Homeಕರ್ನಾಟಕಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

ಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

- Advertisement -
- Advertisement -

“ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ಯಾವುದೇ ಸಂಭೋಗ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ” ಎಂದು ವರದಿಯಾಗಿದೆ.

ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 27ರಂದು ಮುರುಘಾ ಮಠಾಧೀಶರ ವಿರುದ್ಧ ದಾಖಲಾದ ಮೊದಲ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದರು. ಅದನ್ನು ಆಧರಿಸಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ.

ವರದಿಯಲ್ಲಿ ಉಲ್ಲೇಖಿಸಿರುವಂತೆ, “ಒಬ್ಬ ಬಾಲಕಿಯನ್ನು ಆಗಸ್ಟ್ 28, 2022ರಂದು ಮತ್ತು ಇನ್ನೊಬ್ಬ ಬಾಲಕಿಯನ್ನು ಸೆಪ್ಟೆಂಬರ್ 29, 2022ರಂದು ಪರೀಕ್ಷಿಸಲಾಗಿದೆ.”

ಇಬ್ಬರು ಬಾಲಕಿಯರನ್ನು ಪರೀಕ್ಷಿಸಿದ ವೈದ್ಯಕೀಯ ಅಧಿಕಾರಿ, “ಬಾಲಕಿಯ ಕನ್ಯಾ ಪೊರೆ (hymen) ಹಾಗೆಯೇ ಇದೆ” ಎಂದು ತೀರ್ಮಾನಿಸಿದ್ದಾರೆ. ಆದರೆ, ವೈದ್ಯಕೀಯ ಪರೀಕ್ಷೆಗೆ ಒಳಗಾಗುವ ಮೊದಲು ಬಾಲಕಿಯರು ಸಮಲೋಚಕರಿಗೆ, “ಸಂಭೋಗ ನಡೆದಿರುವುದಾಗಿ ಮಾಹಿತಿ ನೀಡಿದ್ದಾರೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಕನ್ನಡದ ಕೆಲವು ಮಾಧ್ಯಮಗಳು ವರದಿ ಮಾಡುತ್ತಾ, “ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌ ಸಿಕ್ಕಿದೆ, ಮರುಘಾ ಶರಣರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ” ಎಂದೆಲ್ಲ ಬಣ್ಣಿಸಿವೆ.

ಮರುಘಾ ಮಠಾಧೀಶರ ಪ್ರಕರಣ ಹೊರಬರುವಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಒಂದು. ಈ ವರದಿಗಳ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಒಡನಾಡಿಯ ಕೆ.ವಿ.ಸ್ಟ್ಯಾನ್ಲಿ ಅವರು ಹೇಳಿದ್ದೇ ಬೇರೆ!

“ಇದು ತುಂಬಾ ಬಾಲಿಷವಾದ ಸಂಗತಿ. ಈ ವರದಿಯನ್ನು 2022ರ ಆಗಸ್ಟ್‌ನಲ್ಲಿಯೇ ಸ್ಥಳೀಯ ವೈದ್ಯರು ಸಲ್ಲಿಸಿದ್ದರು. ಇದು ಹೊಸದಾದ ವರದಿಯಲ್ಲ” ಎಂದು ಸ್ಪಷ್ಟಪಡಿಸಿದ ಅವರು, “ಪ್ರಕರಣಕ್ಕೆ ಸಂಬಂಧಿಸಿದಂತೆ ‌ಎಫ್ಎ‌ಸ್‌ಎಲ್‌ ವರದಿ ಹುಬ್ಬಳ್ಳಿಯಿಂದ ಇನ್ನೂ ಬಂದಿಲ್ಲ. ಸ್ಥಳೀಯ ವೈದ್ಯಾಧಿಕಾರಿಗಳ ವರದಿಗೆ ಯಾವುದೇ ಮಾನ್ಯತೆ ಇಲ್ಲ” ಎಂದರು.

