Homeಮುಖಪುಟಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ...

ಜ.8ರಂದು ಜನಸಾಹಿತ್ಯ ಸಮ್ಮೇಳನ: ವೇದಿಕೆ ಕಾರ್ಯಕ್ರಮದ ರೂಪುರೇಷೆ ಹೀಗಿದೆ…

- Advertisement -
- Advertisement -

ಜನವರಿ 8ರ ಭಾನುವಾರದಂದು ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿಯ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ನಾಡು-ನುಡಿ ಒಳಗೊಳ್ಳುವ ಪರಂಪರೆಯ ಹೊರತು ಯಾರನ್ನು, ಯಾವುದನ್ನು ಹೊರಗಿಡುವ ಸಂಕುಚಿತ ಮನಸ್ಥಿತಿಯಲ್ಲ ಎಂಬುದನ್ನು ಸಾರಲು ನಡೆಯುತ್ತಿರುವ ಸಮ್ಮೇಳನಕ್ಕೆ ‘ಸಂತ ಶಿಶುನಾಳ ಶರೀಫ ಮತ್ತು ಗುರು ಗೋವಿಂದ ಭಟ್ಟ’ ಸಭಾಂಗಣವೆಂದು ಹೆಸರಿಡಲಾಗಿದೆ. ಇತ್ತೀಚಿಗೆ ನಿಧನರಾದ ಖ್ಯಾತ ಪತ್ರಕರ್ತರು ಮತ್ತು ಲೇಖಕರಾದ ಎಂ.ಎಸ್ ಪ್ರಭಾಕರರವರ ನೆನಪಿನಲ್ಲಿ ‘ಕಾಮರೂಪಿ’ ದ್ವಾರ ಸಿದ್ಧಪಡಿಸಲಾಗಿದೆ.

ಭಾನುವಾರ ಬೆಳಿಗ್ಗೆ 9 ಗಂಟೆಗೆ ಕನ್ನಡ ಧ್ಜಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ನೀಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ್, ಶಿವರಾಮೇಗೌಡ ಮತ್ತು ಬಿ.ಎನ್ ಜಗದೀಶರವರು ಪಾಲ್ಗೊಳ್ಳಲಿದ್ದಾರೆ. 9.30ಕ್ಕೆ ‘ಬಂಡಾಯದ ಗೆರೆಗಳು: ವ್ಯಂಗ್ಯಚಿತ್ರ ಮತ್ತು ಪೋಸ್ಟರ್‌ಗಳ ಪ್ರದರ್ಶನ’ ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿಗಳಾದ ರಘುನಂದನರವರು ಉದ್ಘಾಟಿಸಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರರಾದ ಪಿ.ಮಹಮದ್, ದಿನೇಶ್ ಕುಕ್ಕುಜಡ್ಕ, ಸತೀಶ್ ಆಚಾರ್ಯ, ಪಂಜು ಗಂಗೊಳ್ಳಿ, ಬಾದಲ್ ನಂಜುಂಡಸ್ವಾಮಿ, ಚಂದ್ರಶೇಖರ್ ಶೆಟ್ಟಿ ಭಾಗವಹಿಸಲಿದ್ದಾರೆ. ಚಿತ್ರಕಲಾವಿದರಾದ ಚೇತನ್ ಪುತ್ತೂರು, ಸರೋವರ್ ಬೆಂಕಿಕೆರೆ, ಉದಯ ಗಾಂವ್ಕರ್, ನವೀನ್ ಹಾಸನ, ವಿಶ್ವವಿನ್ಯಾಸ, ಸುನೈಫ್, ರೂಮಿ ಹರೀಶ್, ರೂಪಶ್ರೀ ಕಲ್ಲಿಗನೂರು, ಚರಿತಾ ಮೈಸೂರು, ನಭಾ ಒಕ್ಕುಂದ, ಸನತ್ ಕುಮಾರ್, ರಾಜೇಂದ್ರ ಪ್ರಸಾದ್ ಮತ್ತು ಸಾತ್ವಿಕ್ ನೆಲ್ಲಿತೀರ್ಥ ಉಪಸ್ಥಿತರಿರುತ್ತಾರೆ.

