Homeಚಳವಳಿಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

ಕವಿಗೋಷ್ಠಿಯಿಂದ ಹಿಂದೆಸರಿದ ಸಂಶೋಧನಾ ವಿದ್ಯಾರ್ಥಿಯ ಮನದಾಳದ ಅಳಲು: ಸಾಮರಸ್ಯ ಇದ್ದರಷ್ಟೇ ಸಾಹಿತ್ಯ ಸಂಭ್ರಮ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಸಾಂಸ್ಕೃತಿಕ ಇತಿಹಾಸವಿರುವುದು ಕನ್ನಡತನಕ್ಕೆ ಹೆಮ್ಮೆಯ ಸಂಗತಿ. ಇದು ಕನ್ನಡತ್ವವನ್ನು ಪಸರಿಸುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಪರಿಷತ್ತಿನ ಮುಂದಾಳತ್ವದಲ್ಲಿ ಪ್ರತಿ ವರ್ಷವೂ ನಡೆಯುವ ಸಾಹಿತ್ಯ ಸಮ್ಮೇಳನಗಳ ಬಹುದೊಡ್ಡ ಜವಾಬ್ದಾರಿ ರಾಜಕೀಯವಾಗಿ ಹರಿದು ಹಂಚಿಹೋಗಿರುವ ಕನ್ನಡ ಜನರನ್ನು ಭಾವನಾತ್ಮಕವಾಗಿ ಒಂದುಗೂಡಿಸುವುದು. ಕನ್ನಡವನ್ನು ಕಟ್ಟುವ ಕೆಲಸವೆಂದರೆ, ಕನ್ನಡಿಗರನ್ನು ಒಟ್ಟುಗೂಡಿಸುವುದು ಎಂದರ್ಥ. ಈ ಕನ್ನಡತ್ವದಲ್ಲಿ ಜಾತಿ, ಧರ್ಮ, ಲಿಂಗ ರಾಜಕಾರಣ ಮಾಡಿದ್ದೆ ಆದರೆ, ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ನುರಿತ ರಾಜಕಾರಣಿಯೊಬ್ಬ ಕೂತಿದ್ದಾನೆ ಎಂದೇ ಹೇಳಬೇಕು. ರಾಜಕೀಯ ಪುಡಾರಿಗಷ್ಟೇ ತಿಳಿದಿರಬಹುದಾದ ಪಟ್ಟುಗಳು ಇವು. ಆದರೆ, ಪ್ರಸ್ತುತ ಸಮಾಜದ ಸಾಂಕ್ರಾಮಿಕ ರೋಗಗಳಾದ ಕೋಮುವಾದ ಹಾಗೂ ತಾರತಮ್ಯಗಳು ಹಿಂದಿಗಿಂತಲೂ ಇಂದು ಅತ್ಯಂತ ವೇಗವಾಗಿ ಹರಡುತ್ತಿರುವುದು ವಿಪರ್ಯಾಸ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡಿರುವ ರಾಜಕೀಯ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾಣಿಸಿಕೊಳ್ಳುತ್ತಿದೆ. ಸರ್ವಧರ್ಮ ಸಮನ್ವಯತೆ ಬೆಳೆಯಬೇಕಿದ್ದ ನಾಡಿನಲ್ಲಿ ತಾರತಮ್ಯವನ್ನು ಯಾವುದೇ ಭಯವಿಲ್ಲದೆ ಮಾಡುವುದು ಈಗ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರ ಹುಟ್ಟು ಗುಣವಿದ್ದಹಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡಿದ್ದೆ ಇಲ್ಲ ಅಥವಾ ಇದ್ದರೂ ಅದು ಅಲ್ಪಮಟ್ಟದಲ್ಲಿತ್ತು ಎನ್ನಬಹುದು. ’ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಪಂಪನ ಮಾತಿನಿಂದ ಹಿಡಿದು ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪುವರೆಗೂ ಕನ್ನಡ ಸಾಹಿತ್ಯದಲ್ಲಿ ವಿಷಮತೆ ಅಷ್ಟು ತಲೆಯೆತ್ತಲು ಸಾಧ್ಯವಾಗಲಿಲ್ಲ. ಬದಲಿಗೆ ಅದು ಸಾಮರಸ್ಯ ಮತ್ತು ಸಹಬಾಳ್ವೆಯ ದಾರಿಯನ್ನಷ್ಟೇ ತೋರಿಸಿದೆ ಮತ್ತು ಅದು ಕನ್ನಡದ ಅಸ್ಮಿತೆಯೂ ಹೌದು. ಆದರೆ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನವು ಸಂಪೂರ್ಣವಾಗಿ ತಾರತಮ್ಯದಿಂದ ಕೂಡಿದ ಸದ್ದುಗದ್ದಲ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯಾವನ್ನು ಹಬ್ಬಿಸುತ್ತಿರುವುದು, ಲಿಂಗ ಅಲ್ಪಸಂಖ್ಯಾತರ ಘನತೆ, ಸರ್ಕಾರಿ ಶಾಲೆಗಳ ಸ್ಥಿತಿ ಗತಿ- ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಸಮ್ಮೇಳನದಲ್ಲಿ ಇವುಗಳ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಅಷ್ಟೇ ಅಲ್ಲದೆ ಸಮ್ಮೇಳನವು ಕನ್ನಡದ ಸಮಗ್ರತೆಯನ್ನು ಪ್ರತಿಪಾದಿಸಬೇಕೆ ಹೊರತು, ಒಡಕುತನವನ್ನು ದೊಡ್ಡದು ಮಾಡುವ ಸಣ್ಣತನವನ್ನು ತೋರಬಾರದು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ಸಾಹಿತ್ಯ ಸಮ್ಮೇಳನದ ಯಾವ ಗೋಷ್ಠಿಯೂ ಕೂಡ ದಲಿತ ಸಾಹಿತ್ಯ ಸಂವೇದನೆಗಳ ಕುರಿತ ಚರ್ಚೆಗಳನ್ನು ಒಳಗೊಂಡಿಲ್ಲ. ಮುಸ್ಲಿಂ ಕವಿಗಳ ಪ್ರಾತಿನಿಧ್ಯದಲ್ಲಿ ತಾರತಮ್ಯ, ಅಲ್ಲದೇ, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಸುವ ಸಂಪನ್ಮೂಲ ವ್ಯಕ್ತಿಯಾಗಲಿ, ಕವಿಗಳಾಗಲಿ ಕಾಣಿಸುವುದೇ ಇಲ್ಲ. ಇದೊಂದು ಬಹಿರಂಗವಾದ ಅಸ್ಪೃಶ್ಯತೆಯ ಆಚರಣೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಂಥ ದುರಿತ ಕಾಲದಲ್ಲಿ

