Homeಮುಖಪುಟಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

“ಎಲ್ಲಾ ವಿಡಿಯೊಗಳು ಮತ್ತು ಆಡಿಯೊಗಳನ್ನು ಪೊಲೀಸರಿಗೆ ಒಪ್ಪಿಸುತ್ತೇನೆ. ಅಣ್ಣಾಮಲೈ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದಿದ್ದಾರೆ ಗಾಯತ್ರಿ ರಘುರಾಮ್.

- Advertisement -
- Advertisement -

ಬಿಜೆಪಿಯಿಂದ ಅಮಾನತಿಗೆ ಒಳಗಾದ ನಲವತ್ತು ದಿನಗಳ ನಂತರ ತಮಿಳು ನಟಿ ಗಾಯತ್ರಿ ರಘುರಾಮ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಕೆ.ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ.

2014ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಗಾಯತ್ರಿ ರಘುರಾಮ್‌, “ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಲ್ಲಿ ಮಹಿಳೆಯರು ಸುರಕ್ಷಿತವಾಗಿರುವುದಿಲ್ಲ” ಎಂದು ಆರೋಪಿಸಿದ್ದಾರೆ. ಅಣ್ಣಾಮಲೈ ಬೆಂಬಲಿಗರು ತನ್ನನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿರುವುದಕ್ಕೆ ಗಾಯತ್ರಿಯವರು ಬೇಸರ ವ್ಯಕ್ತಪಡಿಸಿದ್ದಾರೆ.

ಡಿಎಂಕೆ ಸಂಸದ ತಿರುಚಿ ಶಿವ ಅವರ ಪುತ್ರ ಸೂರ್ಯ ಶಿವ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಅಣ್ಣಾಮಲೈ ಅವರ ನಿರ್ಧಾರವನ್ನು ಗಾಯತ್ರಿಯವರು ಸಾರ್ವಜನಿಕವಾಗಿ ಟೀಕಿಸಿದ ನಂತರ ನವೆಂಬರ್ 22ರಂದು ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಯಿತು. ನಂತರ ಸೂರ್ಯ ಶಿವ ಅವರು ಗಾಯತ್ರಿಯವರಿಗೆ ಫೋನ್‌ ಮಾಡಿ ಅವಾಚ್ಯವಾಗಿ ಮಾತನಾಡಿದ್ದು ವರದಿಯಾಗಿತ್ತು.

“ಅಣ್ಣಾಮಲೈ ಬೆಂಬಲಿಗರು ಸಾಮಾಜಿಕ ಮಾಧ್ಯಮದಲ್ಲಿ ‘ಅನಾವಶ್ಯಕವಾಗಿ’ ಟಾರ್ಗೆಟ್ ಮಾಡಿದ್ದಾರೆ. ಹೆಚ್ಚು ಟ್ರೋಲ್ ಮಾಡುತ್ತಿದ್ದಾರೆ” ಎಂದು ನಟಿ ಅಳಲು ತೋಡಿಕೊಂಡಿದ್ದರು. “ಬಿಜೆಪಿಯಲ್ಲಿ ಮಹಿಳೆಯರನ್ನು ನಿಂದಿಸುವವರನ್ನು ರಕ್ಷಿಸಲಾಗುತ್ತಿದೆ” ಎಂದು ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿಯಾದ ಅಣ್ಣಾಮಲೈ ಅವರನ್ನು ನಟಿ ಟೀಕಿಸಿದ್ದಾರೆ.

