Homeಕರ್ನಾಟಕಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

- Advertisement -
- Advertisement -

ಶತಮಾನದ ಸಂತ ಎಂಬ ಗೌರವಕ್ಕೆ ಪಾತ್ರರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು.

ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ವಿಜಯಪುರದ ಜ್ಞಾನಯೋಗಾಶ್ರಮದತ್ತ ಜನರು ಸಾಗರೋಪಾದಿಯಲ್ಲಿ ಧಾವಿಸುತ್ತಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಸ್ವಾಮೀಜಿಯವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸ್ವಾಮೀಜಿಯವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸೂಚಿಸಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24ರಂದು ಜನಿಸಿದ್ದ ಸ್ವಾಮೀಜಿಯವರ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ 4ನೇ ತರಗತಿವರೆಗೆ ಓದಿದ ನಂತರ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಆಶ್ರಯಪಡೆದರು.

ತಾವು ಪ್ರವಚನ ಮಾಡುವ ಸ್ಥಳಗಳಿಗೆ ಮಲ್ಲಿಕಾರ್ಜುನಾ ಸ್ವಾಮೀಜಿಯವರು, ಸಿದ್ದೇಶ್ವರರನ್ನು ಕರೆದುಕೊಂಡು ಹೋಗುತ್ತಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಸ್ವಾಮೀಜಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಪಡೆದರು.

ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಅಪಾರ ಪಾಂಡಿತ್ಯವಿತ್ತು. ಅತ್ಯಂತ ಸರಳವಾಗಿ ಬದುಕುತ್ತಾ, ಅಧ್ಯಾತ್ಮವನ್ನು ಬೋಧಿಸಿದರು.

ಜನತೆಗೆ ಜ್ಞಾನದಾಸೋಹ ನೀಡುವ ಮೂಲಕ ಜ್ಞಾನಯೋಗಾಶ್ರಮ, ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕೊಲ್ಹಾಪುರದಲ್ಲಿ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಯವರು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ದಾಂತ ಶಿಖಾಮಣಿ’ ಎಂಬ ಪುಸ್ತಕವನ್ನು ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಸ್ವಾಮೀಜಿಯವರು ವಚನಕಾರರ ಅಧ್ಯಾತ್ಮವನ್ನು ಜನರಿಗೆ ಸರಳವಾಗಿ ಬಿಡಿಸಿ ಹೇಳಿದರು. ಬದುಕಿನ ಮಾರ್ಗವನ್ನು ತೋರಿದರು. ‘ಪತಂಜಲಿಯ ಯೋಗಶಾಸ್ತ್ರ’ವನ್ನು ಸಂಪಾದಿಸಿದರು.

ಗಣ್ಯರ ಸಂತಾಪ

ಸ್ವಾಮೀಜಿಯವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದು, “ದೇಶ ಕಂಡ ಶ್ರೇಷ್ಟ ಸಂತರು,ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಜ್ಞಾನಯೋಗಾಶ್ರಮದ ಪೀಠಾಧೀಶರಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾಗದ ನಷ್ಟ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...