜ್ಞಾನಯೋಗಾಶ್ರಮದ ಪೀಠಾಧೀಶರಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾಗದ ನಷ್ಟ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...