“ಈ ರೀತಿಯ ವರದಿ ಹೊರಬಿದ್ದಿರುವ ಕಾರಣವನ್ನು ತಿಳಿದುಕೊಳ್ಳಬೇಕಾಗಿದೆ. ಪೋಕ್ಸೋ ಪ್ರಕರಣಗಳಲ್ಲಿ ಜಾಮೀನು ಸಿಗುವುದು ಕಷ್ಟ. ಆರೋಪಿಯನ್ನು ಅಪರಾಧಿ ಎಂದೇ ಪರಿಗಣಿಸಿ ನ್ಯಾಯಾಲಯ ಜೈಲಿಗೆ ಕಳಿಸಿರುತ್ತದೆ. ಮುರುಘಾ ಮಠಾಧೀಶರಿಗೆ ಜಾಮೀನು ದೊರಕಿಸಲು ಶತಾಯಗತಾಯ ಪ್ರಯತ್ನಗಳನ್ನು ಆರೋಪಿಗಳ ಪರವಾಗಿರುವವರು ಮಾಡುತ್ತಿದ್ದಾರೆ” ಎಂದು ವಿವರಿಸಿದರು.

“ಜಾಮೀನು ಸಿಗಬೇಕಾದರೆ ಇರುವ ಒಂದೇ ಒಂದು ಮಾರ್ಗವೆಂದರೆ ಸಂದೇಹಗಳನ್ನು ಸೃಷ್ಟಿಸುವುದಾಗಿದೆ. ಯಾವುದೇ ಸಂದೇಹಗಳಿಲ್ಲದಿದ್ದರೆ ನ್ಯಾಯಾಧೀಶರು ಜಾಮೀನು ನೀಡುವುದಿಲ್ಲ. ಮಠಾಧೀಶರ ಪರವಾಗಿ ಕೆಲವು ತಜ್ಞರು ಕೆಲಸ ಮಾಡುತ್ತಿದ್ದಾರೆ. ತಮ್ಮ ತಂತ್ರಗಾರಿಕೆಯನ್ನು ಅವರು ಮಾಡುತ್ತಲೇ ಇದ್ದಾರೆ. ಅದರ ಭಾಗವಾಗಿಯೇ ನಮ್ಮ ಮೇಲೆ ಸುಳ್ಳು ಪ್ರಕರಣ ಹಾಕಿದ್ದರು. ಗೊಂದಲ ಸೃಷ್ಟಿಸುವ ತಂತ್ರಗಾರಿಕೆ ಇದಾಗಿತ್ತು. ಈಗ ವೈದ್ಯಕೀಯ ವರದಿಯ ಮೂಲಕ ಗೊಂದಲವೊಂದನ್ನು ಹರಿಬಿಡಲಾಗಿದೆ” ಎಂದು ಅಭಿಪ್ರಾಯಪಟ್ಟರು.

