Homeಮುಖಪುಟಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ...

ಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ…

- Advertisement -
- Advertisement -

ಜನವರಿ 8ರ ಭಾನುವಾರದಂದು ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿಯ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ನಾಡು-ನುಡಿ ಒಳಗೊಳ್ಳುವ ಪರಂಪರೆಯ ಹೊರತು ಯಾರನ್ನು, ಯಾವುದನ್ನು ಹೊರಗಿಡುವ ಸಂಕುಚಿತ ಮನಸ್ಥಿತಿಯಲ್ಲ ಎಂಬುದನ್ನು ಸಾರಲು ನಡೆಯುತ್ತಿರುವ ಸಮ್ಮೇಳನಕ್ಕೆ ‘ಸಂತ ಶಿಶುನಾಳ ಶರೀಫ ಮತ್ತು ಗುರು ಗೋವಿಂದ ಭಟ್ಟ’ ಸಭಾಂಗಣವೆಂದು ಹೆಸರಿಡಲಾಗಿದೆ. ಇತ್ತೀಚಿಗೆ ನಿಧನರಾದ ಖ್ಯಾತ ಪತ್ರಕರ್ತರು ಮತ್ತು ಲೇಖಕರಾದ ಎಂ.ಎಸ್ ಪ್ರಭಾಕರರವರ ನೆನಪಿನಲ್ಲಿ ‘ಕಾಮರೂಪಿ’ ದ್ವಾರ ಸಿದ್ಧಪಡಿಸಲಾಗಿದೆ.

ಭಾನುವಾರ ಬೆಳಿಗ್ಗೆ 9 ಗಂಟೆಗೆ ಕನ್ನಡ ಧ್ಜಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ನೀಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ್, ಶಿವರಾಮೇಗೌಡ ಮತ್ತು ಬಿ.ಎನ್ ಜಗದೀಶರವರು ಪಾಲ್ಗೊಳ್ಳಲಿದ್ದಾರೆ. 9.30ಕ್ಕೆ ‘ಬಂಡಾಯದ ಗೆರೆಗಳು: ವ್ಯಂಗ್ಯಚಿತ್ರ ಮತ್ತು ಪೋಸ್ಟರ್‌ಗಳ ಪ್ರದರ್ಶನ’ ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿಗಳಾದ ರಘುನಂದನರವರು ಉದ್ಘಾಟಿಸಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರರಾದ ಪಿ.ಮಹಮದ್, ದಿನೇಶ್ ಕುಕ್ಕುಜಡ್ಕ, ಸತೀಶ್ ಆಚಾರ್ಯ, ಪಂಜು ಗಂಗೊಳ್ಳಿ, ಬಾದಲ್ ನಂಜುಂಡಸ್ವಾಮಿ, ಚಂದ್ರಶೇಖರ್ ಶೆಟ್ಟಿ ಭಾಗವಹಿಸಲಿದ್ದಾರೆ. ಚಿತ್ರಕಲಾವಿದರಾದ ಚೇತನ್ ಪುತ್ತೂರು, ಸರೋವರ್ ಬೆಂಕಿಕೆರೆ, ಉದಯ ಗಾಂವ್ಕರ್, ನವೀನ್ ಹಾಸನ, ವಿಶ್ವವಿನ್ಯಾಸ, ಸುನೈಫ್, ರೂಮಿ ಹರೀಶ್, ರೂಪಶ್ರೀ ಕಲ್ಲಿಗನೂರು, ಚರಿತಾ ಮೈಸೂರು, ನಭಾ ಒಕ್ಕುಂದ, ಸನತ್ ಕುಮಾರ್, ರಾಜೇಂದ್ರ ಪ್ರಸಾದ್ ಮತ್ತು ಸಾತ್ವಿಕ್ ನೆಲ್ಲಿತೀರ್ಥ ಉಪಸ್ಥಿತರಿರುತ್ತಾರೆ.