“ಮಹಿಳೆಯರ ವಿಚಾರಣೆ, ಸಮಾನ ಹಕ್ಕುಗಳು ಮತ್ತು ಗೌರವಕ್ಕೆ ಅವಕಾಶ ನೀಡದಿದ್ದಕ್ಕಾಗಿ ನಾನು ತಮಿಳುನಾಡು ಬಿಜೆಪಿಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಭಾರವಾದ ಹೃದಯದಿಂದ ತೆಗೆದುಕೊಂಡಿದ್ದೇನೆ. ಅಣ್ಣಾಮಲೈ ನೇತೃತ್ವದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ನಾನು ಹೊರಗಿನ ವ್ಯಕ್ತಿಯಾಗಿ ಟ್ರೋಲ್ ಆಗುವುದು ಉತ್ತಮ” ಎಂದು ಅವರು ತಮ್ಮ ಟ್ವಿಟರ್‌‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಗಾಯತ್ರಿ ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ತಮಿಳುನಾಡು ಬಿಜೆಪಿ ಘಟಕದಲ್ಲಿ ನಿಜವಾದ ಕಾರ್ಯಕರ್ತರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂಥವರನ್ನು ಹೊರಗೆ ಓಡಿಸುವುದೇ ಏಕೈಕ ಗುರಿಯಾಗಿದೆ ಎಂದಿದ್ದಾರೆ.

“ನಾನು ಬಿಜೆಪಿಗೆ ಶುಭ ಹಾರೈಸುತ್ತೇನೆ. ನಾನು ಈ ಆತುರದ ನಿರ್ಧಾರ ತೆಗೆದುಕೊಂಡಿದ್ದರ ಶ್ರೇಯ ಅಣ್ಣಾಮಲೈ ಅವರಿಗೆ ಸಲ್ಲುತ್ತದೆ. ಮುಂದೆ ನಾನು ಅಣ್ಣಾಮಲೈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಬಯಸುವುದಿಲ್ಲ. ಅವರು ಅಗ್ಗದ ತಂತ್ರಗಾರಿಕೆಯ ಸುಳ್ಳುಗಾರ ಮತ್ತು ಅಧಾರ್ಮಿಕ ನಾಯಕ” ಎಂದು ಕುಟುಕಿದ್ದಾರೆ.

ಅಣ್ಣಾಮಲೈ ಅವರು ಅಧಿಕಾರ ವಹಿಸಿಕೊಂಡು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಸ್ಥಾನದಿಂದ ಗಾಯತ್ರಿ ಅವರನ್ನು ತೆಗೆದು ಹಾಕಿದ ಬಳಿಕ ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಭಾವನೆಯನ್ನು ಗಾಯತ್ರಿ ವ್ಯಕ್ತಪಡಿಸಿದ್ದರು. ತದನಂತರ ಗಾಯತ್ರಿಯವರಿಗೆ ಮತ್ತೊಂದು ವಿಭಾಗದ ಉಸ್ತುವಾರಿ ವಹಿಸಲಾಯಿತು. ಆದರೆ ಆ ಹುದ್ದೆಯ ಜವಾಬ್ದಾರಿ ಅವರಿಗೆ ಖುಷಿ ತಂದಿರಲಿಲ್ಲ.

“ಬಿಜೆಪಿಯ ಪುರುಷ ಮಹನೀಯರು, ಮಹಿಳೆಯರ ಮೇಲೆ ಎಸಗಿರುವ ದೌರ್ನಜ್ಯಗಳಿಗೆ ಸಂಬಂಧಿಸಿದ ಆಡಿಯೋ ಮತ್ತು ವಿಡಿಯೋ ಟೇಪ್‌ಗಳು ಇವೆ” ಎಂದು ನಟಿ ಮಾಹಿತಿ ನೀಡಿದ್ದಾರೆ.

“ನಾನು ಪೊಲೀಸ್ ದೂರು ನೀಡಲು ಸಿದ್ಧನಿದ್ದೇನೆ. ಎಲ್ಲಾ ವೀಡಿಯೊಗಳು ಮತ್ತು ಆಡಿಯೊಗಳನ್ನು ಒಪ್ಪಿಸುತ್ತೇನೆ. ಅಣ್ಣಾಮಲೈ ಅವರ ಮೇಲೆ ಮತ್ತಷ್ಟು ತನಿಖೆಯಾಗಲಿ” ಎಂದು ಆಗ್ರಹಿಸಿದ್ದಾರೆ. ರಘುರಾಮ್ ಅವರ ಆರೋಪಗಳಿಗೆ ಅಣ್ಣಾಮಲೈ ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...