Homeಮುಖಪುಟಛತ್ತೀಸ್‌ಗಡ: ಚರ್ಚ್‌ ಮೇಲೆ ದಾಳಿ; ಬಿಜೆಪಿ ಮುಖಂಡ ಸೇರಿ ಐವರ ಬಂಧನ

ಛತ್ತೀಸ್‌ಗಡ: ಚರ್ಚ್‌ ಮೇಲೆ ದಾಳಿ; ಬಿಜೆಪಿ ಮುಖಂಡ ಸೇರಿ ಐವರ ಬಂಧನ

- Advertisement -
- Advertisement -

ಛತ್ತೀಸ್‌ಗಡ ನಾರಾಯಣಪುರ ಜಿಲ್ಲೆಯ ಚರ್ಚ್‌ನ ಮೇಲೆ ನಡೆದ ಗುಂಪು ದಾಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಮುಖಂಡ ಸೇರಿದಂತೆ ಐವರನ್ನು ಛತ್ತೀಸ್‌ಗಢ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಬಿಜೆಪಿ ಮುಖಂಡ ರೂಪಸಾಯಿ ಸಲಾಂ, ಪವನ್‌ಕುಮಾರ್ ನಾಗ್, ಅತುಲ್ ನೇತಮ್, ಅಂಕಿತ್ ನಂದಿ ಮತ್ತು ದೊಮೇಂದ್ರ ಯಾದವ್ ಬಂಧಿತರು ಎಂದು ಗುರುತಿಸಲಾಗಿದೆ.

ಅಕ್ರಮವಾಗಿ ಧಾರ್ಮಿಕ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಆದಿವಾಸಿಗಳ ಗುಂಪು ನಾರಾಯಣಪುರದ ಎಡ್ಕಾ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ನಂತರ ಚರ್ಚ್ ಅನ್ನು ಧ್ವಂಸಗೊಳಿಸಲಾಗಿತ್ತು. ಆದಿವಾಸಿಗಳ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಎಂಟು ಜನರು ಗಾಯಗೊಂಡ ಒಂದು ದಿನದ ನಂತರ ಬಂಧನ ನಡೆದಿದೆ.

ಸೋಮವಾರ ನಡೆದ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ದಾಳಿಗೊಳಗಾದ ಪೊಲೀಸ್ ಅಧಿಕಾರಿಗಳ ಪೈಕಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಕೂಡ ಸೇರಿದ್ದಾರೆ.

ಗಲಭೆ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಚರ್ಚ್ ಅನ್ನು ಧ್ವಂಸಗೊಳಿಸಿದ್ದಕ್ಕಾಗಿ ಮೂರು ಎಫ್‌ಐಆರ್‌ಗಳನ್ನು ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದಾರೆ.

ಜನವರಿ 1 ರಂದು ಎಡ್ಕಾ ಪೊಲೀಸ್ ಠಾಣೆ ವ್ಯಾಪ್ತಿಯ ಗೊರ್ರಾ ಗ್ರಾಮದಲ್ಲಿ ಎರಡು ಆದಿವಾಸಿ ಗುಂಪುಗಳ ನಡುವಿನ ಘರ್ಷಣೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಇನ್‌ಸ್ಪೆಕ್ಟರ್ ಜನರಲ್ ಸುಂದರರಾಜ್ ಪಿ ಅವರು ಪಿಟಿಐಗೆ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತ), 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 120 ಬಿ (ಅಪರಾಧದ ಪಿತೂರಿ), 295 (ಆರಾಧನಾ ಸ್ಥಳವನ್ನು ಅಪವಿತ್ರಗೊಳಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಕೃತ್ಯಗಳು) ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಬಿಜೆಪಿ ಸಂಸದರಾದ ಸಂತೋಷ್ ಪಾಂಡೆ, ಮೋಹನ್ ಮಾಂಡವಿ ಮತ್ತು ಶಾಸಕ ಶಿವರತನ್ ಶರ್ಮಾ ಅವರು  ನಾರಾಯಣಪುರಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದಾರೆ. ಭದ್ರತಾ ಕಾರಣಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ, ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದೆ” ಎಂದು ಬಿಜೆಪಿಯ ಛತ್ತೀಸ್‌ಗಢ ಘಟಕದ ಮುಖ್ಯ ವಕ್ತಾರ ಅಜಯ್ ಚಂದ್ರಕರ್ ಆರೋಪಿಸಿದ್ದಾರೆ.

“ನಮ್ಮ ನಾಯಕರನ್ನು ನಾರಾಯಣಪುರಕ್ಕೆ ಹೋಗದಂತೆ ತಡೆಯಲಾಗಿದೆ. ಮತಾಂತರದಲ್ಲಿ ತೊಡಗಿರುವವರಿಗೆ ಕಾಂಗ್ರೆಸ್‌ನ ರಕ್ಷಣೆ ಇದೆ ಎಂಬುದನ್ನು ಇದು ಸೂಚಿಸುತ್ತಿದೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...