“ಈಗ ಹರಿದಾಡಿರುವ ವರದಿ ಮಾನ್ಯತೆಯನ್ನು ಪಡೆದದ್ದಲ್ಲ. ಎಫ್ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಬರಬೇಕಿದೆ. ಪೋಕ್ಸೋ ಕಾನೂನು, ವೈದ್ಯಕೀಯ ಪರೀಕ್ಷೆ ವರದಿಯನ್ನು ಪ್ರಮುಖವಾಗಿ ಪರಿಗಣಿಸಲ್ಲ. ಮಕ್ಕಳ ಹೇಳಿಕೆಯನ್ನಷ್ಟೇ ಪ್ರಮುಖವಾಗಿ ಪರಿಗಣಿಸುತ್ತದೆ. ವೈದ್ಯಕೀಯ ವರದಿ ಸೇರಿದಂತೆ ಉಳಿದೆಲ್ಲ ಸಾಕ್ಷಿಗಳು ಹೆಚ್ಚುವರಿ ಸಾಕ್ಷಿಯಾಗಿ ಉಳಿಯುತ್ತವೆ. ಇದರ ಜೊತೆಗೆ ಘನ ನ್ಯಾಯಾಲಯ ಕೂಡ ಮಾನವೀಯವಾದ ಒಳಗಣ್ಣಿನಿಂದ ಗಮನಿಸುತ್ತಿರುತ್ತದೆ ಎಂಬುದನ್ನು ನಮ್ಮ ಅನುಭವದಲ್ಲಿ ಕಂಡುಕೊಂಡಿದ್ದೇವೆ. ಆರೋಪಿ ಮುರುಘಾ ಶರಣರಿಗೆ ಹೃದಯಾಘಾತವಾಗಿದೆ ಎಂದು ಇದೇ ಜಿಲ್ಲಾ ಆರೋಗ್ಯಾಧಿಕಾರಿ ಆರಂಭದಲ್ಲಿ ಹೇಳಿದ್ದರು. ಹೇರ್‌ಲಿಫ್ಟ್‌ ಮಾಡದಿದ್ದರೆ ಶರಣರು ಬದುಕುಳಿಯುವುದಿಲ್ಲ ಎಂದೆಲ್ಲ ಹಬ್ಬಿಸಲಾಗಿತ್ತು. ಆದರೆ ಅವರು ಆರೋಗ್ಯವಾಗಿಯೇ ಇದ್ದರು. ನ್ಯಾಯಾಧೀಶರಾದ ಕೋಮಲಾ ಅವರು ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿ, ‘ಏನೇ ಆಗಲಿ, ಮುರುಘಾ ಶರಣರನ್ನು ಕೋರ್ಟ್‌ಗೆ ಕರೆತನ್ನಿ’ ಎಂದು ಸೂಚಿಸಿದ್ದರು. ಮುರುಘಾ ಶರಣರ ಹೃದಯ ಚೆನ್ನಾಗಿಯೇ ಕೆಲಸ ಮಾಡುತ್ತಿತ್ತು. ವೈದ್ಯಕೀಯ ವರದಿಗಳು ತಿರುಚಲ್ಪಡುತ್ತವೆ ಎಂಬುದಕ್ಕೆ ಇದು ಸೂಕ್ತ ಉದಾಹರಣೆ” ಎಂದು ಹೇಳಿದರು.

“ವೈದ್ಯಕೀಯ ವ್ಯವಸ್ಥೆ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ರಕ್ಷಿಸಲು ಮಾಡಿದ ಪ್ರಯತ್ನಗಳನ್ನು ನಾವು ನೋಡಿದ್ದೇವೆ. ಈಗ ಹರಿದಾಡುತ್ತಿರುವ ವರದಿಯು ಮಾನ್ಯತೆಯನ್ನು ಪಡೆದುಕೊಂಡಿಲ್ಲ. ಸಂತ್ರಸ್ತ ಮಕ್ಕಳಿಗೆ ನ್ಯಾಯವನ್ನು ನಮ್ಮ ನ್ಯಾಯ ವ್ಯವಸ್ಥೆ ದೊರಕಿಸಿಕೊಡುತ್ತದೆ ಎಂಬ ಭರವಸೆ ನಮಗಿದೆ” ಎಂದರು.

“ಮಗುವಿನ hymen ಹಾಗೆ ಇರಬೇಕೆಂಬ ನಿಯಮವೇನೂ ಇಲ್ಲ. ಮಗುವಿನ ಗುಪ್ತಾಂಗವನ್ನು ಸ್ಪರ್ಶಿಸಿದರೂ ಅದು ಅತ್ಯಾಚಾರವಾಗುತ್ತದೆ. ಒಂದು ಮಗು ಅತ್ಯಾಚಾರಕ್ಕೆ ಒಳಗಾಗಿರಬೇಕು ಎಂದರೆ hymen ಇಲ್ಲವಾಗಿರಬೇಕು ಎಂದು ನಾವು ನಿರೀಕ್ಷಿಸಬೇಕಾ? ನ್ಯಾಯ ಕೊಡಿಸಬೇಕೆಂದರೆ ಮಗು ಕೊಲೆಯಾಗಿಬೇಕೆಂದು ನಿರೀಕ್ಷಿಸಬೇಕಾ?” ಎಂದು ಪ್ರಶ್ನಿಸಿದ ಅವರು, “ಸದ್ಯ ಮಗು ಬದುಕಿ ಬಂದಿದೆಯಲ್ಲ ಎಂದು ಯೋಚಿಸಬೇಕಿತ್ತಲ್ಲವೇ? ಮಗು ಹೀಗೆಯೇ ಗಾಯಗೊಂಡಿರಬೇಕು ಎಂದು ಭಾವಿಸುವುದು ಕ್ರೂರ ಸಮಾಜದ ಪ್ರತೀಕವಾಗುತ್ತದೆ. ಮಗುವಿನ ಘನತೆಗೆ ಸಂಬಂಧಿಸಿದಂತೆ ಈ ರೀತಿಯ ಮಾತುಕತೆಗಳು ನಡೆಯಬಾರದು. ಮಗುವಿನ ಹೇಳಿಕೆಯನ್ನು ಅವಮಾನಿಸುವ, ಅನುಮಾನಿಸುವ ಪ್ರವೃತ್ತಿ ಅಮಾನಯವೀಯವಾದದ್ದು. ಯಾರನ್ನೋ ರಕ್ಷಿಸುವುದಕ್ಕಾಗಿ ಅಮಾಯಕ ಮಕ್ಕಳನ್ನು ಅವಮಾನಿಸುವ, ಅನುಮಾನಿಸುವುದನ್ನು ಮಾಡಬಾರದು” ಎಂದು ಆಶಿಸಿದರು.

