Homeಮುಖಪುಟರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಿಲ್ಲ: ಚಿತ್ರನಟ ಸೂರ್ಯನ ಹೇಳಿಕೆ ಬೆಂಬಲಿಸಿದ ರಜಿನಿಕಾಂತ್, ಕಮಲ್ ಹಾಸನ್..

- Advertisement -
- Advertisement -

ಮಕ್ಕಳ್ ನೀದಿ ಮಯ್ಯುಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ನಂತರ, ಸೂಪರ್ ಸ್ಟಾರ್ ನಟ ಮತ್ತು ರಾಜಕಾರಣಿ ರಜನಿಕಾಂತ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ವಿರುದ್ಧದ ನಿಲುವು ತಾಳಿದ್ದ ತಮಿಳು ಚಿತ್ರ ತಾರೆ ಸೂರ್ಯ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಕಳೆದ ವಾರ, ಸೂರ್ಯ ಸ್ಥಾಪಿಸಿದ ಅಗರಂ ಫೌಂಡೇಶನ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಜಿನಿಕಾಂತ್ “ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಶಿಕ್ಷಣದ ಗುಣಮಟ್ಟ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚುವುದು ಮತ್ತು ಮೂರು ಭಾಷಾ ನೀತಿ ಸೇರಿದಂತೆ ಹಲವು ಅಂಶಗಳಲ್ಲಿ ಈ ಶಿಕ್ಷಣ ನೀತಿಯ ದೋಷಗಳನ್ನು ಅವರು ಎತ್ತಿ ತೋರಿಸಿದ್ದಾರೆ. ಸರ್ಕಾರವು ಪ್ರಕಟಿಸಿರುವ ಇತ್ತೀಚಿನ ಕರಡು ನೀತಿ ಕುರಿತು ಚರ್ಚಿಸಲು, ಅದರ ಸರಿ ತಪ್ಪುಗಳನ್ನು ಗುರುತಿಸಲು  ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂದೆ ಬರಬೇಕೆಂದು ರಜಿನಿಕಾಂತ್ ಒತ್ತಾಯಿಸಿದ್ದಾರೆ. ಅವರ ಭಾಷಣವನ್ನು ಹಲವು ರಾಜಕಾರಣಿಗಳು ಬೆಂಬಲಿಸಿದರೆ ಮತ್ತೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

‘ರಜಿನಿ ಹೇಳಿದ್ದರೆ ಮೋದಿ ಕೇಳುತ್ತಿದ್ದರು’

ಮತ್ತು ಈಗ ರಜನಿಕಾಂತ್ ಅವರನ್ನೂ ತೆಗೆದುಕೊಂಡಿದ್ದಾರೆ. ಆಡಿಯೋ ಲಾಂಚ್‌ನಲ್ಲಿ ಅವರು, “ಸೂರ್ಯನ ಮತ್ತೊಂದು ಮುಖವು ಕೆಲವು ದಿನಗಳ ಹಿಂದೆ ಬಹಿರಂಗವಾಯಿತು. ಶಿಕ್ಷಣದ ಕುರಿತು ಅವರು ನೀಡಿದ ಭಾಷಣ ಮತ್ತು ಅವರು ಕೇಳಿದ ಪ್ರಶ್ನೆಗಳು, ಅವುಗಳಲ್ಲಿ ಹಲವಾರು ಸಂಗತಿಗಳನ್ನು ನಾನು ಒಪ್ಪುತ್ತೇನೆ. ಇದು ಒಂದು ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿತು ಮತ್ತು ಜಾಗೃತಿ ಮೂಡಿಸಿತು. ಸೂರ್ಯ ಸುಮ್ಮನೆ ಹೇಳಿಕೆ ನೀಡಿಲ್ಲ. ಅವರು ತಮ್ಮ ಅಗರಂ ಫೌಂಡೇಶನ್‌ಗೆ ಸಂಬಂಧಿಸಿದ ವಿದ್ಯಾರ್ಥಿಗಳ ತೊಂದರೆಗಳ ಬಗ್ಗೆ ಮಾತನಾಡಿದ ಅವರು ಅದನ್ನು ತಮ್ಮ ಕಣ್ಣಾರೆ ನೋಡಿದ್ದಾರೆ. ಇದೇ ಮಾತನ್ನು ರಜಿನಿ ಹೇಳಿದ್ದರೆ ಇಷ್ಟೊತ್ತಿಗೆ ಮೋದಿಗೆ ತಲುಪುತ್ತಿತ್ತು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಈಗಾಗಲೇ ಮೋದಿ ತಲುಪಿಯಾಗಿದೆ ಎಂದು ರಜಿನಿಕಾಂತ್ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಅವರು, ಮೊದಲು ತಮ್ಮ ಚಿತ್ರಗಳತ್ತ ಗಮನ ಹರಿಸಬೇಕಾಗಿ ಸೂರ್ಯನಿಗೆ ಸೂಕ್ಷ್ಮ ಎಚ್ಚರಿಕೆ ಸಹ ನೀಡಿದ್ದಾರೆ.