ಬೆಳಿಗ್ಗೆ 10 ಗಂಟೆಗೆ ಚಂಪಾ ವೇದಿಕೆಯಲ್ಲಿ ಜನಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಕವಿಗಳು ಮತ್ತು ಲೇಖಕರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರು ಉದ್ಟಾಟಿಸಲಿದ್ದು, ಲೇಖಕಿ ಬಾನು ಮುಶ್ತಾಕ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ದಿಕ್ಸೂಚಿ ಭಾಷಣ ಮಾಡಿದರೆ, ಮುಖ್ಯ ಅತಿಥಿಗಳಾಗಿ ಪ್ರೊ.ಎಸ್.ಜಾಫೆಟ್, ಜಾಣಗೆರೆ ವೆಂಕಟರಾಮಯ್ಯ, ಚೆನ್ನಿ ಜನಾರ್ದನ್, ಅಗ್ನಿಶ್ರೀಧರ್, ಅಕ್ಕೈ ಪದ್ಮಶಾಲಿ, ವಡ್ಡಗೆರೆ ನಾಗರಾಜಯ್ಯ ಭಾಗವಹಿಸಲಿದ್ದಾರೆ. ಭೈರಪ್ಪ ಹರೀಶ್ ಕುಮಾರ್‌ರವರು ಪ್ರಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ಮಧ್ಯಾಹ್ನ 12.30 ರಿಂದ 1.30ರವರೆಗೆ ನಡೆಯುವ ಸಾಹಿತ್ಯ, ಪ್ರಭುತ್ವ ಮತ್ತು ಬಹುತ್ವದ ಕುರಿತ ವಿಚಾರ ಗೋಷ್ಠಿಯಲ್ಲಿ ಡಾ. ಮಹಮ್ಮದ್ ಮುಸ್ತಾಫಾ ವಿಷಯ ಮಂಡನೆ ಮಾಡಿದರೆ ಅಕ್ಷತಾ ಕೆ ಸಿಯವರು ಪ್ರತಿಕ್ರಿಯೆ ನೀಡಲಿದ್ದಾರೆ. ಕನ್ನಡ ನಾಡು ನುಡಿ – ಟಿಪ್ಪು ಕೊಡುಗೆಗಳು ವಿಷಯದ ಕುರಿತು ಟಿ ಗುರುರಾಜ್ ವಿಷಯ ಮಂಡನೆ ಮಾಡಿದರೆ ಕಲೀಂ ಪಾಷಾರವರು ಪ್ರತಿಕ್ರಿಯೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಲಿಂಗದೇವರು ಹಳೆಮನೆ ಸಂಪಾದಕತ್ವದ ‘ಧೀರ ಟಿಪ್ಪು ಲಾವಣಿಗಳು ಮತ್ತು ಟಿ ಗುರುರಾಜ್ ಬರೆದಿರುವ ‘ನಮ್ಮ ಟಿಪ್ಪು – ವದಂತಿ ಮತ್ತು ಸತ್ಯ ಸಂಗತಿ’ ಪುಸ್ತಕಗಳ ಬಿಡುಗಡೆ ನಡೆಯಲಿದೆ. ನಾ ದಿವಾಕರ್‌ರವರು ಗೋಷ್ಟಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 1.30 ರಿಂದ 2:00ರವರೆ ಆಹಾರ ಗೋಷ್ಠಿ ನಡೆಯಲಿದೆ. ಆಹಾರದ ಮೇಲಿನ ರಾಜಕಾರಣ ಮತ್ತು ದೌರ್ಜನ್ಯ ವಿಷಯದ ಕುರಿತು ರಂಗನಾಥ ಕಂಟನಕುಂಟೆ ಮತ್ತು ಪಲ್ಲವಿ ಇಡೂ‌ರುರವರು ವಿಷಯ ಮಂಡಿಸುತ್ತಾರೆ. ಊಟದ ಕೌಂಟರ್‌ನಲ್ಲಿ ಬಹುತ್ವವನ್ನು ಸಾರು ಉಪ್ಪಿನಕಾಯಿ, ತರಕಾರಿ ಪಲ್ಯ, ಅನ್ನ, ಮೀನು ಸಾರು, ತರಕಾರಿ ಸಾಂಬರ್, ಗೀ ರೈಸ್, ದಾಲ್, ಚಿಕನ್ ಕಬಾಬ್ ಮತ್ತು ಪಾಯಸ ಇರುವ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