ಒಂದು ಪೋಕ್ಸೋ ಪ್ರಕರಣ ಅಷ್ಟೇ ಅಲ್ಲ

ಮುರುಘಾ ಮಠದಲ್ಲಿ ಕೆಲಸ ಮಾಡುವ ಸೇವಕಿಯೊಬ್ಬರು ಶಿವಮೂರ್ತಿ ಶರಣರ ವಿರುದ್ಧ ಎರಡನೇ ಪ್ರಕರಣವನ್ನು ದಾಖಲಿಸಿದ್ದಾರೆ. ಮಠಾಧೀಶರು ತಮ್ಮ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೊದಲ ಪ್ರಕರಣದಲ್ಲಿನ ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರು ದಲಿತ ಸಮುದಾಯಕ್ಕೆ ಸೇರಿರುವುದರಿಂದ ಪೋಕ್ಸೋ ಕಾಯ್ದೆ ಸೇರಿದಂತೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲೂ ಮುರುಘಾ ಮಠಾಧೀಶರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಪ್ರಕರಣಗಳಲ್ಲಿ ಕನಿಷ್ಠ ಮೂರು ಸಂಸ್ಥೆಗಳಿಂದ ಪಾರದರ್ಶಕವಾಗಿ ಪರೀಕ್ಷೆಗೆ ಒಳಪಡಿಸಬೇಕು,ಅಲ್ಲದೆ ಪರೀಕ್ಷಿಸುವ ತಜ್ಞರು ಆ ಆರೋಪಿತನ ಜಾತಿ ಸಮುದಾಯದವನಾಗದೆ ,ಪೂರ್ವಾಗ್ರಹ ಪೀಡಿತನಾಗಿರದೇ ವಸ್ತುಸ್ಥಿತಿ ಎನಿದೆಯೋ ಅದನ್ನ ವರದಿ ಮಾಡತಕ್ಕದ್ದು .ಅದು ಈ ಪ್ರಕರಣದಲ್ಲಿ ಆಗಿದೆಯೇ ಎನ್ನುವುದು ಪ್ರಶ್ನಾರ್ಹ,ಮಠ ಮತ್ತು ಅದರ ಭಕ್ತವೃಂದ ಶಕ್ತಿಶಾಲಿ ಸಮುದಾಯ ಜೊತೆಗೆ ಅಧಿಕಾರರೂಡ ಮುಖ್ಯಮಂತ್ರಿ ಮತ್ತು ಬಹಳಷ್ಟು ಸಚಿವರು ಅದೇ ಸಮುದಾಯದವರೆ,ಎಂದಮೇಲೆ ಬಲಿಷ್ಠ ಸಮುದಾಯ ವರು ಅದೇ ಸಮುದಾಯದ ಆರೋಪಿತನ ಬಿಡುಗಡೆಗೆ ಇದು ಪ್ರಯತ್ನ ಅಲ್ಲ ಎಂದು ನಂಬುವುದು ಹೇಗೆ?

  2. ನಿಮ್ಮ ಅನಿಸಿಕೆ ಸರಿಯಾಗಿದೆ, ಇಂತಹ ವೈದ್ಯರು ಅವರ ಕುಲಕ್ಕೆ ಕಳಂಕ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...