“ಮಕ್ಕಳಿಗೆ ಸಾಕಷ್ಟು ಮಹತ್ವಾಕಾಂಕ್ಷೆಗಳು ಇರುತ್ತವೆ ಆದರೆ ಪೋಷಕರು ನೀವು ಮೊದಲು ನಿಮ್ಮ ಪದವಿಯನ್ನು ಮುಗಿಸಬೇಕು ಎಂದು ಹೇಳುತ್ತಾರೆ. ಅದೇ ರೀತಿ ಸೂರ್ಯ ಚಿತ್ರರಂಗದಲ್ಲಿ ಪದವಿ ಮುಗಿಸಬೇಕು, ಅವನು ಸಾಕಷ್ಟು ಚಲನಚಿತ್ರಗಳಲ್ಲಿ ನಟಿಸಬೇಕು ಮತ್ತು ಹಲವಾರು ಹಿಟ್‌ಗಳನ್ನು ನೀಡಬೇಕು. ಅವನಿಗೆ ಇನ್ನೂ ವಯಸ್ಸು ಇದೆ ಮತ್ತು ಅವರು ಉತ್ತಮ ಆರೋಗ್ಯದಿಂದ ದೀರ್ಘಕಾಲ ಬದುಕಬೇಕು. ಚಲನಚಿತ್ರ ಅಭಿಮಾನಿಗಳಿಗೆ ಮಾತ್ರವಲ್ಲ, ಜನರಿಗೆ ಸಹ ನಿಮ್ಮ ಕೊಡುಗೆ ಬೇಕು “ಎಂದು ಅವರು 43 ವರ್ಷದ ನಟ ಸೂರ್ಯನಿಗೆ ತಿಳಿಸಿದರು.

ಸೂರ್ಯ ಅವರ ಅಭಿಪ್ರಾಯಗಳನ್ನು ಬೆಂಬಲಿಸಿ ಮತ್ತು ಶಿಕ್ಷಣ ನೀತಿ ಕುರಿತು ನಿಮ್ಮ ಅಭಿಪ್ರಾಯ ದಾಖಲಿಸಿ ಎಂದು ಟ್ವಿಟ್ಟರ್ ನಲ್ಲಿ ಕಮಲ್ ಹಾಸನ್ ಕರೆ ನೀಡಿದ್ದರು. ತದನಂತರ ರಜಿನಿಕಾಂತ್ ರವರಿಂದ ಈ ಪ್ರತಿಕ್ರಿಯೆ ಬಂದಿರುವುದು ಕುತೂಹಲಕಾರಿಯಾಗಿದೆ.

“ಸೂರ್ಯ ಎತ್ತುವ ಅನೇಕ ಅಂಶಗಳನ್ನು ನಾನು ಒಪ್ಪುತ್ತೇನೆ ಮತ್ತು ಅವರಿಗೆ ನನ್ನ ಬೆಂಬಲವಿದೆ. ರಾಜ್ಯದ ಕುರಿತು ಕೇಂದ್ರದ ನಿರಂಕುಶಾಧಿಕಾರಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಶಿಕ್ಷಣದ ಬಗ್ಗೆ ಮಾತನಾಡಲು ಸೂರ್ಯ ಅವರಿಗೆ ಎಲ್ಲ ಹಕ್ಕಿದೆ, ಏಕೆಂದರೆ ಬಡವರ ಪರವಾಗಿ ಅವರ ಮತ್ತು ಅವರ ಕುಟುಂಬವು ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದೆ”ಎಂದು ಕಮಲ್ ಹಾಸನ್ ಹೇಳಿದ್ದರು.

ಸೂರ್ಯರವರು ಹೇಳಿದ್ದೇನು?

