Homeಮುಖಪುಟಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ನನ್ನನ್ನು ಟಗರು ಎಂದು ಹಾಡುತ್ತಾರೆ. ನಾವೇನು ಕೋಪ ಮಾಡಿಕೊಂಡಿದ್ದೇವೆಯೇ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ನಾಯಿಮರಿಗೆ ಹೋಲಿಸಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ, ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ” ಎಂದಿದ್ದಾರೆ.

ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ಎಂದಿದ್ದಾರೆ.

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ ಎಂದು ಸಿದ್ದರಾಮಯ್ಯ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ? ಎಂದು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಹೇಳಿಕೆ ಅವರ ವ್ಯಕ್ತಿತ್ವಕ್ಕೆ ತೋರಿಸುತ್ತದೆ

ತಮ್ಮ ವಿರುದ್ಧ ಸಿದ್ದರಾಮಯ್ಯ ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, “ಆ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ. ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ” ಎಂದಿದ್ದಾರೆ.

“ಮೋದಿಯವರು ಪ್ರಧಾನಿಯಾದ ನಂತರ ರಾಜ್ಯಕ್ಕೆ ವಿಶೇಷವಾದ ಕೊಡುಗೆಗಳನ್ನು ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡಿಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ. ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಇರಲಿಲ್ಲ. ಇಂಥ ಮಹತ್ವದ ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು
ಸಿದ್ದರಾಮಯ್ಯನವರಿಗೆ ಅದರ ಬಗ್ಗೆ ಜ್ಞಾನ ಇಲ್ಲ” ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...