Homeಮುಖಪುಟಬಿಜೆಪಿಯ ಜನಾಕ್ರೋಶ ಯಾತ್ರೆಗೆ ಜನ ಸೇರಿಸಲು ಡ್ಯಾನ್ಸರ್ ಬಳಕೆ: ವಿಡಿಯೋ ವೈರಲ್

ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಜನ ಸೇರಿಸಲು ಡ್ಯಾನ್ಸರ್ ಬಳಕೆ: ವಿಡಿಯೋ ವೈರಲ್

- Advertisement -
- Advertisement -

ಮುಂದಿನ ವರ್ಷ ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಅಲ್ಲಿನ ಪ್ರತಿಪಕ್ಷ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಸಂಘಟಿಸಿದೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಡಿಸೆಂಬರ್ 1 ರಂದು ಈ ಯಾತ್ರೆಗೆ ಚಾಲನೆ ನೀಡಿದ್ದರು. ಆದರೆ ಯಾತ್ರೆಗೆ ಜನ ಸೇರಿಸಲು ಬಿಜೆಪಿ  ಡ್ಯಾನ್ಸರ್‌ಗಳ ಮೊರೆ ಹೋಗಿದೆ ಎಂಬ ಟೀಕೆ ವ್ಯಕ್ತವಾಗಿದೆ. ಜನಾಕ್ರೋಶ ಯಾತ್ರೆಯ ವೇದಿಕೆಗಳಲ್ಲಿ ಹೆಣ್ಣು ಮಕ್ಕಳು ನೃತ್ಯ ಮಾಡುವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಮಂಗಳವಾರ ಸಂಜೆ ಅಲ್ವಾರ್ ಜಿಲ್ಲೆಯ ಖೇಡ್ಲಿಯಲ್ಲಿ ಜನಕ್ರೋಷ್ ಮಹಾಸಭಾ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುಂಚೆ ಜನರನ್ನು ಆಕರ್ಷಿಸಲು ಡ್ಯಾನ್ಸರ್ ಕರೆಸಿ ನೃತ್ಯ ಮಾಡಿಸಲಾಗಿದೆ ಎಂದು ಹಲವರು ದೂರಿದ್ದಾರೆ. ಡ್ಯಾನ್ಸರ್ ಅಶ್ಲೀಲವಾಗಿ ನೃತ್ಯ ಮಾಡಿದ್ದಾರೆ. ಈ ಯಾತ್ರೆಗೆ ಜನರ ಆಕ್ರೋಶ ಎಂದು ಹೆಸರಿಡಲಾಗಿದೆ. ಆದರೆ ಹೆಣ್ಣು ಮಕ್ಕಳ ನೃತ್ಯ ನೋಡಿ ಆನಂದಿಸುವವರಿಗೆ ಯಾವ ಆಕ್ರೋಶ ಬರುತ್ತದೆ ಎಂದು ಹಲವರು ವ್ಯಂಗ್ಯವಾಡಿದ್ದಾರೆ.

‘ಹಿಂಭಾಗದಲ್ಲಿ ಮೋದಿ ಮತ್ತು ಜೆಪಿ ನಡ್ಡಾ ಅವರ ಫೋಟೋವನ್ನು ಅಂಟಿಸಲಾಗಿದೆ. ಮತ್ತು ಮುಂದೆ ಹುಡುಗಿ ವೇದಿಕೆಯಲ್ಲಿ ನೃತ್ಯ ಮಾಡುತ್ತಿದ್ದಾಳೆ, ಇದು ಬಿಜೆಪಿಯ ಜನ ಆಕ್ರೋಷ್ ಯಾತ್ರೆ. ರಾಜಸ್ಥಾನದಲ್ಲಿ ಬಿಜೆಪಿ ಜನ ಆಕ್ರೋಶ ಯಾತ್ರೆ ಹೆಸರಿನಲ್ಲಿ ಮಜಾ ಮಾಡುತ್ತಿದೆ’ ಎಂದು ಟ್ವಿಟರ್ ಬಳಕೆದಾರರು ಆರೋಪಿಸಿದ್ದಾರೆ.

ರಾಜಸ್ಥಾನ ಬಿಜೆಪಿಯು ತನ್ನ Jan Aakrosh Yatra ಎಂಬ ಫ್ಲಾಪ್ ಶೋನಲ್ಲಿ ಜನರನ್ನು ಆಕರ್ಷಿಸಲು ಮತ್ತು ಖಾಲಿ ಕುರ್ಚಿಗಳನ್ನು ತುಂಬಲು ಡ್ಯಾನ್ಸರ್‌ಗಳನ್ನು ಕರೆತರುತ್ತದೆ. ಪ್ರತಿ ದಿನವೂ ಬಿಜೆಪಿಯ ಡರ್ಟಿ ಪಾಲಿಟಿಕ್ಸ್ ಹೊಸ ಪಾತಾಳಕ್ಕೆ ಸೇರುತ್ತಿದೆ ಎಂದು ಮತ್ತೊಬ್ಬರು ಬರೆದಿದ್ದಾರೆ.

ಈ ವಿಚಾರವಾಗಿ ಅಲ್ವಾರ್ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ನಾರುಕ ಪ್ರತಿಕ್ರಿಯಿಸಿ, “ನಾವು ಜನ ಆಕ್ರೋಶ್ ಯಾತ್ರೆಗೆ ಯಾವುದೇ ನರ್ತಕಿಯನ್ನು ಕರೆಸಿಲ್ಲ. ಕಾರ್ಯಕ್ರಮ ಮುಗಿಯುವವರೆಗೂ ಯಾವುದೇ ನೃತ್ಯ ನಡೆಯಲಿಲ್ಲ. ನಾಯಕರೆಲ್ಲ ಹೋದ ಮೇಲೆ ಯಾರೋ ಷಡ್ಯಂತ್ರ ಮಾಡಿ ಈ ರೀತಿ ಮಾಡಿರಬೇಕು. ಸಭೆಯು ಈಗಾಗಲೇ ಯಶಸ್ವಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ; ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...