Homeಮುಖಪುಟ50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

50,000 ಜನರನ್ನು ರಾತ್ರೋರಾತ್ರಿ ಕಿತ್ತೊಗೆಯಲು ಸಾಧ್ಯವಿಲ್ಲ: ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆಗೆ ಸುಪ್ರೀಂ ತಡೆ

- Advertisement -
- Advertisement -

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು ಎಂಬ ಉತ್ತರಾಖಂಡ ಹೈಕೋರ್ಟ್ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

50,000 ಜನರನ್ನು ರಾತ್ರೋರಾತ್ರಿ ಬೇರು ಸಮೇತ ಕಿತ್ತೊಗೆಯಲು ಸಾಧ್ಯವಿಲ್ಲ. ಇದೊಂದು ಮಾನವೀಯ ವಿಷಯ. ಇದಕ್ಕೆ ಕಾರ್ಯಸಾಧುವಾದ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು “ಏಳು ದಿನಗಳಲ್ಲಿ 4,000 ಕ್ಕೂ ಅಧಿಕ ಕುಟುಂಬಗಳನ್ನು ಬೀದಿಪಾಲು ಮಾಡಲು ಸಾಧ್ಯವೇ? ಅವರು ಅಲ್ಲಿ ಬಹಳ ವರ್ಷಗಳಿಂದ ವಾಸವಿದ್ದಾರೆ ಎನ್ನಲಾಗಿದೆ. ಅವರನ್ನು ಪುನರ್ವಸತಿ ಇಲ್ಲದೆ ಕೊರೆಯುವ ಚಳಿಯಲ್ಲಿ ಬೀದಿಗೆ ತಳ್ಳಲು ಸಾಧ್ಯವಿಲ್ಲ” ಎಂದಿದೆ.

ದಶಕಗಳಿಂದ ಅಲ್ಲಿ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸಲು ಅರೆಸೈನಿಕ ಪಡೆಗಳನ್ನು ನಿಯೋಜಿಸಬೇಕು ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.

ನ್ಯಾಯಾಲಯವು ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಆದೇಶಿಸಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈಲ್ವೆ ಮತ್ತು ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಮುಂದಿನ ತಿಂಗಳು ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

ಏನಿದು ಪ್ರಕರಣ?

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿಯ ಬನ್‌ಭೂಲ್‌ಪುರ ಪ್ರದೇಶದ 2 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳು ಹಿಂದಿನಿಂದಲೂ ವಾಸಿಸುತ್ತಿವೆ. ಅಲ್ಲಿನ ಬಹುತೇಕ ಮುಸ್ಲಿಂ ಸುಮುದಾಯಕ್ಕೆ ಸೇರಿದ್ದಾರೆ. ಆ ಜಾಗವು ರೈಲ್ವೆ ಇಲಾಖೆಗೆ ಸೇರಿದ್ದು, ಅಲ್ಲಿನ ಜನರು ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ವಾದವನ್ನು ಉತ್ತರಾಖಂಡ ಹೈಕೋರ್ಟ್ ಎತ್ತಿ ಹಿಡಿದು ಡಿಸೆಂಬರ್ 20 ರಂದು ಅವರನ್ನು ಅಲ್ಲಿಂದ ತೆರವುಗೊಳಿಸಲು ಆದೇಶಿಸಿತ್ತು.

ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ನ್ಯಾಯವಾದಿ ಪ್ರಶಾಂತ್ ಭೂಷಣ್ ಸಂತ್ರಸ್ತರ ಪರವಾಗಿ ಅರ್ಜಿ ಸಲ್ಲಿಸಿ ವಾದಿಸಿದ್ದರು. ಸುಪ್ರೀಂ ಕೋರ್ಟ್ ಅರ್ಜಿದಾರರ ಪರ ನಿಂತಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...