ಬೆಳಿಗ್ಗೆ 10 ಗಂಟೆಗೆ ಚಂಪಾ ವೇದಿಕೆಯಲ್ಲಿ ಜನಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಕವಿಗಳು ಮತ್ತು ಲೇಖಕರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರು ಉದ್ಟಾಟಿಸಲಿದ್ದು, ಲೇಖಕಿ ಬಾನು ಮುಶ್ತಾಕ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ದಿಕ್ಸೂಚಿ ಭಾಷಣ ಮಾಡಿದರೆ, ಮುಖ್ಯ ಅತಿಥಿಗಳಾಗಿ ಪ್ರೊ.ಎಸ್.ಜಾಫೆಟ್, ಜಾಣಗೆರೆ ವೆಂಕಟರಾಮಯ್ಯ, ಚೆನ್ನಿ ಜನಾರ್ದನ್, ಅಗ್ನಿಶ್ರೀಧರ್, ಅಕ್ಕೈ ಪದ್ಮಶಾಲಿ, ವಡ್ಡಗೆರೆ ನಾಗರಾಜಯ್ಯ ಭಾಗವಹಿಸಲಿದ್ದಾರೆ. ಭೈರಪ್ಪ ಹರೀಶ್ ಕುಮಾರ್‌ರವರು ಪ್ರಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ಮಧ್ಯಾಹ್ನ 12.30 ರಿಂದ 1.30ರವರೆಗೆ ನಡೆಯುವ ಸಾಹಿತ್ಯ, ಪ್ರಭುತ್ವ ಮತ್ತು ಬಹುತ್ವದ ಕುರಿತ ವಿಚಾರ ಗೋಷ್ಠಿಯಲ್ಲಿ ಡಾ. ಮಹಮ್ಮದ್ ಮುಸ್ತಾಫಾ ವಿಷಯ ಮಂಡನೆ ಮಾಡಿದರೆ ಅಕ್ಷತಾ ಕೆ ಸಿಯವರು ಪ್ರತಿಕ್ರಿಯೆ ನೀಡಲಿದ್ದಾರೆ. ಕನ್ನಡ ನಾಡು ನುಡಿ – ಟಿಪ್ಪು ಕೊಡುಗೆಗಳು ವಿಷಯದ ಕುರಿತು ಟಿ ಗುರುರಾಜ್ ವಿಷಯ ಮಂಡನೆ ಮಾಡಿದರೆ ಕಲೀಂ ಪಾಷಾರವರು ಪ್ರತಿಕ್ರಿಯೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಲಿಂಗದೇವರು ಹಳೆಮನೆ ಸಂಪಾದಕತ್ವದ ‘ಧೀರ ಟಿಪ್ಪು ಲಾವಣಿಗಳು ಮತ್ತು ಟಿ ಗುರುರಾಜ್ ಬರೆದಿರುವ ‘ನಮ್ಮ ಟಿಪ್ಪು – ವದಂತಿ ಮತ್ತು ಸತ್ಯ ಸಂಗತಿ’ ಪುಸ್ತಕಗಳ ಬಿಡುಗಡೆ ನಡೆಯಲಿದೆ. ನಾ ದಿವಾಕರ್‌ರವರು ಗೋಷ್ಟಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 1.30 ರಿಂದ 2:00ರವರೆ ಆಹಾರ ಗೋಷ್ಠಿ ನಡೆಯಲಿದೆ. ಆಹಾರದ ಮೇಲಿನ ರಾಜಕಾರಣ ಮತ್ತು ದೌರ್ಜನ್ಯ ವಿಷಯದ ಕುರಿತು ರಂಗನಾಥ ಕಂಟನಕುಂಟೆ ಮತ್ತು ಪಲ್ಲವಿ ಇಡೂ‌ರುರವರು ವಿಷಯ ಮಂಡಿಸುತ್ತಾರೆ. ಊಟದ ಕೌಂಟರ್‌ನಲ್ಲಿ ಬಹುತ್ವವನ್ನು ಸಾರು ಉಪ್ಪಿನಕಾಯಿ, ತರಕಾರಿ ಪಲ್ಯ, ಅನ್ನ, ಮೀನು ಸಾರು, ತರಕಾರಿ ಸಾಂಬರ್, ಗೀ ರೈಸ್, ದಾಲ್, ಚಿಕನ್ ಕಬಾಬ್ ಮತ್ತು ಪಾಯಸ ಇರುವ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