ಕಳೆದ ಹತ್ತು ವರ್ಷಗಳಿಂದ ಅಗರಂ ಸಂಸ್ಥೆ ನಡೆಸುತ್ತಿರುವ ಸೂರ್ಯರವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನಾಧರಿಸಿದ ತಮ್ಮ ಭಾಷಣದಲ್ಲಿ  ಸರ್ಕಾರಿ ಶಾಲೆಗಳಲ್ಲಿ ಸುಮಾರು 30% ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಅಧ್ಯಯನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ “ನೀಟ್ ಬರೆಯಿರಿ ಎಂದು ಹೇಗೆ ಕೇಳುತ್ತೀರಿ?” ಎಂದಿದ್ದಾರೆ. ನೀಟ್ ರಾಜ್ಯದಲ್ಲಿ ಸಾಮಾಜಿಕ ಅಸಮತೋಲನವನ್ನು ಉಂಟುಮಾಡಿದೆ ಎಂದ ಸೂರ್ಯ, ಈ ಪ್ರವೃತ್ತಿಯು ಶಾಲೆಗಳನ್ನು “ಕೋಚಿಂಗ್ ಸೆಂಟರ್” ಗಳನ್ನಾಗಿ ಮಾಡಲು ಕಾರಣವಾಗುತ್ತದೆ ಎಂದು ಒತ್ತಿ ಹೇಳಿದರು. “ಯಾವುದೇ ಬೋಧನೆ ಇರುವುದಿಲ್ಲ ಆದರೆ ತರಬೇತಿ ಮಾತ್ರ ಆಗಿದೆ. ಈಗ ದೇಶದ ಕೋಚಿಂಗ್ ಕೇಂದ್ರಗಳು ವಾರ್ಷಿಕವಾಗಿ 5000 ಕೋಟಿ ರೂಪಾಯಿಗಳನ್ನು ಗಳಿಸುತ್ತವೆ, ”ಎಂದು ಅವರು ಹೇಳಿದರು.

1:10 ಕ್ಕಿಂತ ಕಡಿಮೆ ಶಿಕ್ಷಕರ ವಿದ್ಯಾರ್ಥಿ ಅನುಪಾತ ಹೊಂದಿರುವ ಅಂಗನವಾಡಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಕಸ್ತೂರಿ ರಂಗನ್ ಸಮಿತಿ ಕರಡಿನಲ್ಲಿ ಸೂಚಿಸಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ದೂರದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಏನು ಮಾಡುವುದು? ಬುಡಕಟ್ಟು ವಿದ್ಯಾರ್ಥಿಗಳು ಎಲ್ಲಿಗೆ ಹೋಗುತ್ತಾರೆ? ಅವರ ಪ್ರಾಥಮಿಕ ಶಿಕ್ಷಣಕ್ಕೆ ಏನಾಗುತ್ತದೆ? ಭಾರತದ ಆತ್ಮವು ಅದರ ಹಳ್ಳಿಗಳಲ್ಲಿದೆ ಎಂದು ಅವರು ಹೇಳುತ್ತಾರೆ. ಆದರೆ ನಾವು ದೇಶಾದ್ಯಂತ 60% ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಂತರ ಅವರು ತ್ರಿ ಭಾಷಾ ನೀತಿಯನ್ನು ಟೀಕಿಸಿದ ಅವರು ಈ ಹಿಂದಿ ಹೇರಿಕೆಯಿಂದ “ವಿದ್ಯಾರ್ಥಿಗಳು ಶಾಲೆಗಳಿಗೆ ಹೇಗೆ ಹೋಗುತ್ತಾರೆ? ಮೊದಲ ತಲೆಮಾರಿನ ವಿದ್ಯಾರ್ಥಿಗಳಿಗೆ ಏನಾಗಬಹುದು? ಒಂದು ಭಾಷೆಯನ್ನು ಅವರ ಮೇಲೆ ಹೇರಿದರೆ ಅವರು ಅದನ್ನು ಹೇಗೆ ನಿಭಾಯಿಸುತ್ತಾರೆ? ನಾವೆಲ್ಲರೂ ಅದರ ಬಗ್ಗೆ ಸುಮ್ಮನಿದ್ದರೆ, ಅದು ಮುಂದೆ ಖಂಡಿತವಾಗಿಯೂ ನಮ್ಮ ಮೇಲೆ ಹೇರುತ್ತದೆ.” ಎಂದಿದ್ದಾರೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...