ಮದ್ಯಾಹ್ನ 2:00 ರಿಂದ 3:00ವರೆಗೆ ಕವಿಗೋಷ್ಠಿ ನಡೆಯಲಿದ್ದು, ಬಂಜಗೆರೆ ಜಯಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎಚ್ ಆರ್ ಸುಜಾತರವರು ಆಶಯ ಮಾತುಗಳನ್ನಾಡಿದರೆ, ದೀಪದ ಮಲ್ಲಿ, ದಾದಪೀರ್ ಜೈಮನ್, ಚಾಂದ್ ಪಾಷಾ, ಪ್ರಕಾಶ್ ಮಂಟೇದಾ, ಟೀನಾ ಶಶಿಕಾಂತ್, ಸಿರಾಜ್ ಬಿಸ್ರಳ್ಳಿ, ಫಾತಿಮಾ ರಾಲಿಯಾ, ಹಾಜಿರ ಖಾನಂ, ಚಾಂದಿನಿ, ಶಿವರಾಜ್ ಮೋತಿ, ಪಂಚಮಿ ಎಸ್, ಸಂಘಮಿತ್ರೆ, ಮಂಜುನಾಥ ಮಾಗೊದಿ, ಪುನೀತ್, ಧನಂಜಯ ದೇವರಹಳ್ಳಿ, ವಿಕಾಸ್ ಮೌರ್ಯ, ರೂಮಿ ಹರೀಶ್ ಮತ್ತು ಪ್ರವೀಣ್ ಬಿ ಎಂ ಕವನ ವಾಚಿಸಲಿದ್ದಾರೆ.

ಸೌಹಾರ್ದತೆ ಮತ್ತು ಕನ್ನಡತನ ವಿಷಯದ ಕುರಿತ ಮಧ್ಯಾಹ್ನದ ಗೋಷ್ಟಿಯಲ್ಲಿ ಚಿಂತಕರಾದ ರಾಜೇಂದ್ರ ಚೆನ್ನಿಯವರು ವಿಷಯ ಮಂಡನೆ ಮಾಡಲಿದ್ದಾರೆ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದಾಳಿ : ಸಾಹಿತ್ಯ ಲೋಕದ ಜವಾಬ್ದಾರಿಗಳು ವಿಷಯದ ಕುರಿತು ಮಾವಳ್ಳಿ ಶಂಕರ್ ಮುನೀರ್ ಕಾಟಿಪಳ್ಳ ವಿಷಯ ಮಂಡನೆ ಮಾಡಲಿದ್ದಾರೆ. ಕನ್ನಡವನ್ನು ಬೆಳಗಿಸಿದ ಕ್ರೈಸ್ತ ಮಿಷನರಿಗಳು ವಿಷಯದ ಕುರಿತು ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ವಿಷಯ ಮಂಡನೆ ಮಾಡಿದರೆ ಪ್ರಿಯಾಂಕ ಮಾವಿನಕರ್ ಪ್ರತಿಕ್ರಿಯೆ ನೀಡಲಿದ್ದಾರೆ.

ಸಂಜೆ 5:00 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಡಾ. ಜಿ ರಾಮಕೃಷ್ಣರವರು ಅಧ್ಯಕ್ಷತೆ ವಹಿಸಿದರೆ ಡಾ ಕೆ ಮರುಳಸಿದ್ದಪ್ಪನವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿ. ಬಸವಲಿಂಗಯ್ಯ, ಪಿಚ್ಚಳ್ಳಿ ಶ್ರೀನಿವಾಸ್, ದು. ಸರಸ್ವತಿ, ಯು. ಟಿ ಫರ್ಜಾನ, ವಸಂತರಾಜ್, ಅನಂತ್ ನಾಯಕ್, ರವಿಕುಮಾರ್ ಟೆಲೆಕ್ಸ್ ಭಾಗವಹಿಸಲಿದ್ದಾರೆ.

ಬೀದಿಗೆ ಬರಲಿ ಕಲೆ – ಸಾಹಿತ್ಯ ಗೋಷ್ಟಿಯಲ್ಲಿ ಸಮುದಾಯ ಬೆಂಗಳೂರು ವತಿಯಿಂದ ಬೀದಿ ನಾಟಕ ನಡೆಯಲಿದೆ. ಅದಕ್ಕೂ ಮೊದಲು ಗುಂಡಣ್ಣ ಚಿಕ್ಕಮಗಳೂರುರವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮ್ಮೇಳನ ಆಯ ವ್ಯಯ ವಿವರ ಘೋಷಿಸಬೇಕಿತ್ತು. ಅಂದಾಜು ವೆಚ್ಚ ಮಾಹಿತಿ. ಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧದ ಸದರಿ ಸಮ್ಮೇಳನದ ಕ್ರಿಯಾಯೋಜನೆಯನ್ನೂ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು.

  2. ಕಾತರದಿಂದ ಕಾಯುತ್ತಿರುವ ಜನ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ; ಜಯಧ್ವನಿ ಮೊಳಗಲಿ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...