ಮದ್ಯಾಹ್ನ 2:00 ರಿಂದ 3:00ವರೆಗೆ ಕವಿಗೋಷ್ಠಿ ನಡೆಯಲಿದ್ದು, ಬಂಜಗೆರೆ ಜಯಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎಚ್ ಆರ್ ಸುಜಾತರವರು ಆಶಯ ಮಾತುಗಳನ್ನಾಡಿದರೆ, ದೀಪದ ಮಲ್ಲಿ, ದಾದಪೀರ್ ಜೈಮನ್, ಚಾಂದ್ ಪಾಷಾ, ಪ್ರಕಾಶ್ ಮಂಟೇದಾ, ಟೀನಾ ಶಶಿಕಾಂತ್, ಸಿರಾಜ್ ಬಿಸ್ರಳ್ಳಿ, ಫಾತಿಮಾ ರಾಲಿಯಾ, ಹಾಜಿರ ಖಾನಂ, ಚಾಂದಿನಿ, ಶಿವರಾಜ್ ಮೋತಿ, ಪಂಚಮಿ ಎಸ್, ಸಂಘಮಿತ್ರೆ, ಮಂಜುನಾಥ ಮಾಗೊದಿ, ಪುನೀತ್, ಧನಂಜಯ ದೇವರಹಳ್ಳಿ, ವಿಕಾಸ್ ಮೌರ್ಯ, ರೂಮಿ ಹರೀಶ್ ಮತ್ತು ಪ್ರವೀಣ್ ಬಿ ಎಂ ಕವನ ವಾಚಿಸಲಿದ್ದಾರೆ.

ಸೌಹಾರ್ದತೆ ಮತ್ತು ಕನ್ನಡತನ ವಿಷಯದ ಕುರಿತ ಮಧ್ಯಾಹ್ನದ ಗೋಷ್ಟಿಯಲ್ಲಿ ಚಿಂತಕರಾದ ರಾಜೇಂದ್ರ ಚೆನ್ನಿಯವರು ವಿಷಯ ಮಂಡನೆ ಮಾಡಲಿದ್ದಾರೆ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದಾಳಿ : ಸಾಹಿತ್ಯ ಲೋಕದ ಜವಾಬ್ದಾರಿಗಳು ವಿಷಯದ ಕುರಿತು ಮಾವಳ್ಳಿ ಶಂಕರ್ ಮುನೀರ್ ಕಾಟಿಪಳ್ಳ ವಿಷಯ ಮಂಡನೆ ಮಾಡಲಿದ್ದಾರೆ. ಕನ್ನಡವನ್ನು ಬೆಳಗಿಸಿದ ಕ್ರೈಸ್ತ ಮಿಷನರಿಗಳು ವಿಷಯದ ಕುರಿತು ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ವಿಷಯ ಮಂಡನೆ ಮಾಡಿದರೆ ಪ್ರಿಯಾಂಕ ಮಾವಿನಕರ್ ಪ್ರತಿಕ್ರಿಯೆ ನೀಡಲಿದ್ದಾರೆ.

ಸಂಜೆ 5:00 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಡಾ. ಜಿ ರಾಮಕೃಷ್ಣರವರು ಅಧ್ಯಕ್ಷತೆ ವಹಿಸಿದರೆ ಡಾ ಕೆ ಮರುಳಸಿದ್ದಪ್ಪನವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿ. ಬಸವಲಿಂಗಯ್ಯ, ಪಿಚ್ಚಳ್ಳಿ ಶ್ರೀನಿವಾಸ್, ದು. ಸರಸ್ವತಿ, ಯು. ಟಿ ಫರ್ಜಾನ, ವಸಂತರಾಜ್, ಅನಂತ್ ನಾಯಕ್, ರವಿಕುಮಾರ್ ಟೆಲೆಕ್ಸ್ ಭಾಗವಹಿಸಲಿದ್ದಾರೆ.

ಬೀದಿಗೆ ಬರಲಿ ಕಲೆ – ಸಾಹಿತ್ಯ ಗೋಷ್ಟಿಯಲ್ಲಿ ಸಮುದಾಯ ಬೆಂಗಳೂರು ವತಿಯಿಂದ ಬೀದಿ ನಾಟಕ ನಡೆಯಲಿದೆ. ಅದಕ್ಕೂ ಮೊದಲು ಗುಂಡಣ್ಣ ಚಿಕ್ಕಮಗಳೂರುರವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮ್ಮೇಳನ ಆಯ ವ್ಯಯ ವಿವರ ಘೋಷಿಸಬೇಕಿತ್ತು. ಅಂದಾಜು ವೆಚ್ಚ ಮಾಹಿತಿ. ಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧದ ಸದರಿ ಸಮ್ಮೇಳನದ ಕ್ರಿಯಾಯೋಜನೆಯನ್ನೂ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು.

  2. ಕಾತರದಿಂದ ಕಾಯುತ್ತಿರುವ ಜನ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ; ಜಯಧ್ವನಿ ಮೊಳಗಲಿ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...