Homeಮುಖಪುಟ50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

- Advertisement -
- Advertisement -

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು ಎಂಬ ಉತ್ತರಾಖಂಡ ಹೈಕೋರ್ಟ್ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

50,000 ಜನರನ್ನು ರಾತ್ರೋರಾತ್ರಿ ಬೇರು ಸಮೇತ ಕಿತ್ತೊಗೆಯಲು ಸಾಧ್ಯವಿಲ್ಲ. ಇದೊಂದು ಮಾನವೀಯ ವಿಷಯ. ಇದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು “ಏಳು ದಿನಗಳಲ್ಲಿ 4,000 ಕ್ಕೂ ಅಧಿಕ ಕುಟುಂಬಗಳನ್ನು ಬೀದಿಪಾಲು ಮಾಡಲು ಸಾಧ್ಯವೇ? ಅವರು ಅಲ್ಲಿ ಬಹಳ ವರ್ಷಗಳಿಂದ ವಾಸವಿದ್ದಾರೆ ಎನ್ನಲಾಗಿದೆ. ಅವರನ್ನು ಪುನರ್ವಸತಿ ಇಲ್ಲದೆ ಕೊರೆಯುವ ಚಳಿಯಲ್ಲಿ ಬೀದಿಗೆ ತಳ್ಳಲು ಸಾಧ್ಯವಿಲ್ಲ” ಎಂದಿದೆ.

ದಶಕಗಳಿಂದ ಅಲ್ಲಿ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸಲು ಅರೆಸೈನಿಕ ಪಡೆಗಳನ್ನು ನಿಯೋಜಿಸಬೇಕು ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.

ನ್ಯಾಯಾಲಯವು ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಆದೇಶಿಸಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈಲ್ವೆ ಮತ್ತು ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಮುಂದಿನ ತಿಂಗಳು ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

ಏನಿದು ಪ್ರಕರಣ?

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿಯ ಬನ್‌ಭೂಲ್‌ಪುರ ಪ್ರದೇಶದ 2 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳು ಹಿಂದಿನಿಂದಲೂ ವಾಸಿಸುತ್ತಿವೆ. ಅಲ್ಲಿನ ಬಹುತೇಕ ಮುಸ್ಲಿಂ ಸುಮುದಾಯಕ್ಕೆ ಸೇರಿದ್ದಾರೆ. ಆ ಜಾಗವು ರೈಲ್ವೆ ಇಲಾಖೆಗೆ ಸೇರಿದ್ದು, ಅಲ್ಲಿನ ಜನರು ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ವಾದವನ್ನು ಉತ್ತರಾಖಂಡ ಹೈಕೋರ್ಟ್ ಎತ್ತಿ ಹಿಡಿದು ಡಿಸೆಂಬರ್ 20 ರಂದು ಅವರನ್ನು ಅಲ್ಲಿಂದ ತೆರವುಗೊಳಿಸಲು ಆದೇಶಿಸಿತ್ತು.

ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ನ್ಯಾಯವಾದಿ ಪ್ರಶಾಂತ್ ಭೂಷಣ್ ಸಂತ್ರಸ್ತರ ಪರವಾಗಿ ಅರ್ಜಿ ಸಲ್ಲಿಸಿ ವಾದಿಸಿದ್ದರು. ಸುಪ್ರೀಂ ಕೋರ್ಟ್ ಅರ್ಜಿದಾರರ ಪರ ನಿಂತಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...