ಸಾಮರಸ್ಯವನ್ನು ಹಬ್ಬಿಸಬೇಕು ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳನವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ.
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಯಾವ ಸಂಘ, ಸಂಸ್ಥೆ ಮತ್ತು ಸರ್ಕಾರವು ಜೀವ ವಿರೋಧಿಯ ದಂಧೆಕೋರನಾಗಿಯೇ ಉಳಿದಿರುತ್ತದೆ. ನೈತಿಕತೆಯ ಅರಿವು ಮತ್ತು ಕಡೆಗಣಿಸಲ್ಪಟ್ಟ ಸಂವೇದನೆಗಳನ್ನು ಒಟ್ಟಗೂಡಿಸಿ ನಡೆದರೆ ಮಾತ್ರ ಸಾಹಿತ್ಯ ಸಂಭ್ರವಾಗಬಲ್ಲದು, ಇಲ್ಲವೆಂದರೇ ಅದು ಸೂತಕವಾಗಿಯೇ ಕಾಣುತ್ತದೆ. ಅಷ್ಟಕ್ಕೂ ಜಾತಿ ಪ್ರತಿಷ್ಠೆಯಿಂದ ಅಧಿಕಾರ ಹಿಡಿದವರೆಲ್ಲ, ಸ್ವಜಾತಿ ಮೋಹಿಗಳಾಗಿ ಅಲ್ಪಸಂಖ್ಯಾತರನ್ನು “ಅನ್ಯರಂತೆ” ಕಾಣುವುದು ದುರಂತ. ಗುರು ಗೋವಿಂದ ಮತ್ತು ಷರೀಫರ ಸಾಮರಸ್ಯ ಇದ್ದಾಗಲೇ ಸಮ್ಮೇಳನವಾದೀತು. ಇಲ್ಲದಿದ್ದರೆ, ಉಡುಪಿ ಮಠದಿಂದ ಕನಕದಾಸರನ್ನು ಹೊರಗಿಟ್ಟಹಾಗೆಯೇ ನಯವಾದ ಜಾತಿ ರಾಜಕಾರಣವೇ ಗೆದ್ದೀತು!

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ,
ಬೆಂಗಳೂರು ವಿ ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...