Homeಮುಖಪುಟಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಕೊಂಡಿದ್ದಾರೆ.

ಬಹು ನಿರೀಕ್ಷೆಯ ಈ ದಶಪಥ ರಸ್ತೆಯ ಕಾಮಗಾರಿಗಳು ಇನ್ನೂ ಮುಗಿದಿಲ್ಲ. ಕಳೆದ ವರ್ಷ ಸುರಿದ ಮಹಾಮಳೆಗೆ ಹಲವು ಕಡೆ ರಸ್ತೆಗಳು ಮುಳುಗಿ ಜನರು ಪರದಾಡುವಂತಾಗಿತ್ತು. ಇಂತಹ ಸಂದರ್ಭದಲ್ಲಿ ಈ ರಸ್ತೆಗಳು ಮುಕ್ತ ಸಾರ್ವಜನಿಕ ಬಳಕೆಗೆ ಬರಲು ಇನ್ನಷ್ಟು ಕಾಲಾವಕಾಶ ಬೇಕು ಎನ್ನಲಾಗಿದೆ.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿಯವರು, “ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವುದು ನಿಜ. ಅದನ್ನೆಲ್ಲ ಪರಿಶೀಲಿಸಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು” ಎಂದಿದ್ದಾರೆ.

“ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿನ್ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆ ಇದೆ. ಅಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ ‌ಮುಂದಿನ ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದ್ದಾರೆ.

ಈ ನಡುವೆ ಮೈಸೂರು ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ಹಗರಣ ನಡೆದಿದ್ದು, ಕಳಪೆ ಗುಣಮಟ್ಟದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದಿದ್ದರು.

ಮುಗಿಯದ 6 ನಗರಗಳಿಗೆ ಪ್ರವೇಶ-ನಿರ್ಗಮನ ದ್ವಾರದ ಗೊಂದಲ

ಬೆಂಗಳೂರಿನ ನೈಸ್ ರಸ್ತೆಯ ನಂತರದಿಂದ ಆರಂಭವಾಗುವ ದಶಪಥ ರಸ್ತೆಯು ಮೈಸೂರಿನ ಮಣಿಪಾಲ್ ಆಸ್ಪತ್ರೆ ವೃತ್ತದವರೆಗೂ ಒಟ್ಟು 118 ಕಿ.ಮೀ ಸಾಗುತ್ತದೆ. ಆರು ಪಥ ಹೈವೇ ಇದ್ದರೆ ನಾಲ್ಕು ಪಥಗಳನ್ನು ಸರ್ವೀಸ್ ರಸ್ತೆಗೆ ಮೀಸಲಿಡಲಾಗಿದೆ. ಆದರೆ ಬೆಂಗಳೂರಿನಿಂದ ಮೈಸೂರಿನವರೆಗೆ ಹೈವೇಯಲ್ಲಿ ಸಿಗುವ 6 ನಗರಗಳಿಗೆ ಪ್ರವೇಶ-ನಿರ್ಗಮನ ದಾರಿಯ ಕಾಮಗಾರಿ ಗೊಂದಲದ ಗೂಡಾಗಿದೆ.

ಮೊದಲು ಹೆದ್ದಾರಿ ಪ್ರಾಧಿಕಾರವು 118 ಕಿ.ಮೀ ವ್ಯಾಪ್ತಿಯಲ್ಲಿ ಕೇವಲ 1 ಪ್ರವೇಶ ನಿರ್ಗಮನದ ದಾರಿಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಜನರ ಒತ್ತಾಯದ ನಂತರ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣಗಳಿಗೆ ಪ್ರವೇಶ-ನಿರ್ಗಮನದ ದಾರಿ ಮಾಡಲು ಒಪ್ಪಿತ್ತು. ಅದಕ್ಕಾಗಿ ಹಣಕಾಸಿನ ಅಂದಾಜು ಸಹ ಮಾಡಿದೆ. ಆದರೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...